Homeಮುಖಪುಟಭಯೋತ್ಪಾದಕರೊಂದಿಗೆ ಸಿಕ್ಕಿಬಿದ್ದ ಪೊಲೀಸ್‌ ಅಧಿಕಾರಿ ದೇವಿಂದರ್ ಸಿಂಗ್ ಕುರಿತು ರಾಷ್ಟ್ರೀಯವಾದಿ ಟಿವಿಗಳ ವಿಚಿತ್ರ ಮೌನ!

ಭಯೋತ್ಪಾದಕರೊಂದಿಗೆ ಸಿಕ್ಕಿಬಿದ್ದ ಪೊಲೀಸ್‌ ಅಧಿಕಾರಿ ದೇವಿಂದರ್ ಸಿಂಗ್ ಕುರಿತು ರಾಷ್ಟ್ರೀಯವಾದಿ ಟಿವಿಗಳ ವಿಚಿತ್ರ ಮೌನ!

ಅರ್ನಾಬ್ ಗೋಸ್ವಾಮಿಯಿಂದ ಹಿಡಿದು ಸುಧೀರ್ ಚೌಧರಿಯ ತನಕ ಸ್ವಯಂಘೋಷಿತ ರಾಷ್ಟ್ರೀಯವಾದಿ ಟಿವಿ ನಿರೂಪಕರೆಲ್ಲಾ ಭಯೋತ್ಪಾದಕ ದಾಳಿಯನ್ನು ಯೋಜಿಸುತ್ತಿದ್ದರೆನ್ನಲಾದ ಉಗ್ರಗಾಮಿಗಳ ಜೊತೆ ಬಂಧಿತನಾದ ಪೊಲೀಸ್ ಅಧಿಕಾರಿಗಿಂತ ಪ್ರತಿಭಟನಾನಿರತ ವಿದ್ಯಾರ್ಥಿಗಳ ಬಗ್ಗೆಯೇ ಹೆಚ್ಚು ಆತಂಕ ಹೊಂದಿರುವಂತಿದೆ.

- Advertisement -
- Advertisement -

ಕಾಶ್ಮೀರದಿಂದ ಇತ್ತೀಚಿನ ದಿನಗಳಲ್ಲಿ ಹೊರಬಂದ ಅತ್ಯಂತ ರೋಚಕ ಸುದ್ದಿಯೊಂದರ ಪ್ರಕಾರ, ಪೊಲೀಸ್ ಉನ್ನತಾಧಿಕಾರಿಯೊಬ್ಬರನ್ನು ಇಬ್ಬರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರಗಾಮಿಗಳ ಜೊತೆಯಲ್ಲಿ ಬಂಧಿಸಲಾಗಿದ್ದು, ಇವರಲ್ಲಿ ಒಬ್ಬಾತ ವಲಸೆ ಕಾರ್ಮಿಕರ ಕೊಲೆಗಳ ಆರೋಪದಲ್ಲಿ ಪೊಲೀಸರಿಗೆ ಬೇಕಾಗಿದ್ದವನು. ಹೀಗೆ ಬಂಧಿತನಾದ ದೇವಿಂದರ್ ಸಿಂಗ್ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಇಲಾಖೆಯಲ್ಲಿ ಡೆಪ್ಯುಟಿ ಸುಪರಿಂಟೆಂಟ್ ಆಗಿದ್ದು, ಎರಡು ದಶಕಗಳ ಕಾಲ ಭಯೋತ್ಪಾದಕ ವಿರೋಧಿ ಕಾರ್ಯಾಚರಣೆಗಳ ತಜ್ಞರಾಗಿದ್ದವರು ಮಾತ್ರವಲ್ಲ, ರಾಷ್ಟ್ರಪತಿಯವರಿಂದ ಶೌರ್ಯ ಪ್ರಶಸ್ತಿ ಪಡೆದವರು. ಆತ ಹಣಕ್ಕಾಗಿ ಉಗ್ರಗಾಮಿಗಳ ಸಾಗಾಟಗಾರನಾಗಿ ಕೆಲಸ ಮಾಡುತ್ತಿದ್ದುದು ಪ್ರಾಥಮಿಕ ತನಿಖೆಯಿಂದ ವ್ಯಕ್ತವಾಗಿದೆ. ಆದರೂ, ಈ ಸ್ವಯಂಘೋಷಿತ ರಾಷ್ಟ್ರೀಯವಾದಿ ಟಿವಿಗಳಿಗೆ ಇದೊಂದು ದೊಡ್ಡ ಸುದ್ದಿಯಾಗಿ ಕಾಣಲೇ ಇಲ್ಲ.

