Homeಮುಖಪುಟಕೊರೊನಾ ಸೋಂಕು ತಗುಲಿದ್ದ ಭಾರತದ ಅತ್ಯಂತ ಹಿರಿಯ ದಂಪತಿಗಳು ಗುಣಮುಖ

ಕೊರೊನಾ ಸೋಂಕು ತಗುಲಿದ್ದ ಭಾರತದ ಅತ್ಯಂತ ಹಿರಿಯ ದಂಪತಿಗಳು ಗುಣಮುಖ

- Advertisement -
- Advertisement -

ಕೊರೊನಾ ಸೋಂಕಿಗೆ ಒಳಗಾಗಿದ್ದ ಭಾರತದ ಅತ್ಯಂತ ಹಿರಿಯ ದಂಪತಿಗಳು ಇದೀಗ ಗುಣಮುಖರಾಗಿ ತಮ್ಮ ಮನೆಗೆ ವಾಪಾಸಾಗಿದ್ದಾರೆ ಎಂದು ವರದಿಯಾಗಿದೆ.

ಕೊರೊನಾ ಸೋಂಕಿಗೆ ಒಳಗಾಗಿ ಎರಡು ವಾರಗಳ ಹಿಂದೆ ಕೇರಳದ ಕೊಟ್ಟಾಯಂ ವೈದ್ಯಕೀಯ ಕಾಲೇಜಿನ ಐಸೊಲೇಷನ್ ವಾರ್ಡ್‌ಗೆ ದಾಖಲಾಗಿದ್ದ 93 ವರ್ಷದ ಥಾಮಸ್ ಅಬ್ರಹಾಂ ಮತ್ತು 88 ವರ್ಷದ ಅವರ ಪತ್ನಿ ಮರಿಯಮ್ಮ ಕೇರಳದ ಪಟ್ಟನಂತಿಟ್ಟು ಜಿಲ್ಲೆಯ ರಾನ್ನಿಯಲ್ಲಿರುವ ತಮ್ಮ ಮನೆಗೆ ಹಿಂದಿರುಗಿದ್ದಾರೆ ಎನ್ನಲಾಗಿದೆ.

ಇದಲ್ಲದೆ, ಸೋಂಕಿತ ದಂಪತಿಗಳಿಗೆ ಚಿಕಿತ್ಸೆ ನೀಡುವಾಗ ಸೋಂಕಿಗೆ ಒಳಗಾಗಿದ್ದ ಆರೋಗ್ಯ ಕಾರ್ಯಕರ್ತರೂ ಸಹ ರೋಗದಿಂದ ಗುಣಮುಖರಾಗಿದ್ದಾರೆ ಎಂದು ಕೇರಳ ಸರ್ಕಾರದ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.


ಇದನ್ನೂ ಓದಿ: ಕೊರೊನಾ ಜಯಿಸಿದ ಕರ್ನಾಟಕದ ಮೊದಲ ವ್ಯಕ್ತಿಯ ಮನದ ಮಾತುಗಳು


ಪಟ್ಟನಂತಿಟ್ಟು ನಿವಾಸಿಗಳಾದ ಥಾಮಸ್ ಮತ್ತು ಮರಿಯಮ್ಮ ಅವರ ಮಗ ತನ್ನ ಕುಟುಂಬದ ಜೊತೆಗೆ ಹಲವಾರು ವರ್ಷಗಳಿಂದ ಇಟಲಿಯಲ್ಲಿ ವಾಸವಿದ್ದರು. ಆದರೆ, ಕಳೆದ ತಿಂಗಳು ಅವರು ತಮ್ಮ ಹೆಂಡತಿ ಹಾಗೂ ಮಗುವಿನ ಜೊತೆಗೆ ಕೇರಳದ ತನ್ನ ಊರಿಗೆ ಹಿಂದಿರುಗಿದ್ದರು. ಇವರಿಂದಾಗಿಯೇ ಥಾಮಸ್ ಮತ್ತು ಮರಿಯಮ್ಮ ದಂಪತಿಗಳಿಗೆ ಸೋಂಕು ತಗುಲಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಹೀಗಾಗಿ ಇವರನ್ನು ಕೊಟ್ಟಾಯಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಮಗ, ಸೊಸೆ ಮತ್ತು ಮಗು ಗುಣಮುಖರಾಗಿ ಮನೆಗೆ ಹಿಂದಿರುಗಿದ್ದರು. ಆದರೆ, ಸತತ ಎರಡು ವಾರದ ಚಿಕಿತ್ಸೆ ಬಳಿಕ ಹಿರಿಯ ದಂಪತಿಗಳು ಇದೀಗ ಗುಣಮುಖರಾಗಿದ್ದಾರೆ.

ಆರಂಭದಲ್ಲಿ ಹಿರಿಯ ದಂಪತಿಗಳನ್ನು ಪರೀಕ್ಷೆ ಮಾಡಲಾಗಿ ಕೊರೊನಾ ನೆಗೆಟಿವ್ ಎನ್ನಲಾಗಿತ್ತು. ಆದರೆ, ಹೆಚ್ಚಿನ ಪರೀಕ್ಷೆ ನಡೆಸಿದ ಸಂದರ್ಭದಲ್ಲಿ ಅವರಿಗೆ ಸೋಂಕು ತಗುಲಿರುವುದು ಖಚಿತವಾಗಿತ್ತು. ಪ್ರಸ್ತುತ ಇವರು ಕೊರೊನಾ ವೈರಸ್‌ನಿಂದ ಗುಣಮುಖರಾಗಿದ್ದು, ಭಾರತದ ಅತ್ಯಂತ ಹಿರಿಯ ವ್ಯಕ್ತಿಗಳು ಈ ಸೋಂಕಿನಿಂದ ಗುಣಮುಖರಾದ ಮೊದಲ ಪ್ರಕರಣ ಎಂದು ದಾಖಲಾಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಮ್ಮ ಪತ್ರಿಕೆಯಲ್ಲಿ. ಮರಕಜ ನಿಜಾಮುದ್ದೀನ್. ವಿಷಯ ಯಾಕ ಕೊಡಲಹೊಂಟಿರಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...