Homeಮುಖಪುಟಭಯೋತ್ಪಾದಕರೊಂದಿಗೆ ಸಿಕ್ಕಿಬಿದ್ದ ಪೊಲೀಸ್‌ ಅಧಿಕಾರಿ ದೇವಿಂದರ್ ಸಿಂಗ್ ಕುರಿತು ರಾಷ್ಟ್ರೀಯವಾದಿ ಟಿವಿಗಳ ವಿಚಿತ್ರ ಮೌನ!

ಭಯೋತ್ಪಾದಕರೊಂದಿಗೆ ಸಿಕ್ಕಿಬಿದ್ದ ಪೊಲೀಸ್‌ ಅಧಿಕಾರಿ ದೇವಿಂದರ್ ಸಿಂಗ್ ಕುರಿತು ರಾಷ್ಟ್ರೀಯವಾದಿ ಟಿವಿಗಳ ವಿಚಿತ್ರ ಮೌನ!

ಅರ್ನಾಬ್ ಗೋಸ್ವಾಮಿಯಿಂದ ಹಿಡಿದು ಸುಧೀರ್ ಚೌಧರಿಯ ತನಕ ಸ್ವಯಂಘೋಷಿತ ರಾಷ್ಟ್ರೀಯವಾದಿ ಟಿವಿ ನಿರೂಪಕರೆಲ್ಲಾ ಭಯೋತ್ಪಾದಕ ದಾಳಿಯನ್ನು ಯೋಜಿಸುತ್ತಿದ್ದರೆನ್ನಲಾದ ಉಗ್ರಗಾಮಿಗಳ ಜೊತೆ ಬಂಧಿತನಾದ ಪೊಲೀಸ್ ಅಧಿಕಾರಿಗಿಂತ ಪ್ರತಿಭಟನಾನಿರತ ವಿದ್ಯಾರ್ಥಿಗಳ ಬಗ್ಗೆಯೇ ಹೆಚ್ಚು ಆತಂಕ ಹೊಂದಿರುವಂತಿದೆ.

- Advertisement -
- Advertisement -

ಕಾಶ್ಮೀರದಿಂದ ಇತ್ತೀಚಿನ ದಿನಗಳಲ್ಲಿ ಹೊರಬಂದ ಅತ್ಯಂತ ರೋಚಕ ಸುದ್ದಿಯೊಂದರ ಪ್ರಕಾರ, ಪೊಲೀಸ್ ಉನ್ನತಾಧಿಕಾರಿಯೊಬ್ಬರನ್ನು ಇಬ್ಬರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರಗಾಮಿಗಳ ಜೊತೆಯಲ್ಲಿ ಬಂಧಿಸಲಾಗಿದ್ದು, ಇವರಲ್ಲಿ ಒಬ್ಬಾತ ವಲಸೆ ಕಾರ್ಮಿಕರ ಕೊಲೆಗಳ ಆರೋಪದಲ್ಲಿ ಪೊಲೀಸರಿಗೆ ಬೇಕಾಗಿದ್ದವನು. ಹೀಗೆ ಬಂಧಿತನಾದ ದೇವಿಂದರ್ ಸಿಂಗ್ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಇಲಾಖೆಯಲ್ಲಿ ಡೆಪ್ಯುಟಿ ಸುಪರಿಂಟೆಂಟ್ ಆಗಿದ್ದು, ಎರಡು ದಶಕಗಳ ಕಾಲ ಭಯೋತ್ಪಾದಕ ವಿರೋಧಿ ಕಾರ್ಯಾಚರಣೆಗಳ ತಜ್ಞರಾಗಿದ್ದವರು ಮಾತ್ರವಲ್ಲ, ರಾಷ್ಟ್ರಪತಿಯವರಿಂದ ಶೌರ್ಯ ಪ್ರಶಸ್ತಿ ಪಡೆದವರು. ಆತ ಹಣಕ್ಕಾಗಿ ಉಗ್ರಗಾಮಿಗಳ ಸಾಗಾಟಗಾರನಾಗಿ ಕೆಲಸ ಮಾಡುತ್ತಿದ್ದುದು ಪ್ರಾಥಮಿಕ ತನಿಖೆಯಿಂದ ವ್ಯಕ್ತವಾಗಿದೆ. ಆದರೂ, ಈ ಸ್ವಯಂಘೋಷಿತ ರಾಷ್ಟ್ರೀಯವಾದಿ ಟಿವಿಗಳಿಗೆ ಇದೊಂದು ದೊಡ್ಡ ಸುದ್ದಿಯಾಗಿ ಕಾಣಲೇ ಇಲ್ಲ.