ಈ ವಿಷಯ ಇನ್ನಷ್ಟು ಗಂಭೀರವಾಗಿರುವುದಕ್ಕೆ ಕಾರಣವೆಂದರೆ, ಸಂಸತ್ ಮೇಲಿನ ದಾಳಿಗಾಗಿ ಮರಣದಂಡನೆಗೆ ಗುರಿಯಾದ ಅಫ್ಜಲ್ ಗುರು, 2004ರಲ್ಲಿ ತಿಹಾರ್ ಜೈಲಿನಿಂದ ತನ್ನ ವಕೀಲ ಸುಶೀಲ್ ಕುಮಾರ್ ಅವರಿಗೆ ಬರೆದ ಪತ್ರದಲ್ಲಿ ಈ ದೇವಿಂದರ್ ಸಿಂಗ್ ಬಗ್ಗೆ ಉಲ್ಲೇಖವಿದೆ. ದಾಳಿಕೋರರಿಗೆ ಕಾರು ಮತ್ತು ಉಳಿದುಕೊಳ್ಳಲು ವ್ಯವಸ್ಥೆ ಮಾಡುವಂತೆ ಸಿಂಗ್ ತನ್ನನ್ನು ಕೇಳಿಕೊಂಡದ್ದಾಗಿ ಈ ಪತ್ರದಲ್ಲಿ ಆರೋಪಿಸಲಾಗಿತ್ತು. ನಂತರ ತಾನು ಅಫ್ಜಲ್ ಗುರುವಿಗೆ ಚಿತ್ರಹಿಂಸೆ ನೀಡಿರುವುದಾಗಿ ಸಿಂಗ್ ಒಪ್ಪಿಕೊಂಡಿದ್ದರು.

ಈಗ, 2020ರಲ್ಲಿ ಗಣರಾಜ್ಯೋತ್ಸವದಂದು ದಿಲ್ಲಿಯಲ್ಲಿ ದಾಳಿ ನಡೆಸಲು ಹೋಗುತ್ತಿದ್ದರು ಎನ್ನಲಾದ ಇಬ್ಬರು ಉಗ್ರಗಾಮಿಗಳ ಜೊತೆ ಸಿಂಗ್ ಬಂಧಿತರಾಗಿದ್ದಾರೆ. ಸಾಮಾನ್ಯವಾಗಿ ಇಂತಹಾ ಮಹತ್ವದ ಸುದ್ದಿ ಹೆಚ್ಚಿನ ಸುದ್ದಿ ಚಾನೆಲ್‌ಗಳಲ್ಲಿ ಪ್ರಮುಖ ಸುದ್ದಿಯಾಗಿ ಬರುತ್ತಿತ್ತು. ನಾಗರಿಕ ತಿದ್ದುಪಡಿ ಕಾಯಿದೆಯನ್ನು ವಿರೋಧಿಸುವ ವಿದ್ಯಾರ್ಥಿಗಳನ್ನು ಮತ್ತು ಇತರರನ್ನು ಖಂಡಿಸಲು ಆದನ್ನು ಬಳಸಲಾಗುತ್ತಿತ್ತು. ‘ರಾಷ್ಟ್ರೀಯವಾದಿ’ ಟಿವಿ ನಿರೂಪಕರು “ಭಾರತದ ಮೇಲೆ ದಾಳಿ ಮಾಡಲು ಬರುತ್ತಿದ್ದ ಭಯೋತ್ಪಾದಕರ ಬಂಧನ! ಕನ್ನಯ್ಯ ಕುಮಾರ್ ಏನು ಹೇಳುತ್ತಾರೆ? ಅವರನ್ನು ಬೆಂಬಲಿಸುತ್ತಾರೊ?” ಎಂದು ಕಿರುಚಾಡುವುದನ್ನು ಊಹಿಸಬಹುದಿತ್ತು.

