Homeಮುಖಪುಟಪ್ಯಾಲೆಸ್ತೀನ್ ಕುರಿತ ಭಾರತದ ದೀರ್ಘಕಾಲದ ನಿಲುವು ಬದಲಾಗಿಲ್ಲ : ವಿದೇಶಾಂಗ ಕಾರ್ಯದರ್ಶಿ

ಪ್ಯಾಲೆಸ್ತೀನ್ ಕುರಿತ ಭಾರತದ ದೀರ್ಘಕಾಲದ ನಿಲುವು ಬದಲಾಗಿಲ್ಲ : ವಿದೇಶಾಂಗ ಕಾರ್ಯದರ್ಶಿ

- Advertisement -
- Advertisement -

“ಗಾಝಾ ಪಟ್ಟಿಯನ್ನು ಅಮೆರಿಕ ವಶಕ್ಕೆ ಪಡೆದುಕೊಂಡು ಅಭಿವೃದ್ದಿಪಡಿಸಲಿದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ ಬಳಿಕವೂ “ಪ್ಯಾಲೆಸ್ತೀನ್ ಕುರಿತ ಭಾರತದ ದೀರ್ಘಕಾಲದ ನಿಲುವು ಬದಲಾಗಿಲ್ಲ” ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಶುಕ್ರವಾರ (ಫೆಬ್ರವರಿ 7) ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಿಶ್ರಿ, “ಗಾಝಾ ಪಟ್ಟಿ, ಪ್ಯಾಲೆಸ್ತೀನ್ ಬಗ್ಗೆ ಭಾರತದ ನಿಲುವು ಏನೆಂದು ನಿಮಗೆ ಗೊತ್ತಿದೆ. ಅದು ದೀರ್ಘಕಾಲದ ನಿಲುವು, ಬದಲಾಗಿಲ್ಲ” ಎಂದಿದ್ದಾರೆ.

ಗಾಝಾ ಪಟ್ಟಿಯಿಂದ ಪ್ಯಾಲೆಸ್ತೀನಿಯರನ್ನು ಹೊರದಬ್ಬಿ, ಆ ಪ್ರದೇಶವನ್ನು ಅಮೆರಿಕ ತನ್ನ ವಶಕ್ಕೆ ಪಡೆಯಲಿದೆ ಎಂಬ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ಬಗ್ಗೆ ಭಾರತದ ನಿಲುವು ಏನು ಎಂದು ಕೇಳಿದ ಪ್ರಶ್ನೆಗೆ ಮಿಶ್ರಿ ಮೇಲಿನಂತೆ ಪ್ರತಿಕ್ರಿಯಿಸಿದ್ದಾರೆ.

“ಎರಡೂ ಕಡೆಯವರು (ಇಸ್ರೇಲ್- ಪ್ಯಾಲೆಸ್ತೀನ್) ಪರಸ್ಪರ ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಸುರಕ್ಷಿತ, ಮಾನ್ಯತೆ ಪಡೆದ ಗಡಿಗಳೊಂದಿಗೆ ಇಸ್ರೇಲ್‌ನೊಂದಿಗೆ ಶಾಂತಿಯುತವಾಗಿ ಸಹಬಾಳ್ವೆ ನಡೆಸುವ ಸಾರ್ವಭೌಮ, ಸ್ವತಂತ್ರ ಮತ್ತು ಕಾರ್ಯಸಾಧ್ಯವಾದ ಪ್ಯಾಲೆಸ್ತೀನ್ ರಾಷ್ಟ್ರ ರಚನೆಯಾಗಬೇಕು. ಇದು ಪ್ಯಾಲೆಸ್ತೀನ್‌ ಕುರಿತ ಭಾರತದ ದೀರ್ಘಕಾಲದ ನಿಲುವು” ಎಂದು ಮಿಶ್ರಿ ಹೇಳಿದ್ದಾರೆ.

ಆದರೆ, ಗಾಝಾ ಜನತೆಯನ್ನು ಅವರ ಜನ್ಮ ನಾಡಿನಿಂದ ಹೊರದಬ್ಬಿ, ಆ ಪ್ರದೇಶವನ್ನು ಅಮೆರಿಕದ ತೆಕ್ಕೆಗೆ ಪಡೆಯುವ ಟ್ರಂಪ್ ಹೇಳಿಕೆ ದ್ವಿರಾಷ್ಟ್ರ ರಚನೆ ಪ್ರಸ್ತಾವದ ಅಂತ್ಯವನ್ನು ಸೂಚಿಸುತ್ತದೆ.

ದ್ವಿರಾಷ್ಟ್ರ ರಚನೆಯನ್ನು ಈ ಹಿಂದೆ ಸಾರ್ವಜನಿಕವಾಗಿ ವಿರೋಧಿಸಿದ್ದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ನಡೆಸಿದ ಪತ್ರಿಕಾಗೋಷ್ಠಿಯಲ್ಲೇ ಟ್ರಂಪ್ ಹೇಳಿಕೆ ನೀಡಿರುವುದು ಕೂಡ ಗಮನಾರ್ಹ.

“ಗಾಝಾವನ್ನು ಯುದ್ಧದ ಬಳಿಕ ಇಸ್ರೇಲ್ ನಮಗೆ ಹಸ್ತಾಂತರಿಸಲಿದೆ. ಅದನ್ನು ವಶಪಡಿಸಿಕೊಳ್ಳಲು ಅಮೆರಿಕ ಸೇನೆಯ ಅಗತ್ಯವಿಲ್ಲ” ಎಂದು ಟ್ರಂಪ್ ಮತ್ತೊಂದು ಹೇಳಿಕೆ ನೀಡಿದ್ದಾರೆ. ಈ ಎಲ್ಲಾ ಹೇಳಿಕೆಗಳಿಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸಹಮತ ಸೂಚಿಸಿರುವುದು ಆತಂಕವನ್ನು ಸೃಷ್ಟಿಸಿದೆ.

