Homeಮುಖಪುಟದೇಶದ ಅತಿ ದೊಡ್ಡ ವೈದ್ಯಕೀಯ ಕಾಲೇಜು ಹಗರಣ: ಕರ್ನಾಟಕದ ಇಬ್ಬರು ಸೇರಿ 35 ಮಂದಿ ವಿರುದ್ಧ...

ದೇಶದ ಅತಿ ದೊಡ್ಡ ವೈದ್ಯಕೀಯ ಕಾಲೇಜು ಹಗರಣ: ಕರ್ನಾಟಕದ ಇಬ್ಬರು ಸೇರಿ 35 ಮಂದಿ ವಿರುದ್ಧ ಎಫ್‌ಐಆರ್

ಹಿರಿಯ ಅಧಿಕಾರಿಗಳು, ಮಧ್ಯವರ್ತಿಗಳು, ಉನ್ನತ ಶಿಕ್ಷಣ ತಜ್ಞರು ಮತ್ತು ಸ್ವಯಂ ಘೋಷಿತ ದೇವಮಾನವನ ಹೆಸರು ಪ್ರಕರಣದಲ್ಲಿ ಕೇಳಿ ಬಂದಿದೆ.

- Advertisement -
- Advertisement -

ದೇಶದಲ್ಲೇ ಅತಿ ದೊಡ್ಡದು ಎನ್ನಲಾಗಿರುವ ವೈದ್ಯಕೀಯ ಕಾಲೇಜುಗಳ ಹಗರಣವೊಂದನ್ನು ಕೇಂದ್ರ ತನಿಖಾ ದಳ (ಸಿಬಿಐ) ಬಯಲು ಮಾಡಿದ್ದು, ಇದರಲ್ಲಿ ಭಾಗಿಯಾಗಿರುವ ಆರೋಪದ ಮೇರೆಗೆ ಕರ್ನಾಟಕದ ಇಬ್ಬರು ವೈದ್ಯರು ಸಹಿತ 35 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಾಧ್ಯಾಪಕ ಮತ್ತು ಮೂಳೆ ವಿಭಾಗದ ಮುಖ್ಯಸ್ಥ ಡಾ| ಸಿ.ಎನ್.ಮಂಜಪ್ಪ, ಬೆಂಗಳೂರಿನಲ್ಲಿರುವ ಅವರ ಆಪ್ತ ವೈದ್ಯ ಡಾ| ಸತೀಶ್ ವಿರುದ್ಧ ಆರೋಪಗಳು ಕೇಳಿಬಂದಿವೆ. ವೈದ್ಯಕೀಯ ಕಾಲೇಜುಗಳಿಗೆ ಅನುಕೂಲಕರ ವರದಿ ನೀಡಲು ಆ ಕಾಲೇಜುಗಳಿಂದ ತಲಾ 55 ಲಕ್ಷ ರೂಪಾಯಿ ಲಂಚ ಪಡೆಯಲಾಗುತ್ತಿತ್ತು ಎಂಬುವುದು ಪ್ರಕರಣದ ಆರೋಪವಾಗಿದೆ.

