Homeಮುಖಪುಟದೇಶದ ಅತಿ ದೊಡ್ಡ ವೈದ್ಯಕೀಯ ಕಾಲೇಜು ಹಗರಣ: ಕರ್ನಾಟಕದ ಇಬ್ಬರು ಸೇರಿ 35 ಮಂದಿ ವಿರುದ್ಧ...

ದೇಶದ ಅತಿ ದೊಡ್ಡ ವೈದ್ಯಕೀಯ ಕಾಲೇಜು ಹಗರಣ: ಕರ್ನಾಟಕದ ಇಬ್ಬರು ಸೇರಿ 35 ಮಂದಿ ವಿರುದ್ಧ ಎಫ್‌ಐಆರ್

ಹಿರಿಯ ಅಧಿಕಾರಿಗಳು, ಮಧ್ಯವರ್ತಿಗಳು, ಉನ್ನತ ಶಿಕ್ಷಣ ತಜ್ಞರು ಮತ್ತು ಸ್ವಯಂ ಘೋಷಿತ ದೇವಮಾನವನ ಹೆಸರು ಪ್ರಕರಣದಲ್ಲಿ ಕೇಳಿ ಬಂದಿದೆ.

- Advertisement -
- Advertisement -

ದೇಶದಲ್ಲೇ ಅತಿ ದೊಡ್ಡದು ಎನ್ನಲಾಗಿರುವ ವೈದ್ಯಕೀಯ ಕಾಲೇಜುಗಳ ಹಗರಣವೊಂದನ್ನು ಕೇಂದ್ರ ತನಿಖಾ ದಳ (ಸಿಬಿಐ) ಬಯಲು ಮಾಡಿದ್ದು, ಇದರಲ್ಲಿ ಭಾಗಿಯಾಗಿರುವ ಆರೋಪದ ಮೇರೆಗೆ ಕರ್ನಾಟಕದ ಇಬ್ಬರು ವೈದ್ಯರು ಸಹಿತ 35 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಾಧ್ಯಾಪಕ ಮತ್ತು ಮೂಳೆ ವಿಭಾಗದ ಮುಖ್ಯಸ್ಥ ಡಾ| ಸಿ.ಎನ್.ಮಂಜಪ್ಪ, ಬೆಂಗಳೂರಿನಲ್ಲಿರುವ ಅವರ ಆಪ್ತ ವೈದ್ಯ ಡಾ| ಸತೀಶ್ ವಿರುದ್ಧ ಆರೋಪಗಳು ಕೇಳಿಬಂದಿವೆ. ವೈದ್ಯಕೀಯ ಕಾಲೇಜುಗಳಿಗೆ ಅನುಕೂಲಕರ ವರದಿ ನೀಡಲು ಆ ಕಾಲೇಜುಗಳಿಂದ ತಲಾ 55 ಲಕ್ಷ ರೂಪಾಯಿ ಲಂಚ ಪಡೆಯಲಾಗುತ್ತಿತ್ತು ಎಂಬುವುದು ಪ್ರಕರಣದ ಆರೋಪವಾಗಿದೆ.

ಛತ್ತೀಸ್‌ಗಢದ ಸ್ವಘೋಷಿತ ದೇವಮಾನವ ರಾವತುರ ಸರ್ಕಾರ್, ಯುಜಿಸಿ ಮಾಜಿ ಅಧ್ಯಕ್ಷ ಹಾಗೂ ಟಿಐಎಸ್‌ಎಸ್‌ ಹಾಲಿ ಕುಲಪತಿ ಡಿ.ಪಿ ಸಿಂಗ್ ಮತ್ತು ರಿಯಲ್‌ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ (ರೇರಾ) ಮಾಜಿ ಅಧ್ಯಕ್ಷ ಸಂಜಯ್ ಶುಕ್ಲಾ, ಇಂದೋರ್‌ನ ಇಂಡೆಕ್ಸ್ ವೈದ್ಯಕೀಯ ಕಾಲೇಜಿನ ಸುರೇಶ್ ಸಿಂಗ್ ಭಡೋರಿಯಾ ಸೇರಿದಂತೆ ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ, ದೆಹಲಿ, ಉತ್ತರ ಪ್ರದೇಶ ಮತ್ತು ಕರ್ನಾಟಕ, ಆಂಧ್ರ ಪ್ರದೇಶದ ಹಿರಿಯ ಆಧಿಕಾರಿಗಳು, ಮಧ್ಯವರ್ತಿಗಳು, ಉನ್ನತ ಶಿಕ್ಷಣ ತಜ್ಞರು ಸಹಿತ 35 ವ್ಯಕ್ತಿಗಳ ವಿರುದ್ಧ ಎಫ್‌ಐಆ‌ರ್ ದಾಖಲಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶದಾದ್ಯಂತ 40ಕ್ಕೂ ಹೆಚ್ಚು ವೈದ್ಯಕೀಯ ಕಾಲೇಜುಗಳು ಅಕ್ರಮ ಮಾನ್ಯತೆ ಪಡೆದಿರಬಹುದು ಎಂದು ಶಂಕಿಸಲಾಗಿದೆ. ಅಚ್ಚರಿಯೆಂದರೆ ಈ ಹಗರಣದಲ್ಲಿ ಆರೋಗ್ಯ ಸಚಿವಾಲಯದ ಕೆಲವು ಅಧಿಕಾರಿಗಳೂ ಶಾಮೀಲಾಗಿರುವ ಸಾಧ್ಯತೆಯಿದೆ ಎನ್ನಲಾಗಿದೆ.

