Homeಅಂತರಾಷ್ಟ್ರೀಯಅಪ್ಲಿಕೇಶನ್‌ಗಳ ನಿಷೇಧದ ನಂತರ ಹೊಸ ವ್ಯಾಪಾರ ನಿರ್ಬಂಧಗಳನ್ನು ಹೇರಿದ ಭಾರತ

ಅಪ್ಲಿಕೇಶನ್‌ಗಳ ನಿಷೇಧದ ನಂತರ ಹೊಸ ವ್ಯಾಪಾರ ನಿರ್ಬಂಧಗಳನ್ನು ಹೇರಿದ ಭಾರತ

ಭಾರತದೊಂದಿಗೆ ಭೂ ಗಡಿಯನ್ನು ಹಂಚಿಕೊಳ್ಳುವ ರಾಷ್ಟ್ರಗಳ ಕಂಪೆನಿಗಳು ಕೈಗಾರಿಕಾ ಇಲಾಖೆಯಲ್ಲಿ ನೋಂದಾಯಿಸುವವರೆಗೆ ಸರಕು ಮತ್ತು ಸೇವೆಗಳಿಗಾಗಿ ಸರ್ಕಾರದ ಒಪ್ಪಂದಗಳಿಗೆ ಬಿಡ್ಡಿಂಗ್ ಮಾಡುವುದನ್ನು ನಿರ್ಬಂಧಿಸಲಾಗಿದೆ.

- Advertisement -
- Advertisement -

ಗಡಿ ಸಂಘರ್ಷದ ನಂತರ ಚೀನಾದೊಟ್ಟಿಗಿನ ವ್ಯವಹಾರಗಳನ್ನು ಹೊರಗಿಡುವುದು ಮತ್ತು ಉಭಯ ರಾಷ್ಟ್ರಗಳ ನಡುವಿನ ಆರ್ಥಿಕ ಸಂಬಂಧಗಳನ್ನು ಶಿಥಿಲಗೊಳಿಸುವ ಉದ್ದೇಶದಿಂದ ಭಾರತ ತನ್ನ ನೆರೆಹೊರೆ ದೇಶಗಳ ಮೇಲೆ ಹೊಸ ವ್ಯಾಪಾರ ನಿರ್ಬಂಧಗಳನ್ನು ಹೇರಿದೆ.

ಭಾರತದೊಂದಿಗೆ ಭೂ ಗಡಿಯನ್ನು ಹಂಚಿಕೊಳ್ಳುವ ರಾಷ್ಟ್ರಗಳ ಕಂಪೆನಿಗಳು ಕೈಗಾರಿಕಾ ಇಲಾಖೆಯಲ್ಲಿ ನೋಂದಾಯಿಸುವವರೆಗೆ ಸರಕು ಮತ್ತು ಸೇವೆಗಳಿಗಾಗಿ ಸರ್ಕಾರದ ಒಪ್ಪಂದಗಳಿಗೆ ಬಿಡ್ಡಿಂಗ್ ಮಾಡುವುದನ್ನು ನಿರ್ಬಂಧಿಸಲಾಗಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ. ಈ ಹಿಂದೆ, ಟೆಂಡರ್‌ಗಳಿಗೆ ಬಿಡ್ಡಿಂಗ್ ಮಾಡುವಾಗ ಸರಬರಾಜುದಾರರು ಸರ್ಕಾರದ ಇ-ಮಾರ್ಕೆಟ್ ‌ಪ್ಲೇಸ್‌ನಲ್ಲಿ ಮೂಲದ ದೇಶವನ್ನು ನಮೂದಿಸುವುದನ್ನು ಕಡ್ಡಾಯಗೊಳಿಸಿದ್ದರು.

ಭಾರತದ ಚೀನಾ ಅವಲಂಬನೆಯನ್ನು ಮುಕ್ತಗೊಳಿಸಲು ಕೇಂದ್ರ ಸರ್ಕಾರ ಕೈಗೊಂಡ ಕ್ರಮಗಳ ಸರಣಿಯಲ್ಲಿ ಈ ಕ್ರಮವು ಇತ್ತೀಚಿನದ್ದಾಗಿದೆ. ಇದಕ್ಕೂ ಮೊದಲು ಸರ್ಕಾರವು 59 ಚೀನೀ ಆ್ಯಪ್‌ಗಳ ಬಳಕೆಯನ್ನು ನಿಷೇಧಿಸಿತ್ತು.

