Homeಮುಖಪುಟಭಾರತದ ಇಂಟರ್ನೆಟ್ ಸ್ಪೀಡ್ ವಿಶ್ವದಲ್ಲಿಯೇ ಅತ್ಯಂತ ಕಳಪೆ; ಡಿಜಿಟಲ್ ಇಂಡಿಯಾ?

ಭಾರತದ ಇಂಟರ್ನೆಟ್ ಸ್ಪೀಡ್ ವಿಶ್ವದಲ್ಲಿಯೇ ಅತ್ಯಂತ ಕಳಪೆ; ಡಿಜಿಟಲ್ ಇಂಡಿಯಾ?

ಜಗತ್ತಿನ 138 ದೇಶಗಳ ಪೈಕಿ ಭಾರತವು 131ನೇ ಸ್ಥಾನದಲ್ಲಿದೆ

- Advertisement -
- Advertisement -

ಭಾರತದಲ್ಲಿ ನಾವು ಬಳಸುವ ಇಂಟರ್ನೆಟ್ ಸ್ಪೀಡ್ ಜಗತ್ತಿನ ಉಳಿದ ದೇಶಗಳಿಗಿಂತ ಅತ್ಯಂತ ಕೆಳಮಟ್ಟದಲ್ಲಿದ್ದು, ಜಗತ್ತಿನ 138 ದೇಶಗಳ ಪೈಕಿ ಭಾರತವು 131ನೇ ಸ್ಥಾನದಲ್ಲಿದೆ ಎಂಬುದು ಅಧ್ಯಯನದ ವರದಿಯೊಂದರ ಫಲಿತಾಂಶದಿಂದ ತಿಳಿದುಬಂದಿದೆ.

ಮೊಬೈಲ್ ಇಂಟರ್ನೆಟ್/ಡಾಟಾ ಸ್ಪೀಡ್‍ನಲ್ಲಿ ಭಾರತಕ್ಕೆ ವಿಶ್ವದಲ್ಲಿ 131 ನೇ ಸ್ಥಾನ ಲಭಿಸಿದ್ದು, ಈ ಸಲದ Ranking ಗಣನೆಗೆ  ಒಟ್ಟು 138 ದೇಶಗಳನ್ನು ತೆಗೆದುಕೊಳ್ಳಲಾಗಿದೆ. ಕಳೆದ ವರ್ಷ 145 ದೇಶಗಳ ಪೈಕಿ 128ನೇ ಸ್ಥಾನದಲ್ಲಿದ್ದ ಭಾರತ, ಅದಕ್ಕಿಂತ ಹಿಂದಿನ ವರ್ಷ 110 ನೇ ಸ್ಥಾನದಲ್ಲಿತ್ತು. ಸದ್ಯಕ್ಕೆ, ಶ್ರೀಲಂಕಾ, ಪಾಕೀಸ್ಥಾನ ಹಾಗೂ ನೇಪಾಳ ಕೂಡಾ ಭಾರತಕ್ಕಿಂತ ಮೇಲಿನ ಸ್ಥಾನಗಳನ್ನು ಪಡೆದಿವೆ ಎಂದು ಗೆಜೆಟ್ ನೌ ವರದಿ ಮಾಡಿದೆ.

ವಿಶ್ವದ ಸರಾಸರಿ ಡೌನ್‍ಲೋಡ್ ಸ್ಪೀಡ್ 35.26 Mbps (megabit per second) ಆಗಿದ್ದರೆ, ಭಾರತದ ಸರಾಸರಿ ಡೌನ್‍ಲೋಡ್ ಸ್ಪೀಡ್ 12.07 Mbps. ಇನ್ನು ಗಣನೆಗೆ ತೆಗೆದುಕೊಂಡಿರುವ ಎಲ್ಲಾ ದೇಶಗಳ ಸರಾಸರಿ ಅಪ್‍ಲೋಡ್ ಸ್ಪೀಡ್ 11.22 Mbps ಆಗಿದ್ದರೆ, ಭಾರತದ್ದು, 4.31 Mbps.

ಇದನ್ನೂ ಓದಿ: ಡಿಜಿಟಲ್ ಮಾಧ್ಯಮಗಳ ಕಡೆ ಗಮನಹರಿಸಿ: ಸುಪ್ರೀಂಗೆ ಅಫಿಡವಿಟ್ ಸಲ್ಲಿಸಿದ ಕೇಂದ್ರ ಸರ್ಕಾರ

