Homeಮುಖಪುಟಬಜೆಟ್ ಅಧಿವೇಶನ | ಜಿಡಿಪಿ ಬೆಳವಣಿಗೆ ದರ ಶೇ 6.3ರಿಂದ 6.8 : ಆರ್ಥಿಕ ಸಮೀಕ್ಷೆ

ಬಜೆಟ್ ಅಧಿವೇಶನ | ಜಿಡಿಪಿ ಬೆಳವಣಿಗೆ ದರ ಶೇ 6.3ರಿಂದ 6.8 : ಆರ್ಥಿಕ ಸಮೀಕ್ಷೆ

- Advertisement -
- Advertisement -

ಮುಂಬರುವ ಹಣಕಾಸು ವರ್ಷದಲ್ಲಿ (2025-26) ಭಾರತದ ಜಿಡಿಪಿ ಬೆಳವಣಿಗೆ ದರ ಶೇಕಡ 6.3 ರಿಂದ ಶೇಕಡ 6.8 ಇರಲಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶುಕ್ರವಾರ (ಜ.31) ಮಂಡಿಸಿದ ಕೇಂದ್ರ ಸರ್ಕಾರದ ವಾರ್ಷಿಕ ಆರ್ಥಿಕ ಸಮೀಕ್ಷೆ ವರದಿ ಅಂದಾಜಿಸಿದೆ.

ಇದರರ್ಥ ಸತತ ಎರಡನೇ ಹಣಕಾಸು ವರ್ಷವೂ ಜಿಡಿಪಿ ಬೆಳವಣಿಗೆ ದರ ಶೇಖಡ 7ಕ್ಕಿಂತ ಕಡಿಮೆ ಇರುತ್ತದೆ ಎಂದಾಗಿದೆ.

ಜನವರಿ 7ರಂದು ರಾಷ್ಟ್ರೀಯ ಅಂಕಿ ಅಂಶ ಕಚೇರಿ ಬಿಡುಗಡೆ ಮಾಡಿದ್ದ ಸರ್ಕಾರದ ಆರಂಭಿಕ ಅಂದಾಜಿನ ಪ್ರಕಾರ, 2024-25ರ ಹಣಕಾಸು ವರ್ಷದಲ್ಲಿ ದೇಶದ ನೈಜ ಜಿಡಿಪಿ ನಾಲ್ಕು ವರ್ಷಗಳ ಕನಿಷ್ಠ ಮಟ್ಟವಾದ ಶೇಖಡ 6.4ಕ್ಕೆ ಇಳಿಯಲಿದೆ ಎಂದಿತ್ತು.

2025-26ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆಗೆ ಒಂದು ದಿನ ಮೊದಲು ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಆರ್ಥಿಕ ಸಮೀಕ್ಷೆ ವರದಿಯು ದೇಶದ ಆರ್ಥಿಕತೆಯ ಸ್ಥಿತಿಯನ್ನು ವಿವರಿಸುತ್ತದೆ ಮತ್ತು ಬೆಳವಣಿಗೆಯನ್ನು ಹೆಚ್ಚಿಸುವ ಕ್ರಮಗಳನ್ನು ಸೂಚಿಸುತ್ತದೆ.

ಆರ್ಥಿಕ ವ್ಯವಹಾರಗಳ ಇಲಾಖೆ ಸಿದ್ದಪಡಿಸಿದ ಈ ಸಮೀಕ್ಷೆ ವರದಿಯು ಜಾಗತಿಕ ಅಡೆತಡೆಗಳನ್ನು ನಿವಾರಿಸಲು “ಕಾರ್ಯತಂತ್ರದ, ವಿವೇಕಯುತ ನೀತಿ ನಿರ್ವಹಣೆ ಮತ್ತು ದೇಶೀಯ ಮೂಲಭೂತ ಅಂಶಗಳನ್ನು ಬಲಪಡಿಸುವ” ಅಗತ್ಯವಿದೆ ಎಂದು ಹೇಳಿದೆ.

