Homeಅಂತರಾಷ್ಟ್ರೀಯಅಪ್ಲಿಕೇಶನ್‌ಗಳ ನಿಷೇಧದ ನಂತರ ಹೊಸ ವ್ಯಾಪಾರ ನಿರ್ಬಂಧಗಳನ್ನು ಹೇರಿದ ಭಾರತ

ಅಪ್ಲಿಕೇಶನ್‌ಗಳ ನಿಷೇಧದ ನಂತರ ಹೊಸ ವ್ಯಾಪಾರ ನಿರ್ಬಂಧಗಳನ್ನು ಹೇರಿದ ಭಾರತ

ಭಾರತದೊಂದಿಗೆ ಭೂ ಗಡಿಯನ್ನು ಹಂಚಿಕೊಳ್ಳುವ ರಾಷ್ಟ್ರಗಳ ಕಂಪೆನಿಗಳು ಕೈಗಾರಿಕಾ ಇಲಾಖೆಯಲ್ಲಿ ನೋಂದಾಯಿಸುವವರೆಗೆ ಸರಕು ಮತ್ತು ಸೇವೆಗಳಿಗಾಗಿ ಸರ್ಕಾರದ ಒಪ್ಪಂದಗಳಿಗೆ ಬಿಡ್ಡಿಂಗ್ ಮಾಡುವುದನ್ನು ನಿರ್ಬಂಧಿಸಲಾಗಿದೆ.

- Advertisement -
- Advertisement -

ಗಡಿ ಸಂಘರ್ಷದ ನಂತರ ಚೀನಾದೊಟ್ಟಿಗಿನ ವ್ಯವಹಾರಗಳನ್ನು ಹೊರಗಿಡುವುದು ಮತ್ತು ಉಭಯ ರಾಷ್ಟ್ರಗಳ ನಡುವಿನ ಆರ್ಥಿಕ ಸಂಬಂಧಗಳನ್ನು ಶಿಥಿಲಗೊಳಿಸುವ ಉದ್ದೇಶದಿಂದ ಭಾರತ ತನ್ನ ನೆರೆಹೊರೆ ದೇಶಗಳ ಮೇಲೆ ಹೊಸ ವ್ಯಾಪಾರ ನಿರ್ಬಂಧಗಳನ್ನು ಹೇರಿದೆ.

ಭಾರತದೊಂದಿಗೆ ಭೂ ಗಡಿಯನ್ನು ಹಂಚಿಕೊಳ್ಳುವ ರಾಷ್ಟ್ರಗಳ ಕಂಪೆನಿಗಳು ಕೈಗಾರಿಕಾ ಇಲಾಖೆಯಲ್ಲಿ ನೋಂದಾಯಿಸುವವರೆಗೆ ಸರಕು ಮತ್ತು ಸೇವೆಗಳಿಗಾಗಿ ಸರ್ಕಾರದ ಒಪ್ಪಂದಗಳಿಗೆ ಬಿಡ್ಡಿಂಗ್ ಮಾಡುವುದನ್ನು ನಿರ್ಬಂಧಿಸಲಾಗಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ. ಈ ಹಿಂದೆ, ಟೆಂಡರ್‌ಗಳಿಗೆ ಬಿಡ್ಡಿಂಗ್ ಮಾಡುವಾಗ ಸರಬರಾಜುದಾರರು ಸರ್ಕಾರದ ಇ-ಮಾರ್ಕೆಟ್ ‌ಪ್ಲೇಸ್‌ನಲ್ಲಿ ಮೂಲದ ದೇಶವನ್ನು ನಮೂದಿಸುವುದನ್ನು ಕಡ್ಡಾಯಗೊಳಿಸಿದ್ದರು.

ಭಾರತದ ಚೀನಾ ಅವಲಂಬನೆಯನ್ನು ಮುಕ್ತಗೊಳಿಸಲು ಕೇಂದ್ರ ಸರ್ಕಾರ ಕೈಗೊಂಡ ಕ್ರಮಗಳ ಸರಣಿಯಲ್ಲಿ ಈ ಕ್ರಮವು ಇತ್ತೀಚಿನದ್ದಾಗಿದೆ. ಇದಕ್ಕೂ ಮೊದಲು ಸರ್ಕಾರವು 59 ಚೀನೀ ಆ್ಯಪ್‌ಗಳ ಬಳಕೆಯನ್ನು ನಿಷೇಧಿಸಿತ್ತು.

