Homeಮುಖಪುಟಭಾರತದ ’ಮೆಟ್ರೋಮ್ಯಾನ್’ ಬಿಜೆಪಿಗೆ: ಕೇರಳದಲ್ಲಿ ಚುನಾವಣೆ ಎದುರಿಸುವ ಸಾಧ್ಯತೆ

ಭಾರತದ ’ಮೆಟ್ರೋಮ್ಯಾನ್’ ಬಿಜೆಪಿಗೆ: ಕೇರಳದಲ್ಲಿ ಚುನಾವಣೆ ಎದುರಿಸುವ ಸಾಧ್ಯತೆ

- Advertisement -
- Advertisement -

ದೆಹಲಿ ಮೆಟ್ರೋ ಸೇರಿದಂತೆ ದೇಶಾದ್ಯಂತ ಇದೇ ರೀತಿಯ ಅನೇಕ ಯೋಜನೆಗಳ ಹಿಂದಿನ ಎಂಜಿನಿಯರ್‌‌ ಇ.ಶ್ರೀಧರನ್‌‌ ಕೇರಳದಲ್ಲಿ ಚುನಾವಣೆಗೆ ಮುಂಚೆಯೇ ಬಿಜೆಪಿ ಸೇರಲು ಸಜ್ಜಾಗಿದ್ದಾರೆ. ಭಾನುವಾರದಿಂದ ಕೇರಳದಲ್ಲಿ ನಡೆಯಲಿರುವ ವಿಜಯ ಯಾತ್ರೆಯಲ್ಲಿ ಅವರು ಔಪಚಾರಿಕವಾಗಿ ಪಕ್ಷಕ್ಕೆ ಸೇರಲಿದ್ದಾರೆ. 88 ರ ಹರೆಯದ ಶ್ರೀಧರನ್ ಮೇ ವೇಳೆಗೆ ನಡೆಯುವ ಕೇರಳ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ.

“ನಾನು ಬಿಜೆಪಿಗೆ ಸೇರಲು ನಿರ್ಧರಿಸಿದ್ದೇನೆ, ಕೇವಲ ಅಧಿಕೃತ ಔಪಚಾರಿಕತೆ ಕಾರ್ಯಗಳಷ್ಷೇ ಉಳಿದಿವೆ. ಪಕ್ಷದ ಸಿದ್ದಾಂತಗಳನ್ನು ನಾನು ನಂಬಿದ್ದು, ರಾಷ್ಟ್ರೀಯವಾಗಿ ರಾಜಕೀಯ ಪಕ್ಷಗಳ ಕುರುಡು ವಿರೋಧಕ್ಕೆ ನಾನು ವಿರೋಧಿಯಾಗಿದ್ದೇನೆ. ಪಕ್ಷವು ಬಯಸಿದರೆ ನಾನು ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ಹೊಂದಿದ್ದೇನೆ” ಎಂದು ಶ್ರೀಧರನ್ ತಮ್ಮ ಊರಾದ ಮಲಪುರಂನಲ್ಲಿ ತಿಳಿಸಿದ್ದರಾರೆಂದು ಎನ್ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಕೇರಳ ಬಿಜೆಪಿಯಲ್ಲಿ ಭಿನ್ನಮತ: ರಾಜ್ಯಾಧ್ಯಕ್ಷರ ವಿರುದ್ಧ ಹೈಕಮಾಂಡ್‌ಗೆ ಪತ್ರ ಬರೆದ ನಾಯಕರು!

ದೇಶದ ಅತಿದೊಡ್ಡ ಮೆಟ್ರೋ ಮತ್ತು ರೈಲ್ವೆ ಯೋಜನೆಗಳಿಗೆ ಗಣನೀಯ ಸೇವೆ ಸಲ್ಲಿಸಿರುವ ಅವರು ಭಾರತದ “ಮೆಟ್ರೋ ಮ್ಯಾನ್” ಎಂದೇ ಜನಪ್ರಿಯರಾಗಿದ್ದಾರೆ. ಅವರು 2011 ರಲ್ಲಿ ದೆಹಲಿ ಮೆಟ್ರೊ ಮುಖ್ಯಸ್ಥರಾಗಿ ನಿವೃತ್ತರಾದರು. ಜೈಪುರ, ಲಕ್ನೋ ಮತ್ತು ಕೊಚ್ಚಿಯಂತಹ ದೇಶದ ಇತರ ಮೆಟ್ರೋ ಯೋಜನೆಗಳಲ್ಲಿ ಇವರು ಎಂಜಿನಿಯರ್ ಆಗಿ ತೊಡಗಿಸಿಕೊಂಡಿದ್ದರು. ಅವರಿಗೆ 2001 ರಲ್ಲಿ ಪದ್ಮಶ್ರೀ ಮತ್ತು 2008 ರಲ್ಲಿ ಪದ್ಮವಿಭೂಷಣ ನೀಡಲಾಗಿತ್ತು.

