Homeಮುಖಪುಟಭಾರತದ 'ಮೆಟ್ರೋ ಮ್ಯಾನ್' ಈಗ ಕೇರಳ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ

ಭಾರತದ ‘ಮೆಟ್ರೋ ಮ್ಯಾನ್’ ಈಗ ಕೇರಳ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ

- Advertisement -
- Advertisement -

“ಭಾರತದ ‘ಮೆಟ್ರೋ ಮ್ಯಾನ್’ ಎಂದೇ ಜನಪ್ರಿಯವಾಗಿರುವ ಇ.ಶ್ರೀಧರನ್ ಅವರು ಮುಂಬರುವ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ” ಎಂದು ಬಿಜೆಪಿ ಗುರುವಾರ ಪ್ರಕಟಿಸಿದೆ. 88 ವರ್ಷದ ಶ್ರೀಧರನ್ ಕಳೆದ ವಾರವಷ್ಟೆ ಬಿಜೆಪಿಗೆ ಸೇರಿದ್ದರು.

ರಾಜ್ಯ ಬಿಜೆಪಿಯ ಅಧ್ಯಕ್ಷ ಕೆ.ಸುರೇಂದ್ರನ್, ಪ್ರಸ್ತುತ ರಾಜ್ಯವ್ಯಾಪಿ ನಡೆಯುತ್ತಿರುವ ರಾಜಕೀಯ ಪ್ರವಾಸ ‘ವಿಜಯ್ ಯಾತ್ರಾ’ದಲ್ಲಿ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ. “ಪಕ್ಷವು ಶೀಘ್ರದಲ್ಲೇ ಇತರ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತದೆ” ಎಂದು ಅವರು ಹೇಳಿದರು.

ದೆಹಲಿ ಮೆಟ್ರೋ ಸೇರಿದಂತೆ ದೇಶಾದ್ಯಂತ ಇದೇ ರೀತಿಯ ಅನೇಕ ಯೋಜನೆಗಳ ಹಿಂದಿನ ಎಂಜಿನಿಯರ್‌‌ ಇ.ಶ್ರೀಧರನ್‌‌ ಕೇರಳದಲ್ಲಿ ಚುನಾವಣೆಗೆ ಮುಂಚೆಯೇ ಬಿಜೆಪಿ ಸೇರಿದ್ದಾರೆ.

ಇದನ್ನೂ ಓದಿ: ಉದ್ಯೋಗ ಕೊಡದಿದ್ದರೆ ಮೋದಿಜಿಯನ್ನು ಮನೆಗೆ ಕಳಿಸುತ್ತೇವೆ: ನೋ ಜಾಬ್, ನೋ ವೋಟ್ ಟ್ವಿಟರ್ ಟ್ರೆಂಡಿಂಗ್

“ನಾನು ಬಿಜೆಪಿಗೆ ಸೇರಲು ನಿರ್ಧರಿಸಿದ್ದೇನೆ, ಕೇವಲ ಅಧಿಕೃತ ಔಪಚಾರಿಕತೆ ಕಾರ್ಯಗಳಷ್ಷೇ ಉಳಿದಿವೆ. ಪಕ್ಷದ ಸಿದ್ದಾಂತಗಳನ್ನು ನಾನು ನಂಬಿದ್ದು, ರಾಷ್ಟ್ರೀಯವಾಗಿ ರಾಜಕೀಯ ಪಕ್ಷಗಳ ಕುರುಡು ವಿರೋಧಕ್ಕೆ ನಾನು ವಿರೋಧಿಯಾಗಿದ್ದೇನೆ. ಪಕ್ಷವು ಬಯಸಿದರೆ ನಾನು ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ಹೊಂದಿದ್ದೇನೆ” ಎಂದು ಶ್ರೀಧರನ್ ತಮ್ಮ ಊರಾದ ಮಲಪುರಂನಲ್ಲಿ ತಿಳಿಸಿದ್ದರು.

ದೇಶದ ಅತಿದೊಡ್ಡ ಮೆಟ್ರೋ ಮತ್ತು ರೈಲ್ವೆ ಯೋಜನೆಗಳಿಗೆ ಗಣನೀಯ ಸೇವೆ ಸಲ್ಲಿಸಿರುವ ಅವರು ಭಾರತದ “ಮೆಟ್ರೋ ಮ್ಯಾನ್” ಎಂದೇ ಜನಪ್ರಿಯರಾಗಿದ್ದಾರೆ. ಅವರು 2011 ರಲ್ಲಿ ದೆಹಲಿ ಮೆಟ್ರೊ ಮುಖ್ಯಸ್ಥರಾಗಿ ನಿವೃತ್ತರಾದರು. ಜೈಪುರ, ಲಕ್ನೋ ಮತ್ತು ಕೊಚ್ಚಿಯಂತಹ ದೇಶದ ಇತರ ಮೆಟ್ರೋ ಯೋಜನೆಗಳಲ್ಲಿ ಇವರು ಎಂಜಿನಿಯರ್ ಆಗಿ ತೊಡಗಿಸಿಕೊಂಡಿದ್ದರು. ಅವರಿಗೆ 2001 ರಲ್ಲಿ ಪದ್ಮಶ್ರೀ ಮತ್ತು 2008 ರಲ್ಲಿ ಪದ್ಮವಿಭೂಷಣ ನೀಡಲಾಗಿತ್ತು.


ಇದನ್ನೂ ಓದಿ: ದೆಹಲಿ ಗಲಭೆಯ ಅಸಲಿ ಪಿತೂರಿ ಭಾಗ-2: ‘ಅಂತಿಮ ಯುದ್ಧಕ್ಕೆ ಕರೆ ನೀಡಿದ್ದ ಮುಸ್ಲಿಂ-ವಿರೋಧಿ ‘ದೇವಮಾನವ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...