Homeಮುಖಪುಟಭಾರತದ ಇಂಟರ್ನೆಟ್ ಸ್ಪೀಡ್ ವಿಶ್ವದಲ್ಲಿಯೇ ಅತ್ಯಂತ ಕಳಪೆ; ಡಿಜಿಟಲ್ ಇಂಡಿಯಾ?

ಭಾರತದ ಇಂಟರ್ನೆಟ್ ಸ್ಪೀಡ್ ವಿಶ್ವದಲ್ಲಿಯೇ ಅತ್ಯಂತ ಕಳಪೆ; ಡಿಜಿಟಲ್ ಇಂಡಿಯಾ?

ಜಗತ್ತಿನ 138 ದೇಶಗಳ ಪೈಕಿ ಭಾರತವು 131ನೇ ಸ್ಥಾನದಲ್ಲಿದೆ

- Advertisement -
- Advertisement -

ಭಾರತದಲ್ಲಿ ನಾವು ಬಳಸುವ ಇಂಟರ್ನೆಟ್ ಸ್ಪೀಡ್ ಜಗತ್ತಿನ ಉಳಿದ ದೇಶಗಳಿಗಿಂತ ಅತ್ಯಂತ ಕೆಳಮಟ್ಟದಲ್ಲಿದ್ದು, ಜಗತ್ತಿನ 138 ದೇಶಗಳ ಪೈಕಿ ಭಾರತವು 131ನೇ ಸ್ಥಾನದಲ್ಲಿದೆ ಎಂಬುದು ಅಧ್ಯಯನದ ವರದಿಯೊಂದರ ಫಲಿತಾಂಶದಿಂದ ತಿಳಿದುಬಂದಿದೆ.

ಮೊಬೈಲ್ ಇಂಟರ್ನೆಟ್/ಡಾಟಾ ಸ್ಪೀಡ್‍ನಲ್ಲಿ ಭಾರತಕ್ಕೆ ವಿಶ್ವದಲ್ಲಿ 131 ನೇ ಸ್ಥಾನ ಲಭಿಸಿದ್ದು, ಈ ಸಲದ Ranking ಗಣನೆಗೆ  ಒಟ್ಟು 138 ದೇಶಗಳನ್ನು ತೆಗೆದುಕೊಳ್ಳಲಾಗಿದೆ. ಕಳೆದ ವರ್ಷ 145 ದೇಶಗಳ ಪೈಕಿ 128ನೇ ಸ್ಥಾನದಲ್ಲಿದ್ದ ಭಾರತ, ಅದಕ್ಕಿಂತ ಹಿಂದಿನ ವರ್ಷ 110 ನೇ ಸ್ಥಾನದಲ್ಲಿತ್ತು. ಸದ್ಯಕ್ಕೆ, ಶ್ರೀಲಂಕಾ, ಪಾಕೀಸ್ಥಾನ ಹಾಗೂ ನೇಪಾಳ ಕೂಡಾ ಭಾರತಕ್ಕಿಂತ ಮೇಲಿನ ಸ್ಥಾನಗಳನ್ನು ಪಡೆದಿವೆ ಎಂದು ಗೆಜೆಟ್ ನೌ ವರದಿ ಮಾಡಿದೆ.

ವಿಶ್ವದ ಸರಾಸರಿ ಡೌನ್‍ಲೋಡ್ ಸ್ಪೀಡ್ 35.26 Mbps (megabit per second) ಆಗಿದ್ದರೆ, ಭಾರತದ ಸರಾಸರಿ ಡೌನ್‍ಲೋಡ್ ಸ್ಪೀಡ್ 12.07 Mbps. ಇನ್ನು ಗಣನೆಗೆ ತೆಗೆದುಕೊಂಡಿರುವ ಎಲ್ಲಾ ದೇಶಗಳ ಸರಾಸರಿ ಅಪ್‍ಲೋಡ್ ಸ್ಪೀಡ್ 11.22 Mbps ಆಗಿದ್ದರೆ, ಭಾರತದ್ದು, 4.31 Mbps.

ಇದನ್ನೂ ಓದಿ: ಡಿಜಿಟಲ್ ಮಾಧ್ಯಮಗಳ ಕಡೆ ಗಮನಹರಿಸಿ: ಸುಪ್ರೀಂಗೆ ಅಫಿಡವಿಟ್ ಸಲ್ಲಿಸಿದ ಕೇಂದ್ರ ಸರ್ಕಾರ