ಕಳಪೆ ಮಟ್ಟದ ವೈದ್ಯಕೀಯ ಕಾಲೇಜುಗಳಿಗೆ ಅಕ್ರಮ ಅನುಮೋದನೆಗಳನ್ನು ಪಡೆಯಲು ನಕಲಿ ಅಧ್ಯಾಪಕರು, ಸುಳ್ಳು ತನಿಖೆಗಳು ಮತ್ತು ಗೌಪ್ಯ ಸೂಕ್ಷ್ಮ ಮಾಹಿತಿಗಳ ಸೋರಿಕೆ ಮಾಡಿ ಕೋಟ್ಯಂತರ ರೂಪಾಯಿಗಳನ್ನು ಹವಾಲಾ ಮತ್ತು ಬ್ಯಾಂಕಿಂಗ್ ಮಾರ್ಗಗಳ ಮೂಲಕ ವಿನಿಮಯ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ರಾಯ್ಪುರದ ವೈದ್ಯಕೀಯ ಸಂಸ್ಥೆಯಲ್ಲಿ 55 ಲಕ್ಷ ರೂಪಾಯಿ ಲಂಚ ಪ್ರಕರಣದಿಂದ ಆರಂಭವಾದ ತನಿಖೆ, ಈಗ ರಾಷ್ಟ್ರಮಟ್ಟದ ಹಗರಣವನ್ನು ಬಯಲಿಗೆಳೆದಿದೆ.

ಛತ್ತೀಸ್‌ಗಢದ ಶ್ರೀರಾಮಪುರ ಸರ್ಕಾರ್ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನ ಸಂಸ್ಥೆಗೆ ನಿಯೋಜಿಸಲಾದ ಎನ್‌ಎಂಪಿ ತಪಾಸಣೆ ತಂಡದಲ್ಲಿ ಮಂಡ್ಯದ ಡಾ. ಮಂಜಪ್ಪ ಅವರಿದ್ದರು. ಈ ಸಂಸ್ಥೆಯ ಪರವಾಗಿ ವರದಿ ನೀಡಲು ತಂಡವು 55 ಲಕ್ಷ ರೂ. ಲಂಚ ಪಡೆದಿತ್ತು. ಮಂಜಪ್ಪ ಅವರು ಈ ಹಣವನ್ನು ಪಡೆಯುವಂತೆ ಬೆಂಗಳೂರಿನ ಸತೀಶ್‌ಗೆ ತಿಳಿಸಿದ್ದರು. ಬೆಂಗಳೂರಿನಲ್ಲಿ ಲಂಚದ ಹಣ ಸ್ವೀಕರಿಸುವ ಸಮಯದಲ್ಲೇ ಸಿಬಿಐ ಆರೋಪಿಗಳನ್ನು ಬಂಧಿಸಿದೆ ಎನ್ನಲಾಗಿದೆ.

ಬಡತನಕ್ಕೆ ತಳ್ಳಿದವರ ಬಗ್ಗೆಯೂ ನಿತಿನ್ ಗಡ್ಕರಿ ಮಾತನಾಡಲಿ: ಬಿ.ಕೆ ಹರಿಪ್ರಸಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...