Homeಮುಖಪುಟ'ಭಾರತದ ಪ್ರತಿಷ್ಠೆ ಅಪಾಯದಲ್ಲಿದೆ': ಅದಾನಿ ಮೇಲಿನ ಹೊಸ ಆರೋಪಗಳ ಕುರಿತು ಜೆಪಿಸಿ ತನಿಖೆಗೆ ರಾಹುಲ್ ಆಗ್ರಹ

‘ಭಾರತದ ಪ್ರತಿಷ್ಠೆ ಅಪಾಯದಲ್ಲಿದೆ’: ಅದಾನಿ ಮೇಲಿನ ಹೊಸ ಆರೋಪಗಳ ಕುರಿತು ಜೆಪಿಸಿ ತನಿಖೆಗೆ ರಾಹುಲ್ ಆಗ್ರಹ

- Advertisement -
- Advertisement -

ಅದಾನಿ ಗ್ರೂಪ್ ಕೃತಕವಾಗಿ ತನ್ನ ಕಂಪನಿಗಳ ಶೇರುಗಳ ಬೆಲೆಗಳನ್ನು ಹೆಚ್ಚಿಸಿದೆ ಎಂದು ಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರ ಯೋಜನೆ (ಒಸಿಸಿಆರ್‌ಪಿ)ಯು ಗುರುವಾರ ಆರೋಪಿಸಿದೆ. ಈ ಹೊಸ ಆರೋಪಗಳ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

INDIA ಸಭೆಗೂ ಮುನ್ನ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ”ಅದಾನಿ ಕುರಿತು ವಿದೇಶಿ ಪತ್ರಿಕೆಗಳು ಪ್ರಕಟಿಸಿದ ಲೇಖನಗಳನ್ನು ಉಲ್ಲೇಖಿಸಿ, ಇವು ಯಕಶ್ಚಿತ್ ಪತ್ರಿಕೆಗಳಲ್ಲ, ಈ ಪತ್ರಿಕೆಗಳು ಭಾರತದಲ್ಲಿ ಹೂಡಿಕೆ ಮಾಡುವುದರ ಮೇಲೆ ಮತ್ತು ಪ್ರಪಂಚದ ಉಳಿದ ಭಾಗಗಳಲ್ಲಿ ಭಾರತದ ಗ್ರಹಿಕೆ ಮೇಲೆ ಪರಿಣಾಮ ಬೀರುತ್ತವೆ. ಒಂದು ಶತಕೋಟಿ ಡಾಲರ್‌ಗೂ ಹೆಚ್ಚು ಹಣ ಭಾರತದಿಂದ ಹೋಗಿದೆ” ಎಂದು ಅವರು ಹೇಳಿದರು.

“ಮೊದಲ ಪ್ರಶ್ನೆ ಉದ್ಭವಿಸುತ್ತದೆ – ಇದು ಯಾರ ಹಣ? ಇದು ಅದಾನಿಯವರದ್ದೋ ಅಥವಾ ಬೇರೆಯವರದ್ದೋ? ಗೌತಮ್ ಅದಾನಿ ಅವರ ಸಹೋದರ ವಿನೋದ್ ಅದಾನಿ ಇದರ ಹಿಂದಿನ ಮಾಸ್ಟರ್ ಮೈಂಡ್. ಈ ಹಣದ ದಂಧೆಯಲ್ಲಿ ಇನ್ನಿಬ್ಬರು ಭಾಗಿಯಾಗಿದ್ದಾರೆ. ಒಬ್ಬರು ನಾಸಿರ್ ಅಲಿ ಶಾಬಾನ್ ಅಹ್ಲಿ, ಇನ್ನೊಬ್ಬರು ಚಾಂಗ್ ಚುಂಗ್ ಲಿಂಗ್ ಎಂಬ ಚೀನಾದ ವ್ಯಕ್ತಿ” ಎಂದು ಅವರು ಹೇಳಿದರು.

