Homeಅಂತರಾಷ್ಟ್ರೀಯಅಪ್ಲಿಕೇಶನ್‌ಗಳ ನಿಷೇಧದ ನಂತರ ಹೊಸ ವ್ಯಾಪಾರ ನಿರ್ಬಂಧಗಳನ್ನು ಹೇರಿದ ಭಾರತ

ಅಪ್ಲಿಕೇಶನ್‌ಗಳ ನಿಷೇಧದ ನಂತರ ಹೊಸ ವ್ಯಾಪಾರ ನಿರ್ಬಂಧಗಳನ್ನು ಹೇರಿದ ಭಾರತ

ಭಾರತದೊಂದಿಗೆ ಭೂ ಗಡಿಯನ್ನು ಹಂಚಿಕೊಳ್ಳುವ ರಾಷ್ಟ್ರಗಳ ಕಂಪೆನಿಗಳು ಕೈಗಾರಿಕಾ ಇಲಾಖೆಯಲ್ಲಿ ನೋಂದಾಯಿಸುವವರೆಗೆ ಸರಕು ಮತ್ತು ಸೇವೆಗಳಿಗಾಗಿ ಸರ್ಕಾರದ ಒಪ್ಪಂದಗಳಿಗೆ ಬಿಡ್ಡಿಂಗ್ ಮಾಡುವುದನ್ನು ನಿರ್ಬಂಧಿಸಲಾಗಿದೆ.

- Advertisement -
- Advertisement -

ಗಡಿ ಸಂಘರ್ಷದ ನಂತರ ಚೀನಾದೊಟ್ಟಿಗಿನ ವ್ಯವಹಾರಗಳನ್ನು ಹೊರಗಿಡುವುದು ಮತ್ತು ಉಭಯ ರಾಷ್ಟ್ರಗಳ ನಡುವಿನ ಆರ್ಥಿಕ ಸಂಬಂಧಗಳನ್ನು ಶಿಥಿಲಗೊಳಿಸುವ ಉದ್ದೇಶದಿಂದ ಭಾರತ ತನ್ನ ನೆರೆಹೊರೆ ದೇಶಗಳ ಮೇಲೆ ಹೊಸ ವ್ಯಾಪಾರ ನಿರ್ಬಂಧಗಳನ್ನು ಹೇರಿದೆ.

ಭಾರತದೊಂದಿಗೆ ಭೂ ಗಡಿಯನ್ನು ಹಂಚಿಕೊಳ್ಳುವ ರಾಷ್ಟ್ರಗಳ ಕಂಪೆನಿಗಳು ಕೈಗಾರಿಕಾ ಇಲಾಖೆಯಲ್ಲಿ ನೋಂದಾಯಿಸುವವರೆಗೆ ಸರಕು ಮತ್ತು ಸೇವೆಗಳಿಗಾಗಿ ಸರ್ಕಾರದ ಒಪ್ಪಂದಗಳಿಗೆ ಬಿಡ್ಡಿಂಗ್ ಮಾಡುವುದನ್ನು ನಿರ್ಬಂಧಿಸಲಾಗಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ. ಈ ಹಿಂದೆ, ಟೆಂಡರ್‌ಗಳಿಗೆ ಬಿಡ್ಡಿಂಗ್ ಮಾಡುವಾಗ ಸರಬರಾಜುದಾರರು ಸರ್ಕಾರದ ಇ-ಮಾರ್ಕೆಟ್ ‌ಪ್ಲೇಸ್‌ನಲ್ಲಿ ಮೂಲದ ದೇಶವನ್ನು ನಮೂದಿಸುವುದನ್ನು ಕಡ್ಡಾಯಗೊಳಿಸಿದ್ದರು.

ಭಾರತದ ಚೀನಾ ಅವಲಂಬನೆಯನ್ನು ಮುಕ್ತಗೊಳಿಸಲು ಕೇಂದ್ರ ಸರ್ಕಾರ ಕೈಗೊಂಡ ಕ್ರಮಗಳ ಸರಣಿಯಲ್ಲಿ ಈ ಕ್ರಮವು ಇತ್ತೀಚಿನದ್ದಾಗಿದೆ. ಇದಕ್ಕೂ ಮೊದಲು ಸರ್ಕಾರವು 59 ಚೀನೀ ಆ್ಯಪ್‌ಗಳ ಬಳಕೆಯನ್ನು ನಿಷೇಧಿಸಿತ್ತು.

