Homeಮುಖಪುಟಆಸ್ಕರ್ ಪ್ರಶಸ್ತಿ ರೇಸ್‌ನಿಂದ ಹೊರಬಿದ್ದ ಭಾರತೀಯ ಚಿತ್ರ 'ಲಾಪತಾ ಲೇಡೀಸ್'

ಆಸ್ಕರ್ ಪ್ರಶಸ್ತಿ ರೇಸ್‌ನಿಂದ ಹೊರಬಿದ್ದ ಭಾರತೀಯ ಚಿತ್ರ ‘ಲಾಪತಾ ಲೇಡೀಸ್’

- Advertisement -
- Advertisement -

ಬಹು ನಿರೀಕ್ಷಿತ ಆಸ್ಕರ್ 2025ರ ಪಶಸ್ತಿ ರೇಸ್‌ನಿಂದ ಭಾರತದಿಂದ ಅಧಿಕೃತ ಪ್ರವೇಶ ಪಡೆದಿದ್ದ ‘ಲಾಪತಾ ಲೇಡೀಸ್’ ಸಿನಿಮಾ ಹೊರ ಬಿದ್ದಿದೆ.

97ನೇ ಅಕಾಡೆಮಿ ಅವಾರ್ಡ್ಸ್‌ನ ‘ಬೆಸ್ಟ್‌ ಇಂಟರ್‌ನ್ಯಾಷನಲ್ ಫೀಚರ್’ ವಿಭಾಗದಲ್ಲಿ ಲಾಪತಾ ಲೇಡೀಸ್ ಸ್ಪರ್ಧಿಸಿತ್ತು. ಮಂಗಳವಾರ (ಡಿ.17) ಅಕಾಡೆಮಿ ಆಫ್ ಮೋಷನ್ ಪಿಕ್ಚರ್ ಆರ್ಟ್ಸ್ ಆ್ಯಂಡ್‌ ಸೈನ್ಸ್‌ (ಎಎಂಪಿಎಸ್‌) ಶಾರ್ಟ್‌ ಲಿಸ್ಟ್‌ ಮಾಡುವಾಗ ಹೊರಗುಳಿದಿದೆ.

ಬಾಲಿವುಡ್ ನಟ ಅಮೀರ್ ಖಾನ್ ನಿರ್ಮಿಸಿದ ಮತ್ತು ಅವರ ಮಾಜಿ ಪತ್ನಿ ಕಿರಣ್ ರಾವ್ ನಿರ್ದೇಶಿಸಿದ ಹಿಂದಿ ಚಿತ್ರ ಲಾಪತಾ ಲೇಡೀಸ್, ಇಬ್ಬರು ನವ ವಿವಾಹಿತ ಹೆಣ್ಣು ಮಕ್ಕಳು ತಮ್ಮ ಗಂಡನ ಮನೆಗೆ ರೈಲಿನಲ್ಲಿ ಪ್ರಯಾಣಿಸುವಾಗ ಆಕಸ್ಮಿಕವಾಗಿ ಸ್ಥಳಗಳನ್ನು ಬದಲಾಯಿಸುವ ಕಥೆಯೊಂದಿಗೆ ಸಾಗುತ್ತದೆ.

ಈ ಚಿತ್ರದಲ್ಲಿ ಪ್ರತಿಭಾ ರಂತ, ಸ್ಪರ್ಶ ಶ್ರೀವಾಸ್ತವ ಮತ್ತು ನಿತಾಂಶಿ ಗೋಯೆಲ್ ನಟಿಸಿದ್ದಾರೆ. ಇದು ಭಾರತದಲ್ಲಿ 1 ಮಾರ್ಚ್ 2024 ರಂದು ಬಿಡುಗಡೆಯಾಯಿತು ಮತ್ತು ಏಪ್ರಿಲ್‌ನಲ್ಲಿ ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮಿಂಗ್‌ಗೆ ಲಭ್ಯವಾಯಿತು.

ಲಾಪತಾ ಲೇಡೀಸ್ ಚಿತ್ರ ಆಸ್ಕರ್ ಪ್ರಶಸ್ತಿಯ ಅಂತಿಮ 15ರ ಪಟ್ಟಿಯಲ್ಲಿ ಸ್ಥಾನ ಪಡೆಯುವಲ್ಲಿ ವಿಫಲವಾಗಿದೆ ಎಂದು ಅಕಾಡೆಮಿ ಆಫ್ ಮೋಷನ್ ಪಿಕ್ಚರ್ ಆ್ಯಂಡ್‌ ಸೈನ್ಸ್‌ ತಿಳಿಸಿದೆ.

