Homeಮುಖಪುಟಭಯೋತ್ಪಾದಕರೊಂದಿಗೆ ಸಿಕ್ಕಿಬಿದ್ದ ಪೊಲೀಸ್‌ ಅಧಿಕಾರಿ ದೇವಿಂದರ್ ಸಿಂಗ್ ಕುರಿತು ರಾಷ್ಟ್ರೀಯವಾದಿ ಟಿವಿಗಳ ವಿಚಿತ್ರ ಮೌನ!

ಭಯೋತ್ಪಾದಕರೊಂದಿಗೆ ಸಿಕ್ಕಿಬಿದ್ದ ಪೊಲೀಸ್‌ ಅಧಿಕಾರಿ ದೇವಿಂದರ್ ಸಿಂಗ್ ಕುರಿತು ರಾಷ್ಟ್ರೀಯವಾದಿ ಟಿವಿಗಳ ವಿಚಿತ್ರ ಮೌನ!

ಅರ್ನಾಬ್ ಗೋಸ್ವಾಮಿಯಿಂದ ಹಿಡಿದು ಸುಧೀರ್ ಚೌಧರಿಯ ತನಕ ಸ್ವಯಂಘೋಷಿತ ರಾಷ್ಟ್ರೀಯವಾದಿ ಟಿವಿ ನಿರೂಪಕರೆಲ್ಲಾ ಭಯೋತ್ಪಾದಕ ದಾಳಿಯನ್ನು ಯೋಜಿಸುತ್ತಿದ್ದರೆನ್ನಲಾದ ಉಗ್ರಗಾಮಿಗಳ ಜೊತೆ ಬಂಧಿತನಾದ ಪೊಲೀಸ್ ಅಧಿಕಾರಿಗಿಂತ ಪ್ರತಿಭಟನಾನಿರತ ವಿದ್ಯಾರ್ಥಿಗಳ ಬಗ್ಗೆಯೇ ಹೆಚ್ಚು ಆತಂಕ ಹೊಂದಿರುವಂತಿದೆ.

- Advertisement -
- Advertisement -

ಕಾಶ್ಮೀರದಿಂದ ಇತ್ತೀಚಿನ ದಿನಗಳಲ್ಲಿ ಹೊರಬಂದ ಅತ್ಯಂತ ರೋಚಕ ಸುದ್ದಿಯೊಂದರ ಪ್ರಕಾರ, ಪೊಲೀಸ್ ಉನ್ನತಾಧಿಕಾರಿಯೊಬ್ಬರನ್ನು ಇಬ್ಬರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರಗಾಮಿಗಳ ಜೊತೆಯಲ್ಲಿ ಬಂಧಿಸಲಾಗಿದ್ದು, ಇವರಲ್ಲಿ ಒಬ್ಬಾತ ವಲಸೆ ಕಾರ್ಮಿಕರ ಕೊಲೆಗಳ ಆರೋಪದಲ್ಲಿ ಪೊಲೀಸರಿಗೆ ಬೇಕಾಗಿದ್ದವನು. ಹೀಗೆ ಬಂಧಿತನಾದ ದೇವಿಂದರ್ ಸಿಂಗ್ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಇಲಾಖೆಯಲ್ಲಿ ಡೆಪ್ಯುಟಿ ಸುಪರಿಂಟೆಂಟ್ ಆಗಿದ್ದು, ಎರಡು ದಶಕಗಳ ಕಾಲ ಭಯೋತ್ಪಾದಕ ವಿರೋಧಿ ಕಾರ್ಯಾಚರಣೆಗಳ ತಜ್ಞರಾಗಿದ್ದವರು ಮಾತ್ರವಲ್ಲ, ರಾಷ್ಟ್ರಪತಿಯವರಿಂದ ಶೌರ್ಯ ಪ್ರಶಸ್ತಿ ಪಡೆದವರು. ಆತ ಹಣಕ್ಕಾಗಿ ಉಗ್ರಗಾಮಿಗಳ ಸಾಗಾಟಗಾರನಾಗಿ ಕೆಲಸ ಮಾಡುತ್ತಿದ್ದುದು ಪ್ರಾಥಮಿಕ ತನಿಖೆಯಿಂದ ವ್ಯಕ್ತವಾಗಿದೆ. ಆದರೂ, ಈ ಸ್ವಯಂಘೋಷಿತ ರಾಷ್ಟ್ರೀಯವಾದಿ ಟಿವಿಗಳಿಗೆ ಇದೊಂದು ದೊಡ್ಡ ಸುದ್ದಿಯಾಗಿ ಕಾಣಲೇ ಇಲ್ಲ.