2019 ರ ಜೂನ್ 1 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಡೆಲ್ಲಿ ಟ್ರಾನ್ಸ್‍ಪೋರ್ಟ್ ಕಾರ್ಪೋರೇಷನ್ ಬಸ್‍ಗಳಲ್ಲಿ ಮತ್ತು ಡೆಲ್ಲಿ ಮೆಟ್ರೊದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇವೆ ಎಂದು ಘೋಷಿಸಿದ್ದರು. ಆ ಸಮಯದಲ್ಲಿ ವಿ. ಶ್ರೀಧರನ್ ಅದನ್ನು ವಿರೋಧಿಸಿ ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದು ಸುದ್ದಿಯಾಗಿದ್ದರು. ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ನೀಡಿದರೆ, ದೆಹಲಿ ಮೆಟ್ರೊ ಆರ್ಥಿಕ ದಿವಾಳಿತನ ಎದುರಿಸಬೇಕಾಗುತ್ತದೆ, ಅಷ್ಟೇ ಅಲ್ಲದೇ ದೇಶದ ಇತರ ಮೆಟ್ರೊಗಳ ಮೇಲೂ ಇದು ಪರಿಣಾಮ ಬೀರುತ್ತದೆ ಎಂಬ ಕಾರಣವನ್ನು ಪತ್ರದಲ್ಲಿ ಅವರು ಉಲ್ಲೇಖಿಸಿದ್ದರು.

ಆದರೆ ಇದಕ್ಕೆ ತಕ್ಷಣವೇ ಪ್ರತಿಕ್ರಿಯಿಸಿದ್ದ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, “ನೀವು ಪ್ರಧಾನ ಮಂತ್ರಿಗಳಿಗೆ ಬರೆದ ಪತ್ರ ಓದಿ ಆಶ್ಚರ್ಯ ಮತ್ತು ನೋವುಂಟಾಯಿತು. ನೀವು ಪ್ರಸ್ತುತ ಯೋಜನೆಯ ಬಗ್ಗೆ ತಪ್ಪು ಮಾಹಿತಿ ಪಡೆದಿರುವ ಕಾರಣಕ್ಕೆ ಹೀಗಾಗಿದೆ. ದೆಹಲಿ ಮೆಟ್ರೊದ ಮೂರನೇ ಹಂತ ಪೂರ್ಣಗೊಂಡ ನಂತರ ನೀವು ಖಂಡಿತ ಶ್ಲಾಘಿಸುತ್ತೀರೆಂಬ ವಿಶ್ವಾಸವಿದೆ. ಮಹಿಳೆಯರಿಗೆ ಭದ್ರತೆ ಮತ್ತು ಸಾರ್ವಜನಿಕ ವಾಹನಗಳನ್ನು ಬಳಸುವಂತೆ ಪ್ರೇರೆಪಿಸಲು ನಾವು ಈ ಯೋಜನೆ ಘೋಷಿಸಿದ್ದೇವೆ. ಇದರಿಂದ ಖಾಸಗಿ ವಾಹನಗಳ ಬಳಕೆ ತಪ್ಪಿ ವಾಯುಮಾಲಿನ್ಯವನ್ನು ಕಡಿಮೆ ಮಾಡಬಹುದು. ಮಹಿಳೆಯರ ಸಬಲೀಕರಣಕ್ಕಾಗಿ ಇದೊಂದು ಕ್ರಾಂತಿಕಾರಕ ನಡೆಯಾಗಿದೆ” ಎಂದು ವಿ. ಶ್ರೀಧರನ್‌ಗೆ ಉತ್ತರಿಸಿದ್ದರು.

ಇದನ್ನೂ ಓದಿ: ದೇವಾಲಯ ತೆರೆಯುತ್ತಿದ್ದಂತೆ ರಾಜಕೀಯ ಲಾಭಕ್ಕೆ ಮುಂದಾದ ಕೇರಳ ಬಿಜೆಪಿಯ ದ್ವಂದ್ವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...