Homeಮುಖಪುಟಭಾರತದ ಇಂಟರ್ನೆಟ್ ಸ್ಪೀಡ್ ವಿಶ್ವದಲ್ಲಿಯೇ ಅತ್ಯಂತ ಕಳಪೆ; ಡಿಜಿಟಲ್ ಇಂಡಿಯಾ?

ಭಾರತದ ಇಂಟರ್ನೆಟ್ ಸ್ಪೀಡ್ ವಿಶ್ವದಲ್ಲಿಯೇ ಅತ್ಯಂತ ಕಳಪೆ; ಡಿಜಿಟಲ್ ಇಂಡಿಯಾ?

ಜಗತ್ತಿನ 138 ದೇಶಗಳ ಪೈಕಿ ಭಾರತವು 131ನೇ ಸ್ಥಾನದಲ್ಲಿದೆ

- Advertisement -
- Advertisement -

ಭಾರತದಲ್ಲಿ ನಾವು ಬಳಸುವ ಇಂಟರ್ನೆಟ್ ಸ್ಪೀಡ್ ಜಗತ್ತಿನ ಉಳಿದ ದೇಶಗಳಿಗಿಂತ ಅತ್ಯಂತ ಕೆಳಮಟ್ಟದಲ್ಲಿದ್ದು, ಜಗತ್ತಿನ 138 ದೇಶಗಳ ಪೈಕಿ ಭಾರತವು 131ನೇ ಸ್ಥಾನದಲ್ಲಿದೆ ಎಂಬುದು ಅಧ್ಯಯನದ ವರದಿಯೊಂದರ ಫಲಿತಾಂಶದಿಂದ ತಿಳಿದುಬಂದಿದೆ.

ಮೊಬೈಲ್ ಇಂಟರ್ನೆಟ್/ಡಾಟಾ ಸ್ಪೀಡ್‍ನಲ್ಲಿ ಭಾರತಕ್ಕೆ ವಿಶ್ವದಲ್ಲಿ 131 ನೇ ಸ್ಥಾನ ಲಭಿಸಿದ್ದು, ಈ ಸಲದ Ranking ಗಣನೆಗೆ  ಒಟ್ಟು 138 ದೇಶಗಳನ್ನು ತೆಗೆದುಕೊಳ್ಳಲಾಗಿದೆ. ಕಳೆದ ವರ್ಷ 145 ದೇಶಗಳ ಪೈಕಿ 128ನೇ ಸ್ಥಾನದಲ್ಲಿದ್ದ ಭಾರತ, ಅದಕ್ಕಿಂತ ಹಿಂದಿನ ವರ್ಷ 110 ನೇ ಸ್ಥಾನದಲ್ಲಿತ್ತು. ಸದ್ಯಕ್ಕೆ, ಶ್ರೀಲಂಕಾ, ಪಾಕೀಸ್ಥಾನ ಹಾಗೂ ನೇಪಾಳ ಕೂಡಾ ಭಾರತಕ್ಕಿಂತ ಮೇಲಿನ ಸ್ಥಾನಗಳನ್ನು ಪಡೆದಿವೆ ಎಂದು ಗೆಜೆಟ್ ನೌ ವರದಿ ಮಾಡಿದೆ.

ವಿಶ್ವದ ಸರಾಸರಿ ಡೌನ್‍ಲೋಡ್ ಸ್ಪೀಡ್ 35.26 Mbps (megabit per second) ಆಗಿದ್ದರೆ, ಭಾರತದ ಸರಾಸರಿ ಡೌನ್‍ಲೋಡ್ ಸ್ಪೀಡ್ 12.07 Mbps. ಇನ್ನು ಗಣನೆಗೆ ತೆಗೆದುಕೊಂಡಿರುವ ಎಲ್ಲಾ ದೇಶಗಳ ಸರಾಸರಿ ಅಪ್‍ಲೋಡ್ ಸ್ಪೀಡ್ 11.22 Mbps ಆಗಿದ್ದರೆ, ಭಾರತದ್ದು, 4.31 Mbps.

ಇದನ್ನೂ ಓದಿ: ಡಿಜಿಟಲ್ ಮಾಧ್ಯಮಗಳ ಕಡೆ ಗಮನಹರಿಸಿ: ಸುಪ್ರೀಂಗೆ ಅಫಿಡವಿಟ್ ಸಲ್ಲಿಸಿದ ಕೇಂದ್ರ ಸರ್ಕಾರ