ಈ ವಿಷಯ ಇನ್ನಷ್ಟು ಗಂಭೀರವಾಗಿರುವುದಕ್ಕೆ ಕಾರಣವೆಂದರೆ, ಸಂಸತ್ ಮೇಲಿನ ದಾಳಿಗಾಗಿ ಮರಣದಂಡನೆಗೆ ಗುರಿಯಾದ ಅಫ್ಜಲ್ ಗುರು, 2004ರಲ್ಲಿ ತಿಹಾರ್ ಜೈಲಿನಿಂದ ತನ್ನ ವಕೀಲ ಸುಶೀಲ್ ಕುಮಾರ್ ಅವರಿಗೆ ಬರೆದ ಪತ್ರದಲ್ಲಿ ಈ ದೇವಿಂದರ್ ಸಿಂಗ್ ಬಗ್ಗೆ ಉಲ್ಲೇಖವಿದೆ. ದಾಳಿಕೋರರಿಗೆ ಕಾರು ಮತ್ತು ಉಳಿದುಕೊಳ್ಳಲು ವ್ಯವಸ್ಥೆ ಮಾಡುವಂತೆ ಸಿಂಗ್ ತನ್ನನ್ನು ಕೇಳಿಕೊಂಡದ್ದಾಗಿ ಈ ಪತ್ರದಲ್ಲಿ ಆರೋಪಿಸಲಾಗಿತ್ತು. ನಂತರ ತಾನು ಅಫ್ಜಲ್ ಗುರುವಿಗೆ ಚಿತ್ರಹಿಂಸೆ ನೀಡಿರುವುದಾಗಿ ಸಿಂಗ್ ಒಪ್ಪಿಕೊಂಡಿದ್ದರು.

ಈಗ, 2020ರಲ್ಲಿ ಗಣರಾಜ್ಯೋತ್ಸವದಂದು ದಿಲ್ಲಿಯಲ್ಲಿ ದಾಳಿ ನಡೆಸಲು ಹೋಗುತ್ತಿದ್ದರು ಎನ್ನಲಾದ ಇಬ್ಬರು ಉಗ್ರಗಾಮಿಗಳ ಜೊತೆ ಸಿಂಗ್ ಬಂಧಿತರಾಗಿದ್ದಾರೆ. ಸಾಮಾನ್ಯವಾಗಿ ಇಂತಹಾ ಮಹತ್ವದ ಸುದ್ದಿ ಹೆಚ್ಚಿನ ಸುದ್ದಿ ಚಾನೆಲ್‌ಗಳಲ್ಲಿ ಪ್ರಮುಖ ಸುದ್ದಿಯಾಗಿ ಬರುತ್ತಿತ್ತು. ನಾಗರಿಕ ತಿದ್ದುಪಡಿ ಕಾಯಿದೆಯನ್ನು ವಿರೋಧಿಸುವ ವಿದ್ಯಾರ್ಥಿಗಳನ್ನು ಮತ್ತು ಇತರರನ್ನು ಖಂಡಿಸಲು ಆದನ್ನು ಬಳಸಲಾಗುತ್ತಿತ್ತು. ‘ರಾಷ್ಟ್ರೀಯವಾದಿ’ ಟಿವಿ ನಿರೂಪಕರು “ಭಾರತದ ಮೇಲೆ ದಾಳಿ ಮಾಡಲು ಬರುತ್ತಿದ್ದ ಭಯೋತ್ಪಾದಕರ ಬಂಧನ! ಕನ್ನಯ್ಯ ಕುಮಾರ್ ಏನು ಹೇಳುತ್ತಾರೆ? ಅವರನ್ನು ಬೆಂಬಲಿಸುತ್ತಾರೊ?” ಎಂದು ಕಿರುಚಾಡುವುದನ್ನು ಊಹಿಸಬಹುದಿತ್ತು.