ಈ ವಿಷಯ ಇನ್ನಷ್ಟು ಗಂಭೀರವಾಗಿರುವುದಕ್ಕೆ ಕಾರಣವೆಂದರೆ, ಸಂಸತ್ ಮೇಲಿನ ದಾಳಿಗಾಗಿ ಮರಣದಂಡನೆಗೆ ಗುರಿಯಾದ ಅಫ್ಜಲ್ ಗುರು, 2004ರಲ್ಲಿ ತಿಹಾರ್ ಜೈಲಿನಿಂದ ತನ್ನ ವಕೀಲ ಸುಶೀಲ್ ಕುಮಾರ್ ಅವರಿಗೆ ಬರೆದ ಪತ್ರದಲ್ಲಿ ಈ ದೇವಿಂದರ್ ಸಿಂಗ್ ಬಗ್ಗೆ ಉಲ್ಲೇಖವಿದೆ. ದಾಳಿಕೋರರಿಗೆ ಕಾರು ಮತ್ತು ಉಳಿದುಕೊಳ್ಳಲು ವ್ಯವಸ್ಥೆ ಮಾಡುವಂತೆ ಸಿಂಗ್ ತನ್ನನ್ನು ಕೇಳಿಕೊಂಡದ್ದಾಗಿ ಈ ಪತ್ರದಲ್ಲಿ ಆರೋಪಿಸಲಾಗಿತ್ತು. ನಂತರ ತಾನು ಅಫ್ಜಲ್ ಗುರುವಿಗೆ ಚಿತ್ರಹಿಂಸೆ ನೀಡಿರುವುದಾಗಿ ಸಿಂಗ್ ಒಪ್ಪಿಕೊಂಡಿದ್ದರು.

ಈಗ, 2020ರಲ್ಲಿ ಗಣರಾಜ್ಯೋತ್ಸವದಂದು ದಿಲ್ಲಿಯಲ್ಲಿ ದಾಳಿ ನಡೆಸಲು ಹೋಗುತ್ತಿದ್ದರು ಎನ್ನಲಾದ ಇಬ್ಬರು ಉಗ್ರಗಾಮಿಗಳ ಜೊತೆ ಸಿಂಗ್ ಬಂಧಿತರಾಗಿದ್ದಾರೆ. ಸಾಮಾನ್ಯವಾಗಿ ಇಂತಹಾ ಮಹತ್ವದ ಸುದ್ದಿ ಹೆಚ್ಚಿನ ಸುದ್ದಿ ಚಾನೆಲ್‌ಗಳಲ್ಲಿ ಪ್ರಮುಖ ಸುದ್ದಿಯಾಗಿ ಬರುತ್ತಿತ್ತು. ನಾಗರಿಕ ತಿದ್ದುಪಡಿ ಕಾಯಿದೆಯನ್ನು ವಿರೋಧಿಸುವ ವಿದ್ಯಾರ್ಥಿಗಳನ್ನು ಮತ್ತು ಇತರರನ್ನು ಖಂಡಿಸಲು ಆದನ್ನು ಬಳಸಲಾಗುತ್ತಿತ್ತು. ‘ರಾಷ್ಟ್ರೀಯವಾದಿ’ ಟಿವಿ ನಿರೂಪಕರು “ಭಾರತದ ಮೇಲೆ ದಾಳಿ ಮಾಡಲು ಬರುತ್ತಿದ್ದ ಭಯೋತ್ಪಾದಕರ ಬಂಧನ! ಕನ್ನಯ್ಯ ಕುಮಾರ್ ಏನು ಹೇಳುತ್ತಾರೆ? ಅವರನ್ನು ಬೆಂಬಲಿಸುತ್ತಾರೊ?” ಎಂದು ಕಿರುಚಾಡುವುದನ್ನು ಊಹಿಸಬಹುದಿತ್ತು.

