Homeಮುಖಪುಟಭಯೋತ್ಪಾದಕರೊಂದಿಗೆ ಸಿಕ್ಕಿಬಿದ್ದ ಪೊಲೀಸ್‌ ಅಧಿಕಾರಿ ದೇವಿಂದರ್ ಸಿಂಗ್ ಕುರಿತು ರಾಷ್ಟ್ರೀಯವಾದಿ ಟಿವಿಗಳ ವಿಚಿತ್ರ ಮೌನ!

ಭಯೋತ್ಪಾದಕರೊಂದಿಗೆ ಸಿಕ್ಕಿಬಿದ್ದ ಪೊಲೀಸ್‌ ಅಧಿಕಾರಿ ದೇವಿಂದರ್ ಸಿಂಗ್ ಕುರಿತು ರಾಷ್ಟ್ರೀಯವಾದಿ ಟಿವಿಗಳ ವಿಚಿತ್ರ ಮೌನ!

ಅರ್ನಾಬ್ ಗೋಸ್ವಾಮಿಯಿಂದ ಹಿಡಿದು ಸುಧೀರ್ ಚೌಧರಿಯ ತನಕ ಸ್ವಯಂಘೋಷಿತ ರಾಷ್ಟ್ರೀಯವಾದಿ ಟಿವಿ ನಿರೂಪಕರೆಲ್ಲಾ ಭಯೋತ್ಪಾದಕ ದಾಳಿಯನ್ನು ಯೋಜಿಸುತ್ತಿದ್ದರೆನ್ನಲಾದ ಉಗ್ರಗಾಮಿಗಳ ಜೊತೆ ಬಂಧಿತನಾದ ಪೊಲೀಸ್ ಅಧಿಕಾರಿಗಿಂತ ಪ್ರತಿಭಟನಾನಿರತ ವಿದ್ಯಾರ್ಥಿಗಳ ಬಗ್ಗೆಯೇ ಹೆಚ್ಚು ಆತಂಕ ಹೊಂದಿರುವಂತಿದೆ.

- Advertisement -
- Advertisement -

ಕಾಶ್ಮೀರದಿಂದ ಇತ್ತೀಚಿನ ದಿನಗಳಲ್ಲಿ ಹೊರಬಂದ ಅತ್ಯಂತ ರೋಚಕ ಸುದ್ದಿಯೊಂದರ ಪ್ರಕಾರ, ಪೊಲೀಸ್ ಉನ್ನತಾಧಿಕಾರಿಯೊಬ್ಬರನ್ನು ಇಬ್ಬರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರಗಾಮಿಗಳ ಜೊತೆಯಲ್ಲಿ ಬಂಧಿಸಲಾಗಿದ್ದು, ಇವರಲ್ಲಿ ಒಬ್ಬಾತ ವಲಸೆ ಕಾರ್ಮಿಕರ ಕೊಲೆಗಳ ಆರೋಪದಲ್ಲಿ ಪೊಲೀಸರಿಗೆ ಬೇಕಾಗಿದ್ದವನು. ಹೀಗೆ ಬಂಧಿತನಾದ ದೇವಿಂದರ್ ಸಿಂಗ್ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಇಲಾಖೆಯಲ್ಲಿ ಡೆಪ್ಯುಟಿ ಸುಪರಿಂಟೆಂಟ್ ಆಗಿದ್ದು, ಎರಡು ದಶಕಗಳ ಕಾಲ ಭಯೋತ್ಪಾದಕ ವಿರೋಧಿ ಕಾರ್ಯಾಚರಣೆಗಳ ತಜ್ಞರಾಗಿದ್ದವರು ಮಾತ್ರವಲ್ಲ, ರಾಷ್ಟ್ರಪತಿಯವರಿಂದ ಶೌರ್ಯ ಪ್ರಶಸ್ತಿ ಪಡೆದವರು. ಆತ ಹಣಕ್ಕಾಗಿ ಉಗ್ರಗಾಮಿಗಳ ಸಾಗಾಟಗಾರನಾಗಿ ಕೆಲಸ ಮಾಡುತ್ತಿದ್ದುದು ಪ್ರಾಥಮಿಕ ತನಿಖೆಯಿಂದ ವ್ಯಕ್ತವಾಗಿದೆ. ಆದರೂ, ಈ ಸ್ವಯಂಘೋಷಿತ ರಾಷ್ಟ್ರೀಯವಾದಿ ಟಿವಿಗಳಿಗೆ ಇದೊಂದು ದೊಡ್ಡ ಸುದ್ದಿಯಾಗಿ ಕಾಣಲೇ ಇಲ್ಲ.