ವಿಚಿತ್ರವೆಂದರೆ, ಇಂತಹಾ ಕೋಡಂಗಿಯಾಟ ಈ ತನಕ ಈ ಸುದ್ದಿಯ  ಬಗ್ಗೆ ಕಂಡುಬಂದಿಲ್ಲ. ಸ್ವಯಂಘೋಷಿತ ರಾಷ್ಟ್ರೀಯವಾದಿ ಟಿವಿ ನಿರೂಪಕರು ಈ ಸುದ್ದಿಯನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. ‘ಟೈಮ್ಸ್ ನೌ’ನಲ್ಲಿ ಅರ್ನಾಬ್ ಗೋಸ್ವಾಮಿಯ ಶಿಷ್ಯರಾದ ನವಿಕಾ ಕುಮಾರ್ ಮತ್ತು ಅರ್ನಾಬ್‌ವಾದಿ ರಾಹುಲ್ ಶಿವ ಶಂಕರ್ (ಆರೆಸ್ಸೆಸ್) ಜಾಮಿಯಾದಲ್ಲಿ ನಡೆಯುತ್ತಿರುವ “ಆತಂಕಕಾರಿ” ಪ್ರತಿಭಟನೆಗಳ ಬಗ್ಗೆ ಕಿರುಚಾಡುತ್ತಾ, ಅದಕ್ಕೆ ಸಂಪೂರ್ಣವಾಗಿ ಇಸ್ಲಾಮಿಕ್ ಬಣ್ಣ ಬಳಿದುಬಿಟ್ಟಿದ್ದಾರೆ. ಅದಕ್ಕೆ ಆರೆಸ್ಸೆಸ್ ನೀಡಿರುವ ಸಾಕ್ಷ್ಯವಾದರೂ ಏನು? ವಾಸ್ತವವಾಗಿ ಅಲ್ಲಿ ಕೂಗಲಾದ ಘೋಷಣೆಯನ್ನು ಶಿವ ಶಂಕರ್ “ಇಸ್ಲಾಮಿಕ್” ಎಂದು ಬಣ್ಣಿಸಿದ್ದರು.

ಇನ್ನು ರಿಪಬ್ಲಿಕ್ ಟಿವಿಯಲ್ಲಿ ಅರ್ನಾಬ್ ಗೋಸ್ವಾಮಿ ಮೂರು ಭಯಂಕರ ಚರ್ಚೆಗಳನ್ನು ನಡೆಸಿ,  ಫೇಸ್‌ಬುಕ್‌ನಲ್ಲಿ #CantStopRepublic #AzadiHypocrisy and #CongressVsBharat ಮುಂತಾದ ಹ್ಯಾಷ್‌ಟ್ಯಾಗ್‌ಗಳನ್ನು ಹಾಕಿದ್ದರು. ಆದರೆ, ದೇವಿಂದರ್ ಸಿಂಗ್ ಬಗ್ಗೆ ಏನೂ ಇರಲಿಲ್ಲ ಎಂದು ಬೇರೆ ಹೇಳಬೇಕಾಗಿಲ್ಲ. ಕಾಶ್ಮೀರದಲ್ಲಿ ಭಯೋದ್ಪಾದಕ ದಾಳಿಯನ್ನು ವಿಫಲಗೊಳಿಸಿದ ಬಗ್ಗೆ ಏನೇನೂ ಇಲ್ಲ!

