Homeಮುಖಪುಟಚೀನಾದೊಂದಿಗೆ ಭಾರತ ಸಂಬಂಧ ಅಸಹಜವಾಗಿದೆ: ವಿದೇಶಾಂಗ ಸಚಿವ ಜೈಶಂಕರ್‌

ಚೀನಾದೊಂದಿಗೆ ಭಾರತ ಸಂಬಂಧ ಅಸಹಜವಾಗಿದೆ: ವಿದೇಶಾಂಗ ಸಚಿವ ಜೈಶಂಕರ್‌

- Advertisement -
- Advertisement -

ಬೀಜಿಂಗ್ ಗಡಿ ಒಪ್ಪಂದಗಳನ್ನು ಉಲ್ಲಂಘಿಸಿರುವುದರಿಂದ ಚೀನಾದೊಂದಿಗಿನ ಭಾರತದ ಸಂಬಂಧಗಳು ಪ್ರಸ್ತುತ ಅಸಹಜವಾಗಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಶುಕ್ರವಾರ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಡೊಮಿನಿಕನ್ ಗಣರಾಜ್ಯದ ರಾಜಧಾನಿ ಸ್ಯಾಂಟೊ ಡೊಮಿಂಗೊನಲ್ಲಿ ತಮ್ಮ ಚೊಚ್ಚಲ ಭೇಟಿಯ ಸಂದರ್ಭದಲ್ಲಿ ಜೈಶಂಕರ್ ಈ ಹೇಳಿಕೆ ನೀಡಿದ್ದಾರೆ.

“ಅದು ಅಮೆರಿಕಾ, ಯುರೋಪ್, ರಷ್ಯಾ ಅಥವಾ ಜಪಾನ್ ಆಗಿರಲಿ, ಈ ಎಲ್ಲಾ ಸಂಬಂಧಗಳಲ್ಲೂ ಪ್ರತ್ಯೇಕತೆಯನ್ನು ಬಯಸದೆ ಮುನ್ನಡೆಯಲು ನಾವು ಪ್ರಯತ್ನಿಸುತ್ತಿದ್ದೇವೆ” ಎಂದು ಜೈಶಂಕರ್ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

“ಗಡಿ ವಿವಾದ ಮತ್ತು ಪ್ರಸ್ತುತ ನಮ್ಮ ಸಂಬಂಧಗಳ ಅಸಹಜ ಸ್ವಭಾವದಿಂದಾಗಿ ಚೀನಾ ಸ್ವಲ್ಪ ವಿಭಿನ್ನ ವರ್ಗಕ್ಕೆ ಸೇರಿದೆ. ಇದು ಗಡಿ ನಿರ್ವಹಣೆಗೆ ಸಂಬಂಧಿಸಿದ ಒಪ್ಪಂದಗಳ ಉಲ್ಲಂಘನೆಯ ಫಲಿತಾಂಶವಾಗಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಜೂನ್ 2020ರಲ್ಲಿ ಪೂರ್ವ ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ಉಭಯ ದೇಶಗಳ ಮಿಲಿಟರಿಗಳು ಘರ್ಷಣೆಯಾದಾಗಿನಿಂದ ಉಭಯ ದೇಶಗಳ ರಾಜಧಾನಿಗಳಾದ ಹೊಸ ದೆಹಲಿ ಮತ್ತು ಬೀಜಿಂಗ್ ನಡುವಿನ ಸಂಬಂಧಗಳು ಹದಗೆಟ್ಟಿದೆ.

ಘರ್ಷಣೆಯಲ್ಲಿ ಇಪ್ಪತ್ತು ಭಾರತೀಯ ಸೈನಿಕರು ಕೊಲ್ಲಲ್ಪಟ್ಟರು, ಆದರೆ ಚೀನಾವು ತನ್ನ ಕಡೆಯಿಂದ ನಾಲ್ಕು ಸಾವುನೋವುಗಳಾಗಿವೆ ಎಂದಿದೆ. ಅಂದಿನಿಂದ ಉಭಯ ದೇಶಗಳು ಗಡಿ ಬಿಕ್ಕಟ್ಟಿನಲ್ಲಿ ಸಿಲುಕಿಕೊಂಡಿವೆ.

ಡಿಸೆಂಬರ್ 9 ರಂದು ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನಲ್ಲಿ ಭಾರತ ಮತ್ತು ಚೀನಾದ ಸೈನಿಕರು ಘರ್ಷಣೆ ಮಾಡಿದ ನಂತರ ಉಭಯ ದೇಶಗಳ ನಡುವಿನ ಉದ್ವಿಗ್ನತೆ ಮತ್ತೊಮ್ಮೆ ಉಲ್ಬಣಗೊಂಡಿತು.

ಚೀನಾ ಸೈನಿಕರು ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ ಯಥಾಸ್ಥಿತಿಯನ್ನು ಬದಲಾಯಿಸಲು ಯತ್ನಿಸಿದ ನಂತರ ಘರ್ಷಣೆ ನಡೆದಿದೆ ಎಂದು ಭಾರತ ಹೇಳಿದೆ.

ಚೀನಾದ ಮಾಜಿ ವಿದೇಶಾಂಗ ಸಚಿವ ವಾಂಗ್ ಯಿ ಅವರೊಂದಿಗೆ ಮಾತನಾಡಿದ್ದ ಜೈಶಂಕರ್‌, “ತಾತ್ವಿಕ ಒಪ್ಪಂದ” ಕ್ಕೆ ಅನುಗುಣವಾಗಿ ಗಡಿ ವಿವಾದವನ್ನು ಪರಿಹರಿಸುವವರೆಗೆ ನವದೆಹಲಿ ಮತ್ತು ಬೀಜಿಂಗ್ ನಡುವಿನ ಸಂಬಂಧಗಳು ಸಹಜ ಸ್ಥಿತಿಗೆ ಮರಳಲು ಸಾಧ್ಯವಿಲ್ಲ ಕಳೆದ ತಿಂಗಳು ಹೇಳಿದ್ದರು.

“ನಾವು ಶಾಂತಿ ಮತ್ತು ನೆಮ್ಮದಿಯ ಉಲ್ಲಂಘನೆಯನ್ನು ಹೊಂದಲು ಸಾಧ್ಯವಿಲ್ಲ ಎಂದು ನಾವು ಚೀನಿಯರಿಗೆ ಸ್ಪಷ್ಟವಾಗಿ ಹೇಳಿದ್ದೇವೆ, ನೀವು ಒಪ್ಪಂದಗಳನ್ನು ಉಲ್ಲಂಘಿಸುವಂತಿಲ್ಲ ಮತ್ತು ನಂತರ ಏನೂ ಆಗಿಲ್ಲ ಎಂಬಂತೆ ಉಳಿದ ಸಂಬಂಧವನ್ನು ಮುಂದುವರಿಸಲು ಬಯಸುತ್ತೇವೆ” ಎಂದು ಸಚಿವರು ‘ಇಂಡಿಯಾ ಟುಡೇ’ಗೆ ತಿಳಿಸಿದ್ದರು.

ಇದನ್ನೂ ಓದಿರಿ: ಅರುಣಾಚಲದ 11 ಸ್ಥಳಗಳಿಗೆ ಮರುನಾಮಕರಣ ಮಾಡಿದ ಚೀನಾ; ನಕ್ಷೆ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...