ಛತ್ತೀಸ್‌ಗಢದ ಸ್ವಘೋಷಿತ ದೇವಮಾನವ ರಾವತುರ ಸರ್ಕಾರ್, ಯುಜಿಸಿ ಮಾಜಿ ಅಧ್ಯಕ್ಷ ಹಾಗೂ ಟಿಐಎಸ್‌ಎಸ್‌ ಹಾಲಿ ಕುಲಪತಿ ಡಿ.ಪಿ ಸಿಂಗ್ ಮತ್ತು ರಿಯಲ್‌ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ (ರೇರಾ) ಮಾಜಿ ಅಧ್ಯಕ್ಷ ಸಂಜಯ್ ಶುಕ್ಲಾ, ಇಂದೋರ್‌ನ ಇಂಡೆಕ್ಸ್ ವೈದ್ಯಕೀಯ ಕಾಲೇಜಿನ ಸುರೇಶ್ ಸಿಂಗ್ ಭಡೋರಿಯಾ ಸೇರಿದಂತೆ ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ, ದೆಹಲಿ, ಉತ್ತರ ಪ್ರದೇಶ ಮತ್ತು ಕರ್ನಾಟಕ, ಆಂಧ್ರ ಪ್ರದೇಶದ ಹಿರಿಯ ಆಧಿಕಾರಿಗಳು, ಮಧ್ಯವರ್ತಿಗಳು, ಉನ್ನತ ಶಿಕ್ಷಣ ತಜ್ಞರು ಸಹಿತ 35 ವ್ಯಕ್ತಿಗಳ ವಿರುದ್ಧ ಎಫ್‌ಐಆ‌ರ್ ದಾಖಲಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶದಾದ್ಯಂತ 40ಕ್ಕೂ ಹೆಚ್ಚು ವೈದ್ಯಕೀಯ ಕಾಲೇಜುಗಳು ಅಕ್ರಮ ಮಾನ್ಯತೆ ಪಡೆದಿರಬಹುದು ಎಂದು ಶಂಕಿಸಲಾಗಿದೆ. ಅಚ್ಚರಿಯೆಂದರೆ ಈ ಹಗರಣದಲ್ಲಿ ಆರೋಗ್ಯ ಸಚಿವಾಲಯದ ಕೆಲವು ಅಧಿಕಾರಿಗಳೂ ಶಾಮೀಲಾಗಿರುವ ಸಾಧ್ಯತೆಯಿದೆ ಎನ್ನಲಾಗಿದೆ.

ಕಳಪೆ ಮಟ್ಟದ ವೈದ್ಯಕೀಯ ಕಾಲೇಜುಗಳಿಗೆ ಅಕ್ರಮ ಅನುಮೋದನೆಗಳನ್ನು ಪಡೆಯಲು ನಕಲಿ ಅಧ್ಯಾಪಕರು, ಸುಳ್ಳು ತನಿಖೆಗಳು ಮತ್ತು ಗೌಪ್ಯ ಸೂಕ್ಷ್ಮ ಮಾಹಿತಿಗಳ ಸೋರಿಕೆ ಮಾಡಿ ಕೋಟ್ಯಂತರ ರೂಪಾಯಿಗಳನ್ನು ಹವಾಲಾ ಮತ್ತು ಬ್ಯಾಂಕಿಂಗ್ ಮಾರ್ಗಗಳ ಮೂಲಕ ವಿನಿಮಯ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ರಾಯ್ಪುರದ ವೈದ್ಯಕೀಯ ಸಂಸ್ಥೆಯಲ್ಲಿ 55 ಲಕ್ಷ ರೂಪಾಯಿ ಲಂಚ ಪ್ರಕರಣದಿಂದ ಆರಂಭವಾದ ತನಿಖೆ, ಈಗ ರಾಷ್ಟ್ರಮಟ್ಟದ ಹಗರಣವನ್ನು ಬಯಲಿಗೆಳೆದಿದೆ.

ಛತ್ತೀಸ್‌ಗಢದ ಶ್ರೀರಾಮಪುರ ಸರ್ಕಾರ್ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನ ಸಂಸ್ಥೆಗೆ ನಿಯೋಜಿಸಲಾದ ಎನ್‌ಎಂಪಿ ತಪಾಸಣೆ ತಂಡದಲ್ಲಿ ಮಂಡ್ಯದ ಡಾ. ಮಂಜಪ್ಪ ಅವರಿದ್ದರು. ಈ ಸಂಸ್ಥೆಯ ಪರವಾಗಿ ವರದಿ ನೀಡಲು ತಂಡವು 55 ಲಕ್ಷ ರೂ. ಲಂಚ ಪಡೆದಿತ್ತು. ಮಂಜಪ್ಪ ಅವರು ಈ ಹಣವನ್ನು ಪಡೆಯುವಂತೆ ಬೆಂಗಳೂರಿನ ಸತೀಶ್‌ಗೆ ತಿಳಿಸಿದ್ದರು. ಬೆಂಗಳೂರಿನಲ್ಲಿ ಲಂಚದ ಹಣ ಸ್ವೀಕರಿಸುವ ಸಮಯದಲ್ಲೇ ಸಿಬಿಐ ಆರೋಪಿಗಳನ್ನು ಬಂಧಿಸಿದೆ ಎನ್ನಲಾಗಿದೆ.