‘ಇಂಡಿಯಾ ಟುಡೆ’ಯ ನಿರೂಪಕ ಶಿವ ಆರೂರ್ ತನ್ನ ಶೋ ‘ ಇಂಡಿಯಾ ಫಸ್ಟ್’ನಲ್ಲಿ ಈ ಸುದ್ದಿಯ ವಿವರ ನೀಡಿ, ‘ರಾ’ಮತ್ತು ‘ಐಬಿ’ಯಂತಹ ಗುಪ್ತಚರ ಸಂಸ್ಥೆಗಳು ಬಂಧಿತ ಪೊಲೀಸ್ ಅಧಿಕಾರಿಯ ವಿಚಾರಣೆ ನಡೆಸಲಿರುವುದಾಗಿ ತಿಳಿಸಿದ್ದರು. ಆದರೆ, ಚಾನೆಲ್‌ನ ಸ್ವಯಂಘೋಷಿತ ‘ಆರ್ಮಿ ಕಮಾಂಡೊ’ ಗೌರವ್ ಸಾವಂತ್ ನಾಪತ್ತೆಯಾಗಿದ್ದರು. ಅವರು ಟ್ವಿಟರ್‌ನಲ್ಲಿ ಪಾಕಿಸ್ತಾನದ ಯಾವುದೋ ಮಂತ್ರಿಯನ್ನು ಟ್ರೋಲ್ ಮಾಡಿದ್ದು ಕಂಡುಬಂತು. ಇಂಡಿಯಾ ಟುಡೆಯ “ಸಮರ ಭೂಮಿ”ಯಲ್ಲಿ ಸಾವಂತ್ ಗೆಳೆಯನಾದ ರಾಹುಲ್ ಕನ್ವಲ್ ತನ್ನ ಶೋ “ನ್ಯೂಸ್ ಟ್ರ್ಯಾಕ್‌”ನಲ್ಲಿ ಯಾವುದೋ “ಜೆಎನ್‌ಯು ತಪ್ಪೊಪ್ಪಿಗೆ” ಟೇಪನ್ನು ನುಡಿಸುತ್ತಿದ್ದರು.

ಝೀ ಟಿವಿಯ ಭಾರತ ವಿರೋಧಿಗಳ ವಿರೋಧಿ ಸ್ವಯಂಘೋಷಿತ ಯೋಧ ಸುಧೀರ್ ಚೌಧರಿ, ಜೆಎನ್‌ಯು ವಿದ್ಯಾರ್ಥಿಗಳ “ಡಿಎನ್‌ಎ ಪರೀಕ್ಷೆ” ಮಾಡುತ್ತಾ, ಪೂರಿಗಳ ಚಿತ್ರಹಾಕುತ್ತಾ  ಉಪವಾಸ ಇರುವುದರ ಲಾಭಗಳ ಬಗ್ಗೆ ಚರ್ಚೆ ನಡೆಸುತ್ತಾ ಕುಳಿತಿದ್ದರು.

ಎಬಿಪಿ ನ್ಯೂಸ್‌ನ ರುಬಿಕಾ, “ಭಾರತದದ ಅತ್ಯಂತ ದೊಡ್ಡ ಶತ್ರು”- ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಕುರಿತು ಚರ್ಚಿಸುತ್ತಿದ್ದರು. ಅವರಿಗೆ ವಿಫಲಗೊಳಿಸಲಾದ ಭಯೋತ್ಪಾದಕ ದಾಳಿಗಿಂತ ಜಾಮಿಯಾದ ವಿದ್ಯಾರ್ಥಿಗಳು ಮತ್ತು ಉಪಕುಲಪತಿ ನಡುವಿನ ವಾಗ್ವಾದ ಮುಖ್ಯವಾಗಿತ್ತು. ರುಬಿಕಾರ ಅರೆ ಸಹೋದರಿ ಅಂಜನಾ ಓಂ ಕಷ್ಯಪ್ ಕ್ಯಾಂಪಸ್‌ಗಳ ಎಡ-ಬಲ ಕಾದಾಟದಲ್ಲಿ ಯಾರು ಸರಿ ಎಂದು ಚರ್ಚಿಸುತ್ತಿದ್ದರು.

