Homeಮುಖಪುಟಭಾರತದ ’ಮೆಟ್ರೋಮ್ಯಾನ್’ ಬಿಜೆಪಿಗೆ: ಕೇರಳದಲ್ಲಿ ಚುನಾವಣೆ ಎದುರಿಸುವ ಸಾಧ್ಯತೆ

ಭಾರತದ ’ಮೆಟ್ರೋಮ್ಯಾನ್’ ಬಿಜೆಪಿಗೆ: ಕೇರಳದಲ್ಲಿ ಚುನಾವಣೆ ಎದುರಿಸುವ ಸಾಧ್ಯತೆ

- Advertisement -
- Advertisement -

ದೆಹಲಿ ಮೆಟ್ರೋ ಸೇರಿದಂತೆ ದೇಶಾದ್ಯಂತ ಇದೇ ರೀತಿಯ ಅನೇಕ ಯೋಜನೆಗಳ ಹಿಂದಿನ ಎಂಜಿನಿಯರ್‌‌ ಇ.ಶ್ರೀಧರನ್‌‌ ಕೇರಳದಲ್ಲಿ ಚುನಾವಣೆಗೆ ಮುಂಚೆಯೇ ಬಿಜೆಪಿ ಸೇರಲು ಸಜ್ಜಾಗಿದ್ದಾರೆ. ಭಾನುವಾರದಿಂದ ಕೇರಳದಲ್ಲಿ ನಡೆಯಲಿರುವ ವಿಜಯ ಯಾತ್ರೆಯಲ್ಲಿ ಅವರು ಔಪಚಾರಿಕವಾಗಿ ಪಕ್ಷಕ್ಕೆ ಸೇರಲಿದ್ದಾರೆ. 88 ರ ಹರೆಯದ ಶ್ರೀಧರನ್ ಮೇ ವೇಳೆಗೆ ನಡೆಯುವ ಕೇರಳ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ.

“ನಾನು ಬಿಜೆಪಿಗೆ ಸೇರಲು ನಿರ್ಧರಿಸಿದ್ದೇನೆ, ಕೇವಲ ಅಧಿಕೃತ ಔಪಚಾರಿಕತೆ ಕಾರ್ಯಗಳಷ್ಷೇ ಉಳಿದಿವೆ. ಪಕ್ಷದ ಸಿದ್ದಾಂತಗಳನ್ನು ನಾನು ನಂಬಿದ್ದು, ರಾಷ್ಟ್ರೀಯವಾಗಿ ರಾಜಕೀಯ ಪಕ್ಷಗಳ ಕುರುಡು ವಿರೋಧಕ್ಕೆ ನಾನು ವಿರೋಧಿಯಾಗಿದ್ದೇನೆ. ಪಕ್ಷವು ಬಯಸಿದರೆ ನಾನು ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ಹೊಂದಿದ್ದೇನೆ” ಎಂದು ಶ್ರೀಧರನ್ ತಮ್ಮ ಊರಾದ ಮಲಪುರಂನಲ್ಲಿ ತಿಳಿಸಿದ್ದರಾರೆಂದು ಎನ್ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಕೇರಳ ಬಿಜೆಪಿಯಲ್ಲಿ ಭಿನ್ನಮತ: ರಾಜ್ಯಾಧ್ಯಕ್ಷರ ವಿರುದ್ಧ ಹೈಕಮಾಂಡ್‌ಗೆ ಪತ್ರ ಬರೆದ ನಾಯಕರು!

ದೇಶದ ಅತಿದೊಡ್ಡ ಮೆಟ್ರೋ ಮತ್ತು ರೈಲ್ವೆ ಯೋಜನೆಗಳಿಗೆ ಗಣನೀಯ ಸೇವೆ ಸಲ್ಲಿಸಿರುವ ಅವರು ಭಾರತದ “ಮೆಟ್ರೋ ಮ್ಯಾನ್” ಎಂದೇ ಜನಪ್ರಿಯರಾಗಿದ್ದಾರೆ. ಅವರು 2011 ರಲ್ಲಿ ದೆಹಲಿ ಮೆಟ್ರೊ ಮುಖ್ಯಸ್ಥರಾಗಿ ನಿವೃತ್ತರಾದರು. ಜೈಪುರ, ಲಕ್ನೋ ಮತ್ತು ಕೊಚ್ಚಿಯಂತಹ ದೇಶದ ಇತರ ಮೆಟ್ರೋ ಯೋಜನೆಗಳಲ್ಲಿ ಇವರು ಎಂಜಿನಿಯರ್ ಆಗಿ ತೊಡಗಿಸಿಕೊಂಡಿದ್ದರು. ಅವರಿಗೆ 2001 ರಲ್ಲಿ ಪದ್ಮಶ್ರೀ ಮತ್ತು 2008 ರಲ್ಲಿ ಪದ್ಮವಿಭೂಷಣ ನೀಡಲಾಗಿತ್ತು.

