Homeಮುಖಪುಟಬಜೆಟ್ ಅಧಿವೇಶನ | ಜಿಡಿಪಿ ಬೆಳವಣಿಗೆ ದರ ಶೇ 6.3ರಿಂದ 6.8 : ಆರ್ಥಿಕ ಸಮೀಕ್ಷೆ

ಬಜೆಟ್ ಅಧಿವೇಶನ | ಜಿಡಿಪಿ ಬೆಳವಣಿಗೆ ದರ ಶೇ 6.3ರಿಂದ 6.8 : ಆರ್ಥಿಕ ಸಮೀಕ್ಷೆ

- Advertisement -
- Advertisement -

ಮುಂಬರುವ ಹಣಕಾಸು ವರ್ಷದಲ್ಲಿ (2025-26) ಭಾರತದ ಜಿಡಿಪಿ ಬೆಳವಣಿಗೆ ದರ ಶೇಕಡ 6.3 ರಿಂದ ಶೇಕಡ 6.8 ಇರಲಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶುಕ್ರವಾರ (ಜ.31) ಮಂಡಿಸಿದ ಕೇಂದ್ರ ಸರ್ಕಾರದ ವಾರ್ಷಿಕ ಆರ್ಥಿಕ ಸಮೀಕ್ಷೆ ವರದಿ ಅಂದಾಜಿಸಿದೆ.

ಇದರರ್ಥ ಸತತ ಎರಡನೇ ಹಣಕಾಸು ವರ್ಷವೂ ಜಿಡಿಪಿ ಬೆಳವಣಿಗೆ ದರ ಶೇಖಡ 7ಕ್ಕಿಂತ ಕಡಿಮೆ ಇರುತ್ತದೆ ಎಂದಾಗಿದೆ.

ಜನವರಿ 7ರಂದು ರಾಷ್ಟ್ರೀಯ ಅಂಕಿ ಅಂಶ ಕಚೇರಿ ಬಿಡುಗಡೆ ಮಾಡಿದ್ದ ಸರ್ಕಾರದ ಆರಂಭಿಕ ಅಂದಾಜಿನ ಪ್ರಕಾರ, 2024-25ರ ಹಣಕಾಸು ವರ್ಷದಲ್ಲಿ ದೇಶದ ನೈಜ ಜಿಡಿಪಿ ನಾಲ್ಕು ವರ್ಷಗಳ ಕನಿಷ್ಠ ಮಟ್ಟವಾದ ಶೇಖಡ 6.4ಕ್ಕೆ ಇಳಿಯಲಿದೆ ಎಂದಿತ್ತು.

2025-26ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆಗೆ ಒಂದು ದಿನ ಮೊದಲು ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಆರ್ಥಿಕ ಸಮೀಕ್ಷೆ ವರದಿಯು ದೇಶದ ಆರ್ಥಿಕತೆಯ ಸ್ಥಿತಿಯನ್ನು ವಿವರಿಸುತ್ತದೆ ಮತ್ತು ಬೆಳವಣಿಗೆಯನ್ನು ಹೆಚ್ಚಿಸುವ ಕ್ರಮಗಳನ್ನು ಸೂಚಿಸುತ್ತದೆ.

ಆರ್ಥಿಕ ವ್ಯವಹಾರಗಳ ಇಲಾಖೆ ಸಿದ್ದಪಡಿಸಿದ ಈ ಸಮೀಕ್ಷೆ ವರದಿಯು ಜಾಗತಿಕ ಅಡೆತಡೆಗಳನ್ನು ನಿವಾರಿಸಲು “ಕಾರ್ಯತಂತ್ರದ, ವಿವೇಕಯುತ ನೀತಿ ನಿರ್ವಹಣೆ ಮತ್ತು ದೇಶೀಯ ಮೂಲಭೂತ ಅಂಶಗಳನ್ನು ಬಲಪಡಿಸುವ” ಅಗತ್ಯವಿದೆ ಎಂದು ಹೇಳಿದೆ.