ಇಲ್ಲಿ ಒಂದು ವಿನ್ಯಾಸ ಕಾಣುತ್ತಿದೆಯೆ? ಈ ಎಲ್ಲಾ ರಾಷ್ಟ್ರೀಯವಾದಿಗಳು ದೇಶದ ಮೇಲೆ ನಡೆಯಲುದ್ದೇಶಿಸಿದ್ದ ಭಯೋತ್ಪಾದಕ ದಾಳಿಯ ಕುರಿತು ಚರ್ಚಿಸಲಿಲ್ಲ. ಅವರಿಗೆ ಪ್ರತಿಭಟನಾನಿರತ ವಿದ್ಯಾರ್ಥಿಗಳೇ ದೊಡ್ಡ ಶತ್ರುಗಳಂತೆ ಕಂಡರು.

ಇದೀಗ ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಕಾಂಗ್ರೆಸ್ ಮೇಲೆ ವಾಗ್ದಾಳಿ ಮಾಡಲು ಸುದ್ದಿಗೋಷ್ಟಿ ನಡೆಸಿದ ಬಳಿಕ ಟೈಮ್ಸ್ ನೌ ಮತ್ತು ರಿಪಬ್ಲಿಕ್ ಟಿವಿ ಕೊನೆಗೂ ಈ ಸುದ್ದಿ ಬಗ್ಗೆ ಎಚ್ಚರಗೊಂಡಿವೆ. ಗಂಟೆಗಟ್ಟಲೆ ಕಾಲ ಪ್ರೈಮ್ ಟೈಮ್‌ನಲ್ಲಿ ಕಾಂಗ್ರೆಸ್ ಮತ್ತು ಇತರ ಪ್ರತಿಪಕ್ಷಗಳು ಪಾಕಿಸ್ತಾನದ ಪರವಾಗಿವೆ ಎಂದು ಕಿರಿಚಾಡುವುದರಲ್ಲೇ ಪ್ರಮುಖ ಚಾನೆಲ್‌ಗಳು ಕಾಲಕಳೆಯುತ್ತಿವೆ. ಈ ಗದ್ದಲದ ನಡುವೆ ಭಯೋತ್ಪಾದಕರ ಜೊತೆ ಈ ಪೊಲೀಸ್ ಅಧಿಕಾರಿಗೆ ಏನು ಕೆಲಸ ಎಂದು ಕೇಳುವುದನ್ನು ನಾವೆಲ್ಲರೂ ಮರೆತೇಬಿಡುತ್ತೇವೆ!

ಕೃಪೆ: ನ್ಯೂಸ್‌ಲಾಂಡ್ರಿ

ಅನುವಾದ: ನಿಖಿಲ್ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕರ್ನಾಟಕ ಸರ್ಕಾರ ಸಾಮಾಜಿಕ ನ್ಯಾಯ ನಿರಾಕರಿಸುತ್ತಿದೆ’: ವಿಶೇಷ ಸಚಿವ ಸಂಪುಟ ಸಭೆ ಮುಂದೂಡಿಕೆಗೆ ಹೋರಾಟಗಾರರ ಖಂಡನೆ

ಕಳೆದ 35 ವರ್ಷಗಳಿಂದ ಒಳಮೀಸಲಾತಿಗಾಗಿ ಆಗ್ರಹಿಸಿ ನಡೆಯುತ್ತಿದ್ದ ಹೋರಾಟಕ್ಕೆ ಸುಪ್ರೀಂ ಕೋರ್ಟ್‌ ತೀರ್ಪಿನ ನಂತರ ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿಯಾಗುವ ಭರವಸೆಯನ್ನು ಒಳಮೀಸಲಾತಿ ಹೋರಾಟಗಾರರು ಹೊಂದಿದ್ದರು.  ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರ ಎರಡು ವರ್ಷಗಳಿಂದ ನಿರಂತರವಾಗಿ...

