Homeಮುಖಪುಟಪ್ಯಾಲೆಸ್ತೀನ್ ಕುರಿತ ಭಾರತದ ದೀರ್ಘಕಾಲದ ನಿಲುವು ಬದಲಾಗಿಲ್ಲ : ವಿದೇಶಾಂಗ ಕಾರ್ಯದರ್ಶಿ

ಪ್ಯಾಲೆಸ್ತೀನ್ ಕುರಿತ ಭಾರತದ ದೀರ್ಘಕಾಲದ ನಿಲುವು ಬದಲಾಗಿಲ್ಲ : ವಿದೇಶಾಂಗ ಕಾರ್ಯದರ್ಶಿ

- Advertisement -
- Advertisement -

“ಗಾಝಾ ಪಟ್ಟಿಯನ್ನು ಅಮೆರಿಕ ವಶಕ್ಕೆ ಪಡೆದುಕೊಂಡು ಅಭಿವೃದ್ದಿಪಡಿಸಲಿದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ ಬಳಿಕವೂ “ಪ್ಯಾಲೆಸ್ತೀನ್ ಕುರಿತ ಭಾರತದ ದೀರ್ಘಕಾಲದ ನಿಲುವು ಬದಲಾಗಿಲ್ಲ” ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಶುಕ್ರವಾರ (ಫೆಬ್ರವರಿ 7) ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಿಶ್ರಿ, “ಗಾಝಾ ಪಟ್ಟಿ, ಪ್ಯಾಲೆಸ್ತೀನ್ ಬಗ್ಗೆ ಭಾರತದ ನಿಲುವು ಏನೆಂದು ನಿಮಗೆ ಗೊತ್ತಿದೆ. ಅದು ದೀರ್ಘಕಾಲದ ನಿಲುವು, ಬದಲಾಗಿಲ್ಲ” ಎಂದಿದ್ದಾರೆ.

ಗಾಝಾ ಪಟ್ಟಿಯಿಂದ ಪ್ಯಾಲೆಸ್ತೀನಿಯರನ್ನು ಹೊರದಬ್ಬಿ, ಆ ಪ್ರದೇಶವನ್ನು ಅಮೆರಿಕ ತನ್ನ ವಶಕ್ಕೆ ಪಡೆಯಲಿದೆ ಎಂಬ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ಬಗ್ಗೆ ಭಾರತದ ನಿಲುವು ಏನು ಎಂದು ಕೇಳಿದ ಪ್ರಶ್ನೆಗೆ ಮಿಶ್ರಿ ಮೇಲಿನಂತೆ ಪ್ರತಿಕ್ರಿಯಿಸಿದ್ದಾರೆ.

“ಎರಡೂ ಕಡೆಯವರು (ಇಸ್ರೇಲ್- ಪ್ಯಾಲೆಸ್ತೀನ್) ಪರಸ್ಪರ ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಸುರಕ್ಷಿತ, ಮಾನ್ಯತೆ ಪಡೆದ ಗಡಿಗಳೊಂದಿಗೆ ಇಸ್ರೇಲ್‌ನೊಂದಿಗೆ ಶಾಂತಿಯುತವಾಗಿ ಸಹಬಾಳ್ವೆ ನಡೆಸುವ ಸಾರ್ವಭೌಮ, ಸ್ವತಂತ್ರ ಮತ್ತು ಕಾರ್ಯಸಾಧ್ಯವಾದ ಪ್ಯಾಲೆಸ್ತೀನ್ ರಾಷ್ಟ್ರ ರಚನೆಯಾಗಬೇಕು. ಇದು ಪ್ಯಾಲೆಸ್ತೀನ್‌ ಕುರಿತ ಭಾರತದ ದೀರ್ಘಕಾಲದ ನಿಲುವು” ಎಂದು ಮಿಶ್ರಿ ಹೇಳಿದ್ದಾರೆ.

ಆದರೆ, ಗಾಝಾ ಜನತೆಯನ್ನು ಅವರ ಜನ್ಮ ನಾಡಿನಿಂದ ಹೊರದಬ್ಬಿ, ಆ ಪ್ರದೇಶವನ್ನು ಅಮೆರಿಕದ ತೆಕ್ಕೆಗೆ ಪಡೆಯುವ ಟ್ರಂಪ್ ಹೇಳಿಕೆ ದ್ವಿರಾಷ್ಟ್ರ ರಚನೆ ಪ್ರಸ್ತಾವದ ಅಂತ್ಯವನ್ನು ಸೂಚಿಸುತ್ತದೆ.

ದ್ವಿರಾಷ್ಟ್ರ ರಚನೆಯನ್ನು ಈ ಹಿಂದೆ ಸಾರ್ವಜನಿಕವಾಗಿ ವಿರೋಧಿಸಿದ್ದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ನಡೆಸಿದ ಪತ್ರಿಕಾಗೋಷ್ಠಿಯಲ್ಲೇ ಟ್ರಂಪ್ ಹೇಳಿಕೆ ನೀಡಿರುವುದು ಕೂಡ ಗಮನಾರ್ಹ.

“ಗಾಝಾವನ್ನು ಯುದ್ಧದ ಬಳಿಕ ಇಸ್ರೇಲ್ ನಮಗೆ ಹಸ್ತಾಂತರಿಸಲಿದೆ. ಅದನ್ನು ವಶಪಡಿಸಿಕೊಳ್ಳಲು ಅಮೆರಿಕ ಸೇನೆಯ ಅಗತ್ಯವಿಲ್ಲ” ಎಂದು ಟ್ರಂಪ್ ಮತ್ತೊಂದು ಹೇಳಿಕೆ ನೀಡಿದ್ದಾರೆ. ಈ ಎಲ್ಲಾ ಹೇಳಿಕೆಗಳಿಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸಹಮತ ಸೂಚಿಸಿರುವುದು ಆತಂಕವನ್ನು ಸೃಷ್ಟಿಸಿದೆ.