ಬಡತನಕ್ಕೆ ತಳ್ಳಿದವರ ಬಗ್ಗೆಯೂ ನಿತಿನ್ ಗಡ್ಕರಿ ಮಾತನಾಡಲಿ: ಬಿ.ಕೆ ಹರಿಪ್ರಸಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೋಹಿತ್ ವೇಮುಲ ಕಾಯ್ದೆ ಘೋಷಣೆಯಲ್ಲ, ಅಗತ್ಯ : ರಾಹುಲ್ ಗಾಂಧಿ

ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲ ಜಾತಿ ತಾರತಮ್ಯಕ್ಕೆ ಬಲಿಯಾಗಿ ಇಂದಿಗೆ (17 ಜನವರಿ 2026) 10 ವರ್ಷಗಳಾಗಿದ್ದು, ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ರೋಹಿತ್ ಅವರನ್ನು ಸ್ಮರಿಸಿ ಸಾಮಾಜಿಕ...

ದೇವರು-ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ; ಬಿಜೆಪಿ ಕೌನ್ಸಿಲರ್‌ಗಳಿಗೆ ಕೇರಳ ಹೈಕೋರ್ಟ್ ನೋಟಿಸ್

ತಿರುವನಂತಪುರಂ ನಗರಸಭೆಯ ಬಿಜೆಪಿ ಕೌನ್ಸಿಲರ್‌ಗಳು ವಿವಿಧ ದೇವರು, ಹುತಾತ್ಮರು ಮತ್ತು ರಾಜಕೀಯ ಚಳುವಳಿಗಳ ಹೆಸರಿನಲ್ಲಿ ಮಾಡಿದ ಪ್ರಮಾಣವಚನಗಳ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ಅರ್ಜಿಯ ಕುರಿತು ಕೇರಳ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ...

ಮಧ್ಯಪ್ರದೇಶ: ಬುಡಕಟ್ಟು ವಿಶ್ವವಿದ್ಯಾಲಯ ಹಾಸ್ಟೆಲ್ ಒಳಗೆ ಅಸ್ಸಾಮಿ ವಿದ್ಯಾರ್ಥಿ ಮೇಲೆ ಗುಂಪು ಹಲ್ಲೆ

ಮಧ್ಯಪ್ರದೇಶದ ಇಂದಿರಾ ಗಾಂಧಿ ರಾಷ್ಟ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಹಾಸ್ಟೆಲ್ ಕೋಣೆಯೊಳಗೆ ಐದು ಜನ ವಿದ್ಯಾರ್ಥಿಗಳ ತಂಡವು ಅಸ್ಸಾಮಿ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. ಗುಂಪು ಆತನಿಗೆ ಇಲ್ಲಿಯೇ ಸಾಯಬೇಕು ಎಂದು...

ಮಹಿಳೆಯರ ಜೊತೆ ಪುರುಷರಿಗೂ ಉಚಿತ ಬಸ್‌ ಪ್ರಯಾಣ, ಗ್ರಾಮೀಣರಿಗೆ 150 ಕೂಲಿ ದಿನ : ಎಐಎಡಿಎಂಕೆ ಚುನಾವಣಾ ಭರವಸೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಶನಿವಾರ (ಜ.17) ಪಕ್ಷದ ಮೊದಲ ಹಂತದ ಪ್ರಣಾಳಿಕೆ (ಚುನಾವಣಾ ಭರವಸೆ) ಬಿಡುಗಡೆ ಮಾಡಿದ್ದಾರೆ. ಕರ್ನಾಟಕದ ಗೃಹಲಕ್ಷ್ಮಿ ಯೋಜನೆಯಂತೆ ಎಲ್ಲಾ ಪಡಿತರ...

ಛತ್ತೀಸ್‌ಗಢ| ಬಿಜಾಪುರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರು ಸಾವು

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳೊಂದಿಗಿನ ಎನ್‌ಕೌಂಟರ್‌ನಲ್ಲಿ ಕನಿಷ್ಠ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲೆಯ ವಾಯುವ್ಯ ಪ್ರದೇಶದ ಅರಣ್ಯ ಬೆಟ್ಟಗಳಲ್ಲಿ ಶನಿವಾರ ಬೆಳಿಗ್ಗೆ ಗುಂಡಿನ ಚಕಮಕಿ ನಡೆಯಿತು. ಹಿರಿಯ...