ಇದನ್ನೂ ಓದಿ: ಭಾರತದ ಡಿಜಿಟಲ್ ಉತ್ತೇಜನಕ್ಕೆ ಗೂಗಲ್‌ನಿಂದ 75,000 ಕೋಟಿ ರೂ. ನಿಧಿ

ಮೊದಲನೆಯ ಸ್ಥಾನದಲ್ಲಿರುವ ದಕ್ಷಿಣ ಕೊರಿಯಾದ ಸರಾಸರಿ ಇಂಟರ್ನೆಟ್ ವೇಗ 121.00 Mbps. ಇದು ಭಾರತದ ಸರಾಸರಿ ಬ್ರಾಡ್‍ಬ್ಯಾಂಡ್ ಸ್ಪೀಡ್‍ 46.47 Mbps ಗಿಂತಾ ಸುಮಾರು ಎರಡೂವರೆ ಪಟ್ಟು ಹೆಚ್ಚು. ಶ್ರೀಲಂಕಾ 19.95 Mbps ಹೊಂದಿದ್ದು 102ನೆಯ ಸ್ಥಾನ ಪಡೆದಿದ್ದರೆ, ಪಾಕೀಸ್ಥಾನ 17.13 Mbps ಸ್ಪೀಡ್‍ನೊಂದಿಗೆ 116ನೆಯ ಸ್ಥಾನದಲ್ಲಿದೆ. ನೇಪಾಳ ಕೂಡಾ 17.12 Mbps ಸ್ಪೀಡ್ ಸರಸಾರಿ ಇಂಟರ್ನೆಟ್‍ನೊಂದಿಗೆ 117ನೆಯ ಸ್ಥಾನದಲ್ಲಿದೆ.

ಭಾರತವನ್ನು ವಿಶ್ವಗುರು ಮಾಡುತ್ತೇವೆ ಎಂದು ಆರ್ಥಿಕತೆ, ಹಸಿವು, ಕೊರನಾ ಸೇರಿದಂತೆ ಕೊನೆಗೆ ಇಂಟರ್ನೆಟ್‌ ಸ್ಪೀಡ್‌ನಲ್ಲೂ ಕಳಪೆ ಪ್ರದರ್ಶನ ನೀಡುತ್ತಿರುವುದಕ್ಕೆ ವಿಮರ್ಶಕರಿಂದ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಡಿಜಿಟಲ್ ಇಂಡಿಯಾ ಮಾಡುತ್ತೇವೆ ಎಂದು ಇಂಟರ್ನೆಟ್ ಬಳಕೆಯ ಸ್ವೀಡ್‌ನಲ್ಲಿ ಜಗತ್ತಿನಲ್ಲಿಯೇ ಅತ್ಯಂತ ಅಗ್ಗದ ಸ್ಪೀಡ್ ಹೊಂದಿರುವ ದೇಶವನ್ನಾಗಿ ಮಾಡಲಾಗಿದೆ. ಪ್ರತಿಯೊಂದನ್ನೂ ಆನ್ಲೈನ್ ಮಾಡುತ್ತೇವೆ ಎಂದು ಹೊರಟಿರುವ ಸರ್ಕಾರ ಭಾರತದ ವಾಸ್ತವವನ್ನು ಅರಿತಂತೆ ಕಾಣುತ್ತಿಲ್ಲ.

ಕೊರೊನಾ ಕಾರಣದಿಂದ ಆನ್ಲೈನ್ ತರಗತಿಗಳಿಗಾಗಿ ಪರದಾಡುತ್ತಿರುವ ಹಳ್ಳಿಯ ಮಕ್ಕಳನ್ನು ನೆನೆಸಿಕೊಂಡರೆ ನಮ್ಮ ಡಿಜಿಟಲ್ ಇಂಡಿಯಾದ ಕಲ್ಪನೆ ಕಣ್ಣಮುಂದೆ ಬರುತ್ತದೆ. ಎಷ್ಟೋ ಬಾರಿ ಸರ್ಕಾರಿ ಕಛೇರಿಗಳಲ್ಲಿಯೇ ಇಂಟರ್ನೆಟ್ ಸ್ಪೀಡ್ ಕಡಿಮೆಯಾಗಿ ಕಛೇರಿಯ ಕೆಲಸಗಳು ನಿಂತುಹೋಗಿರುವ ಉದಾಹರಣೆಗಳು ಸಾಕಷ್ಟಿವೆ. ಹೀಗಿರುವಾಗ ಎಲ್ಲವನ್ನೂ ಡಿಜಿಟಲ್ ಮಾಡುತ್ತೇವೆ ಎನ್ನುವ ಸರ್ಕಾರಕ್ಕೆ ವಾಸ್ತವದ ಅರಿವಿಲ್ಲ ಎಂದೇ ಹೇಳಬೇಕಿದೆ.


ಇದನ್ನೂ ಓದಿ: ಮೋಡಿಯ ಮಾಡಿದವರ ಪರಸಂಗ: ಡಿಜಿಟಲ್ ಕಾಲದಲ್ಲೊಂದು ತಾರತಮ್ಯದ ತಕರಾರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...