ಆದರೆ, ಬ್ರಿಟನ್-ಭಾರತ ಮೂಲದ ನಿರ್ಮಾಪಕಿ ಸಂಧ್ಯಾ ಸೂರಿ ಅವರ’ ಸಂತೋಷ್‌’ ಪ್ರಶಸ್ತಿ ರೇಸ್‌ನಲ್ಲಿ ಕಾಣಿಸಿಕೊಂಡಿದೆ. ಬ್ರಿಟನ್ ದೇಶವನ್ನು ಪ್ರತಿನಿಧಿಸುವ ಈ ಹಿಂದಿ ಚಿತ್ರದಲ್ಲಿ ಭಾರತೀಯರಾದ ಶಹಾನಾ ಗೋಸ್ವಾಮಿ ಮತ್ತು ಸುನೀತಾ ರಾಜ್‌ವರ್ ನಟಿಸಿದ್ದಾರೆ.

ಆಸ್ಕರ್ ಪ್ರಶಸ್ತಿಗಾಗಿ 85 ದೇಶಗಳು ತಮ್ಮ ಚಿತ್ರಗಳನ್ನು ಅಧಿಕೃತ ನಾಮನಿರ್ದೇಶನ ಮಾಡಿತ್ತು. ಈ ಪೈಕಿ ನೀಕ್ಯಾಪ್ (ಐರ್ಲೆಂಡ್), ಐ ಐ ಆ್ಯಮ್ ಸ್ಟಿಲ್ ಹಿಯರ್ (ಬ್ರೆಝಿಲ್), ಹೌ ಟು ಮೇಕ್ ಮಿಲಿಯನ್ಸ್ ಬಿಫೋರ್ ಗ್ರಾಂಡ್‌ಮ ಡೈಸ್ (ಥೈಲ್ಯಾಂಡ್), ಯೂನಿವರ್ಸಲ್ ಲಾಂಗ್ವೆಜ್ (ಕೆನಡಾ), ಅರ್ಮಂಡ್ (ನಾರ್ವೆ), ಟಚ್‌ (ಐಸ್‌ಲ್ಯಾಂಡ್), ದಿ ಗರ್ಲ್ ವಿಥ್ ದಿ ನೀಡ್ಲ್ (ಡೆನ್ಮಾರ್ಕ್), ದಹೋಮಿ (ಸೆನೆಗಲ್), ದಿ ಸೀಡ್ ಆಫ್ ಸೇಕ್ರೆಡ್ ಪಿಗ್ (ಜರ್ಮನಿ), ವೇವ್ಸ್ (ಜೆಕ್ ಗಣರಾಜ್ಯ), ಫ್ಲೋ (ಲಾಟ್ವಿಯಾ), ಫ್ರಂ ಗ್ರೌಂಡ್ ಝೀರೋ (ಪ್ಯಾಲೆಸ್ಟೈನ್), ಸಂತೋಷ್ (ಯುಕೆ) ಮತ್ತು ವೆರ್ಮಿಲಿಯೋ (ಇಟಲಿ) ಟಾಪ್ 15 ರಲ್ಲಿ ಸ್ಥಾನ ಪಡೆದಿವೆ ಎಂದು ಎಎಂಪಿಎಸ್‌ ತಿಳಿಸಿದೆ.

‘ಲಾಪತಾ ಲೇಡೀಸ್’ ಈ ವರ್ಷ ಆಸ್ಕರ್ ರೇಸ್‌ನಿಂದ ಹೊರಬಿದ್ದರೂ, ‘ಬೆಸ್ಟ್‌ ಲೈವ್-ಆಕ್ಷನ್ ಶಾರ್ಟ್‌ ಮೂವಿ’ ವಿಭಾಗಕ್ಕೆ ನಾಮನಿರ್ದೇಶನಗೊಂಡ ಗುನೀತ್ ಮೊಂಗಾ ಅವರ ಚಲನಚಿತ್ರ ‘ಅನುಜಾ’ ಮುಂದಿನ ಸುತ್ತಿಗೆ ಶಾರ್ಟ್‌ ಲಿಸ್ಟ್ ಅಗಿದೆ. ಅನುಜಾ ಭಾರತದಲ್ಲಿ ಗಾರ್ಮೆಂಟ್ ಉದ್ಯಮದಲ್ಲಿ ಕೆಲಸ ಮಾಡುವ ಮಕ್ಕಳ ಜೀವನದ ಸುತ್ತ ಸುತ್ತುತ್ತದೆ.

ಗುನೀತ್ ಮೊಂಗಾ ಅವರ ‘ದಿ ಎಲಿಫೆಂಟ್ ವಿಸ್ಪರರ್ಸ್’ ಅತ್ಯುತ್ತಮ ಸಾಕ್ಷ್ಯಚಿತ್ರ ಕಿರು ವಿಭಾಗದಲ್ಲಿ 2023ರಲ್ಲಿ ಆಸ್ಕರ್ ಪ್ರಶಸ್ತಿಯನ್ನು ಗೆದ್ದುಕೊಂಡಿರುವುದನ್ನು ಗಮನಾರ್ಹ.

ಇದನ್ನೂ ಓದಿ : Explainer | ಒಂದು ದೇಶ, ಒಂದು ಚುನಾವಣೆ : ಕೇಂದ್ರದ ಮಸೂದೆಯಲ್ಲಿ ಏನಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...