ಪಾಶ್ಚಿಮಾತ್ಯ ರಾಷ್ಟ್ರಗಳು ಟ್ರಂಪ್ ಹೇಳಿಕೆಯನ್ನು ಖಂಡಿಸಿವೆ. ಪ್ಯಾಲೆಸ್ತೀನ್ ಸ್ವತಂತ್ರ ರಾಷ್ಟ್ರ ರಚನೆಯನ್ನು ಬೆಂಬಲಿಸಿವೆ.

ಅಮೆರಿಕದ ನೆರವನ್ನು ಸ್ವೀಕರಿಸುತ್ತಿರುವ, ಅದರ ಜೊತೆ ಉತ್ತಮ ದ್ವಿಪಕ್ಷೀಯ ಸಂಬಂಧ ಹೊಂದಿರುವ ಈಜಿಫ್ಟ್‌ ಟ್ರಂಪ್ ಹೇಳಿಕೆಯನ್ನು ಖಂಡಿಸಿದೆ. ಪ್ಯಾಲೆಸ್ತೀನಿಯರು ತಮ್ಮ ನಾಡನ್ನು ತೊರೆಯುವಂತೆ ಒತ್ತಾಯಿಸುವುದನ್ನು ಒಪ್ಪುವುದಿಲ್ಲ ಎಂದು ಈಜಿಫ್ಟ್ ಹೇಳಿದೆ. ಗಾಝಾದ ಜನತೆಗೂ ನೆರವು ನೀಡುತ್ತಿರುವ ಪ್ರಮುಖ ರಾಷ್ಟ್ರಗಳಲ್ಲಿ ಈಜಿಫ್ಟ್ ಕೂಡ ಒಂದು.

ಮುಂದಿನ ವಾರ ಜೋರ್ಡಾನ್ ರಾಜ ಅಬ್ದುಲ್ಲಾ ಅವರು ಡೊನಾಲ್ಟ್ ಟ್ರಂಪ್ ಅವರನ್ನ ಭೇಟಿಯಾಗಲಿದ್ದಾರೆ. ಅದಕ್ಕೂ ಮುನ್ನ ಗಾಝಾ ವಶಪಡಿಸಿಕೊಳ್ಳುವ ಟ್ರಂಪ್ ಹೇಳಿಕೆಯನ್ನು ವಿರೋಧಿಸಿದ್ದಾರೆ. ಜೋರ್ಡಾನ್ ಕೂಡ ಅಮೆರಿಕದ ಜೊತೆ ಉತ್ತಮ ಸಂಬಂಧ ಹೊಂದಿದೆ. ಗಾಝಾ ಜನತೆಗೆ ನೆರವು ನೀಡುತ್ತಿರುವ ಮತ್ತು ಕದನ ವಿರಾಮ ಜಾರಿಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ರಾಷ್ಟ್ರವಾಗಿದೆ.

ಅಕ್ಟೋಬರ್ 7, 2023ರಿಂದ ಗಾಝಾದಲ್ಲಿ ಇಸ್ರೇಲ್ ನಡೆಸಿದ ನರಮೇಧದಲ್ಲಿ ಸುಮಾರು 60 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ. ಅಂತಾರಾಷ್ಟ್ರೀಯ ಮಾಧ್ಯಮಗಳು 45,500 ಜನರಷ್ಟೇ ಸಾವನ್ನಪ್ಪಿದ್ದಾರೆ ಎಂದು ವರದಿ ಮಾಡುತ್ತಿವೆ. ಆದರೆ, ಗಾಝಾದ ಕುರಿತು ನಿರಂತರ ಸುದ್ದಿ ಬಿತ್ತರಿಸುವ ಅಲ್‌-ಜಝೀರಾ ಸುದ್ದಿ ಸಂಸ್ಥೆ ಹಮಾಸ್ ಆರೋಗ್ಯ ಇಲಾಖೆಯನ್ನು ಉಲ್ಲೇಖಿಸಿ 60 ಸಾವಿರಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವುದಾಗಿ ಹೇಳಿದೆ.

ಕದನ ವಿರಾಮದ ಬಳಿಕ ದಕ್ಷಿಣ ಗಾಝಾದಿಂದ ಸುಮಾರು 3 ಲಕ್ಷಕ್ಕಿಂತಲೂ ಅಧಿಕ ಜನರು ಉತ್ತರ ಗಾಝಾದ ಮೂಲ ಸ್ಥಳಗಳಿಗೆ ಬಂದಿದ್ದಾರೆ. ಉತ್ತರ ಗಾಝಾವನ್ನು ಇಸ್ರೇಲ್ ಸಂಪೂರ್ಣ ನಾಶ ಮಾಡಿದೆ. ಅಲ್ಲಿ ಕಟ್ಟಡಗಳ ಅವಶೇಷಗಳಡಿ ಸಾವಿರಾರು ಮೃತದೇಹಗಳು ಸಿಗುತ್ತಿವೆ. ಇದರಿಂದ ಸಾವನ್ನಪ್ಪಿದವರ ಸಂಖ್ಯೆ ಹಠಾತ್ ಏರಿಕೆಯಾಗಿದೆ ಎಂದು ಅಲ್‌-ಜಝೀರಾ ವರದಿ ತಿಳಿಸಿದೆ.

ರಾಷ್ಟ್ರ ವಿರೋಧಿ ಹೇಳಿಕೆ ಆರೋಪ | ರಾಹುಲ್ ಗಾಂಧಿ ವಿರುದ್ಧ ಒಡಿಶಾದಲ್ಲಿ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...