Homeಮುಖಪುಟಭಯೋತ್ಪಾದಕರೊಂದಿಗೆ ಸಿಕ್ಕಿಬಿದ್ದ ಪೊಲೀಸ್‌ ಅಧಿಕಾರಿ ದೇವಿಂದರ್ ಸಿಂಗ್ ಕುರಿತು ರಾಷ್ಟ್ರೀಯವಾದಿ ಟಿವಿಗಳ ವಿಚಿತ್ರ ಮೌನ!

ಭಯೋತ್ಪಾದಕರೊಂದಿಗೆ ಸಿಕ್ಕಿಬಿದ್ದ ಪೊಲೀಸ್‌ ಅಧಿಕಾರಿ ದೇವಿಂದರ್ ಸಿಂಗ್ ಕುರಿತು ರಾಷ್ಟ್ರೀಯವಾದಿ ಟಿವಿಗಳ ವಿಚಿತ್ರ ಮೌನ!

ಅರ್ನಾಬ್ ಗೋಸ್ವಾಮಿಯಿಂದ ಹಿಡಿದು ಸುಧೀರ್ ಚೌಧರಿಯ ತನಕ ಸ್ವಯಂಘೋಷಿತ ರಾಷ್ಟ್ರೀಯವಾದಿ ಟಿವಿ ನಿರೂಪಕರೆಲ್ಲಾ ಭಯೋತ್ಪಾದಕ ದಾಳಿಯನ್ನು ಯೋಜಿಸುತ್ತಿದ್ದರೆನ್ನಲಾದ ಉಗ್ರಗಾಮಿಗಳ ಜೊತೆ ಬಂಧಿತನಾದ ಪೊಲೀಸ್ ಅಧಿಕಾರಿಗಿಂತ ಪ್ರತಿಭಟನಾನಿರತ ವಿದ್ಯಾರ್ಥಿಗಳ ಬಗ್ಗೆಯೇ ಹೆಚ್ಚು ಆತಂಕ ಹೊಂದಿರುವಂತಿದೆ.

- Advertisement -
- Advertisement -

ಕಾಶ್ಮೀರದಿಂದ ಇತ್ತೀಚಿನ ದಿನಗಳಲ್ಲಿ ಹೊರಬಂದ ಅತ್ಯಂತ ರೋಚಕ ಸುದ್ದಿಯೊಂದರ ಪ್ರಕಾರ, ಪೊಲೀಸ್ ಉನ್ನತಾಧಿಕಾರಿಯೊಬ್ಬರನ್ನು ಇಬ್ಬರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರಗಾಮಿಗಳ ಜೊತೆಯಲ್ಲಿ ಬಂಧಿಸಲಾಗಿದ್ದು, ಇವರಲ್ಲಿ ಒಬ್ಬಾತ ವಲಸೆ ಕಾರ್ಮಿಕರ ಕೊಲೆಗಳ ಆರೋಪದಲ್ಲಿ ಪೊಲೀಸರಿಗೆ ಬೇಕಾಗಿದ್ದವನು. ಹೀಗೆ ಬಂಧಿತನಾದ ದೇವಿಂದರ್ ಸಿಂಗ್ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಇಲಾಖೆಯಲ್ಲಿ ಡೆಪ್ಯುಟಿ ಸುಪರಿಂಟೆಂಟ್ ಆಗಿದ್ದು, ಎರಡು ದಶಕಗಳ ಕಾಲ ಭಯೋತ್ಪಾದಕ ವಿರೋಧಿ ಕಾರ್ಯಾಚರಣೆಗಳ ತಜ್ಞರಾಗಿದ್ದವರು ಮಾತ್ರವಲ್ಲ, ರಾಷ್ಟ್ರಪತಿಯವರಿಂದ ಶೌರ್ಯ ಪ್ರಶಸ್ತಿ ಪಡೆದವರು. ಆತ ಹಣಕ್ಕಾಗಿ ಉಗ್ರಗಾಮಿಗಳ ಸಾಗಾಟಗಾರನಾಗಿ ಕೆಲಸ ಮಾಡುತ್ತಿದ್ದುದು ಪ್ರಾಥಮಿಕ ತನಿಖೆಯಿಂದ ವ್ಯಕ್ತವಾಗಿದೆ. ಆದರೂ, ಈ ಸ್ವಯಂಘೋಷಿತ ರಾಷ್ಟ್ರೀಯವಾದಿ ಟಿವಿಗಳಿಗೆ ಇದೊಂದು ದೊಡ್ಡ ಸುದ್ದಿಯಾಗಿ ಕಾಣಲೇ ಇಲ್ಲ.

