ಬೀಜಿಂಗ್ ಗಡಿ ಒಪ್ಪಂದಗಳನ್ನು ಉಲ್ಲಂಘಿಸಿರುವುದರಿಂದ ಚೀನಾದೊಂದಿಗಿನ ಭಾರತದ ಸಂಬಂಧಗಳು ಪ್ರಸ್ತುತ ಅಸಹಜವಾಗಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಶುಕ್ರವಾರ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ಡೊಮಿನಿಕನ್ ಗಣರಾಜ್ಯದ ರಾಜಧಾನಿ ಸ್ಯಾಂಟೊ ಡೊಮಿಂಗೊನಲ್ಲಿ ತಮ್ಮ ಚೊಚ್ಚಲ ಭೇಟಿಯ ಸಂದರ್ಭದಲ್ಲಿ ಜೈಶಂಕರ್ ಈ ಹೇಳಿಕೆ ನೀಡಿದ್ದಾರೆ.
“ಅದು ಅಮೆರಿಕಾ, ಯುರೋಪ್, ರಷ್ಯಾ ಅಥವಾ ಜಪಾನ್ ಆಗಿರಲಿ, ಈ ಎಲ್ಲಾ ಸಂಬಂಧಗಳಲ್ಲೂ ಪ್ರತ್ಯೇಕತೆಯನ್ನು ಬಯಸದೆ ಮುನ್ನಡೆಯಲು ನಾವು ಪ್ರಯತ್ನಿಸುತ್ತಿದ್ದೇವೆ” ಎಂದು ಜೈಶಂಕರ್ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
“ಗಡಿ ವಿವಾದ ಮತ್ತು ಪ್ರಸ್ತುತ ನಮ್ಮ ಸಂಬಂಧಗಳ ಅಸಹಜ ಸ್ವಭಾವದಿಂದಾಗಿ ಚೀನಾ ಸ್ವಲ್ಪ ವಿಭಿನ್ನ ವರ್ಗಕ್ಕೆ ಸೇರಿದೆ. ಇದು ಗಡಿ ನಿರ್ವಹಣೆಗೆ ಸಂಬಂಧಿಸಿದ ಒಪ್ಪಂದಗಳ ಉಲ್ಲಂಘನೆಯ ಫಲಿತಾಂಶವಾಗಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಜೂನ್ 2020ರಲ್ಲಿ ಪೂರ್ವ ಲಡಾಖ್ನ ಗಾಲ್ವಾನ್ ಕಣಿವೆಯಲ್ಲಿ ಉಭಯ ದೇಶಗಳ ಮಿಲಿಟರಿಗಳು ಘರ್ಷಣೆಯಾದಾಗಿನಿಂದ ಉಭಯ ದೇಶಗಳ ರಾಜಧಾನಿಗಳಾದ ಹೊಸ ದೆಹಲಿ ಮತ್ತು ಬೀಜಿಂಗ್ ನಡುವಿನ ಸಂಬಂಧಗಳು ಹದಗೆಟ್ಟಿದೆ.
ಘರ್ಷಣೆಯಲ್ಲಿ ಇಪ್ಪತ್ತು ಭಾರತೀಯ ಸೈನಿಕರು ಕೊಲ್ಲಲ್ಪಟ್ಟರು, ಆದರೆ ಚೀನಾವು ತನ್ನ ಕಡೆಯಿಂದ ನಾಲ್ಕು ಸಾವುನೋವುಗಳಾಗಿವೆ ಎಂದಿದೆ. ಅಂದಿನಿಂದ ಉಭಯ ದೇಶಗಳು ಗಡಿ ಬಿಕ್ಕಟ್ಟಿನಲ್ಲಿ ಸಿಲುಕಿಕೊಂಡಿವೆ.
ಡಿಸೆಂಬರ್ 9 ರಂದು ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್ನಲ್ಲಿ ಭಾರತ ಮತ್ತು ಚೀನಾದ ಸೈನಿಕರು ಘರ್ಷಣೆ ಮಾಡಿದ ನಂತರ ಉಭಯ ದೇಶಗಳ ನಡುವಿನ ಉದ್ವಿಗ್ನತೆ ಮತ್ತೊಮ್ಮೆ ಉಲ್ಬಣಗೊಂಡಿತು.
ಚೀನಾ ಸೈನಿಕರು ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ ಯಥಾಸ್ಥಿತಿಯನ್ನು ಬದಲಾಯಿಸಲು ಯತ್ನಿಸಿದ ನಂತರ ಘರ್ಷಣೆ ನಡೆದಿದೆ ಎಂದು ಭಾರತ ಹೇಳಿದೆ.
ಚೀನಾದ ಮಾಜಿ ವಿದೇಶಾಂಗ ಸಚಿವ ವಾಂಗ್ ಯಿ ಅವರೊಂದಿಗೆ ಮಾತನಾಡಿದ್ದ ಜೈಶಂಕರ್, “ತಾತ್ವಿಕ ಒಪ್ಪಂದ” ಕ್ಕೆ ಅನುಗುಣವಾಗಿ ಗಡಿ ವಿವಾದವನ್ನು ಪರಿಹರಿಸುವವರೆಗೆ ನವದೆಹಲಿ ಮತ್ತು ಬೀಜಿಂಗ್ ನಡುವಿನ ಸಂಬಂಧಗಳು ಸಹಜ ಸ್ಥಿತಿಗೆ ಮರಳಲು ಸಾಧ್ಯವಿಲ್ಲ ಕಳೆದ ತಿಂಗಳು ಹೇಳಿದ್ದರು.
“ನಾವು ಶಾಂತಿ ಮತ್ತು ನೆಮ್ಮದಿಯ ಉಲ್ಲಂಘನೆಯನ್ನು ಹೊಂದಲು ಸಾಧ್ಯವಿಲ್ಲ ಎಂದು ನಾವು ಚೀನಿಯರಿಗೆ ಸ್ಪಷ್ಟವಾಗಿ ಹೇಳಿದ್ದೇವೆ, ನೀವು ಒಪ್ಪಂದಗಳನ್ನು ಉಲ್ಲಂಘಿಸುವಂತಿಲ್ಲ ಮತ್ತು ನಂತರ ಏನೂ ಆಗಿಲ್ಲ ಎಂಬಂತೆ ಉಳಿದ ಸಂಬಂಧವನ್ನು ಮುಂದುವರಿಸಲು ಬಯಸುತ್ತೇವೆ” ಎಂದು ಸಚಿವರು ‘ಇಂಡಿಯಾ ಟುಡೇ’ಗೆ ತಿಳಿಸಿದ್ದರು.
ಇದನ್ನೂ ಓದಿರಿ: ಅರುಣಾಚಲದ 11 ಸ್ಥಳಗಳಿಗೆ ಮರುನಾಮಕರಣ ಮಾಡಿದ ಚೀನಾ; ನಕ್ಷೆ ಬಿಡುಗಡೆ