ಗಡಿ ಸಂಘರ್ಷವನ್ನು ತಗ್ಗಿಸಲು ಎರಡೂ ರಾಷ್ಟ್ರಗಳು ಮಾತುಕತೆಗಳಲ್ಲಿ ತೊಡಗಿರುವ ಈ ಸಮಯದಲ್ಲಿ ಭಾರತ ಸರ್ಕಾರ ಇಂತಹ ನಿರ್ಧಾರವನ್ನು ಕೈಗೊಂಡಿದೆ. ವಾಸ್ತವಿಕ ನಿಯಂತ್ರಣ ರೇಖೆಯ ಉದ್ದಕ್ಕೂ ಸೈನಿಕರ ನಿಯೋಜನೆಯನ್ನು ಪೂರ್ಣಗೊಳಿಸುವಲ್ಲಿ ಚೀನಾದ ಕಡೆಯವರು ಪ್ರಾಮಾಣಿಕರಾಗಿರುತ್ತಾರೆ ಎಂದು ನಿರೀಕ್ಷಿಸಲಾಗಿದೆ ಎಂದು ಭಾರತ ಗುರುವಾರ ಹೇಳಿದೆ.

ಇತ್ತೀಚಿನ ನಡೆಯ ಇತರ ಪ್ರಮುಖ ಅಂಶಗಳು:

  • ಡಿಸೆಂಬರ್ 31 ರವರೆಗೆ ಕೊರೊನಾ ವೈದ್ಯಕೀಯ ಸಾಮಗ್ರಿಗಳನ್ನು ಖರೀದಿಸುವುದು ಸೇರಿದಂತೆ ಕೆಲವು ಸಂದರ್ಭಗಳಲ್ಲಿ ನಿಯಮಗಳನ್ನು ಸಡಿಲಿಸಲಾಗಿದೆ.
  • ಎಲ್ಲಾ ಹೊಸ ಟೆಂಡರ್‌ಗಳಿಗೆ ಅನ್ವಯಿಸುವ ಹೊಸ ನಿಯಮಗಳು; ಟೆಂಡರ್‌ಗಳನ್ನು ಈಗಾಗಲೇ ಆಹ್ವಾನಿಸಿರುವ ಸಂದರ್ಭಗಳಲ್ಲಿ, ಅರ್ಹತೆಯ ಮೌಲ್ಯಮಾಪನದ ಆರಂಭಿಕ ಹಂತವು ಪೂರ್ಣಗೊಳ್ಳದಿದ್ದರೆ, ನೋಂದಾಯಿಸದ ಬಿಡ್‌ದಾರರು ಅರ್ಹತೆ ಪಡೆಯುವುದಿಲ್ಲ.
  • ಭಾರತದೊಂದಿಗೆ ಭೂ ಗಡಿಯನ್ನು ಹಂಚಿಕೊಳ್ಳುವ ರಾಷ್ಟ್ರಗಳಿಂದ ನೋಂದಾಯಿಸದ ಘಟಕಗಳಿಗೆ ಉಪ ಗುತ್ತಿಗೆ ನೀಡಲು ಕೂಡಾ ಗುತ್ತಿಗೆದಾರರಿಗೆ ಅವಕಾಶವಿರುವುದಿಲ್ಲ.
  • ಮೊದಲ ಹಂತದ ಮೌಲ್ಯಮಾಪನ ಪೂರ್ಣಗೊಂಡರೆ ಟೆಂಡರ್‌ಗಳನ್ನು ರದ್ದುಗೊಳಿಸಲಾಗುತ್ತದೆ.
  • ಸರ್ಕಾರದಿಂದ ಹಣಕಾಸಿನ ನೆರವು ಪಡೆಯುವ ಸರ್ಕಾರಿ ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳು, ಸರ್ಕಾರಿ ಸಂಸ್ಥೆಗಳು ಹಾಗೂ ಸಾರ್ವಜನಿಕ ಖಾಸಗಿ ಸಹಭಾಗಿತ್ವ ಯೋಜನೆಗಳಿಗೆ ಹೊಸ ನಿಯಮಗಳು ಅನ್ವಯಿಸುತ್ತದೆ.
  • ರಾಜ್ಯ ಸರ್ಕಾರಗಳು ಸಮರ್ಥ ಪ್ರಾಧಿಕಾರವನ್ನು ನೇಮಿಸಿ ಹೊಸ ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಅದಕ್ಕಾಗಿ ರಾಜಕೀಯ ಮತ್ತು ಭದ್ರತಾ ಅನುಮತಿ ಕಡ್ಡಾಯವಾಗಿದೆ.

ಭಾರತ 2019 ರಲ್ಲಿ ಚೀನಾದಿಂದ 70 ಬಿಲಿಯನ್ ಮೌಲ್ಯದ ಸರಕುಗಳನ್ನು ಆಮದು ಮಾಡಿಕೊಂಡಿದ್ದು, ದ್ವಿಪಕ್ಷೀಯ ವ್ಯಾಪಾರ ಕೊರತೆಯ ನಂತರ ಸುಮಾರು 50 ಬಿಲಿಯನ್ ಆಗಿತ್ತು.


ಇದನ್ನೂ ಓದಿ: ಚೀನಾ ಕಂಪೆನಿ ಸಹಿತ 50 ಹೂಡಿಕೆಗಳನ್ನು ಪರಿಶೀಲಿಸುತ್ತಿರುವ ಕೇಂದ್ರ ಸರ್ಕಾರ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...