ಮುಂದಿನ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕ ನಿರೀಕ್ಷೆಗಳು ಸಮತೋಲಿತವಾಗಿವೆ ಎಂದು ಮುಖ್ಯ ಆರ್ಥಿಕ ಸಲಹೆಗಾರ ವಿ ಅನಂತ ನಾಗೇಶ್ವರನ್ ವರದಿಯಲ್ಲಿ ತಿಳಿಸಿದ್ದಾರೆ.

“ಆರ್ಥಿಕ ಬೆಳವಣಿಗೆಗೆ ಎದುರಾಗುವ ಪ್ರಮುಖ ಕಾರಣಗಳಲ್ಲಿ ಭೌಗೋಳಿಕ, ರಾಜಕೀಯ ವ್ಯಾಪಾರ ಅನಿಶ್ಚಿತತೆಗಳು ಮತ್ತು ಸರಕು ಬೆಲೆಗಳ ಆಘಾತಗಳು ಸೇರಿವೆ” ಎಂದು ನಾಗೇಶ್ವರನ್ ಹೇಳಿದ್ದಾರೆ. “ದೇಶೀಯವಾಗಿ, ಖಾಸಗಿ ಬಂಡವಾಳ ಸರಕುಗಳ ವಲಯದ ನಿರಂತರ ಹೂಡಿಕೆ ಏರಿಕೆ, ಗ್ರಾಹಕರ ವಿಶ್ವಾಸದಲ್ಲಿ ಸುಧಾರಣೆಗಳು ಮತ್ತು ಕಾರ್ಪೊರೇಟ್ ವೇತನ ಏರಿಕೆ ಬೆಳವಣಿಗೆಯನ್ನು ಉತ್ತೇಜಿಸುವ ಪ್ರಮುಖ ಅಂಶಗಳಾಗಿವೆ” ಎಂದು ತಿಳಿಸಿದ್ದಾರೆ.

“ಕೃಷಿ ಉತ್ಪಾದನೆಯಲ್ಲಿನ ಚೇತರಿಕೆ, ಆಹಾರ ಹಣದುಬ್ಬರದಲ್ಲಿ ನಿರೀಕ್ಷಿತ ಇಳಿಕೆ ಮತ್ತು ಸ್ಥಿರವಾದ ಸ್ಥೂಲ-ಆರ್ಥಿಕ ವಾತಾವರಣದಿಂದ ಬೆಂಬಲಿತವಾದ ಗ್ರಾಮೀಣ ಬೇಡಿಕೆಯು ಅಲ್ಪಾವಧಿಯ ಬೆಳವಣಿಗೆಯಲ್ಲಿ ಸಾಧಿಸುತ್ತದೆ” ಎಂದು ಅವರು ಹೇಳಿದ್ದಾರೆ.

2023-24ರ ಆರ್ಥಿಕ ವರ್ಷದಲ್ಲಿ ಶೇ.5.4ರಷ್ಟಿದ್ದ ಚಿಲ್ಲರೆ ಹಣದುಬ್ಬರವು, ಪ್ರಸಕ್ತ ಹಣಕಾಸು ವರ್ಷದಲ್ಲಿ (ಡಿಸೆಂಬರ್ ವರೆಗೆ) ಶೇ.4.9ಕ್ಕೆ ಇಳಿದಿದೆ ಎಂದು ವರದಿ ತಿಳಿಸಿದೆ. ಇಂಧನ ಬೆಲೆ ಹಣದುಬ್ಬರದಲ್ಲಿನ ಇಳಿಕೆಯೇ ಈ ಇಳಿಕೆಗೆ ಪ್ರಮುಖ ಕಾರಣ ಎಂದು ಅದು ಹೇಳಿದೆ.