ವಿಚಿತ್ರವೆಂದರೆ, ಇಂತಹಾ ಕೋಡಂಗಿಯಾಟ ಈ ತನಕ ಈ ಸುದ್ದಿಯ  ಬಗ್ಗೆ ಕಂಡುಬಂದಿಲ್ಲ. ಸ್ವಯಂಘೋಷಿತ ರಾಷ್ಟ್ರೀಯವಾದಿ ಟಿವಿ ನಿರೂಪಕರು ಈ ಸುದ್ದಿಯನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. ‘ಟೈಮ್ಸ್ ನೌ’ನಲ್ಲಿ ಅರ್ನಾಬ್ ಗೋಸ್ವಾಮಿಯ ಶಿಷ್ಯರಾದ ನವಿಕಾ ಕುಮಾರ್ ಮತ್ತು ಅರ್ನಾಬ್‌ವಾದಿ ರಾಹುಲ್ ಶಿವ ಶಂಕರ್ (ಆರೆಸ್ಸೆಸ್) ಜಾಮಿಯಾದಲ್ಲಿ ನಡೆಯುತ್ತಿರುವ “ಆತಂಕಕಾರಿ” ಪ್ರತಿಭಟನೆಗಳ ಬಗ್ಗೆ ಕಿರುಚಾಡುತ್ತಾ, ಅದಕ್ಕೆ ಸಂಪೂರ್ಣವಾಗಿ ಇಸ್ಲಾಮಿಕ್ ಬಣ್ಣ ಬಳಿದುಬಿಟ್ಟಿದ್ದಾರೆ. ಅದಕ್ಕೆ ಆರೆಸ್ಸೆಸ್ ನೀಡಿರುವ ಸಾಕ್ಷ್ಯವಾದರೂ ಏನು? ವಾಸ್ತವವಾಗಿ ಅಲ್ಲಿ ಕೂಗಲಾದ ಘೋಷಣೆಯನ್ನು ಶಿವ ಶಂಕರ್ “ಇಸ್ಲಾಮಿಕ್” ಎಂದು ಬಣ್ಣಿಸಿದ್ದರು.

ಇನ್ನು ರಿಪಬ್ಲಿಕ್ ಟಿವಿಯಲ್ಲಿ ಅರ್ನಾಬ್ ಗೋಸ್ವಾಮಿ ಮೂರು ಭಯಂಕರ ಚರ್ಚೆಗಳನ್ನು ನಡೆಸಿ,  ಫೇಸ್‌ಬುಕ್‌ನಲ್ಲಿ #CantStopRepublic #AzadiHypocrisy and #CongressVsBharat ಮುಂತಾದ ಹ್ಯಾಷ್‌ಟ್ಯಾಗ್‌ಗಳನ್ನು ಹಾಕಿದ್ದರು. ಆದರೆ, ದೇವಿಂದರ್ ಸಿಂಗ್ ಬಗ್ಗೆ ಏನೂ ಇರಲಿಲ್ಲ ಎಂದು ಬೇರೆ ಹೇಳಬೇಕಾಗಿಲ್ಲ. ಕಾಶ್ಮೀರದಲ್ಲಿ ಭಯೋದ್ಪಾದಕ ದಾಳಿಯನ್ನು ವಿಫಲಗೊಳಿಸಿದ ಬಗ್ಗೆ ಏನೇನೂ ಇಲ್ಲ!

‘ಇಂಡಿಯಾ ಟುಡೆ’ಯ ನಿರೂಪಕ ಶಿವ ಆರೂರ್ ತನ್ನ ಶೋ ‘ ಇಂಡಿಯಾ ಫಸ್ಟ್’ನಲ್ಲಿ ಈ ಸುದ್ದಿಯ ವಿವರ ನೀಡಿ, ‘ರಾ’ಮತ್ತು ‘ಐಬಿ’ಯಂತಹ ಗುಪ್ತಚರ ಸಂಸ್ಥೆಗಳು ಬಂಧಿತ ಪೊಲೀಸ್ ಅಧಿಕಾರಿಯ ವಿಚಾರಣೆ ನಡೆಸಲಿರುವುದಾಗಿ ತಿಳಿಸಿದ್ದರು. ಆದರೆ, ಚಾನೆಲ್‌ನ ಸ್ವಯಂಘೋಷಿತ ‘ಆರ್ಮಿ ಕಮಾಂಡೊ’ ಗೌರವ್ ಸಾವಂತ್ ನಾಪತ್ತೆಯಾಗಿದ್ದರು. ಅವರು ಟ್ವಿಟರ್‌ನಲ್ಲಿ ಪಾಕಿಸ್ತಾನದ ಯಾವುದೋ ಮಂತ್ರಿಯನ್ನು ಟ್ರೋಲ್ ಮಾಡಿದ್ದು ಕಂಡುಬಂತು. ಇಂಡಿಯಾ ಟುಡೆಯ “ಸಮರ ಭೂಮಿ”ಯಲ್ಲಿ ಸಾವಂತ್ ಗೆಳೆಯನಾದ ರಾಹುಲ್ ಕನ್ವಲ್ ತನ್ನ ಶೋ “ನ್ಯೂಸ್ ಟ್ರ್ಯಾಕ್‌”ನಲ್ಲಿ ಯಾವುದೋ “ಜೆಎನ್‌ಯು ತಪ್ಪೊಪ್ಪಿಗೆ” ಟೇಪನ್ನು ನುಡಿಸುತ್ತಿದ್ದರು.