ಈ ವಿಷಯ ಇನ್ನಷ್ಟು ಗಂಭೀರವಾಗಿರುವುದಕ್ಕೆ ಕಾರಣವೆಂದರೆ, ಸಂಸತ್ ಮೇಲಿನ ದಾಳಿಗಾಗಿ ಮರಣದಂಡನೆಗೆ ಗುರಿಯಾದ ಅಫ್ಜಲ್ ಗುರು, 2004ರಲ್ಲಿ ತಿಹಾರ್ ಜೈಲಿನಿಂದ ತನ್ನ ವಕೀಲ ಸುಶೀಲ್ ಕುಮಾರ್ ಅವರಿಗೆ ಬರೆದ ಪತ್ರದಲ್ಲಿ ಈ ದೇವಿಂದರ್ ಸಿಂಗ್ ಬಗ್ಗೆ ಉಲ್ಲೇಖವಿದೆ. ದಾಳಿಕೋರರಿಗೆ ಕಾರು ಮತ್ತು ಉಳಿದುಕೊಳ್ಳಲು ವ್ಯವಸ್ಥೆ ಮಾಡುವಂತೆ ಸಿಂಗ್ ತನ್ನನ್ನು ಕೇಳಿಕೊಂಡದ್ದಾಗಿ ಈ ಪತ್ರದಲ್ಲಿ ಆರೋಪಿಸಲಾಗಿತ್ತು. ನಂತರ ತಾನು ಅಫ್ಜಲ್ ಗುರುವಿಗೆ ಚಿತ್ರಹಿಂಸೆ ನೀಡಿರುವುದಾಗಿ ಸಿಂಗ್ ಒಪ್ಪಿಕೊಂಡಿದ್ದರು.

ಈಗ, 2020ರಲ್ಲಿ ಗಣರಾಜ್ಯೋತ್ಸವದಂದು ದಿಲ್ಲಿಯಲ್ಲಿ ದಾಳಿ ನಡೆಸಲು ಹೋಗುತ್ತಿದ್ದರು ಎನ್ನಲಾದ ಇಬ್ಬರು ಉಗ್ರಗಾಮಿಗಳ ಜೊತೆ ಸಿಂಗ್ ಬಂಧಿತರಾಗಿದ್ದಾರೆ. ಸಾಮಾನ್ಯವಾಗಿ ಇಂತಹಾ ಮಹತ್ವದ ಸುದ್ದಿ ಹೆಚ್ಚಿನ ಸುದ್ದಿ ಚಾನೆಲ್‌ಗಳಲ್ಲಿ ಪ್ರಮುಖ ಸುದ್ದಿಯಾಗಿ ಬರುತ್ತಿತ್ತು. ನಾಗರಿಕ ತಿದ್ದುಪಡಿ ಕಾಯಿದೆಯನ್ನು ವಿರೋಧಿಸುವ ವಿದ್ಯಾರ್ಥಿಗಳನ್ನು ಮತ್ತು ಇತರರನ್ನು ಖಂಡಿಸಲು ಆದನ್ನು ಬಳಸಲಾಗುತ್ತಿತ್ತು. ‘ರಾಷ್ಟ್ರೀಯವಾದಿ’ ಟಿವಿ ನಿರೂಪಕರು “ಭಾರತದ ಮೇಲೆ ದಾಳಿ ಮಾಡಲು ಬರುತ್ತಿದ್ದ ಭಯೋತ್ಪಾದಕರ ಬಂಧನ! ಕನ್ನಯ್ಯ ಕುಮಾರ್ ಏನು ಹೇಳುತ್ತಾರೆ? ಅವರನ್ನು ಬೆಂಬಲಿಸುತ್ತಾರೊ?” ಎಂದು ಕಿರುಚಾಡುವುದನ್ನು ಊಹಿಸಬಹುದಿತ್ತು.

