Homeಮುಖಪುಟದೇಶದ ಅತಿ ದೊಡ್ಡ ವೈದ್ಯಕೀಯ ಕಾಲೇಜು ಹಗರಣ: ಕರ್ನಾಟಕದ ಇಬ್ಬರು ಸೇರಿ 35 ಮಂದಿ ವಿರುದ್ಧ...

ದೇಶದ ಅತಿ ದೊಡ್ಡ ವೈದ್ಯಕೀಯ ಕಾಲೇಜು ಹಗರಣ: ಕರ್ನಾಟಕದ ಇಬ್ಬರು ಸೇರಿ 35 ಮಂದಿ ವಿರುದ್ಧ ಎಫ್‌ಐಆರ್

ಹಿರಿಯ ಅಧಿಕಾರಿಗಳು, ಮಧ್ಯವರ್ತಿಗಳು, ಉನ್ನತ ಶಿಕ್ಷಣ ತಜ್ಞರು ಮತ್ತು ಸ್ವಯಂ ಘೋಷಿತ ದೇವಮಾನವನ ಹೆಸರು ಪ್ರಕರಣದಲ್ಲಿ ಕೇಳಿ ಬಂದಿದೆ.

- Advertisement -
- Advertisement -

ದೇಶದಲ್ಲೇ ಅತಿ ದೊಡ್ಡದು ಎನ್ನಲಾಗಿರುವ ವೈದ್ಯಕೀಯ ಕಾಲೇಜುಗಳ ಹಗರಣವೊಂದನ್ನು ಕೇಂದ್ರ ತನಿಖಾ ದಳ (ಸಿಬಿಐ) ಬಯಲು ಮಾಡಿದ್ದು, ಇದರಲ್ಲಿ ಭಾಗಿಯಾಗಿರುವ ಆರೋಪದ ಮೇರೆಗೆ ಕರ್ನಾಟಕದ ಇಬ್ಬರು ವೈದ್ಯರು ಸಹಿತ 35 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಾಧ್ಯಾಪಕ ಮತ್ತು ಮೂಳೆ ವಿಭಾಗದ ಮುಖ್ಯಸ್ಥ ಡಾ| ಸಿ.ಎನ್.ಮಂಜಪ್ಪ, ಬೆಂಗಳೂರಿನಲ್ಲಿರುವ ಅವರ ಆಪ್ತ ವೈದ್ಯ ಡಾ| ಸತೀಶ್ ವಿರುದ್ಧ ಆರೋಪಗಳು ಕೇಳಿಬಂದಿವೆ. ವೈದ್ಯಕೀಯ ಕಾಲೇಜುಗಳಿಗೆ ಅನುಕೂಲಕರ ವರದಿ ನೀಡಲು ಆ ಕಾಲೇಜುಗಳಿಂದ ತಲಾ 55 ಲಕ್ಷ ರೂಪಾಯಿ ಲಂಚ ಪಡೆಯಲಾಗುತ್ತಿತ್ತು ಎಂಬುವುದು ಪ್ರಕರಣದ ಆರೋಪವಾಗಿದೆ.

ಛತ್ತೀಸ್‌ಗಢದ ಸ್ವಘೋಷಿತ ದೇವಮಾನವ ರಾವತುರ ಸರ್ಕಾರ್, ಯುಜಿಸಿ ಮಾಜಿ ಅಧ್ಯಕ್ಷ ಹಾಗೂ ಟಿಐಎಸ್‌ಎಸ್‌ ಹಾಲಿ ಕುಲಪತಿ ಡಿ.ಪಿ ಸಿಂಗ್ ಮತ್ತು ರಿಯಲ್‌ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ (ರೇರಾ) ಮಾಜಿ ಅಧ್ಯಕ್ಷ ಸಂಜಯ್ ಶುಕ್ಲಾ, ಇಂದೋರ್‌ನ ಇಂಡೆಕ್ಸ್ ವೈದ್ಯಕೀಯ ಕಾಲೇಜಿನ ಸುರೇಶ್ ಸಿಂಗ್ ಭಡೋರಿಯಾ ಸೇರಿದಂತೆ ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ, ದೆಹಲಿ, ಉತ್ತರ ಪ್ರದೇಶ ಮತ್ತು ಕರ್ನಾಟಕ, ಆಂಧ್ರ ಪ್ರದೇಶದ ಹಿರಿಯ ಆಧಿಕಾರಿಗಳು, ಮಧ್ಯವರ್ತಿಗಳು, ಉನ್ನತ ಶಿಕ್ಷಣ ತಜ್ಞರು ಸಹಿತ 35 ವ್ಯಕ್ತಿಗಳ ವಿರುದ್ಧ ಎಫ್‌ಐಆ‌ರ್ ದಾಖಲಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶದಾದ್ಯಂತ 40ಕ್ಕೂ ಹೆಚ್ಚು ವೈದ್ಯಕೀಯ ಕಾಲೇಜುಗಳು ಅಕ್ರಮ ಮಾನ್ಯತೆ ಪಡೆದಿರಬಹುದು ಎಂದು ಶಂಕಿಸಲಾಗಿದೆ. ಅಚ್ಚರಿಯೆಂದರೆ ಈ ಹಗರಣದಲ್ಲಿ ಆರೋಗ್ಯ ಸಚಿವಾಲಯದ ಕೆಲವು ಅಧಿಕಾರಿಗಳೂ ಶಾಮೀಲಾಗಿರುವ ಸಾಧ್ಯತೆಯಿದೆ ಎನ್ನಲಾಗಿದೆ.

