Homeಮುಖಪುಟಆಸ್ಕರ್ ಪ್ರಶಸ್ತಿ ರೇಸ್‌ನಿಂದ ಹೊರಬಿದ್ದ ಭಾರತೀಯ ಚಿತ್ರ 'ಲಾಪತಾ ಲೇಡೀಸ್'

ಆಸ್ಕರ್ ಪ್ರಶಸ್ತಿ ರೇಸ್‌ನಿಂದ ಹೊರಬಿದ್ದ ಭಾರತೀಯ ಚಿತ್ರ ‘ಲಾಪತಾ ಲೇಡೀಸ್’

- Advertisement -
- Advertisement -

ಬಹು ನಿರೀಕ್ಷಿತ ಆಸ್ಕರ್ 2025ರ ಪಶಸ್ತಿ ರೇಸ್‌ನಿಂದ ಭಾರತದಿಂದ ಅಧಿಕೃತ ಪ್ರವೇಶ ಪಡೆದಿದ್ದ ‘ಲಾಪತಾ ಲೇಡೀಸ್’ ಸಿನಿಮಾ ಹೊರ ಬಿದ್ದಿದೆ.

97ನೇ ಅಕಾಡೆಮಿ ಅವಾರ್ಡ್ಸ್‌ನ ‘ಬೆಸ್ಟ್‌ ಇಂಟರ್‌ನ್ಯಾಷನಲ್ ಫೀಚರ್’ ವಿಭಾಗದಲ್ಲಿ ಲಾಪತಾ ಲೇಡೀಸ್ ಸ್ಪರ್ಧಿಸಿತ್ತು. ಮಂಗಳವಾರ (ಡಿ.17) ಅಕಾಡೆಮಿ ಆಫ್ ಮೋಷನ್ ಪಿಕ್ಚರ್ ಆರ್ಟ್ಸ್ ಆ್ಯಂಡ್‌ ಸೈನ್ಸ್‌ (ಎಎಂಪಿಎಸ್‌) ಶಾರ್ಟ್‌ ಲಿಸ್ಟ್‌ ಮಾಡುವಾಗ ಹೊರಗುಳಿದಿದೆ.

ಬಾಲಿವುಡ್ ನಟ ಅಮೀರ್ ಖಾನ್ ನಿರ್ಮಿಸಿದ ಮತ್ತು ಅವರ ಮಾಜಿ ಪತ್ನಿ ಕಿರಣ್ ರಾವ್ ನಿರ್ದೇಶಿಸಿದ ಹಿಂದಿ ಚಿತ್ರ ಲಾಪತಾ ಲೇಡೀಸ್, ಇಬ್ಬರು ನವ ವಿವಾಹಿತ ಹೆಣ್ಣು ಮಕ್ಕಳು ತಮ್ಮ ಗಂಡನ ಮನೆಗೆ ರೈಲಿನಲ್ಲಿ ಪ್ರಯಾಣಿಸುವಾಗ ಆಕಸ್ಮಿಕವಾಗಿ ಸ್ಥಳಗಳನ್ನು ಬದಲಾಯಿಸುವ ಕಥೆಯೊಂದಿಗೆ ಸಾಗುತ್ತದೆ.

ಈ ಚಿತ್ರದಲ್ಲಿ ಪ್ರತಿಭಾ ರಂತ, ಸ್ಪರ್ಶ ಶ್ರೀವಾಸ್ತವ ಮತ್ತು ನಿತಾಂಶಿ ಗೋಯೆಲ್ ನಟಿಸಿದ್ದಾರೆ. ಇದು ಭಾರತದಲ್ಲಿ 1 ಮಾರ್ಚ್ 2024 ರಂದು ಬಿಡುಗಡೆಯಾಯಿತು ಮತ್ತು ಏಪ್ರಿಲ್‌ನಲ್ಲಿ ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮಿಂಗ್‌ಗೆ ಲಭ್ಯವಾಯಿತು.

ಲಾಪತಾ ಲೇಡೀಸ್ ಚಿತ್ರ ಆಸ್ಕರ್ ಪ್ರಶಸ್ತಿಯ ಅಂತಿಮ 15ರ ಪಟ್ಟಿಯಲ್ಲಿ ಸ್ಥಾನ ಪಡೆಯುವಲ್ಲಿ ವಿಫಲವಾಗಿದೆ ಎಂದು ಅಕಾಡೆಮಿ ಆಫ್ ಮೋಷನ್ ಪಿಕ್ಚರ್ ಆ್ಯಂಡ್‌ ಸೈನ್ಸ್‌ ತಿಳಿಸಿದೆ.