ನೇಪಾಳದ ನೂತನ ಪ್ರಧಾನಿಯಾಗಿ 35ವರ್ಷದ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ

ಕಠ್ಮಂಡು: 'ಬಾಲೆನ್' ಎಂದು ಪ್ರೀತಿಯಿಂದ ಕರೆಯಲ್ಪಡುವ ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು, ಹಿಮಾಲಯನ್ ರಾಷ್ಟ್ರದಲ್ಲಿ ಉನ್ನತ ಕಾರ್ಯಕಾರಿ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ನಾಯಕರಾಗಿ ಬಾಲೆನ್...

ಶಿವನ ಅವತಾರ ಎಂದು ಹೇಳಿಕೊಳ್ಳುತ್ತಿದ್ದ ಋುಷಿಕೇಶ್ ವೈದ್ಯ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ: ಎಫ್‌ಐಆರ್ ನಂತರ ದೇವಮಾನವ ಪರಾರಿ

ವಸಾಯಿ: ಶಿವನ ಅವತಾರ ಎಂದು ಹೇಳಿಕೊಂಡು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸ್ವಯಂ ಘೋಷಿತ ದೇವಮಾನವ ಋಷಿಕೇಶ್ ವೈದ್ಯ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಘಟನೆ ವಸಾಯಿ-ವಿರಾರ್ ಪ್ರದೇಶ...

ಜ್ಯೋತಿಷಿ ಅಶೋಕ್ ಖರತ್ ಲೈಂಗಿಕ ದೌರ್ಜನ್ಯ; ಸಂತ್ರಸ್ತರ ವಿಡಿಯೋ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕೇಸ್: ದೇವೇಂದ್ರ ಫಡ್ನವೀಸ್

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರಿಂದ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯರ ಅಶ್ಲೀಲ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ...

ಕ್ಷಿಪಣಿಗಳ ಮೇಲೆ ಭಾರತ ಸೇರಿದಂತೆ ಹಲವು ರಾಷ್ಟ್ರಗಳಿಗೆ ಧನ್ಯವಾದ ಸಂದೇಶ ಬರೆದ ಇರಾನ್

ಯುನೈಟೆಡ್ ಸ್ಟೇಟ್ಸ್-ಇಸ್ರೇಲ್ ವಿರುದ್ಧದ ಯುದ್ಧದ ಮಧ್ಯೆ ಇರಾನ್‌ನೊಂದಿಗೆ ಒಗ್ಗಟ್ಟನ್ನು ತೋರಿಸಿದ ರಾಷ್ಟ್ರಗಳಿಗೆ ಇರಾನ್‌ ತನ್ನ ಕ್ಷಿಪಣಿಗಳು ಕೃತಜ್ಞತಾ ಸಂದೇಶ ಬರೆದಿದೆ. ಕ್ಷಿಪಣಿಗಳ ಮೇಲೆ ಬರೆಯಲಾದ ಸಂದೇಶಗಲ್ಲಿ "ಭಾರತದ ಜನರಿಗೆ ಧನ್ಯವಾದಗಳು" ಎಂದು ಕಂಡುಬಂದಿದೆ. ಜೊತೆಗೆ,...