ಗಡಿ ಸಂಘರ್ಷವನ್ನು ತಗ್ಗಿಸಲು ಎರಡೂ ರಾಷ್ಟ್ರಗಳು ಮಾತುಕತೆಗಳಲ್ಲಿ ತೊಡಗಿರುವ ಈ ಸಮಯದಲ್ಲಿ ಭಾರತ ಸರ್ಕಾರ ಇಂತಹ ನಿರ್ಧಾರವನ್ನು ಕೈಗೊಂಡಿದೆ. ವಾಸ್ತವಿಕ ನಿಯಂತ್ರಣ ರೇಖೆಯ ಉದ್ದಕ್ಕೂ ಸೈನಿಕರ ನಿಯೋಜನೆಯನ್ನು ಪೂರ್ಣಗೊಳಿಸುವಲ್ಲಿ ಚೀನಾದ ಕಡೆಯವರು ಪ್ರಾಮಾಣಿಕರಾಗಿರುತ್ತಾರೆ ಎಂದು ನಿರೀಕ್ಷಿಸಲಾಗಿದೆ ಎಂದು ಭಾರತ ಗುರುವಾರ ಹೇಳಿದೆ.

ಇತ್ತೀಚಿನ ನಡೆಯ ಇತರ ಪ್ರಮುಖ ಅಂಶಗಳು:

  • ಡಿಸೆಂಬರ್ 31 ರವರೆಗೆ ಕೊರೊನಾ ವೈದ್ಯಕೀಯ ಸಾಮಗ್ರಿಗಳನ್ನು ಖರೀದಿಸುವುದು ಸೇರಿದಂತೆ ಕೆಲವು ಸಂದರ್ಭಗಳಲ್ಲಿ ನಿಯಮಗಳನ್ನು ಸಡಿಲಿಸಲಾಗಿದೆ.
  • ಎಲ್ಲಾ ಹೊಸ ಟೆಂಡರ್‌ಗಳಿಗೆ ಅನ್ವಯಿಸುವ ಹೊಸ ನಿಯಮಗಳು; ಟೆಂಡರ್‌ಗಳನ್ನು ಈಗಾಗಲೇ ಆಹ್ವಾನಿಸಿರುವ ಸಂದರ್ಭಗಳಲ್ಲಿ, ಅರ್ಹತೆಯ ಮೌಲ್ಯಮಾಪನದ ಆರಂಭಿಕ ಹಂತವು ಪೂರ್ಣಗೊಳ್ಳದಿದ್ದರೆ, ನೋಂದಾಯಿಸದ ಬಿಡ್‌ದಾರರು ಅರ್ಹತೆ ಪಡೆಯುವುದಿಲ್ಲ.
  • ಭಾರತದೊಂದಿಗೆ ಭೂ ಗಡಿಯನ್ನು ಹಂಚಿಕೊಳ್ಳುವ ರಾಷ್ಟ್ರಗಳಿಂದ ನೋಂದಾಯಿಸದ ಘಟಕಗಳಿಗೆ ಉಪ ಗುತ್ತಿಗೆ ನೀಡಲು ಕೂಡಾ ಗುತ್ತಿಗೆದಾರರಿಗೆ ಅವಕಾಶವಿರುವುದಿಲ್ಲ.
  • ಮೊದಲ ಹಂತದ ಮೌಲ್ಯಮಾಪನ ಪೂರ್ಣಗೊಂಡರೆ ಟೆಂಡರ್‌ಗಳನ್ನು ರದ್ದುಗೊಳಿಸಲಾಗುತ್ತದೆ.
  • ಸರ್ಕಾರದಿಂದ ಹಣಕಾಸಿನ ನೆರವು ಪಡೆಯುವ ಸರ್ಕಾರಿ ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳು, ಸರ್ಕಾರಿ ಸಂಸ್ಥೆಗಳು ಹಾಗೂ ಸಾರ್ವಜನಿಕ ಖಾಸಗಿ ಸಹಭಾಗಿತ್ವ ಯೋಜನೆಗಳಿಗೆ ಹೊಸ ನಿಯಮಗಳು ಅನ್ವಯಿಸುತ್ತದೆ.
  • ರಾಜ್ಯ ಸರ್ಕಾರಗಳು ಸಮರ್ಥ ಪ್ರಾಧಿಕಾರವನ್ನು ನೇಮಿಸಿ ಹೊಸ ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಅದಕ್ಕಾಗಿ ರಾಜಕೀಯ ಮತ್ತು ಭದ್ರತಾ ಅನುಮತಿ ಕಡ್ಡಾಯವಾಗಿದೆ.

ಭಾರತ 2019 ರಲ್ಲಿ ಚೀನಾದಿಂದ 70 ಬಿಲಿಯನ್ ಮೌಲ್ಯದ ಸರಕುಗಳನ್ನು ಆಮದು ಮಾಡಿಕೊಂಡಿದ್ದು, ದ್ವಿಪಕ್ಷೀಯ ವ್ಯಾಪಾರ ಕೊರತೆಯ ನಂತರ ಸುಮಾರು 50 ಬಿಲಿಯನ್ ಆಗಿತ್ತು.


ಇದನ್ನೂ ಓದಿ: ಚೀನಾ ಕಂಪೆನಿ ಸಹಿತ 50 ಹೂಡಿಕೆಗಳನ್ನು ಪರಿಶೀಲಿಸುತ್ತಿರುವ ಕೇಂದ್ರ ಸರ್ಕಾರ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...