ವಿಚಿತ್ರವೆಂದರೆ, ಇಂತಹಾ ಕೋಡಂಗಿಯಾಟ ಈ ತನಕ ಈ ಸುದ್ದಿಯ  ಬಗ್ಗೆ ಕಂಡುಬಂದಿಲ್ಲ. ಸ್ವಯಂಘೋಷಿತ ರಾಷ್ಟ್ರೀಯವಾದಿ ಟಿವಿ ನಿರೂಪಕರು ಈ ಸುದ್ದಿಯನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. ‘ಟೈಮ್ಸ್ ನೌ’ನಲ್ಲಿ ಅರ್ನಾಬ್ ಗೋಸ್ವಾಮಿಯ ಶಿಷ್ಯರಾದ ನವಿಕಾ ಕುಮಾರ್ ಮತ್ತು ಅರ್ನಾಬ್‌ವಾದಿ ರಾಹುಲ್ ಶಿವ ಶಂಕರ್ (ಆರೆಸ್ಸೆಸ್) ಜಾಮಿಯಾದಲ್ಲಿ ನಡೆಯುತ್ತಿರುವ “ಆತಂಕಕಾರಿ” ಪ್ರತಿಭಟನೆಗಳ ಬಗ್ಗೆ ಕಿರುಚಾಡುತ್ತಾ, ಅದಕ್ಕೆ ಸಂಪೂರ್ಣವಾಗಿ ಇಸ್ಲಾಮಿಕ್ ಬಣ್ಣ ಬಳಿದುಬಿಟ್ಟಿದ್ದಾರೆ. ಅದಕ್ಕೆ ಆರೆಸ್ಸೆಸ್ ನೀಡಿರುವ ಸಾಕ್ಷ್ಯವಾದರೂ ಏನು? ವಾಸ್ತವವಾಗಿ ಅಲ್ಲಿ ಕೂಗಲಾದ ಘೋಷಣೆಯನ್ನು ಶಿವ ಶಂಕರ್ “ಇಸ್ಲಾಮಿಕ್” ಎಂದು ಬಣ್ಣಿಸಿದ್ದರು.

ಇನ್ನು ರಿಪಬ್ಲಿಕ್ ಟಿವಿಯಲ್ಲಿ ಅರ್ನಾಬ್ ಗೋಸ್ವಾಮಿ ಮೂರು ಭಯಂಕರ ಚರ್ಚೆಗಳನ್ನು ನಡೆಸಿ,  ಫೇಸ್‌ಬುಕ್‌ನಲ್ಲಿ #CantStopRepublic #AzadiHypocrisy and #CongressVsBharat ಮುಂತಾದ ಹ್ಯಾಷ್‌ಟ್ಯಾಗ್‌ಗಳನ್ನು ಹಾಕಿದ್ದರು. ಆದರೆ, ದೇವಿಂದರ್ ಸಿಂಗ್ ಬಗ್ಗೆ ಏನೂ ಇರಲಿಲ್ಲ ಎಂದು ಬೇರೆ ಹೇಳಬೇಕಾಗಿಲ್ಲ. ಕಾಶ್ಮೀರದಲ್ಲಿ ಭಯೋದ್ಪಾದಕ ದಾಳಿಯನ್ನು ವಿಫಲಗೊಳಿಸಿದ ಬಗ್ಗೆ ಏನೇನೂ ಇಲ್ಲ!

‘ಇಂಡಿಯಾ ಟುಡೆ’ಯ ನಿರೂಪಕ ಶಿವ ಆರೂರ್ ತನ್ನ ಶೋ ‘ ಇಂಡಿಯಾ ಫಸ್ಟ್’ನಲ್ಲಿ ಈ ಸುದ್ದಿಯ ವಿವರ ನೀಡಿ, ‘ರಾ’ಮತ್ತು ‘ಐಬಿ’ಯಂತಹ ಗುಪ್ತಚರ ಸಂಸ್ಥೆಗಳು ಬಂಧಿತ ಪೊಲೀಸ್ ಅಧಿಕಾರಿಯ ವಿಚಾರಣೆ ನಡೆಸಲಿರುವುದಾಗಿ ತಿಳಿಸಿದ್ದರು. ಆದರೆ, ಚಾನೆಲ್‌ನ ಸ್ವಯಂಘೋಷಿತ ‘ಆರ್ಮಿ ಕಮಾಂಡೊ’ ಗೌರವ್ ಸಾವಂತ್ ನಾಪತ್ತೆಯಾಗಿದ್ದರು. ಅವರು ಟ್ವಿಟರ್‌ನಲ್ಲಿ ಪಾಕಿಸ್ತಾನದ ಯಾವುದೋ ಮಂತ್ರಿಯನ್ನು ಟ್ರೋಲ್ ಮಾಡಿದ್ದು ಕಂಡುಬಂತು. ಇಂಡಿಯಾ ಟುಡೆಯ “ಸಮರ ಭೂಮಿ”ಯಲ್ಲಿ ಸಾವಂತ್ ಗೆಳೆಯನಾದ ರಾಹುಲ್ ಕನ್ವಲ್ ತನ್ನ ಶೋ “ನ್ಯೂಸ್ ಟ್ರ್ಯಾಕ್‌”ನಲ್ಲಿ ಯಾವುದೋ “ಜೆಎನ್‌ಯು ತಪ್ಪೊಪ್ಪಿಗೆ” ಟೇಪನ್ನು ನುಡಿಸುತ್ತಿದ್ದರು.