ಪಾಶ್ಚಿಮಾತ್ಯ ರಾಷ್ಟ್ರಗಳು ಟ್ರಂಪ್ ಹೇಳಿಕೆಯನ್ನು ಖಂಡಿಸಿವೆ. ಪ್ಯಾಲೆಸ್ತೀನ್ ಸ್ವತಂತ್ರ ರಾಷ್ಟ್ರ ರಚನೆಯನ್ನು ಬೆಂಬಲಿಸಿವೆ.

ಅಮೆರಿಕದ ನೆರವನ್ನು ಸ್ವೀಕರಿಸುತ್ತಿರುವ, ಅದರ ಜೊತೆ ಉತ್ತಮ ದ್ವಿಪಕ್ಷೀಯ ಸಂಬಂಧ ಹೊಂದಿರುವ ಈಜಿಫ್ಟ್‌ ಟ್ರಂಪ್ ಹೇಳಿಕೆಯನ್ನು ಖಂಡಿಸಿದೆ. ಪ್ಯಾಲೆಸ್ತೀನಿಯರು ತಮ್ಮ ನಾಡನ್ನು ತೊರೆಯುವಂತೆ ಒತ್ತಾಯಿಸುವುದನ್ನು ಒಪ್ಪುವುದಿಲ್ಲ ಎಂದು ಈಜಿಫ್ಟ್ ಹೇಳಿದೆ. ಗಾಝಾದ ಜನತೆಗೂ ನೆರವು ನೀಡುತ್ತಿರುವ ಪ್ರಮುಖ ರಾಷ್ಟ್ರಗಳಲ್ಲಿ ಈಜಿಫ್ಟ್ ಕೂಡ ಒಂದು.

ಮುಂದಿನ ವಾರ ಜೋರ್ಡಾನ್ ರಾಜ ಅಬ್ದುಲ್ಲಾ ಅವರು ಡೊನಾಲ್ಟ್ ಟ್ರಂಪ್ ಅವರನ್ನ ಭೇಟಿಯಾಗಲಿದ್ದಾರೆ. ಅದಕ್ಕೂ ಮುನ್ನ ಗಾಝಾ ವಶಪಡಿಸಿಕೊಳ್ಳುವ ಟ್ರಂಪ್ ಹೇಳಿಕೆಯನ್ನು ವಿರೋಧಿಸಿದ್ದಾರೆ. ಜೋರ್ಡಾನ್ ಕೂಡ ಅಮೆರಿಕದ ಜೊತೆ ಉತ್ತಮ ಸಂಬಂಧ ಹೊಂದಿದೆ. ಗಾಝಾ ಜನತೆಗೆ ನೆರವು ನೀಡುತ್ತಿರುವ ಮತ್ತು ಕದನ ವಿರಾಮ ಜಾರಿಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ರಾಷ್ಟ್ರವಾಗಿದೆ.

ಅಕ್ಟೋಬರ್ 7, 2023ರಿಂದ ಗಾಝಾದಲ್ಲಿ ಇಸ್ರೇಲ್ ನಡೆಸಿದ ನರಮೇಧದಲ್ಲಿ ಸುಮಾರು 60 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ. ಅಂತಾರಾಷ್ಟ್ರೀಯ ಮಾಧ್ಯಮಗಳು 45,500 ಜನರಷ್ಟೇ ಸಾವನ್ನಪ್ಪಿದ್ದಾರೆ ಎಂದು ವರದಿ ಮಾಡುತ್ತಿವೆ. ಆದರೆ, ಗಾಝಾದ ಕುರಿತು ನಿರಂತರ ಸುದ್ದಿ ಬಿತ್ತರಿಸುವ ಅಲ್‌-ಜಝೀರಾ ಸುದ್ದಿ ಸಂಸ್ಥೆ ಹಮಾಸ್ ಆರೋಗ್ಯ ಇಲಾಖೆಯನ್ನು ಉಲ್ಲೇಖಿಸಿ 60 ಸಾವಿರಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವುದಾಗಿ ಹೇಳಿದೆ.

ಕದನ ವಿರಾಮದ ಬಳಿಕ ದಕ್ಷಿಣ ಗಾಝಾದಿಂದ ಸುಮಾರು 3 ಲಕ್ಷಕ್ಕಿಂತಲೂ ಅಧಿಕ ಜನರು ಉತ್ತರ ಗಾಝಾದ ಮೂಲ ಸ್ಥಳಗಳಿಗೆ ಬಂದಿದ್ದಾರೆ. ಉತ್ತರ ಗಾಝಾವನ್ನು ಇಸ್ರೇಲ್ ಸಂಪೂರ್ಣ ನಾಶ ಮಾಡಿದೆ. ಅಲ್ಲಿ ಕಟ್ಟಡಗಳ ಅವಶೇಷಗಳಡಿ ಸಾವಿರಾರು ಮೃತದೇಹಗಳು ಸಿಗುತ್ತಿವೆ. ಇದರಿಂದ ಸಾವನ್ನಪ್ಪಿದವರ ಸಂಖ್ಯೆ ಹಠಾತ್ ಏರಿಕೆಯಾಗಿದೆ ಎಂದು ಅಲ್‌-ಜಝೀರಾ ವರದಿ ತಿಳಿಸಿದೆ.

ರಾಷ್ಟ್ರ ವಿರೋಧಿ ಹೇಳಿಕೆ ಆರೋಪ | ರಾಹುಲ್ ಗಾಂಧಿ ವಿರುದ್ಧ ಒಡಿಶಾದಲ್ಲಿ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...