ಮುಂದಿನ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕ ನಿರೀಕ್ಷೆಗಳು ಸಮತೋಲಿತವಾಗಿವೆ ಎಂದು ಮುಖ್ಯ ಆರ್ಥಿಕ ಸಲಹೆಗಾರ ವಿ ಅನಂತ ನಾಗೇಶ್ವರನ್ ವರದಿಯಲ್ಲಿ ತಿಳಿಸಿದ್ದಾರೆ.

“ಆರ್ಥಿಕ ಬೆಳವಣಿಗೆಗೆ ಎದುರಾಗುವ ಪ್ರಮುಖ ಕಾರಣಗಳಲ್ಲಿ ಭೌಗೋಳಿಕ, ರಾಜಕೀಯ ವ್ಯಾಪಾರ ಅನಿಶ್ಚಿತತೆಗಳು ಮತ್ತು ಸರಕು ಬೆಲೆಗಳ ಆಘಾತಗಳು ಸೇರಿವೆ” ಎಂದು ನಾಗೇಶ್ವರನ್ ಹೇಳಿದ್ದಾರೆ. “ದೇಶೀಯವಾಗಿ, ಖಾಸಗಿ ಬಂಡವಾಳ ಸರಕುಗಳ ವಲಯದ ನಿರಂತರ ಹೂಡಿಕೆ ಏರಿಕೆ, ಗ್ರಾಹಕರ ವಿಶ್ವಾಸದಲ್ಲಿ ಸುಧಾರಣೆಗಳು ಮತ್ತು ಕಾರ್ಪೊರೇಟ್ ವೇತನ ಏರಿಕೆ ಬೆಳವಣಿಗೆಯನ್ನು ಉತ್ತೇಜಿಸುವ ಪ್ರಮುಖ ಅಂಶಗಳಾಗಿವೆ” ಎಂದು ತಿಳಿಸಿದ್ದಾರೆ.

“ಕೃಷಿ ಉತ್ಪಾದನೆಯಲ್ಲಿನ ಚೇತರಿಕೆ, ಆಹಾರ ಹಣದುಬ್ಬರದಲ್ಲಿ ನಿರೀಕ್ಷಿತ ಇಳಿಕೆ ಮತ್ತು ಸ್ಥಿರವಾದ ಸ್ಥೂಲ-ಆರ್ಥಿಕ ವಾತಾವರಣದಿಂದ ಬೆಂಬಲಿತವಾದ ಗ್ರಾಮೀಣ ಬೇಡಿಕೆಯು ಅಲ್ಪಾವಧಿಯ ಬೆಳವಣಿಗೆಯಲ್ಲಿ ಸಾಧಿಸುತ್ತದೆ” ಎಂದು ಅವರು ಹೇಳಿದ್ದಾರೆ.

2023-24ರ ಆರ್ಥಿಕ ವರ್ಷದಲ್ಲಿ ಶೇ.5.4ರಷ್ಟಿದ್ದ ಚಿಲ್ಲರೆ ಹಣದುಬ್ಬರವು, ಪ್ರಸಕ್ತ ಹಣಕಾಸು ವರ್ಷದಲ್ಲಿ (ಡಿಸೆಂಬರ್ ವರೆಗೆ) ಶೇ.4.9ಕ್ಕೆ ಇಳಿದಿದೆ ಎಂದು ವರದಿ ತಿಳಿಸಿದೆ. ಇಂಧನ ಬೆಲೆ ಹಣದುಬ್ಬರದಲ್ಲಿನ ಇಳಿಕೆಯೇ ಈ ಇಳಿಕೆಗೆ ಪ್ರಮುಖ ಕಾರಣ ಎಂದು ಅದು ಹೇಳಿದೆ.

