Homeಅಂತರಾಷ್ಟ್ರೀಯಅಪ್ಲಿಕೇಶನ್‌ಗಳ ನಿಷೇಧದ ನಂತರ ಹೊಸ ವ್ಯಾಪಾರ ನಿರ್ಬಂಧಗಳನ್ನು ಹೇರಿದ ಭಾರತ

ಅಪ್ಲಿಕೇಶನ್‌ಗಳ ನಿಷೇಧದ ನಂತರ ಹೊಸ ವ್ಯಾಪಾರ ನಿರ್ಬಂಧಗಳನ್ನು ಹೇರಿದ ಭಾರತ

ಭಾರತದೊಂದಿಗೆ ಭೂ ಗಡಿಯನ್ನು ಹಂಚಿಕೊಳ್ಳುವ ರಾಷ್ಟ್ರಗಳ ಕಂಪೆನಿಗಳು ಕೈಗಾರಿಕಾ ಇಲಾಖೆಯಲ್ಲಿ ನೋಂದಾಯಿಸುವವರೆಗೆ ಸರಕು ಮತ್ತು ಸೇವೆಗಳಿಗಾಗಿ ಸರ್ಕಾರದ ಒಪ್ಪಂದಗಳಿಗೆ ಬಿಡ್ಡಿಂಗ್ ಮಾಡುವುದನ್ನು ನಿರ್ಬಂಧಿಸಲಾಗಿದೆ.

- Advertisement -
- Advertisement -

ಗಡಿ ಸಂಘರ್ಷದ ನಂತರ ಚೀನಾದೊಟ್ಟಿಗಿನ ವ್ಯವಹಾರಗಳನ್ನು ಹೊರಗಿಡುವುದು ಮತ್ತು ಉಭಯ ರಾಷ್ಟ್ರಗಳ ನಡುವಿನ ಆರ್ಥಿಕ ಸಂಬಂಧಗಳನ್ನು ಶಿಥಿಲಗೊಳಿಸುವ ಉದ್ದೇಶದಿಂದ ಭಾರತ ತನ್ನ ನೆರೆಹೊರೆ ದೇಶಗಳ ಮೇಲೆ ಹೊಸ ವ್ಯಾಪಾರ ನಿರ್ಬಂಧಗಳನ್ನು ಹೇರಿದೆ.

ಭಾರತದೊಂದಿಗೆ ಭೂ ಗಡಿಯನ್ನು ಹಂಚಿಕೊಳ್ಳುವ ರಾಷ್ಟ್ರಗಳ ಕಂಪೆನಿಗಳು ಕೈಗಾರಿಕಾ ಇಲಾಖೆಯಲ್ಲಿ ನೋಂದಾಯಿಸುವವರೆಗೆ ಸರಕು ಮತ್ತು ಸೇವೆಗಳಿಗಾಗಿ ಸರ್ಕಾರದ ಒಪ್ಪಂದಗಳಿಗೆ ಬಿಡ್ಡಿಂಗ್ ಮಾಡುವುದನ್ನು ನಿರ್ಬಂಧಿಸಲಾಗಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ. ಈ ಹಿಂದೆ, ಟೆಂಡರ್‌ಗಳಿಗೆ ಬಿಡ್ಡಿಂಗ್ ಮಾಡುವಾಗ ಸರಬರಾಜುದಾರರು ಸರ್ಕಾರದ ಇ-ಮಾರ್ಕೆಟ್ ‌ಪ್ಲೇಸ್‌ನಲ್ಲಿ ಮೂಲದ ದೇಶವನ್ನು ನಮೂದಿಸುವುದನ್ನು ಕಡ್ಡಾಯಗೊಳಿಸಿದ್ದರು.

ಭಾರತದ ಚೀನಾ ಅವಲಂಬನೆಯನ್ನು ಮುಕ್ತಗೊಳಿಸಲು ಕೇಂದ್ರ ಸರ್ಕಾರ ಕೈಗೊಂಡ ಕ್ರಮಗಳ ಸರಣಿಯಲ್ಲಿ ಈ ಕ್ರಮವು ಇತ್ತೀಚಿನದ್ದಾಗಿದೆ. ಇದಕ್ಕೂ ಮೊದಲು ಸರ್ಕಾರವು 59 ಚೀನೀ ಆ್ಯಪ್‌ಗಳ ಬಳಕೆಯನ್ನು ನಿಷೇಧಿಸಿತ್ತು.