ಇದನ್ನೂ ಓದಿ: ಭಾರತದ ಡಿಜಿಟಲ್ ಉತ್ತೇಜನಕ್ಕೆ ಗೂಗಲ್‌ನಿಂದ 75,000 ಕೋಟಿ ರೂ. ನಿಧಿ

ಮೊದಲನೆಯ ಸ್ಥಾನದಲ್ಲಿರುವ ದಕ್ಷಿಣ ಕೊರಿಯಾದ ಸರಾಸರಿ ಇಂಟರ್ನೆಟ್ ವೇಗ 121.00 Mbps. ಇದು ಭಾರತದ ಸರಾಸರಿ ಬ್ರಾಡ್‍ಬ್ಯಾಂಡ್ ಸ್ಪೀಡ್‍ 46.47 Mbps ಗಿಂತಾ ಸುಮಾರು ಎರಡೂವರೆ ಪಟ್ಟು ಹೆಚ್ಚು. ಶ್ರೀಲಂಕಾ 19.95 Mbps ಹೊಂದಿದ್ದು 102ನೆಯ ಸ್ಥಾನ ಪಡೆದಿದ್ದರೆ, ಪಾಕೀಸ್ಥಾನ 17.13 Mbps ಸ್ಪೀಡ್‍ನೊಂದಿಗೆ 116ನೆಯ ಸ್ಥಾನದಲ್ಲಿದೆ. ನೇಪಾಳ ಕೂಡಾ 17.12 Mbps ಸ್ಪೀಡ್ ಸರಸಾರಿ ಇಂಟರ್ನೆಟ್‍ನೊಂದಿಗೆ 117ನೆಯ ಸ್ಥಾನದಲ್ಲಿದೆ.

ಭಾರತವನ್ನು ವಿಶ್ವಗುರು ಮಾಡುತ್ತೇವೆ ಎಂದು ಆರ್ಥಿಕತೆ, ಹಸಿವು, ಕೊರನಾ ಸೇರಿದಂತೆ ಕೊನೆಗೆ ಇಂಟರ್ನೆಟ್‌ ಸ್ಪೀಡ್‌ನಲ್ಲೂ ಕಳಪೆ ಪ್ರದರ್ಶನ ನೀಡುತ್ತಿರುವುದಕ್ಕೆ ವಿಮರ್ಶಕರಿಂದ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಡಿಜಿಟಲ್ ಇಂಡಿಯಾ ಮಾಡುತ್ತೇವೆ ಎಂದು ಇಂಟರ್ನೆಟ್ ಬಳಕೆಯ ಸ್ವೀಡ್‌ನಲ್ಲಿ ಜಗತ್ತಿನಲ್ಲಿಯೇ ಅತ್ಯಂತ ಅಗ್ಗದ ಸ್ಪೀಡ್ ಹೊಂದಿರುವ ದೇಶವನ್ನಾಗಿ ಮಾಡಲಾಗಿದೆ. ಪ್ರತಿಯೊಂದನ್ನೂ ಆನ್ಲೈನ್ ಮಾಡುತ್ತೇವೆ ಎಂದು ಹೊರಟಿರುವ ಸರ್ಕಾರ ಭಾರತದ ವಾಸ್ತವವನ್ನು ಅರಿತಂತೆ ಕಾಣುತ್ತಿಲ್ಲ.

ಕೊರೊನಾ ಕಾರಣದಿಂದ ಆನ್ಲೈನ್ ತರಗತಿಗಳಿಗಾಗಿ ಪರದಾಡುತ್ತಿರುವ ಹಳ್ಳಿಯ ಮಕ್ಕಳನ್ನು ನೆನೆಸಿಕೊಂಡರೆ ನಮ್ಮ ಡಿಜಿಟಲ್ ಇಂಡಿಯಾದ ಕಲ್ಪನೆ ಕಣ್ಣಮುಂದೆ ಬರುತ್ತದೆ. ಎಷ್ಟೋ ಬಾರಿ ಸರ್ಕಾರಿ ಕಛೇರಿಗಳಲ್ಲಿಯೇ ಇಂಟರ್ನೆಟ್ ಸ್ಪೀಡ್ ಕಡಿಮೆಯಾಗಿ ಕಛೇರಿಯ ಕೆಲಸಗಳು ನಿಂತುಹೋಗಿರುವ ಉದಾಹರಣೆಗಳು ಸಾಕಷ್ಟಿವೆ. ಹೀಗಿರುವಾಗ ಎಲ್ಲವನ್ನೂ ಡಿಜಿಟಲ್ ಮಾಡುತ್ತೇವೆ ಎನ್ನುವ ಸರ್ಕಾರಕ್ಕೆ ವಾಸ್ತವದ ಅರಿವಿಲ್ಲ ಎಂದೇ ಹೇಳಬೇಕಿದೆ.


ಇದನ್ನೂ ಓದಿ: ಮೋಡಿಯ ಮಾಡಿದವರ ಪರಸಂಗ: ಡಿಜಿಟಲ್ ಕಾಲದಲ್ಲೊಂದು ತಾರತಮ್ಯದ ತಕರಾರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...