Homeಮುಖಪುಟಭಾರತದ ’ಮೆಟ್ರೋಮ್ಯಾನ್’ ಬಿಜೆಪಿಗೆ: ಕೇರಳದಲ್ಲಿ ಚುನಾವಣೆ ಎದುರಿಸುವ ಸಾಧ್ಯತೆ

ಭಾರತದ ’ಮೆಟ್ರೋಮ್ಯಾನ್’ ಬಿಜೆಪಿಗೆ: ಕೇರಳದಲ್ಲಿ ಚುನಾವಣೆ ಎದುರಿಸುವ ಸಾಧ್ಯತೆ

- Advertisement -
- Advertisement -

ದೆಹಲಿ ಮೆಟ್ರೋ ಸೇರಿದಂತೆ ದೇಶಾದ್ಯಂತ ಇದೇ ರೀತಿಯ ಅನೇಕ ಯೋಜನೆಗಳ ಹಿಂದಿನ ಎಂಜಿನಿಯರ್‌‌ ಇ.ಶ್ರೀಧರನ್‌‌ ಕೇರಳದಲ್ಲಿ ಚುನಾವಣೆಗೆ ಮುಂಚೆಯೇ ಬಿಜೆಪಿ ಸೇರಲು ಸಜ್ಜಾಗಿದ್ದಾರೆ. ಭಾನುವಾರದಿಂದ ಕೇರಳದಲ್ಲಿ ನಡೆಯಲಿರುವ ವಿಜಯ ಯಾತ್ರೆಯಲ್ಲಿ ಅವರು ಔಪಚಾರಿಕವಾಗಿ ಪಕ್ಷಕ್ಕೆ ಸೇರಲಿದ್ದಾರೆ. 88 ರ ಹರೆಯದ ಶ್ರೀಧರನ್ ಮೇ ವೇಳೆಗೆ ನಡೆಯುವ ಕೇರಳ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ.

“ನಾನು ಬಿಜೆಪಿಗೆ ಸೇರಲು ನಿರ್ಧರಿಸಿದ್ದೇನೆ, ಕೇವಲ ಅಧಿಕೃತ ಔಪಚಾರಿಕತೆ ಕಾರ್ಯಗಳಷ್ಷೇ ಉಳಿದಿವೆ. ಪಕ್ಷದ ಸಿದ್ದಾಂತಗಳನ್ನು ನಾನು ನಂಬಿದ್ದು, ರಾಷ್ಟ್ರೀಯವಾಗಿ ರಾಜಕೀಯ ಪಕ್ಷಗಳ ಕುರುಡು ವಿರೋಧಕ್ಕೆ ನಾನು ವಿರೋಧಿಯಾಗಿದ್ದೇನೆ. ಪಕ್ಷವು ಬಯಸಿದರೆ ನಾನು ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ಹೊಂದಿದ್ದೇನೆ” ಎಂದು ಶ್ರೀಧರನ್ ತಮ್ಮ ಊರಾದ ಮಲಪುರಂನಲ್ಲಿ ತಿಳಿಸಿದ್ದರಾರೆಂದು ಎನ್ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಕೇರಳ ಬಿಜೆಪಿಯಲ್ಲಿ ಭಿನ್ನಮತ: ರಾಜ್ಯಾಧ್ಯಕ್ಷರ ವಿರುದ್ಧ ಹೈಕಮಾಂಡ್‌ಗೆ ಪತ್ರ ಬರೆದ ನಾಯಕರು!

ದೇಶದ ಅತಿದೊಡ್ಡ ಮೆಟ್ರೋ ಮತ್ತು ರೈಲ್ವೆ ಯೋಜನೆಗಳಿಗೆ ಗಣನೀಯ ಸೇವೆ ಸಲ್ಲಿಸಿರುವ ಅವರು ಭಾರತದ “ಮೆಟ್ರೋ ಮ್ಯಾನ್” ಎಂದೇ ಜನಪ್ರಿಯರಾಗಿದ್ದಾರೆ. ಅವರು 2011 ರಲ್ಲಿ ದೆಹಲಿ ಮೆಟ್ರೊ ಮುಖ್ಯಸ್ಥರಾಗಿ ನಿವೃತ್ತರಾದರು. ಜೈಪುರ, ಲಕ್ನೋ ಮತ್ತು ಕೊಚ್ಚಿಯಂತಹ ದೇಶದ ಇತರ ಮೆಟ್ರೋ ಯೋಜನೆಗಳಲ್ಲಿ ಇವರು ಎಂಜಿನಿಯರ್ ಆಗಿ ತೊಡಗಿಸಿಕೊಂಡಿದ್ದರು. ಅವರಿಗೆ 2001 ರಲ್ಲಿ ಪದ್ಮಶ್ರೀ ಮತ್ತು 2008 ರಲ್ಲಿ ಪದ್ಮವಿಭೂಷಣ ನೀಡಲಾಗಿತ್ತು.