ವಿಚಿತ್ರವೆಂದರೆ, ಇಂತಹಾ ಕೋಡಂಗಿಯಾಟ ಈ ತನಕ ಈ ಸುದ್ದಿಯ  ಬಗ್ಗೆ ಕಂಡುಬಂದಿಲ್ಲ. ಸ್ವಯಂಘೋಷಿತ ರಾಷ್ಟ್ರೀಯವಾದಿ ಟಿವಿ ನಿರೂಪಕರು ಈ ಸುದ್ದಿಯನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. ‘ಟೈಮ್ಸ್ ನೌ’ನಲ್ಲಿ ಅರ್ನಾಬ್ ಗೋಸ್ವಾಮಿಯ ಶಿಷ್ಯರಾದ ನವಿಕಾ ಕುಮಾರ್ ಮತ್ತು ಅರ್ನಾಬ್‌ವಾದಿ ರಾಹುಲ್ ಶಿವ ಶಂಕರ್ (ಆರೆಸ್ಸೆಸ್) ಜಾಮಿಯಾದಲ್ಲಿ ನಡೆಯುತ್ತಿರುವ “ಆತಂಕಕಾರಿ” ಪ್ರತಿಭಟನೆಗಳ ಬಗ್ಗೆ ಕಿರುಚಾಡುತ್ತಾ, ಅದಕ್ಕೆ ಸಂಪೂರ್ಣವಾಗಿ ಇಸ್ಲಾಮಿಕ್ ಬಣ್ಣ ಬಳಿದುಬಿಟ್ಟಿದ್ದಾರೆ. ಅದಕ್ಕೆ ಆರೆಸ್ಸೆಸ್ ನೀಡಿರುವ ಸಾಕ್ಷ್ಯವಾದರೂ ಏನು? ವಾಸ್ತವವಾಗಿ ಅಲ್ಲಿ ಕೂಗಲಾದ ಘೋಷಣೆಯನ್ನು ಶಿವ ಶಂಕರ್ “ಇಸ್ಲಾಮಿಕ್” ಎಂದು ಬಣ್ಣಿಸಿದ್ದರು.

ಇನ್ನು ರಿಪಬ್ಲಿಕ್ ಟಿವಿಯಲ್ಲಿ ಅರ್ನಾಬ್ ಗೋಸ್ವಾಮಿ ಮೂರು ಭಯಂಕರ ಚರ್ಚೆಗಳನ್ನು ನಡೆಸಿ,  ಫೇಸ್‌ಬುಕ್‌ನಲ್ಲಿ #CantStopRepublic #AzadiHypocrisy and #CongressVsBharat ಮುಂತಾದ ಹ್ಯಾಷ್‌ಟ್ಯಾಗ್‌ಗಳನ್ನು ಹಾಕಿದ್ದರು. ಆದರೆ, ದೇವಿಂದರ್ ಸಿಂಗ್ ಬಗ್ಗೆ ಏನೂ ಇರಲಿಲ್ಲ ಎಂದು ಬೇರೆ ಹೇಳಬೇಕಾಗಿಲ್ಲ. ಕಾಶ್ಮೀರದಲ್ಲಿ ಭಯೋದ್ಪಾದಕ ದಾಳಿಯನ್ನು ವಿಫಲಗೊಳಿಸಿದ ಬಗ್ಗೆ ಏನೇನೂ ಇಲ್ಲ!

‘ಇಂಡಿಯಾ ಟುಡೆ’ಯ ನಿರೂಪಕ ಶಿವ ಆರೂರ್ ತನ್ನ ಶೋ ‘ ಇಂಡಿಯಾ ಫಸ್ಟ್’ನಲ್ಲಿ ಈ ಸುದ್ದಿಯ ವಿವರ ನೀಡಿ, ‘ರಾ’ಮತ್ತು ‘ಐಬಿ’ಯಂತಹ ಗುಪ್ತಚರ ಸಂಸ್ಥೆಗಳು ಬಂಧಿತ ಪೊಲೀಸ್ ಅಧಿಕಾರಿಯ ವಿಚಾರಣೆ ನಡೆಸಲಿರುವುದಾಗಿ ತಿಳಿಸಿದ್ದರು. ಆದರೆ, ಚಾನೆಲ್‌ನ ಸ್ವಯಂಘೋಷಿತ ‘ಆರ್ಮಿ ಕಮಾಂಡೊ’ ಗೌರವ್ ಸಾವಂತ್ ನಾಪತ್ತೆಯಾಗಿದ್ದರು. ಅವರು ಟ್ವಿಟರ್‌ನಲ್ಲಿ ಪಾಕಿಸ್ತಾನದ ಯಾವುದೋ ಮಂತ್ರಿಯನ್ನು ಟ್ರೋಲ್ ಮಾಡಿದ್ದು ಕಂಡುಬಂತು. ಇಂಡಿಯಾ ಟುಡೆಯ “ಸಮರ ಭೂಮಿ”ಯಲ್ಲಿ ಸಾವಂತ್ ಗೆಳೆಯನಾದ ರಾಹುಲ್ ಕನ್ವಲ್ ತನ್ನ ಶೋ “ನ್ಯೂಸ್ ಟ್ರ್ಯಾಕ್‌”ನಲ್ಲಿ ಯಾವುದೋ “ಜೆಎನ್‌ಯು ತಪ್ಪೊಪ್ಪಿಗೆ” ಟೇಪನ್ನು ನುಡಿಸುತ್ತಿದ್ದರು.