ಈ ವಿಷಯ ಇನ್ನಷ್ಟು ಗಂಭೀರವಾಗಿರುವುದಕ್ಕೆ ಕಾರಣವೆಂದರೆ, ಸಂಸತ್ ಮೇಲಿನ ದಾಳಿಗಾಗಿ ಮರಣದಂಡನೆಗೆ ಗುರಿಯಾದ ಅಫ್ಜಲ್ ಗುರು, 2004ರಲ್ಲಿ ತಿಹಾರ್ ಜೈಲಿನಿಂದ ತನ್ನ ವಕೀಲ ಸುಶೀಲ್ ಕುಮಾರ್ ಅವರಿಗೆ ಬರೆದ ಪತ್ರದಲ್ಲಿ ಈ ದೇವಿಂದರ್ ಸಿಂಗ್ ಬಗ್ಗೆ ಉಲ್ಲೇಖವಿದೆ. ದಾಳಿಕೋರರಿಗೆ ಕಾರು ಮತ್ತು ಉಳಿದುಕೊಳ್ಳಲು ವ್ಯವಸ್ಥೆ ಮಾಡುವಂತೆ ಸಿಂಗ್ ತನ್ನನ್ನು ಕೇಳಿಕೊಂಡದ್ದಾಗಿ ಈ ಪತ್ರದಲ್ಲಿ ಆರೋಪಿಸಲಾಗಿತ್ತು. ನಂತರ ತಾನು ಅಫ್ಜಲ್ ಗುರುವಿಗೆ ಚಿತ್ರಹಿಂಸೆ ನೀಡಿರುವುದಾಗಿ ಸಿಂಗ್ ಒಪ್ಪಿಕೊಂಡಿದ್ದರು.

ಈಗ, 2020ರಲ್ಲಿ ಗಣರಾಜ್ಯೋತ್ಸವದಂದು ದಿಲ್ಲಿಯಲ್ಲಿ ದಾಳಿ ನಡೆಸಲು ಹೋಗುತ್ತಿದ್ದರು ಎನ್ನಲಾದ ಇಬ್ಬರು ಉಗ್ರಗಾಮಿಗಳ ಜೊತೆ ಸಿಂಗ್ ಬಂಧಿತರಾಗಿದ್ದಾರೆ. ಸಾಮಾನ್ಯವಾಗಿ ಇಂತಹಾ ಮಹತ್ವದ ಸುದ್ದಿ ಹೆಚ್ಚಿನ ಸುದ್ದಿ ಚಾನೆಲ್‌ಗಳಲ್ಲಿ ಪ್ರಮುಖ ಸುದ್ದಿಯಾಗಿ ಬರುತ್ತಿತ್ತು. ನಾಗರಿಕ ತಿದ್ದುಪಡಿ ಕಾಯಿದೆಯನ್ನು ವಿರೋಧಿಸುವ ವಿದ್ಯಾರ್ಥಿಗಳನ್ನು ಮತ್ತು ಇತರರನ್ನು ಖಂಡಿಸಲು ಆದನ್ನು ಬಳಸಲಾಗುತ್ತಿತ್ತು. ‘ರಾಷ್ಟ್ರೀಯವಾದಿ’ ಟಿವಿ ನಿರೂಪಕರು “ಭಾರತದ ಮೇಲೆ ದಾಳಿ ಮಾಡಲು ಬರುತ್ತಿದ್ದ ಭಯೋತ್ಪಾದಕರ ಬಂಧನ! ಕನ್ನಯ್ಯ ಕುಮಾರ್ ಏನು ಹೇಳುತ್ತಾರೆ? ಅವರನ್ನು ಬೆಂಬಲಿಸುತ್ತಾರೊ?” ಎಂದು ಕಿರುಚಾಡುವುದನ್ನು ಊಹಿಸಬಹುದಿತ್ತು.