2019 ರ ಜೂನ್ 1 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಡೆಲ್ಲಿ ಟ್ರಾನ್ಸ್‍ಪೋರ್ಟ್ ಕಾರ್ಪೋರೇಷನ್ ಬಸ್‍ಗಳಲ್ಲಿ ಮತ್ತು ಡೆಲ್ಲಿ ಮೆಟ್ರೊದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇವೆ ಎಂದು ಘೋಷಿಸಿದ್ದರು. ಆ ಸಮಯದಲ್ಲಿ ವಿ. ಶ್ರೀಧರನ್ ಅದನ್ನು ವಿರೋಧಿಸಿ ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದು ಸುದ್ದಿಯಾಗಿದ್ದರು. ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ನೀಡಿದರೆ, ದೆಹಲಿ ಮೆಟ್ರೊ ಆರ್ಥಿಕ ದಿವಾಳಿತನ ಎದುರಿಸಬೇಕಾಗುತ್ತದೆ, ಅಷ್ಟೇ ಅಲ್ಲದೇ ದೇಶದ ಇತರ ಮೆಟ್ರೊಗಳ ಮೇಲೂ ಇದು ಪರಿಣಾಮ ಬೀರುತ್ತದೆ ಎಂಬ ಕಾರಣವನ್ನು ಪತ್ರದಲ್ಲಿ ಅವರು ಉಲ್ಲೇಖಿಸಿದ್ದರು.

ಆದರೆ ಇದಕ್ಕೆ ತಕ್ಷಣವೇ ಪ್ರತಿಕ್ರಿಯಿಸಿದ್ದ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, “ನೀವು ಪ್ರಧಾನ ಮಂತ್ರಿಗಳಿಗೆ ಬರೆದ ಪತ್ರ ಓದಿ ಆಶ್ಚರ್ಯ ಮತ್ತು ನೋವುಂಟಾಯಿತು. ನೀವು ಪ್ರಸ್ತುತ ಯೋಜನೆಯ ಬಗ್ಗೆ ತಪ್ಪು ಮಾಹಿತಿ ಪಡೆದಿರುವ ಕಾರಣಕ್ಕೆ ಹೀಗಾಗಿದೆ. ದೆಹಲಿ ಮೆಟ್ರೊದ ಮೂರನೇ ಹಂತ ಪೂರ್ಣಗೊಂಡ ನಂತರ ನೀವು ಖಂಡಿತ ಶ್ಲಾಘಿಸುತ್ತೀರೆಂಬ ವಿಶ್ವಾಸವಿದೆ. ಮಹಿಳೆಯರಿಗೆ ಭದ್ರತೆ ಮತ್ತು ಸಾರ್ವಜನಿಕ ವಾಹನಗಳನ್ನು ಬಳಸುವಂತೆ ಪ್ರೇರೆಪಿಸಲು ನಾವು ಈ ಯೋಜನೆ ಘೋಷಿಸಿದ್ದೇವೆ. ಇದರಿಂದ ಖಾಸಗಿ ವಾಹನಗಳ ಬಳಕೆ ತಪ್ಪಿ ವಾಯುಮಾಲಿನ್ಯವನ್ನು ಕಡಿಮೆ ಮಾಡಬಹುದು. ಮಹಿಳೆಯರ ಸಬಲೀಕರಣಕ್ಕಾಗಿ ಇದೊಂದು ಕ್ರಾಂತಿಕಾರಕ ನಡೆಯಾಗಿದೆ” ಎಂದು ವಿ. ಶ್ರೀಧರನ್‌ಗೆ ಉತ್ತರಿಸಿದ್ದರು.

ಇದನ್ನೂ ಓದಿ: ದೇವಾಲಯ ತೆರೆಯುತ್ತಿದ್ದಂತೆ ರಾಜಕೀಯ ಲಾಭಕ್ಕೆ ಮುಂದಾದ ಕೇರಳ ಬಿಜೆಪಿಯ ದ್ವಂದ್ವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...