ಝೀ ಟಿವಿಯ ಭಾರತ ವಿರೋಧಿಗಳ ವಿರೋಧಿ ಸ್ವಯಂಘೋಷಿತ ಯೋಧ ಸುಧೀರ್ ಚೌಧರಿ, ಜೆಎನ್‌ಯು ವಿದ್ಯಾರ್ಥಿಗಳ “ಡಿಎನ್‌ಎ ಪರೀಕ್ಷೆ” ಮಾಡುತ್ತಾ, ಪೂರಿಗಳ ಚಿತ್ರಹಾಕುತ್ತಾ  ಉಪವಾಸ ಇರುವುದರ ಲಾಭಗಳ ಬಗ್ಗೆ ಚರ್ಚೆ ನಡೆಸುತ್ತಾ ಕುಳಿತಿದ್ದರು.

ಎಬಿಪಿ ನ್ಯೂಸ್‌ನ ರುಬಿಕಾ, “ಭಾರತದದ ಅತ್ಯಂತ ದೊಡ್ಡ ಶತ್ರು”- ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಕುರಿತು ಚರ್ಚಿಸುತ್ತಿದ್ದರು. ಅವರಿಗೆ ವಿಫಲಗೊಳಿಸಲಾದ ಭಯೋತ್ಪಾದಕ ದಾಳಿಗಿಂತ ಜಾಮಿಯಾದ ವಿದ್ಯಾರ್ಥಿಗಳು ಮತ್ತು ಉಪಕುಲಪತಿ ನಡುವಿನ ವಾಗ್ವಾದ ಮುಖ್ಯವಾಗಿತ್ತು. ರುಬಿಕಾರ ಅರೆ ಸಹೋದರಿ ಅಂಜನಾ ಓಂ ಕಷ್ಯಪ್ ಕ್ಯಾಂಪಸ್‌ಗಳ ಎಡ-ಬಲ ಕಾದಾಟದಲ್ಲಿ ಯಾರು ಸರಿ ಎಂದು ಚರ್ಚಿಸುತ್ತಿದ್ದರು.

ಇಲ್ಲಿ ಒಂದು ವಿನ್ಯಾಸ ಕಾಣುತ್ತಿದೆಯೆ? ಈ ಎಲ್ಲಾ ರಾಷ್ಟ್ರೀಯವಾದಿಗಳು ದೇಶದ ಮೇಲೆ ನಡೆಯಲುದ್ದೇಶಿಸಿದ್ದ ಭಯೋತ್ಪಾದಕ ದಾಳಿಯ ಕುರಿತು ಚರ್ಚಿಸಲಿಲ್ಲ. ಅವರಿಗೆ ಪ್ರತಿಭಟನಾನಿರತ ವಿದ್ಯಾರ್ಥಿಗಳೇ ದೊಡ್ಡ ಶತ್ರುಗಳಂತೆ ಕಂಡರು.

ಇದೀಗ ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಕಾಂಗ್ರೆಸ್ ಮೇಲೆ ವಾಗ್ದಾಳಿ ಮಾಡಲು ಸುದ್ದಿಗೋಷ್ಟಿ ನಡೆಸಿದ ಬಳಿಕ ಟೈಮ್ಸ್ ನೌ ಮತ್ತು ರಿಪಬ್ಲಿಕ್ ಟಿವಿ ಕೊನೆಗೂ ಈ ಸುದ್ದಿ ಬಗ್ಗೆ ಎಚ್ಚರಗೊಂಡಿವೆ. ಗಂಟೆಗಟ್ಟಲೆ ಕಾಲ ಪ್ರೈಮ್ ಟೈಮ್‌ನಲ್ಲಿ ಕಾಂಗ್ರೆಸ್ ಮತ್ತು ಇತರ ಪ್ರತಿಪಕ್ಷಗಳು ಪಾಕಿಸ್ತಾನದ ಪರವಾಗಿವೆ ಎಂದು ಕಿರಿಚಾಡುವುದರಲ್ಲೇ ಪ್ರಮುಖ ಚಾನೆಲ್‌ಗಳು ಕಾಲಕಳೆಯುತ್ತಿವೆ. ಈ ಗದ್ದಲದ ನಡುವೆ ಭಯೋತ್ಪಾದಕರ ಜೊತೆ ಈ ಪೊಲೀಸ್ ಅಧಿಕಾರಿಗೆ ಏನು ಕೆಲಸ ಎಂದು ಕೇಳುವುದನ್ನು ನಾವೆಲ್ಲರೂ ಮರೆತೇಬಿಡುತ್ತೇವೆ!

ಕೃಪೆ: ನ್ಯೂಸ್‌ಲಾಂಡ್ರಿ

ಅನುವಾದ: ನಿಖಿಲ್ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...