2024-25ನೇ ಸಾಲಿನ ಪ್ರಸಕ್ತ ಹಣಕಾಸು ವರ್ಷವೂ ಕೃಷಿ ಮತ್ತು ಸೇವಾ ವಲಯಗಳ ಬೆಳವಣಿಗೆಗೆ ಬೆಂಬಲ ನೀಡಿವೆ. ಖಾರಿಫ್ ಉತ್ಪಾದನೆ ಮತ್ತು ಅನುಕೂಲಕರ ಕೃಷಿ ಪರಿಸ್ಥಿತಿಗಳಿಂದಾಗಿ ಗ್ರಾಮೀಣ ಬೇಡಿಕೆ ಸುಧಾರಿಸಿದೆ ಎಂದು ಮುಖ್ಯ ಆರ್ಥಿಕ ಸಲಹೆಗಾರರು ತಿಳಿಸಿದ್ದಾರೆ.

ದೇಶೀಯ ಋತುಮಾನದ ಪರಿಸ್ಥಿತಿಗಳು ಮತ್ತು ಜಾಗತಿಕ ಬೇಡಿಕೆ ದುರ್ಬಲಗೊಂಡ ಕಾರಣ ಉತ್ಪಾದನಾ ವಲಯವು ಒತ್ತಡವನ್ನು ಎದುರಿಸಿದೆ ಎಂದು ವರದಿ ಹೇಳಿದೆ

ಡಿಸೆಂಬರ್ 30ರಂದು ಭಾರತೀಯ ರಿಸರ್ವ್ ಬ್ಯಾಂಕ್ ಭಾರತದ ಆರ್ಥಿಕತೆಯು ಸ್ಥಿತಿಸ್ಥಾಪಕತ್ವ ಮತ್ತು ಸ್ಥಿರತೆಯನ್ನು ಪ್ರದರ್ಶಿಸುತ್ತಿದೆ ಎಂದು ಹೇಳಿತ್ತು. 2024-25ರಲ್ಲಿ ಜಿಡಿಪಿ ಬೆಳವಣಿಗೆಯನ್ನು ಶೇಖಡ 6.6 ಎಂದು ಅಂದಾಜಿಸಿತ್ತು.

ಜನವರಿ 16ರಂದು, ವಿಶ್ವ ಬ್ಯಾಂಕ್ ಭಾರತದ ಆರ್ಥಿಕ ಬೆಳವಣಿಗೆ ಮುಂದಿನ ಎರಡು ಹಣಕಾಸು ವರ್ಷಗಳಲ್ಲಿ ಶೇಖಡ 6.7 ದರದಲ್ಲಿ ಬೆಳೆಯುವ ನಿರೀಕ್ಷೆಯಿದೆ ಎಂದು ಮುನ್ಸೂಚನೆ ನೀಡಿತ್ತು.

ಭಾರತದ ಸೇವಾ ವಲಯವು ಸುಸ್ಥಿರವಾಗಿ ವಿಸ್ತರಿಸುವ ನಿರೀಕ್ಷೆಯಿದೆ. ವ್ಯಾಪಾರ ವಾತಾವರಣವನ್ನು ಸುಧಾರಿಸುವ ಗುರಿಯನ್ನು ಹೊಂದಿರುವ ಸರ್ಕಾರಿ ಉಪಕ್ರಮಗಳಿಂದ ಉತ್ಪಾದನಾ ಚಟುವಟಿಕೆಗಳು ಬಲಗೊಳ್ಳುತ್ತವೆ ಎಂದಿತ್ತು.

ಜನವರಿ 10 ರಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಸ್ಥಿರವಾದ ಜಾಗತಿಕ ಬೆಳವಣಿಗೆಯ ಹೊರತಾಗಿಯೂ, 2025ರಲ್ಲಿ ಭಾರತದ ಆರ್ಥಿಕತೆಯು “ಸ್ವಲ್ಪ ದುರ್ಬಲ”ವಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

ಸಂಸತ್ ಬಜೆಟ್ ಅಧಿವೇಶನ ಆರಂಭ | ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ಭಾಷಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...