Homeಮುಖಪುಟ'ಭಾರತದ ಬಹುತ್ವವು ಅಪಾಯದಲ್ಲಿದೆ': ರಾಹುಲ್ ಬಹಿರಂಗ ಪತ್ರ

‘ಭಾರತದ ಬಹುತ್ವವು ಅಪಾಯದಲ್ಲಿದೆ’: ರಾಹುಲ್ ಬಹಿರಂಗ ಪತ್ರ

- Advertisement -
- Advertisement -

ಭಾರತ್ ಜೋಡೋ ಯಾತ್ರೆ ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೇಶಾದ್ಯಂತ ಪತ್ರ ವಿತರಿಸುವ ಅಭಿಯಾನ ಹಮ್ಮಿಕೊಳ್ಳಲಿದ್ದಾರೆ. ಆ ಪತ್ರದಲ್ಲಿ ‘ವಿಭಜಕ ಶಕ್ತಿಗಳು ದೇಶದ ವೈವಿಧ್ಯತೆಯನ್ನು ತನ್ನ ವಿರುದ್ಧ ತಿರುಗಿಸಲು ಪ್ರಯತ್ನಿಸುತ್ತಿದ್ದರೂ ಭಾರತವು ದ್ವೇಷವನ್ನು ತಿರಸ್ಕರಿಸುತ್ತದೆ’ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ನ “ಹಾಥ್ ಸೆ ಹಾಥ್ ಜೋಡೋ ಅಭಿಯಾನ”ದ ಭಾಗವಾಗಿ ಜನರಿಗೆ ಪತ್ರದ ಜೊತೆಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧದ “ಚಾರ್ಜ್ ಶೀಟ್” ಅನ್ನು ಹಂಚಲಾಗುವುದು ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಜನವರಿ 26 ರಿಂದ ಮಾರ್ಚ್ 26 ರವರೆಗೆ “ಹಾಥ್ ಸೆ ಹಾಥ್ ಜೋಡೋ ಅಭಿಯಾನ” ವನ್ನು ಕಾಂಗ್ರೆಸ್ ಪಕ್ಷ ಆರಂಭಿಸಲಿದ್ದು, ಇದನ್ನು ಬ್ಲಾಕ್, ಜಿಲ್ಲೆ ಮತ್ತು ರಾಜ್ಯ ಮಟ್ಟದಲ್ಲಿ ನಡೆಸುವ ಗುರಿಯನ್ನು ಹೊಂದಿದೆ. ಈ ಅಭಿಯಾನವು 2.5 ಲಕ್ಷ ಗ್ರಾಮ ಪಂಚಾಯಿತಿಗಳು, ಆರು ಲಕ್ಷ ಗ್ರಾಮಗಳು ಮತ್ತು ಸುಮಾರು 10 ಲಕ್ಷ ಚುನಾವಣಾ ಬೂತ್‌ಗಳ ವ್ಯಾಪ್ತಿಯಲ್ಲಿ ನಡೆಯಲಿದೆ ಎಂದು ರಮೇಶ್ ಸುದ್ದಿಗಾರರಿಗೆ ತಿಳಿಸಿದರು.

ರಾಹುಲ್ ಗಾಂಧಿಯವರ ಈ ಪತ್ರದಲ್ಲಿ “ಭಾರತದ ಬಹುತ್ವವು ಅಪಾಯದಲ್ಲಿದೆ. ವಿಭಜಕ ಶಕ್ತಿಗಳು ನಮ್ಮ ವೈವಿಧ್ಯತೆಯನ್ನು ನಮ್ಮ ವಿರುದ್ಧ ತಿರುಗಿಸಲು ಪ್ರಯತ್ನಿಸುತ್ತಿವೆ. ವಿವಿಧ ಧರ್ಮಗಳು, ಸಮುದಾಯಗಳು, ಪ್ರದೇಶಗಳು ಪರಸ್ಪರ ವಿರುದ್ಧವಾಗಿವೆ” ಎಂದು ಬರೆಯಲಾಗಿದೆ. “ಆದರೆ ಭಾರತ್ ಜೋಡೋ ಯಾತ್ರೆಯ ನಂತರ, ಈ ಕೆಟ್ಟ ಪರಿಸ್ಥಿತಿ ಸ್ವಲ್ಪಮಟ್ಟಿಗೆ ತಗ್ಗಿದೆ. ಅದು ಇನ್ನು ಮುಂದೆ ಮುಂದುವರಿಯಲು ಸಾಧ್ಯವಿಲ್ಲ ಎಂದು ನನಗೆ ಮನವರಿಕೆಯಾಗಿದೆ” ಎಂದಿದ್ದಾರೆ.

“ದೇಶದಲ್ಲಿ ಸ್ಪಷ್ಟ ಆರ್ಥಿಕ ಬಿಕ್ಕಟ್ಟು ಇದೆ” ಎಂದು ರಾಹುಲ್ ಕಳವಳ ವ್ಯಕ್ತಪಡಿಸಿದ್ದಾರೆ. “ಪ್ರತಿಯೊಬ್ಬರಿಗೂ ಆರ್ಥಿಕ ಸಮೃದ್ಧಿಯನ್ನು ಸೃಷ್ಟಿಸಲು ನಾನು ಸಂಕಲ್ಪ ಮಾಡಿದ್ದೇನೆ- ದೇಶದ ರೈತರ ಉತ್ಪನ್ನಗಳಿಗೆ ಸರಿಯಾದ ಬೆಲೆ, ನಮ್ಮ ಯುವಕರಿಗೆ ಉದ್ಯೋಗಗಳು, ದೇಶದ ಸಂಪತ್ತಿನ ನ್ಯಾಯಯುತ ಹಂಚಿಕೆ, MSME ಗಳಿಗೆ [ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು] ಮತ್ತು ಉದ್ಯಮಿಗಳಿಗೆ ಅನುಕೂಲಕರ ವಾತಾವರಣ, ಕಡಿಮೆ ಬೆಲೆಗೆ ಡೀಸೆಲ್, ಗ್ಯಾಸ್ ಸಿಲಿಂಡರ್ ರೂ. 500 ಸಿಗುವಂತಾಗಬೇಕು” ಎಂದಿದ್ದಾರೆ.

ಪ್ರಸ್ತುತ ಪಂಜಾಬ್‌ನಲ್ಲಿರುವ ಭಾರತ್ ಜೋಡೋ ಯಾತ್ರೆ ಜನವರಿ 19 ರಂದು ರಾಜ್ಯದ ಪಠಾಣ್‌ಕೋಟ್ ನಗರವನ್ನು ತಲುಪಲಿದ್ದು, ಅಲ್ಲಿ ರ್ಯಾಲಿ ನಡೆಯಲಿದೆ. ನಂತರ ಯಾತ್ರೆಯು ಜನವರಿ 20 ರಂದು ಜಮ್ಮುವನ್ನು ಪ್ರವೇಶಿಸಲಿದೆ ಎಂದು ಜೈರಾಮ್‌ ರಮೇಶ್ ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...