ಮಮತಾ ಬ್ಯಾನರ್ಜಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಸುವೇಂದು ಅಧಿಕಾರಿ

ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಶುಕ್ರವಾರ (ಜ.16) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ 100 ಕೋಟಿ ರೂ.ಗಳ ಪರಿಹಾರ ಕೋರಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಮಮತಾ...

ಕೋಮುವಾದ ಕಾರಣಕ್ಕೆ ಬಾಲಿವುಡ್‌ನಲ್ಲಿ ಅವಕಾಶ ಕಡಿಮೆ; ರೆಹಮಾನ್ ಹೇಳಿಕೆ ತಳ್ಳಿಹಾಕಿದ ಜಾವೇದ್ ಅಖ್ತರ್

ಯಶಸ್ವೀ ಸಂಗೀತಗಾರನಾಗಿ ಹಲವು ಕೊಡುಗೆ ನೀಡಿದ್ದರೂ ಕೆಲವರಿಗೆ ಹೊರಗಿನವನು ಎಂಬ ಭಾವನೆ ಹೋಗಿಲ್ಲ. ಕಳೆದ ಎಂಟು ವರ್ಷಗಳಲ್ಲಿ ಬಾಲಿವುಡ್‌ನ ಕದ ಮುಚ್ಚಿದೆ ಎಂಬ ಬಗ್ಗೆ ಎ.ಆರ್. ರೆಹಮಾನ್ ಹೇಳಿಕೆಯನ್ನು ಹಿರಿಯ ಗೀತೆ ರಚನೆಕಾರ...

14 ವರ್ಷದ ದಲಿತ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ : 16 ವರ್ಷದ ಬಾಲಕನನ್ನು ವಶಕ್ಕೆ ಪಡೆದ ಪೊಲೀಸರು

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ 14 ವರ್ಷದ ದಲಿತ ಬಾಲಕಿಯ ಭೀಕರ ಅತ್ಯಾಚಾರ, ಕೊಲೆ ನಡೆದಿದ್ದು, ಈ ಸಂಬಂಧ 16 ವರ್ಷದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುರುವಾರ (ಜ.15) ಬೆಳಿಗ್ಗೆ ಶಾಲೆಗೆ ಹೋದ...

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮುಸ್ಲಿಮರನ್ನು ಎರಡನೇ ದರ್ಜೆಯ ನಾಗರಿಕರಂತೆ ನಡೆಸಿಕೊಳ್ಳುತ್ತದೆ: ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬಿಜೆಪಿ ಆಡಳಿತದ ಕೇಂದ್ರ ಸರ್ಕಾರದ ವಿರುದ್ಧ ತಮ್ಮ ವಾಗ್ದಾಳಿ ನಡೆಸಿದ್ದಾರೆ. ಪೌರತ್ವ ಕಾಯ್ದೆ ಮತ್ತು ಹೊಸ ವಕ್ಫ್ ಕಾಯ್ದೆಯಂತಹ ಅದರ ವಿವಿಧ ಕಾನೂನುಗಳು ಮತ್ತು ನೀತಿಗಳು...

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: 114 ಸ್ಥಾನಗಳೊಂದಿಗೆ ಪ್ರಮುಖ ಪಕ್ಷವಾಗಿ ಹೊರಹೊಮ್ಮಿದ ಎಐಎಂಐಎಂ

ಮಹಾರಾಷ್ಟ್ರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅಖಿಲ ಭಾರತ ಮಜ್ಲಿಸ್ ಇ ಇತ್ತೆಹಾದುಲ್ ಮುಸ್ಲಿಮೀನ್ ಪಕ್ಷವು (ಎಐಎಂಐಎಂ) 114 ಸ್ಥಾನಗಳನ್ನು ಗೆದ್ದು, 2017 ರ ಸ್ಥಳೀಯ ಸಂಸ್ಥೆ ಚುನಾವಣೆಗಳಿಗಿಂತ ತನ್ನ ಸಂಖ್ಯೆಯನ್ನು ತೀವ್ರವಾಗಿ ಹೆಚ್ಚಿಸಿಕೊಂಡಿದೆ....