ಇದನ್ನೂ ಓದಿ: ಭಾರತದ ಡಿಜಿಟಲ್ ಉತ್ತೇಜನಕ್ಕೆ ಗೂಗಲ್‌ನಿಂದ 75,000 ಕೋಟಿ ರೂ. ನಿಧಿ

ಮೊದಲನೆಯ ಸ್ಥಾನದಲ್ಲಿರುವ ದಕ್ಷಿಣ ಕೊರಿಯಾದ ಸರಾಸರಿ ಇಂಟರ್ನೆಟ್ ವೇಗ 121.00 Mbps. ಇದು ಭಾರತದ ಸರಾಸರಿ ಬ್ರಾಡ್‍ಬ್ಯಾಂಡ್ ಸ್ಪೀಡ್‍ 46.47 Mbps ಗಿಂತಾ ಸುಮಾರು ಎರಡೂವರೆ ಪಟ್ಟು ಹೆಚ್ಚು. ಶ್ರೀಲಂಕಾ 19.95 Mbps ಹೊಂದಿದ್ದು 102ನೆಯ ಸ್ಥಾನ ಪಡೆದಿದ್ದರೆ, ಪಾಕೀಸ್ಥಾನ 17.13 Mbps ಸ್ಪೀಡ್‍ನೊಂದಿಗೆ 116ನೆಯ ಸ್ಥಾನದಲ್ಲಿದೆ. ನೇಪಾಳ ಕೂಡಾ 17.12 Mbps ಸ್ಪೀಡ್ ಸರಸಾರಿ ಇಂಟರ್ನೆಟ್‍ನೊಂದಿಗೆ 117ನೆಯ ಸ್ಥಾನದಲ್ಲಿದೆ.

ಭಾರತವನ್ನು ವಿಶ್ವಗುರು ಮಾಡುತ್ತೇವೆ ಎಂದು ಆರ್ಥಿಕತೆ, ಹಸಿವು, ಕೊರನಾ ಸೇರಿದಂತೆ ಕೊನೆಗೆ ಇಂಟರ್ನೆಟ್‌ ಸ್ಪೀಡ್‌ನಲ್ಲೂ ಕಳಪೆ ಪ್ರದರ್ಶನ ನೀಡುತ್ತಿರುವುದಕ್ಕೆ ವಿಮರ್ಶಕರಿಂದ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಡಿಜಿಟಲ್ ಇಂಡಿಯಾ ಮಾಡುತ್ತೇವೆ ಎಂದು ಇಂಟರ್ನೆಟ್ ಬಳಕೆಯ ಸ್ವೀಡ್‌ನಲ್ಲಿ ಜಗತ್ತಿನಲ್ಲಿಯೇ ಅತ್ಯಂತ ಅಗ್ಗದ ಸ್ಪೀಡ್ ಹೊಂದಿರುವ ದೇಶವನ್ನಾಗಿ ಮಾಡಲಾಗಿದೆ. ಪ್ರತಿಯೊಂದನ್ನೂ ಆನ್ಲೈನ್ ಮಾಡುತ್ತೇವೆ ಎಂದು ಹೊರಟಿರುವ ಸರ್ಕಾರ ಭಾರತದ ವಾಸ್ತವವನ್ನು ಅರಿತಂತೆ ಕಾಣುತ್ತಿಲ್ಲ.

ಕೊರೊನಾ ಕಾರಣದಿಂದ ಆನ್ಲೈನ್ ತರಗತಿಗಳಿಗಾಗಿ ಪರದಾಡುತ್ತಿರುವ ಹಳ್ಳಿಯ ಮಕ್ಕಳನ್ನು ನೆನೆಸಿಕೊಂಡರೆ ನಮ್ಮ ಡಿಜಿಟಲ್ ಇಂಡಿಯಾದ ಕಲ್ಪನೆ ಕಣ್ಣಮುಂದೆ ಬರುತ್ತದೆ. ಎಷ್ಟೋ ಬಾರಿ ಸರ್ಕಾರಿ ಕಛೇರಿಗಳಲ್ಲಿಯೇ ಇಂಟರ್ನೆಟ್ ಸ್ಪೀಡ್ ಕಡಿಮೆಯಾಗಿ ಕಛೇರಿಯ ಕೆಲಸಗಳು ನಿಂತುಹೋಗಿರುವ ಉದಾಹರಣೆಗಳು ಸಾಕಷ್ಟಿವೆ. ಹೀಗಿರುವಾಗ ಎಲ್ಲವನ್ನೂ ಡಿಜಿಟಲ್ ಮಾಡುತ್ತೇವೆ ಎನ್ನುವ ಸರ್ಕಾರಕ್ಕೆ ವಾಸ್ತವದ ಅರಿವಿಲ್ಲ ಎಂದೇ ಹೇಳಬೇಕಿದೆ.


ಇದನ್ನೂ ಓದಿ: ಮೋಡಿಯ ಮಾಡಿದವರ ಪರಸಂಗ: ಡಿಜಿಟಲ್ ಕಾಲದಲ್ಲೊಂದು ತಾರತಮ್ಯದ ತಕರಾರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...