ಗಡಿ ಸಂಘರ್ಷವನ್ನು ತಗ್ಗಿಸಲು ಎರಡೂ ರಾಷ್ಟ್ರಗಳು ಮಾತುಕತೆಗಳಲ್ಲಿ ತೊಡಗಿರುವ ಈ ಸಮಯದಲ್ಲಿ ಭಾರತ ಸರ್ಕಾರ ಇಂತಹ ನಿರ್ಧಾರವನ್ನು ಕೈಗೊಂಡಿದೆ. ವಾಸ್ತವಿಕ ನಿಯಂತ್ರಣ ರೇಖೆಯ ಉದ್ದಕ್ಕೂ ಸೈನಿಕರ ನಿಯೋಜನೆಯನ್ನು ಪೂರ್ಣಗೊಳಿಸುವಲ್ಲಿ ಚೀನಾದ ಕಡೆಯವರು ಪ್ರಾಮಾಣಿಕರಾಗಿರುತ್ತಾರೆ ಎಂದು ನಿರೀಕ್ಷಿಸಲಾಗಿದೆ ಎಂದು ಭಾರತ ಗುರುವಾರ ಹೇಳಿದೆ.

ಇತ್ತೀಚಿನ ನಡೆಯ ಇತರ ಪ್ರಮುಖ ಅಂಶಗಳು:

  • ಡಿಸೆಂಬರ್ 31 ರವರೆಗೆ ಕೊರೊನಾ ವೈದ್ಯಕೀಯ ಸಾಮಗ್ರಿಗಳನ್ನು ಖರೀದಿಸುವುದು ಸೇರಿದಂತೆ ಕೆಲವು ಸಂದರ್ಭಗಳಲ್ಲಿ ನಿಯಮಗಳನ್ನು ಸಡಿಲಿಸಲಾಗಿದೆ.
  • ಎಲ್ಲಾ ಹೊಸ ಟೆಂಡರ್‌ಗಳಿಗೆ ಅನ್ವಯಿಸುವ ಹೊಸ ನಿಯಮಗಳು; ಟೆಂಡರ್‌ಗಳನ್ನು ಈಗಾಗಲೇ ಆಹ್ವಾನಿಸಿರುವ ಸಂದರ್ಭಗಳಲ್ಲಿ, ಅರ್ಹತೆಯ ಮೌಲ್ಯಮಾಪನದ ಆರಂಭಿಕ ಹಂತವು ಪೂರ್ಣಗೊಳ್ಳದಿದ್ದರೆ, ನೋಂದಾಯಿಸದ ಬಿಡ್‌ದಾರರು ಅರ್ಹತೆ ಪಡೆಯುವುದಿಲ್ಲ.
  • ಭಾರತದೊಂದಿಗೆ ಭೂ ಗಡಿಯನ್ನು ಹಂಚಿಕೊಳ್ಳುವ ರಾಷ್ಟ್ರಗಳಿಂದ ನೋಂದಾಯಿಸದ ಘಟಕಗಳಿಗೆ ಉಪ ಗುತ್ತಿಗೆ ನೀಡಲು ಕೂಡಾ ಗುತ್ತಿಗೆದಾರರಿಗೆ ಅವಕಾಶವಿರುವುದಿಲ್ಲ.
  • ಮೊದಲ ಹಂತದ ಮೌಲ್ಯಮಾಪನ ಪೂರ್ಣಗೊಂಡರೆ ಟೆಂಡರ್‌ಗಳನ್ನು ರದ್ದುಗೊಳಿಸಲಾಗುತ್ತದೆ.
  • ಸರ್ಕಾರದಿಂದ ಹಣಕಾಸಿನ ನೆರವು ಪಡೆಯುವ ಸರ್ಕಾರಿ ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳು, ಸರ್ಕಾರಿ ಸಂಸ್ಥೆಗಳು ಹಾಗೂ ಸಾರ್ವಜನಿಕ ಖಾಸಗಿ ಸಹಭಾಗಿತ್ವ ಯೋಜನೆಗಳಿಗೆ ಹೊಸ ನಿಯಮಗಳು ಅನ್ವಯಿಸುತ್ತದೆ.
  • ರಾಜ್ಯ ಸರ್ಕಾರಗಳು ಸಮರ್ಥ ಪ್ರಾಧಿಕಾರವನ್ನು ನೇಮಿಸಿ ಹೊಸ ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಅದಕ್ಕಾಗಿ ರಾಜಕೀಯ ಮತ್ತು ಭದ್ರತಾ ಅನುಮತಿ ಕಡ್ಡಾಯವಾಗಿದೆ.

ಭಾರತ 2019 ರಲ್ಲಿ ಚೀನಾದಿಂದ 70 ಬಿಲಿಯನ್ ಮೌಲ್ಯದ ಸರಕುಗಳನ್ನು ಆಮದು ಮಾಡಿಕೊಂಡಿದ್ದು, ದ್ವಿಪಕ್ಷೀಯ ವ್ಯಾಪಾರ ಕೊರತೆಯ ನಂತರ ಸುಮಾರು 50 ಬಿಲಿಯನ್ ಆಗಿತ್ತು.


ಇದನ್ನೂ ಓದಿ: ಚೀನಾ ಕಂಪೆನಿ ಸಹಿತ 50 ಹೂಡಿಕೆಗಳನ್ನು ಪರಿಶೀಲಿಸುತ್ತಿರುವ ಕೇಂದ್ರ ಸರ್ಕಾರ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...