ಆದರೆ, ಬ್ರಿಟನ್-ಭಾರತ ಮೂಲದ ನಿರ್ಮಾಪಕಿ ಸಂಧ್ಯಾ ಸೂರಿ ಅವರ’ ಸಂತೋಷ್‌’ ಪ್ರಶಸ್ತಿ ರೇಸ್‌ನಲ್ಲಿ ಕಾಣಿಸಿಕೊಂಡಿದೆ. ಬ್ರಿಟನ್ ದೇಶವನ್ನು ಪ್ರತಿನಿಧಿಸುವ ಈ ಹಿಂದಿ ಚಿತ್ರದಲ್ಲಿ ಭಾರತೀಯರಾದ ಶಹಾನಾ ಗೋಸ್ವಾಮಿ ಮತ್ತು ಸುನೀತಾ ರಾಜ್‌ವರ್ ನಟಿಸಿದ್ದಾರೆ.

ಆಸ್ಕರ್ ಪ್ರಶಸ್ತಿಗಾಗಿ 85 ದೇಶಗಳು ತಮ್ಮ ಚಿತ್ರಗಳನ್ನು ಅಧಿಕೃತ ನಾಮನಿರ್ದೇಶನ ಮಾಡಿತ್ತು. ಈ ಪೈಕಿ ನೀಕ್ಯಾಪ್ (ಐರ್ಲೆಂಡ್), ಐ ಐ ಆ್ಯಮ್ ಸ್ಟಿಲ್ ಹಿಯರ್ (ಬ್ರೆಝಿಲ್), ಹೌ ಟು ಮೇಕ್ ಮಿಲಿಯನ್ಸ್ ಬಿಫೋರ್ ಗ್ರಾಂಡ್‌ಮ ಡೈಸ್ (ಥೈಲ್ಯಾಂಡ್), ಯೂನಿವರ್ಸಲ್ ಲಾಂಗ್ವೆಜ್ (ಕೆನಡಾ), ಅರ್ಮಂಡ್ (ನಾರ್ವೆ), ಟಚ್‌ (ಐಸ್‌ಲ್ಯಾಂಡ್), ದಿ ಗರ್ಲ್ ವಿಥ್ ದಿ ನೀಡ್ಲ್ (ಡೆನ್ಮಾರ್ಕ್), ದಹೋಮಿ (ಸೆನೆಗಲ್), ದಿ ಸೀಡ್ ಆಫ್ ಸೇಕ್ರೆಡ್ ಪಿಗ್ (ಜರ್ಮನಿ), ವೇವ್ಸ್ (ಜೆಕ್ ಗಣರಾಜ್ಯ), ಫ್ಲೋ (ಲಾಟ್ವಿಯಾ), ಫ್ರಂ ಗ್ರೌಂಡ್ ಝೀರೋ (ಪ್ಯಾಲೆಸ್ಟೈನ್), ಸಂತೋಷ್ (ಯುಕೆ) ಮತ್ತು ವೆರ್ಮಿಲಿಯೋ (ಇಟಲಿ) ಟಾಪ್ 15 ರಲ್ಲಿ ಸ್ಥಾನ ಪಡೆದಿವೆ ಎಂದು ಎಎಂಪಿಎಸ್‌ ತಿಳಿಸಿದೆ.

‘ಲಾಪತಾ ಲೇಡೀಸ್’ ಈ ವರ್ಷ ಆಸ್ಕರ್ ರೇಸ್‌ನಿಂದ ಹೊರಬಿದ್ದರೂ, ‘ಬೆಸ್ಟ್‌ ಲೈವ್-ಆಕ್ಷನ್ ಶಾರ್ಟ್‌ ಮೂವಿ’ ವಿಭಾಗಕ್ಕೆ ನಾಮನಿರ್ದೇಶನಗೊಂಡ ಗುನೀತ್ ಮೊಂಗಾ ಅವರ ಚಲನಚಿತ್ರ ‘ಅನುಜಾ’ ಮುಂದಿನ ಸುತ್ತಿಗೆ ಶಾರ್ಟ್‌ ಲಿಸ್ಟ್ ಅಗಿದೆ. ಅನುಜಾ ಭಾರತದಲ್ಲಿ ಗಾರ್ಮೆಂಟ್ ಉದ್ಯಮದಲ್ಲಿ ಕೆಲಸ ಮಾಡುವ ಮಕ್ಕಳ ಜೀವನದ ಸುತ್ತ ಸುತ್ತುತ್ತದೆ.

ಗುನೀತ್ ಮೊಂಗಾ ಅವರ ‘ದಿ ಎಲಿಫೆಂಟ್ ವಿಸ್ಪರರ್ಸ್’ ಅತ್ಯುತ್ತಮ ಸಾಕ್ಷ್ಯಚಿತ್ರ ಕಿರು ವಿಭಾಗದಲ್ಲಿ 2023ರಲ್ಲಿ ಆಸ್ಕರ್ ಪ್ರಶಸ್ತಿಯನ್ನು ಗೆದ್ದುಕೊಂಡಿರುವುದನ್ನು ಗಮನಾರ್ಹ.

ಇದನ್ನೂ ಓದಿ : Explainer | ಒಂದು ದೇಶ, ಒಂದು ಚುನಾವಣೆ : ಕೇಂದ್ರದ ಮಸೂದೆಯಲ್ಲಿ ಏನಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...