ಗಡಿ ಸಂಘರ್ಷವನ್ನು ತಗ್ಗಿಸಲು ಎರಡೂ ರಾಷ್ಟ್ರಗಳು ಮಾತುಕತೆಗಳಲ್ಲಿ ತೊಡಗಿರುವ ಈ ಸಮಯದಲ್ಲಿ ಭಾರತ ಸರ್ಕಾರ ಇಂತಹ ನಿರ್ಧಾರವನ್ನು ಕೈಗೊಂಡಿದೆ. ವಾಸ್ತವಿಕ ನಿಯಂತ್ರಣ ರೇಖೆಯ ಉದ್ದಕ್ಕೂ ಸೈನಿಕರ ನಿಯೋಜನೆಯನ್ನು ಪೂರ್ಣಗೊಳಿಸುವಲ್ಲಿ ಚೀನಾದ ಕಡೆಯವರು ಪ್ರಾಮಾಣಿಕರಾಗಿರುತ್ತಾರೆ ಎಂದು ನಿರೀಕ್ಷಿಸಲಾಗಿದೆ ಎಂದು ಭಾರತ ಗುರುವಾರ ಹೇಳಿದೆ.

ಇತ್ತೀಚಿನ ನಡೆಯ ಇತರ ಪ್ರಮುಖ ಅಂಶಗಳು:

  • ಡಿಸೆಂಬರ್ 31 ರವರೆಗೆ ಕೊರೊನಾ ವೈದ್ಯಕೀಯ ಸಾಮಗ್ರಿಗಳನ್ನು ಖರೀದಿಸುವುದು ಸೇರಿದಂತೆ ಕೆಲವು ಸಂದರ್ಭಗಳಲ್ಲಿ ನಿಯಮಗಳನ್ನು ಸಡಿಲಿಸಲಾಗಿದೆ.
  • ಎಲ್ಲಾ ಹೊಸ ಟೆಂಡರ್‌ಗಳಿಗೆ ಅನ್ವಯಿಸುವ ಹೊಸ ನಿಯಮಗಳು; ಟೆಂಡರ್‌ಗಳನ್ನು ಈಗಾಗಲೇ ಆಹ್ವಾನಿಸಿರುವ ಸಂದರ್ಭಗಳಲ್ಲಿ, ಅರ್ಹತೆಯ ಮೌಲ್ಯಮಾಪನದ ಆರಂಭಿಕ ಹಂತವು ಪೂರ್ಣಗೊಳ್ಳದಿದ್ದರೆ, ನೋಂದಾಯಿಸದ ಬಿಡ್‌ದಾರರು ಅರ್ಹತೆ ಪಡೆಯುವುದಿಲ್ಲ.
  • ಭಾರತದೊಂದಿಗೆ ಭೂ ಗಡಿಯನ್ನು ಹಂಚಿಕೊಳ್ಳುವ ರಾಷ್ಟ್ರಗಳಿಂದ ನೋಂದಾಯಿಸದ ಘಟಕಗಳಿಗೆ ಉಪ ಗುತ್ತಿಗೆ ನೀಡಲು ಕೂಡಾ ಗುತ್ತಿಗೆದಾರರಿಗೆ ಅವಕಾಶವಿರುವುದಿಲ್ಲ.
  • ಮೊದಲ ಹಂತದ ಮೌಲ್ಯಮಾಪನ ಪೂರ್ಣಗೊಂಡರೆ ಟೆಂಡರ್‌ಗಳನ್ನು ರದ್ದುಗೊಳಿಸಲಾಗುತ್ತದೆ.
  • ಸರ್ಕಾರದಿಂದ ಹಣಕಾಸಿನ ನೆರವು ಪಡೆಯುವ ಸರ್ಕಾರಿ ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳು, ಸರ್ಕಾರಿ ಸಂಸ್ಥೆಗಳು ಹಾಗೂ ಸಾರ್ವಜನಿಕ ಖಾಸಗಿ ಸಹಭಾಗಿತ್ವ ಯೋಜನೆಗಳಿಗೆ ಹೊಸ ನಿಯಮಗಳು ಅನ್ವಯಿಸುತ್ತದೆ.
  • ರಾಜ್ಯ ಸರ್ಕಾರಗಳು ಸಮರ್ಥ ಪ್ರಾಧಿಕಾರವನ್ನು ನೇಮಿಸಿ ಹೊಸ ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಅದಕ್ಕಾಗಿ ರಾಜಕೀಯ ಮತ್ತು ಭದ್ರತಾ ಅನುಮತಿ ಕಡ್ಡಾಯವಾಗಿದೆ.

ಭಾರತ 2019 ರಲ್ಲಿ ಚೀನಾದಿಂದ 70 ಬಿಲಿಯನ್ ಮೌಲ್ಯದ ಸರಕುಗಳನ್ನು ಆಮದು ಮಾಡಿಕೊಂಡಿದ್ದು, ದ್ವಿಪಕ್ಷೀಯ ವ್ಯಾಪಾರ ಕೊರತೆಯ ನಂತರ ಸುಮಾರು 50 ಬಿಲಿಯನ್ ಆಗಿತ್ತು.


ಇದನ್ನೂ ಓದಿ: ಚೀನಾ ಕಂಪೆನಿ ಸಹಿತ 50 ಹೂಡಿಕೆಗಳನ್ನು ಪರಿಶೀಲಿಸುತ್ತಿರುವ ಕೇಂದ್ರ ಸರ್ಕಾರ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...