ವಿಚಿತ್ರವೆಂದರೆ, ಇಂತಹಾ ಕೋಡಂಗಿಯಾಟ ಈ ತನಕ ಈ ಸುದ್ದಿಯ  ಬಗ್ಗೆ ಕಂಡುಬಂದಿಲ್ಲ. ಸ್ವಯಂಘೋಷಿತ ರಾಷ್ಟ್ರೀಯವಾದಿ ಟಿವಿ ನಿರೂಪಕರು ಈ ಸುದ್ದಿಯನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. ‘ಟೈಮ್ಸ್ ನೌ’ನಲ್ಲಿ ಅರ್ನಾಬ್ ಗೋಸ್ವಾಮಿಯ ಶಿಷ್ಯರಾದ ನವಿಕಾ ಕುಮಾರ್ ಮತ್ತು ಅರ್ನಾಬ್‌ವಾದಿ ರಾಹುಲ್ ಶಿವ ಶಂಕರ್ (ಆರೆಸ್ಸೆಸ್) ಜಾಮಿಯಾದಲ್ಲಿ ನಡೆಯುತ್ತಿರುವ “ಆತಂಕಕಾರಿ” ಪ್ರತಿಭಟನೆಗಳ ಬಗ್ಗೆ ಕಿರುಚಾಡುತ್ತಾ, ಅದಕ್ಕೆ ಸಂಪೂರ್ಣವಾಗಿ ಇಸ್ಲಾಮಿಕ್ ಬಣ್ಣ ಬಳಿದುಬಿಟ್ಟಿದ್ದಾರೆ. ಅದಕ್ಕೆ ಆರೆಸ್ಸೆಸ್ ನೀಡಿರುವ ಸಾಕ್ಷ್ಯವಾದರೂ ಏನು? ವಾಸ್ತವವಾಗಿ ಅಲ್ಲಿ ಕೂಗಲಾದ ಘೋಷಣೆಯನ್ನು ಶಿವ ಶಂಕರ್ “ಇಸ್ಲಾಮಿಕ್” ಎಂದು ಬಣ್ಣಿಸಿದ್ದರು.

ಇನ್ನು ರಿಪಬ್ಲಿಕ್ ಟಿವಿಯಲ್ಲಿ ಅರ್ನಾಬ್ ಗೋಸ್ವಾಮಿ ಮೂರು ಭಯಂಕರ ಚರ್ಚೆಗಳನ್ನು ನಡೆಸಿ,  ಫೇಸ್‌ಬುಕ್‌ನಲ್ಲಿ #CantStopRepublic #AzadiHypocrisy and #CongressVsBharat ಮುಂತಾದ ಹ್ಯಾಷ್‌ಟ್ಯಾಗ್‌ಗಳನ್ನು ಹಾಕಿದ್ದರು. ಆದರೆ, ದೇವಿಂದರ್ ಸಿಂಗ್ ಬಗ್ಗೆ ಏನೂ ಇರಲಿಲ್ಲ ಎಂದು ಬೇರೆ ಹೇಳಬೇಕಾಗಿಲ್ಲ. ಕಾಶ್ಮೀರದಲ್ಲಿ ಭಯೋದ್ಪಾದಕ ದಾಳಿಯನ್ನು ವಿಫಲಗೊಳಿಸಿದ ಬಗ್ಗೆ ಏನೇನೂ ಇಲ್ಲ!

‘ಇಂಡಿಯಾ ಟುಡೆ’ಯ ನಿರೂಪಕ ಶಿವ ಆರೂರ್ ತನ್ನ ಶೋ ‘ ಇಂಡಿಯಾ ಫಸ್ಟ್’ನಲ್ಲಿ ಈ ಸುದ್ದಿಯ ವಿವರ ನೀಡಿ, ‘ರಾ’ಮತ್ತು ‘ಐಬಿ’ಯಂತಹ ಗುಪ್ತಚರ ಸಂಸ್ಥೆಗಳು ಬಂಧಿತ ಪೊಲೀಸ್ ಅಧಿಕಾರಿಯ ವಿಚಾರಣೆ ನಡೆಸಲಿರುವುದಾಗಿ ತಿಳಿಸಿದ್ದರು. ಆದರೆ, ಚಾನೆಲ್‌ನ ಸ್ವಯಂಘೋಷಿತ ‘ಆರ್ಮಿ ಕಮಾಂಡೊ’ ಗೌರವ್ ಸಾವಂತ್ ನಾಪತ್ತೆಯಾಗಿದ್ದರು. ಅವರು ಟ್ವಿಟರ್‌ನಲ್ಲಿ ಪಾಕಿಸ್ತಾನದ ಯಾವುದೋ ಮಂತ್ರಿಯನ್ನು ಟ್ರೋಲ್ ಮಾಡಿದ್ದು ಕಂಡುಬಂತು. ಇಂಡಿಯಾ ಟುಡೆಯ “ಸಮರ ಭೂಮಿ”ಯಲ್ಲಿ ಸಾವಂತ್ ಗೆಳೆಯನಾದ ರಾಹುಲ್ ಕನ್ವಲ್ ತನ್ನ ಶೋ “ನ್ಯೂಸ್ ಟ್ರ್ಯಾಕ್‌”ನಲ್ಲಿ ಯಾವುದೋ “ಜೆಎನ್‌ಯು ತಪ್ಪೊಪ್ಪಿಗೆ” ಟೇಪನ್ನು ನುಡಿಸುತ್ತಿದ್ದರು.