”ಎರಡನೆಯ ಪ್ರಶ್ನೆ ಉದ್ಭವಿಸುತ್ತದೆ – ಈ ಇಬ್ಬರು ವಿದೇಶಿ ಪ್ರಜೆಗಳಿಗೆ ಭಾರತದ ಬಹುತೇಕ ಎಲ್ಲಾ ಮೂಲಸೌಕರ್ಯಗಳನ್ನು ನಿಯಂತ್ರಿಸುವ ಕಂಪನಿಗಳೊಂದಿಗೆ ಆಟವಾಡಲು ಏಕೆ ಅನುಮತಿಸಲಾಗಿದೆ?” ಎಂದು ರಾಹುಲ್ ಗಾಂಧಿ ಪ್ರಶ್ನೆ ಮಾಡಿದ್ದಾರೆ.

”ಸೆಬಿ ತನಿಖೆ ನಡೆಸಿ ಅದಾನಿ ಗ್ರೂಪ್‌ಗೆ ಕ್ಲೀನ್ ಚಿಟ್ ನೀಡಿದ ಮಹಾನುಭಾವರು ಈಗ ಅದೇ ಗುಂಪಿನ ಮಾಲೀಕತ್ವದ ಮಾಧ್ಯಮ ಕಂಪನಿಯಲ್ಲಿ ನಿರ್ದೇಶಕರಾಗಿದ್ದಾರೆ” ಎಂದು ಕಾಂಗ್ರೆಸ್ ನಾಯಕ ಹೇಳಿದರು.

”ಈ ವಿಷಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಯಾಕೆ ಮೌನವಾಗಿದ್ದಾರೆ? ಅವರು ಈ ವಿಷಯವನ್ನು ಏಕೆ ತನಿಖೆ ಮಾಡುತ್ತಿಲ್ಲ?” ಎಂದು ರಾಹುಲ್ ಪ್ರಶ್ನೆ ಮಾಡಿದ್ದಾರೆ.

”ರಾಷ್ಟ್ರ ರಾಜಧಾನಿಯಲ್ಲಿ ಮುಂದಿನ ವಾರ ನಡೆಯಲಿರುವ ಜಿ 20 ಶೃಂಗಸಭೆಗೆ ಮುಂಚಿತವಾಗಿ ಭಾರತದ ಪ್ರತಿಷ್ಠೆ ಅಪಾಯದಲ್ಲಿದೆ. ಪ್ರಧಾನಿ ಮೋದಿ ಅವರು ಈ ವಿಷಯವನ್ನು ಪರಿಶೀಲಿಸಬೇಕು” ಎಂದು ಹೇಳಿದರು.

ಬಿಲಿಯನೇರ್ ಗೌತಮ್ ಅದಾನಿ ಅವರ ಸಮೂಹವು ಗುರುವಾರ 2013 ರಿಂದ 2018 ರ ಅವಧಿಯಲ್ಲಿ ಕೃತಕವಾಗಿ ತನ್ನ ಕಂಪನಿಗಳ ಶೇರುಗಳ ಬೆಲೆಗಳನ್ನು ಹೆಚ್ಚಿಸಿದೆ ಎಂದು ಮಾರಿಷಸ್ ಮೂಲದ ಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರ ಯೋಜನೆ (ಒಸಿಸಿಆರ್‌ಪಿ)ಯು ಗುರುವಾರ ಆರೋಪಿಸಿದೆ.

ಇದನ್ನೂ ಓದಿ: ಗೌತಮ್ ಅದಾನಿಗೆ ಮತ್ತೆ ಸಂಕಷ್ಟ: ಕೃತಕವಾಗಿ ಶೇರುಗಳ ಬೆಲೆ ಹೆಚ್ಚಿಸಿದ ಅದಾನಿ ಗ್ರೂಪ್- ಒಸಿಸಿಆರ್‌ಪಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...