Homeಮುಖಪುಟದೇಶದ ಅತಿ ದೊಡ್ಡ ವೈದ್ಯಕೀಯ ಕಾಲೇಜು ಹಗರಣ: ಕರ್ನಾಟಕದ ಇಬ್ಬರು ಸೇರಿ 35 ಮಂದಿ ವಿರುದ್ಧ...

ದೇಶದ ಅತಿ ದೊಡ್ಡ ವೈದ್ಯಕೀಯ ಕಾಲೇಜು ಹಗರಣ: ಕರ್ನಾಟಕದ ಇಬ್ಬರು ಸೇರಿ 35 ಮಂದಿ ವಿರುದ್ಧ ಎಫ್‌ಐಆರ್

ಹಿರಿಯ ಅಧಿಕಾರಿಗಳು, ಮಧ್ಯವರ್ತಿಗಳು, ಉನ್ನತ ಶಿಕ್ಷಣ ತಜ್ಞರು ಮತ್ತು ಸ್ವಯಂ ಘೋಷಿತ ದೇವಮಾನವನ ಹೆಸರು ಪ್ರಕರಣದಲ್ಲಿ ಕೇಳಿ ಬಂದಿದೆ.

- Advertisement -
- Advertisement -

ದೇಶದಲ್ಲೇ ಅತಿ ದೊಡ್ಡದು ಎನ್ನಲಾಗಿರುವ ವೈದ್ಯಕೀಯ ಕಾಲೇಜುಗಳ ಹಗರಣವೊಂದನ್ನು ಕೇಂದ್ರ ತನಿಖಾ ದಳ (ಸಿಬಿಐ) ಬಯಲು ಮಾಡಿದ್ದು, ಇದರಲ್ಲಿ ಭಾಗಿಯಾಗಿರುವ ಆರೋಪದ ಮೇರೆಗೆ ಕರ್ನಾಟಕದ ಇಬ್ಬರು ವೈದ್ಯರು ಸಹಿತ 35 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಾಧ್ಯಾಪಕ ಮತ್ತು ಮೂಳೆ ವಿಭಾಗದ ಮುಖ್ಯಸ್ಥ ಡಾ| ಸಿ.ಎನ್.ಮಂಜಪ್ಪ, ಬೆಂಗಳೂರಿನಲ್ಲಿರುವ ಅವರ ಆಪ್ತ ವೈದ್ಯ ಡಾ| ಸತೀಶ್ ವಿರುದ್ಧ ಆರೋಪಗಳು ಕೇಳಿಬಂದಿವೆ. ವೈದ್ಯಕೀಯ ಕಾಲೇಜುಗಳಿಗೆ ಅನುಕೂಲಕರ ವರದಿ ನೀಡಲು ಆ ಕಾಲೇಜುಗಳಿಂದ ತಲಾ 55 ಲಕ್ಷ ರೂಪಾಯಿ ಲಂಚ ಪಡೆಯಲಾಗುತ್ತಿತ್ತು ಎಂಬುವುದು ಪ್ರಕರಣದ ಆರೋಪವಾಗಿದೆ.

ಛತ್ತೀಸ್‌ಗಢದ ಸ್ವಘೋಷಿತ ದೇವಮಾನವ ರಾವತುರ ಸರ್ಕಾರ್, ಯುಜಿಸಿ ಮಾಜಿ ಅಧ್ಯಕ್ಷ ಹಾಗೂ ಟಿಐಎಸ್‌ಎಸ್‌ ಹಾಲಿ ಕುಲಪತಿ ಡಿ.ಪಿ ಸಿಂಗ್ ಮತ್ತು ರಿಯಲ್‌ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ (ರೇರಾ) ಮಾಜಿ ಅಧ್ಯಕ್ಷ ಸಂಜಯ್ ಶುಕ್ಲಾ, ಇಂದೋರ್‌ನ ಇಂಡೆಕ್ಸ್ ವೈದ್ಯಕೀಯ ಕಾಲೇಜಿನ ಸುರೇಶ್ ಸಿಂಗ್ ಭಡೋರಿಯಾ ಸೇರಿದಂತೆ ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ, ದೆಹಲಿ, ಉತ್ತರ ಪ್ರದೇಶ ಮತ್ತು ಕರ್ನಾಟಕ, ಆಂಧ್ರ ಪ್ರದೇಶದ ಹಿರಿಯ ಆಧಿಕಾರಿಗಳು, ಮಧ್ಯವರ್ತಿಗಳು, ಉನ್ನತ ಶಿಕ್ಷಣ ತಜ್ಞರು ಸಹಿತ 35 ವ್ಯಕ್ತಿಗಳ ವಿರುದ್ಧ ಎಫ್‌ಐಆ‌ರ್ ದಾಖಲಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶದಾದ್ಯಂತ 40ಕ್ಕೂ ಹೆಚ್ಚು ವೈದ್ಯಕೀಯ ಕಾಲೇಜುಗಳು ಅಕ್ರಮ ಮಾನ್ಯತೆ ಪಡೆದಿರಬಹುದು ಎಂದು ಶಂಕಿಸಲಾಗಿದೆ. ಅಚ್ಚರಿಯೆಂದರೆ ಈ ಹಗರಣದಲ್ಲಿ ಆರೋಗ್ಯ ಸಚಿವಾಲಯದ ಕೆಲವು ಅಧಿಕಾರಿಗಳೂ ಶಾಮೀಲಾಗಿರುವ ಸಾಧ್ಯತೆಯಿದೆ ಎನ್ನಲಾಗಿದೆ.