ಬಿಜೆಪಿಗೆ ಉಳಿದೆಲ್ಲಾ ಪಕ್ಷಗಳಿಗಿಂತ 10 ಪಟ್ಟು ಹೆಚ್ಚು ದೇಣಿಗೆ: ವರದಿ

2024–25ರ ಆರ್ಥಿಕ ವರ್ಷದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ ( ಬಿಜೆಪಿ ) ಇತರ ಎಲ್ಲಾ ರಾಷ್ಟ್ರೀಯ ಪಕ್ಷಗಳು ಒಟ್ಟು ಸೇರಿಸಿ ಪಡೆದ ದೇಣಿಗೆಗಿಂತ ಸುಮಾರು ಹತ್ತು ಪಟ್ಟು ಹೆಚ್ಚು ದೇಣಿಗೆ ಪಡೆದಿದೆ...

ವಿಶಾಖಪಟ್ಟಣ| ಕುಡಿದ ಮತ್ತಿನಲ್ಲಿ ಎಪಿಎಸ್‌ಆರ್‌ಟಿಸಿ ಬಸ್‌ ಅಪಹರಿಸಿದ ವ್ಯಕ್ತಿ

ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಎಪಿಎಸ್‌ಆರ್‌ಟಿಸಿ ಬಸ್ಸನ್ನು ಅಪಹರಿಸಿ ಸುಮಾರು ಒಂದು ಕಿಲೋಮೀಟರ್ ಅಜಾಗರೂಕತೆಯಿಂದ ಚಲಾಯಿಸಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ ಆಘಾತಕಾರಿ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ. ಪ್ರತ್ಯಕ್ಷ್ಯದರ್ಶಿಗಳ ಪ್ರಕಾರ, ಮಾರ್ಚ್ 26 ರ ಗುರುವಾರ ಬಸ್...

ಕರ್ನಾಟಕ ವಿಧಾನಸಭೆಯಲ್ಲಿ ಐಪಿಎಲ್ ಟಿಕೆಟ್ ವಿವಾದ; ಶಾಸಕರನ್ನು ಟೀಕಿಸಿದ ತೇಜಸ್ವಿ ಸೂರ್ಯ ವಿರುದ್ಧ ಡಿಕೆಶಿ ವಾಗ್ದಾಳಿ

ಶಾಸಕರಿಗೆ ಐಪಿಎಲ್ 2026 ಟಿಕೆಟ್ ಹಂಚಿಕೆ ವಿವಾದದ ನಡುವೆ ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರೋಧ ಪಕ್ಷದ ನಾಯಕ ತೇಜಸ್ವಿ ಸೂರ್ಯ ವಿರುದ್ಧ ಕಿಡಿಕಾರಿದ್ದಾರೆ  ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಗಳಿಗೆ ವಿಐಪಿ ಟಿಕೆಟ್‌ಗಳಿಗೆ...

ವಿಚಾರಣೆಯ ನಂತರವೂ 8 ಲಕ್ಷ ಮತದಾರರ ಹೆಸರು ಅಳಿಸಲಾಗಿದೆ; ಬಂಗಾಳದಲ್ಲಿ ಎನ್.ಆರ್.ಸಿ ಇಲ್ಲ: ಮಮತಾ ಬ್ಯಾನರ್ಜಿ

ಮೊದಲ ಪೂರಕ ಮತದಾರರ ಪಟ್ಟಿ ಪ್ರಕಟವಾದ ನಂತರ ಎಂಟು ಲಕ್ಷ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಇದು ರಾಜ್ಯದಲ್ಲಿ ಚುನಾವಣಾ ಪಾರದರ್ಶಕತೆಯ ಬಗ್ಗೆ ಗಂಭೀರ...

ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರ್ಕಾರ

ಜಾಗತಿಕ ತೈಲ ಬೆಲೆಗಳ ಏರಿಕೆಯ ಪರಿಣಾಮವನ್ನು ತಗ್ಗಿಸುವ ಪ್ರಯತ್ನದಲ್ಲಿ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 10 ರೂ.ಗಳಷ್ಟು ಕಡಿಮೆ ಮಾಡಿದೆ, ಇದರಿಂದಾಗಿ ಪೆಟ್ರೋಲ್‌ಗೆ 3 ರೂ.ಗಳಷ್ಟು...