ಝೀ ಟಿವಿಯ ಭಾರತ ವಿರೋಧಿಗಳ ವಿರೋಧಿ ಸ್ವಯಂಘೋಷಿತ ಯೋಧ ಸುಧೀರ್ ಚೌಧರಿ, ಜೆಎನ್‌ಯು ವಿದ್ಯಾರ್ಥಿಗಳ “ಡಿಎನ್‌ಎ ಪರೀಕ್ಷೆ” ಮಾಡುತ್ತಾ, ಪೂರಿಗಳ ಚಿತ್ರಹಾಕುತ್ತಾ  ಉಪವಾಸ ಇರುವುದರ ಲಾಭಗಳ ಬಗ್ಗೆ ಚರ್ಚೆ ನಡೆಸುತ್ತಾ ಕುಳಿತಿದ್ದರು.

ಎಬಿಪಿ ನ್ಯೂಸ್‌ನ ರುಬಿಕಾ, “ಭಾರತದದ ಅತ್ಯಂತ ದೊಡ್ಡ ಶತ್ರು”- ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಕುರಿತು ಚರ್ಚಿಸುತ್ತಿದ್ದರು. ಅವರಿಗೆ ವಿಫಲಗೊಳಿಸಲಾದ ಭಯೋತ್ಪಾದಕ ದಾಳಿಗಿಂತ ಜಾಮಿಯಾದ ವಿದ್ಯಾರ್ಥಿಗಳು ಮತ್ತು ಉಪಕುಲಪತಿ ನಡುವಿನ ವಾಗ್ವಾದ ಮುಖ್ಯವಾಗಿತ್ತು. ರುಬಿಕಾರ ಅರೆ ಸಹೋದರಿ ಅಂಜನಾ ಓಂ ಕಷ್ಯಪ್ ಕ್ಯಾಂಪಸ್‌ಗಳ ಎಡ-ಬಲ ಕಾದಾಟದಲ್ಲಿ ಯಾರು ಸರಿ ಎಂದು ಚರ್ಚಿಸುತ್ತಿದ್ದರು.

ಇಲ್ಲಿ ಒಂದು ವಿನ್ಯಾಸ ಕಾಣುತ್ತಿದೆಯೆ? ಈ ಎಲ್ಲಾ ರಾಷ್ಟ್ರೀಯವಾದಿಗಳು ದೇಶದ ಮೇಲೆ ನಡೆಯಲುದ್ದೇಶಿಸಿದ್ದ ಭಯೋತ್ಪಾದಕ ದಾಳಿಯ ಕುರಿತು ಚರ್ಚಿಸಲಿಲ್ಲ. ಅವರಿಗೆ ಪ್ರತಿಭಟನಾನಿರತ ವಿದ್ಯಾರ್ಥಿಗಳೇ ದೊಡ್ಡ ಶತ್ರುಗಳಂತೆ ಕಂಡರು.

ಇದೀಗ ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಕಾಂಗ್ರೆಸ್ ಮೇಲೆ ವಾಗ್ದಾಳಿ ಮಾಡಲು ಸುದ್ದಿಗೋಷ್ಟಿ ನಡೆಸಿದ ಬಳಿಕ ಟೈಮ್ಸ್ ನೌ ಮತ್ತು ರಿಪಬ್ಲಿಕ್ ಟಿವಿ ಕೊನೆಗೂ ಈ ಸುದ್ದಿ ಬಗ್ಗೆ ಎಚ್ಚರಗೊಂಡಿವೆ. ಗಂಟೆಗಟ್ಟಲೆ ಕಾಲ ಪ್ರೈಮ್ ಟೈಮ್‌ನಲ್ಲಿ ಕಾಂಗ್ರೆಸ್ ಮತ್ತು ಇತರ ಪ್ರತಿಪಕ್ಷಗಳು ಪಾಕಿಸ್ತಾನದ ಪರವಾಗಿವೆ ಎಂದು ಕಿರಿಚಾಡುವುದರಲ್ಲೇ ಪ್ರಮುಖ ಚಾನೆಲ್‌ಗಳು ಕಾಲಕಳೆಯುತ್ತಿವೆ. ಈ ಗದ್ದಲದ ನಡುವೆ ಭಯೋತ್ಪಾದಕರ ಜೊತೆ ಈ ಪೊಲೀಸ್ ಅಧಿಕಾರಿಗೆ ಏನು ಕೆಲಸ ಎಂದು ಕೇಳುವುದನ್ನು ನಾವೆಲ್ಲರೂ ಮರೆತೇಬಿಡುತ್ತೇವೆ!

ಕೃಪೆ: ನ್ಯೂಸ್‌ಲಾಂಡ್ರಿ

ಅನುವಾದ: ನಿಖಿಲ್ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...