ಕಳಪೆ ಮಟ್ಟದ ವೈದ್ಯಕೀಯ ಕಾಲೇಜುಗಳಿಗೆ ಅಕ್ರಮ ಅನುಮೋದನೆಗಳನ್ನು ಪಡೆಯಲು ನಕಲಿ ಅಧ್ಯಾಪಕರು, ಸುಳ್ಳು ತನಿಖೆಗಳು ಮತ್ತು ಗೌಪ್ಯ ಸೂಕ್ಷ್ಮ ಮಾಹಿತಿಗಳ ಸೋರಿಕೆ ಮಾಡಿ ಕೋಟ್ಯಂತರ ರೂಪಾಯಿಗಳನ್ನು ಹವಾಲಾ ಮತ್ತು ಬ್ಯಾಂಕಿಂಗ್ ಮಾರ್ಗಗಳ ಮೂಲಕ ವಿನಿಮಯ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ರಾಯ್ಪುರದ ವೈದ್ಯಕೀಯ ಸಂಸ್ಥೆಯಲ್ಲಿ 55 ಲಕ್ಷ ರೂಪಾಯಿ ಲಂಚ ಪ್ರಕರಣದಿಂದ ಆರಂಭವಾದ ತನಿಖೆ, ಈಗ ರಾಷ್ಟ್ರಮಟ್ಟದ ಹಗರಣವನ್ನು ಬಯಲಿಗೆಳೆದಿದೆ.

ಛತ್ತೀಸ್‌ಗಢದ ಶ್ರೀರಾಮಪುರ ಸರ್ಕಾರ್ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನ ಸಂಸ್ಥೆಗೆ ನಿಯೋಜಿಸಲಾದ ಎನ್‌ಎಂಪಿ ತಪಾಸಣೆ ತಂಡದಲ್ಲಿ ಮಂಡ್ಯದ ಡಾ. ಮಂಜಪ್ಪ ಅವರಿದ್ದರು. ಈ ಸಂಸ್ಥೆಯ ಪರವಾಗಿ ವರದಿ ನೀಡಲು ತಂಡವು 55 ಲಕ್ಷ ರೂ. ಲಂಚ ಪಡೆದಿತ್ತು. ಮಂಜಪ್ಪ ಅವರು ಈ ಹಣವನ್ನು ಪಡೆಯುವಂತೆ ಬೆಂಗಳೂರಿನ ಸತೀಶ್‌ಗೆ ತಿಳಿಸಿದ್ದರು. ಬೆಂಗಳೂರಿನಲ್ಲಿ ಲಂಚದ ಹಣ ಸ್ವೀಕರಿಸುವ ಸಮಯದಲ್ಲೇ ಸಿಬಿಐ ಆರೋಪಿಗಳನ್ನು ಬಂಧಿಸಿದೆ ಎನ್ನಲಾಗಿದೆ.

ಬಡತನಕ್ಕೆ ತಳ್ಳಿದವರ ಬಗ್ಗೆಯೂ ನಿತಿನ್ ಗಡ್ಕರಿ ಮಾತನಾಡಲಿ: ಬಿ.ಕೆ ಹರಿಪ್ರಸಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...