ಕಳಪೆ ಮಟ್ಟದ ವೈದ್ಯಕೀಯ ಕಾಲೇಜುಗಳಿಗೆ ಅಕ್ರಮ ಅನುಮೋದನೆಗಳನ್ನು ಪಡೆಯಲು ನಕಲಿ ಅಧ್ಯಾಪಕರು, ಸುಳ್ಳು ತನಿಖೆಗಳು ಮತ್ತು ಗೌಪ್ಯ ಸೂಕ್ಷ್ಮ ಮಾಹಿತಿಗಳ ಸೋರಿಕೆ ಮಾಡಿ ಕೋಟ್ಯಂತರ ರೂಪಾಯಿಗಳನ್ನು ಹವಾಲಾ ಮತ್ತು ಬ್ಯಾಂಕಿಂಗ್ ಮಾರ್ಗಗಳ ಮೂಲಕ ವಿನಿಮಯ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ರಾಯ್ಪುರದ ವೈದ್ಯಕೀಯ ಸಂಸ್ಥೆಯಲ್ಲಿ 55 ಲಕ್ಷ ರೂಪಾಯಿ ಲಂಚ ಪ್ರಕರಣದಿಂದ ಆರಂಭವಾದ ತನಿಖೆ, ಈಗ ರಾಷ್ಟ್ರಮಟ್ಟದ ಹಗರಣವನ್ನು ಬಯಲಿಗೆಳೆದಿದೆ.

ಛತ್ತೀಸ್‌ಗಢದ ಶ್ರೀರಾಮಪುರ ಸರ್ಕಾರ್ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನ ಸಂಸ್ಥೆಗೆ ನಿಯೋಜಿಸಲಾದ ಎನ್‌ಎಂಪಿ ತಪಾಸಣೆ ತಂಡದಲ್ಲಿ ಮಂಡ್ಯದ ಡಾ. ಮಂಜಪ್ಪ ಅವರಿದ್ದರು. ಈ ಸಂಸ್ಥೆಯ ಪರವಾಗಿ ವರದಿ ನೀಡಲು ತಂಡವು 55 ಲಕ್ಷ ರೂ. ಲಂಚ ಪಡೆದಿತ್ತು. ಮಂಜಪ್ಪ ಅವರು ಈ ಹಣವನ್ನು ಪಡೆಯುವಂತೆ ಬೆಂಗಳೂರಿನ ಸತೀಶ್‌ಗೆ ತಿಳಿಸಿದ್ದರು. ಬೆಂಗಳೂರಿನಲ್ಲಿ ಲಂಚದ ಹಣ ಸ್ವೀಕರಿಸುವ ಸಮಯದಲ್ಲೇ ಸಿಬಿಐ ಆರೋಪಿಗಳನ್ನು ಬಂಧಿಸಿದೆ ಎನ್ನಲಾಗಿದೆ.

ಬಡತನಕ್ಕೆ ತಳ್ಳಿದವರ ಬಗ್ಗೆಯೂ ನಿತಿನ್ ಗಡ್ಕರಿ ಮಾತನಾಡಲಿ: ಬಿ.ಕೆ ಹರಿಪ್ರಸಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...