2024-25ನೇ ಸಾಲಿನ ಪ್ರಸಕ್ತ ಹಣಕಾಸು ವರ್ಷವೂ ಕೃಷಿ ಮತ್ತು ಸೇವಾ ವಲಯಗಳ ಬೆಳವಣಿಗೆಗೆ ಬೆಂಬಲ ನೀಡಿವೆ. ಖಾರಿಫ್ ಉತ್ಪಾದನೆ ಮತ್ತು ಅನುಕೂಲಕರ ಕೃಷಿ ಪರಿಸ್ಥಿತಿಗಳಿಂದಾಗಿ ಗ್ರಾಮೀಣ ಬೇಡಿಕೆ ಸುಧಾರಿಸಿದೆ ಎಂದು ಮುಖ್ಯ ಆರ್ಥಿಕ ಸಲಹೆಗಾರರು ತಿಳಿಸಿದ್ದಾರೆ.

ದೇಶೀಯ ಋತುಮಾನದ ಪರಿಸ್ಥಿತಿಗಳು ಮತ್ತು ಜಾಗತಿಕ ಬೇಡಿಕೆ ದುರ್ಬಲಗೊಂಡ ಕಾರಣ ಉತ್ಪಾದನಾ ವಲಯವು ಒತ್ತಡವನ್ನು ಎದುರಿಸಿದೆ ಎಂದು ವರದಿ ಹೇಳಿದೆ

ಡಿಸೆಂಬರ್ 30ರಂದು ಭಾರತೀಯ ರಿಸರ್ವ್ ಬ್ಯಾಂಕ್ ಭಾರತದ ಆರ್ಥಿಕತೆಯು ಸ್ಥಿತಿಸ್ಥಾಪಕತ್ವ ಮತ್ತು ಸ್ಥಿರತೆಯನ್ನು ಪ್ರದರ್ಶಿಸುತ್ತಿದೆ ಎಂದು ಹೇಳಿತ್ತು. 2024-25ರಲ್ಲಿ ಜಿಡಿಪಿ ಬೆಳವಣಿಗೆಯನ್ನು ಶೇಖಡ 6.6 ಎಂದು ಅಂದಾಜಿಸಿತ್ತು.

ಜನವರಿ 16ರಂದು, ವಿಶ್ವ ಬ್ಯಾಂಕ್ ಭಾರತದ ಆರ್ಥಿಕ ಬೆಳವಣಿಗೆ ಮುಂದಿನ ಎರಡು ಹಣಕಾಸು ವರ್ಷಗಳಲ್ಲಿ ಶೇಖಡ 6.7 ದರದಲ್ಲಿ ಬೆಳೆಯುವ ನಿರೀಕ್ಷೆಯಿದೆ ಎಂದು ಮುನ್ಸೂಚನೆ ನೀಡಿತ್ತು.

ಭಾರತದ ಸೇವಾ ವಲಯವು ಸುಸ್ಥಿರವಾಗಿ ವಿಸ್ತರಿಸುವ ನಿರೀಕ್ಷೆಯಿದೆ. ವ್ಯಾಪಾರ ವಾತಾವರಣವನ್ನು ಸುಧಾರಿಸುವ ಗುರಿಯನ್ನು ಹೊಂದಿರುವ ಸರ್ಕಾರಿ ಉಪಕ್ರಮಗಳಿಂದ ಉತ್ಪಾದನಾ ಚಟುವಟಿಕೆಗಳು ಬಲಗೊಳ್ಳುತ್ತವೆ ಎಂದಿತ್ತು.

ಜನವರಿ 10 ರಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಸ್ಥಿರವಾದ ಜಾಗತಿಕ ಬೆಳವಣಿಗೆಯ ಹೊರತಾಗಿಯೂ, 2025ರಲ್ಲಿ ಭಾರತದ ಆರ್ಥಿಕತೆಯು “ಸ್ವಲ್ಪ ದುರ್ಬಲ”ವಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

ಸಂಸತ್ ಬಜೆಟ್ ಅಧಿವೇಶನ ಆರಂಭ | ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ಭಾಷಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...