2019 ರ ಜೂನ್ 1 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಡೆಲ್ಲಿ ಟ್ರಾನ್ಸ್‍ಪೋರ್ಟ್ ಕಾರ್ಪೋರೇಷನ್ ಬಸ್‍ಗಳಲ್ಲಿ ಮತ್ತು ಡೆಲ್ಲಿ ಮೆಟ್ರೊದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇವೆ ಎಂದು ಘೋಷಿಸಿದ್ದರು. ಆ ಸಮಯದಲ್ಲಿ ವಿ. ಶ್ರೀಧರನ್ ಅದನ್ನು ವಿರೋಧಿಸಿ ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದು ಸುದ್ದಿಯಾಗಿದ್ದರು. ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ನೀಡಿದರೆ, ದೆಹಲಿ ಮೆಟ್ರೊ ಆರ್ಥಿಕ ದಿವಾಳಿತನ ಎದುರಿಸಬೇಕಾಗುತ್ತದೆ, ಅಷ್ಟೇ ಅಲ್ಲದೇ ದೇಶದ ಇತರ ಮೆಟ್ರೊಗಳ ಮೇಲೂ ಇದು ಪರಿಣಾಮ ಬೀರುತ್ತದೆ ಎಂಬ ಕಾರಣವನ್ನು ಪತ್ರದಲ್ಲಿ ಅವರು ಉಲ್ಲೇಖಿಸಿದ್ದರು.

ಆದರೆ ಇದಕ್ಕೆ ತಕ್ಷಣವೇ ಪ್ರತಿಕ್ರಿಯಿಸಿದ್ದ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, “ನೀವು ಪ್ರಧಾನ ಮಂತ್ರಿಗಳಿಗೆ ಬರೆದ ಪತ್ರ ಓದಿ ಆಶ್ಚರ್ಯ ಮತ್ತು ನೋವುಂಟಾಯಿತು. ನೀವು ಪ್ರಸ್ತುತ ಯೋಜನೆಯ ಬಗ್ಗೆ ತಪ್ಪು ಮಾಹಿತಿ ಪಡೆದಿರುವ ಕಾರಣಕ್ಕೆ ಹೀಗಾಗಿದೆ. ದೆಹಲಿ ಮೆಟ್ರೊದ ಮೂರನೇ ಹಂತ ಪೂರ್ಣಗೊಂಡ ನಂತರ ನೀವು ಖಂಡಿತ ಶ್ಲಾಘಿಸುತ್ತೀರೆಂಬ ವಿಶ್ವಾಸವಿದೆ. ಮಹಿಳೆಯರಿಗೆ ಭದ್ರತೆ ಮತ್ತು ಸಾರ್ವಜನಿಕ ವಾಹನಗಳನ್ನು ಬಳಸುವಂತೆ ಪ್ರೇರೆಪಿಸಲು ನಾವು ಈ ಯೋಜನೆ ಘೋಷಿಸಿದ್ದೇವೆ. ಇದರಿಂದ ಖಾಸಗಿ ವಾಹನಗಳ ಬಳಕೆ ತಪ್ಪಿ ವಾಯುಮಾಲಿನ್ಯವನ್ನು ಕಡಿಮೆ ಮಾಡಬಹುದು. ಮಹಿಳೆಯರ ಸಬಲೀಕರಣಕ್ಕಾಗಿ ಇದೊಂದು ಕ್ರಾಂತಿಕಾರಕ ನಡೆಯಾಗಿದೆ” ಎಂದು ವಿ. ಶ್ರೀಧರನ್‌ಗೆ ಉತ್ತರಿಸಿದ್ದರು.

ಇದನ್ನೂ ಓದಿ: ದೇವಾಲಯ ತೆರೆಯುತ್ತಿದ್ದಂತೆ ರಾಜಕೀಯ ಲಾಭಕ್ಕೆ ಮುಂದಾದ ಕೇರಳ ಬಿಜೆಪಿಯ ದ್ವಂದ್ವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...