ಝೀ ಟಿವಿಯ ಭಾರತ ವಿರೋಧಿಗಳ ವಿರೋಧಿ ಸ್ವಯಂಘೋಷಿತ ಯೋಧ ಸುಧೀರ್ ಚೌಧರಿ, ಜೆಎನ್‌ಯು ವಿದ್ಯಾರ್ಥಿಗಳ “ಡಿಎನ್‌ಎ ಪರೀಕ್ಷೆ” ಮಾಡುತ್ತಾ, ಪೂರಿಗಳ ಚಿತ್ರಹಾಕುತ್ತಾ  ಉಪವಾಸ ಇರುವುದರ ಲಾಭಗಳ ಬಗ್ಗೆ ಚರ್ಚೆ ನಡೆಸುತ್ತಾ ಕುಳಿತಿದ್ದರು.

ಎಬಿಪಿ ನ್ಯೂಸ್‌ನ ರುಬಿಕಾ, “ಭಾರತದದ ಅತ್ಯಂತ ದೊಡ್ಡ ಶತ್ರು”- ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಕುರಿತು ಚರ್ಚಿಸುತ್ತಿದ್ದರು. ಅವರಿಗೆ ವಿಫಲಗೊಳಿಸಲಾದ ಭಯೋತ್ಪಾದಕ ದಾಳಿಗಿಂತ ಜಾಮಿಯಾದ ವಿದ್ಯಾರ್ಥಿಗಳು ಮತ್ತು ಉಪಕುಲಪತಿ ನಡುವಿನ ವಾಗ್ವಾದ ಮುಖ್ಯವಾಗಿತ್ತು. ರುಬಿಕಾರ ಅರೆ ಸಹೋದರಿ ಅಂಜನಾ ಓಂ ಕಷ್ಯಪ್ ಕ್ಯಾಂಪಸ್‌ಗಳ ಎಡ-ಬಲ ಕಾದಾಟದಲ್ಲಿ ಯಾರು ಸರಿ ಎಂದು ಚರ್ಚಿಸುತ್ತಿದ್ದರು.

ಇಲ್ಲಿ ಒಂದು ವಿನ್ಯಾಸ ಕಾಣುತ್ತಿದೆಯೆ? ಈ ಎಲ್ಲಾ ರಾಷ್ಟ್ರೀಯವಾದಿಗಳು ದೇಶದ ಮೇಲೆ ನಡೆಯಲುದ್ದೇಶಿಸಿದ್ದ ಭಯೋತ್ಪಾದಕ ದಾಳಿಯ ಕುರಿತು ಚರ್ಚಿಸಲಿಲ್ಲ. ಅವರಿಗೆ ಪ್ರತಿಭಟನಾನಿರತ ವಿದ್ಯಾರ್ಥಿಗಳೇ ದೊಡ್ಡ ಶತ್ರುಗಳಂತೆ ಕಂಡರು.

ಇದೀಗ ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಕಾಂಗ್ರೆಸ್ ಮೇಲೆ ವಾಗ್ದಾಳಿ ಮಾಡಲು ಸುದ್ದಿಗೋಷ್ಟಿ ನಡೆಸಿದ ಬಳಿಕ ಟೈಮ್ಸ್ ನೌ ಮತ್ತು ರಿಪಬ್ಲಿಕ್ ಟಿವಿ ಕೊನೆಗೂ ಈ ಸುದ್ದಿ ಬಗ್ಗೆ ಎಚ್ಚರಗೊಂಡಿವೆ. ಗಂಟೆಗಟ್ಟಲೆ ಕಾಲ ಪ್ರೈಮ್ ಟೈಮ್‌ನಲ್ಲಿ ಕಾಂಗ್ರೆಸ್ ಮತ್ತು ಇತರ ಪ್ರತಿಪಕ್ಷಗಳು ಪಾಕಿಸ್ತಾನದ ಪರವಾಗಿವೆ ಎಂದು ಕಿರಿಚಾಡುವುದರಲ್ಲೇ ಪ್ರಮುಖ ಚಾನೆಲ್‌ಗಳು ಕಾಲಕಳೆಯುತ್ತಿವೆ. ಈ ಗದ್ದಲದ ನಡುವೆ ಭಯೋತ್ಪಾದಕರ ಜೊತೆ ಈ ಪೊಲೀಸ್ ಅಧಿಕಾರಿಗೆ ಏನು ಕೆಲಸ ಎಂದು ಕೇಳುವುದನ್ನು ನಾವೆಲ್ಲರೂ ಮರೆತೇಬಿಡುತ್ತೇವೆ!

ಕೃಪೆ: ನ್ಯೂಸ್‌ಲಾಂಡ್ರಿ

ಅನುವಾದ: ನಿಖಿಲ್ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...