ಝೀ ಟಿವಿಯ ಭಾರತ ವಿರೋಧಿಗಳ ವಿರೋಧಿ ಸ್ವಯಂಘೋಷಿತ ಯೋಧ ಸುಧೀರ್ ಚೌಧರಿ, ಜೆಎನ್‌ಯು ವಿದ್ಯಾರ್ಥಿಗಳ “ಡಿಎನ್‌ಎ ಪರೀಕ್ಷೆ” ಮಾಡುತ್ತಾ, ಪೂರಿಗಳ ಚಿತ್ರಹಾಕುತ್ತಾ  ಉಪವಾಸ ಇರುವುದರ ಲಾಭಗಳ ಬಗ್ಗೆ ಚರ್ಚೆ ನಡೆಸುತ್ತಾ ಕುಳಿತಿದ್ದರು.

ಎಬಿಪಿ ನ್ಯೂಸ್‌ನ ರುಬಿಕಾ, “ಭಾರತದದ ಅತ್ಯಂತ ದೊಡ್ಡ ಶತ್ರು”- ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಕುರಿತು ಚರ್ಚಿಸುತ್ತಿದ್ದರು. ಅವರಿಗೆ ವಿಫಲಗೊಳಿಸಲಾದ ಭಯೋತ್ಪಾದಕ ದಾಳಿಗಿಂತ ಜಾಮಿಯಾದ ವಿದ್ಯಾರ್ಥಿಗಳು ಮತ್ತು ಉಪಕುಲಪತಿ ನಡುವಿನ ವಾಗ್ವಾದ ಮುಖ್ಯವಾಗಿತ್ತು. ರುಬಿಕಾರ ಅರೆ ಸಹೋದರಿ ಅಂಜನಾ ಓಂ ಕಷ್ಯಪ್ ಕ್ಯಾಂಪಸ್‌ಗಳ ಎಡ-ಬಲ ಕಾದಾಟದಲ್ಲಿ ಯಾರು ಸರಿ ಎಂದು ಚರ್ಚಿಸುತ್ತಿದ್ದರು.

ಇಲ್ಲಿ ಒಂದು ವಿನ್ಯಾಸ ಕಾಣುತ್ತಿದೆಯೆ? ಈ ಎಲ್ಲಾ ರಾಷ್ಟ್ರೀಯವಾದಿಗಳು ದೇಶದ ಮೇಲೆ ನಡೆಯಲುದ್ದೇಶಿಸಿದ್ದ ಭಯೋತ್ಪಾದಕ ದಾಳಿಯ ಕುರಿತು ಚರ್ಚಿಸಲಿಲ್ಲ. ಅವರಿಗೆ ಪ್ರತಿಭಟನಾನಿರತ ವಿದ್ಯಾರ್ಥಿಗಳೇ ದೊಡ್ಡ ಶತ್ರುಗಳಂತೆ ಕಂಡರು.

ಇದೀಗ ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಕಾಂಗ್ರೆಸ್ ಮೇಲೆ ವಾಗ್ದಾಳಿ ಮಾಡಲು ಸುದ್ದಿಗೋಷ್ಟಿ ನಡೆಸಿದ ಬಳಿಕ ಟೈಮ್ಸ್ ನೌ ಮತ್ತು ರಿಪಬ್ಲಿಕ್ ಟಿವಿ ಕೊನೆಗೂ ಈ ಸುದ್ದಿ ಬಗ್ಗೆ ಎಚ್ಚರಗೊಂಡಿವೆ. ಗಂಟೆಗಟ್ಟಲೆ ಕಾಲ ಪ್ರೈಮ್ ಟೈಮ್‌ನಲ್ಲಿ ಕಾಂಗ್ರೆಸ್ ಮತ್ತು ಇತರ ಪ್ರತಿಪಕ್ಷಗಳು ಪಾಕಿಸ್ತಾನದ ಪರವಾಗಿವೆ ಎಂದು ಕಿರಿಚಾಡುವುದರಲ್ಲೇ ಪ್ರಮುಖ ಚಾನೆಲ್‌ಗಳು ಕಾಲಕಳೆಯುತ್ತಿವೆ. ಈ ಗದ್ದಲದ ನಡುವೆ ಭಯೋತ್ಪಾದಕರ ಜೊತೆ ಈ ಪೊಲೀಸ್ ಅಧಿಕಾರಿಗೆ ಏನು ಕೆಲಸ ಎಂದು ಕೇಳುವುದನ್ನು ನಾವೆಲ್ಲರೂ ಮರೆತೇಬಿಡುತ್ತೇವೆ!

ಕೃಪೆ: ನ್ಯೂಸ್‌ಲಾಂಡ್ರಿ

ಅನುವಾದ: ನಿಖಿಲ್ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...