Homeಮುಖಪುಟ'ಇಂಡಿಯಾ'ದ ಜವಾಬ್ದಾರಿ ವಹಿಸಿಕೊಳ್ಳಲು ಸಿದ್ಧ - ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

‘ಇಂಡಿಯಾ’ದ ಜವಾಬ್ದಾರಿ ವಹಿಸಿಕೊಳ್ಳಲು ಸಿದ್ಧ – ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

- Advertisement -
- Advertisement -

ವಿರೋಧ ಪಕ್ಷ ಒಕ್ಕೂಟ ಇಂಡಿಯಾದ ಕಾರ್ಯಚಟುವಟಿಕೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತೃಪ್ತಿ ವ್ಯಕ್ತಪಡಿಸಿದ್ದು, ಅವಕಾಶ ಸಿಕ್ಕರೆ ಮೈತ್ರಿಕೂಟದ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಇಂಗಿತವನ್ನು ಸೂಚಿಸಿದ್ದಾರೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ತಮ್ಮ ಪಾತ್ರವನ್ನು ನಿರ್ವಹಿಸುತ್ತಿರುವಾಗಲೆ ಇಂಡಿಯಾ ಒಕ್ಕೂಟವನ್ನು ಮುನ್ನಡೆಸುವ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ ಎಂದು ಅವರು ಹೇಳಿದ್ದಾರೆ. ‘ಇಂಡಿಯಾ’ದ ಜವಾಬ್ದಾರಿ

“ನಾನು ಇಂಡಿಯಾ ಒಕ್ಕೂಟವನ್ನು ರಚಿಸಿದ್ದೇನೆ, ಈಗ ಅದನ್ನು ನಿರ್ವಹಿಸುವುದು ಮುನ್ನಡೆಸುವವರಿಗೆ ಬಿಟ್ಟದ್ದು. ಅವರು ಉತ್ತಮ ಪ್ರದರ್ಶನವನ್ನು ನೀಡಲು ಸಾಧ್ಯವಾಗದಿದ್ದರೆ, ನಾನು ಏನು ಮಾಡಲು ಸಾಧ್ಯ?ಎಲ್ಲರೂ ಜೊತೆಯಲ್ಲಿ ಮುನ್ನಡೆಸಬೇಕು ಎಂದು ನಾನು ಹೇಳುತ್ತೇನೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಿಜೆಪಿಯ ಪ್ರಭಲ ವಿರೋಧಿ ಶಕ್ತಿಯಾಗಿದ್ದರೂ ಅವರು ಯಾಕೆ ಮೈತ್ರಿಕೂಟವನ್ನು ಮುನ್ನಡೆಸುತ್ತಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಅವಕಾಶ ನೀಡಿದರೆ ನಾನು ಅದರ ಸುಗಮ ಕಾರ್ಯನಿರ್ವಹಣೆಯನ್ನು ಖಚಿತಪಡಿಸಿಕೊಳ್ಳುತ್ತೇನೆ. ನಾನು ಪಶ್ಚಿಮ ಬಂಗಾಳದಿಂದ ಹೊರಗೆ ಹೋಗಲು ಬಯಸುವುದಿಲ್ಲ, ಆದರೆ ಇಲ್ಲಿಂದಲೆ ಅದನ್ನು ಮುನ್ನಡೆಸಲು ನನಗೆ ಸಾಧ್ಯ” ಎಂದು ಅವರು ಹೇಳಿದ್ದಾರೆ. ‘ಇಂಡಿಯಾ’ದ ಜವಾಬ್ದಾರಿ

ಬಿಜೆಪಿಯನ್ನು ಎದುರಿಸಲು ರಚಿಸಲಾದ ಇಂಡಿಯಾ ಮೈತ್ರಿಕೂಟದಲ್ಲಿ ಎರಡು ಡಜನ್‌ಗಿಂತಲೂ ಹೆಚ್ಚು ವಿರೋಧ ಪಕ್ಷಗಳನ್ನು ಒಳಗೊಂಡಿದೆ. ಆದಾಗ್ಯೂ, ಮೈತ್ರಿಯಲ್ಲಿನ ಆಂತರಿಕ ಭಿನ್ನಾಭಿಪ್ರಾಯಗಳು ಮತ್ತು ಸಮನ್ವಯದ ಕೊರತೆಯ ಕಾರಣಕ್ಕೆ ವಿವಿಧ ವಲಯಗಳಿಂದ ಟೀಕೆಗೆ ಗುರಿಯಾಗಿದೆ.

ತಮ್ಮ ಅಹಂಗಳನ್ನು ಬದಿಗಿಟ್ಟು ಮಮತಾ ಬ್ಯಾನರ್ಜಿ ಅವರನ್ನು ವಿರೋಧ ಪಕ್ಷದ ನಾಯಕಿಯಾಗಿ ಗುರುತಿಸುವಂತೆ ಕಾಂಗ್ರೆಸ್ ಮತ್ತು ಇತರ ಇಂಡಿಯಾ ಒಕ್ಕೂಟದ ಮಿತ್ರಪಕ್ಷಗಳಿಗೆ ಅವರ ಪಕ್ಷದ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಕರೆ ನೀಡಿದ ಕೆಲವೆ ದಿನಗಳ ನಂತರ ಮಮತಾ ಅವರು ಈ ಹೇಳಿಕೆಗಳನ್ನು ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ ಬಿಜೆಪಿ ಅದ್ಭುತ ಪ್ರದರ್ಶನವನ್ನು ನೀಡಿದ್ದು, ಪಕ್ಷದ ನೇತೃತ್ವದ ಆಡಳಿತರೂಢ ಮಹಾಯುತಿ ಮೈತ್ರಿಕೂಟವನ್ನು ಪ್ರಚಂಡ ವಿಜಯದತ್ತ ಮುನ್ನಡೆಸಿ ದಾಖಲೆ ಸಂಖ್ಯೆಯ ಸ್ಥಾನಗಳನ್ನು ಪಡೆದುಕೊಂಡಿದೆ. ಈ ನಡುವೆ ಜಾರ್ಖಂಡ್ ಚುನಾವಣೆಯಲ್ಲಿ ಜೆಎಂಎಂ ಕೂಡಾ ಅದ್ಭುತ ಪ್ರದರ್ಶನ ನೀಡಿದ್ದು ಇಂಡಿಯಾ ಮೈತ್ರಿಕೂಟ ಜಾರ್ಖಂಡ್‌ನಲ್ಲಿ ಮತ್ತೆ ಅಧಿಕಾರ ವಹಿಸಿಕೊಂಡಿದೆ.

ಅದಾಗ್ಯೂ, ಕಾಂಗ್ರೆಸ್ ತನ್ನ ಸೋಲಿನ ಸರಣಿಯನ್ನು ಮುಂದುವರೆಸಿದೆ. ಮಹಾರಾಷ್ಟ್ರದಲ್ಲಿ ಪಕ್ಷವು ತನ್ನ ಅತ್ಯಂತ ಕಳಪೆ ಪ್ರದರ್ಶನ ತೋರಿದೆ. ಜಾರ್ಖಂಡ್‌ನಲ್ಲಿ ಆಡಳಿತಾರೂಢ JMM ಜೊತೆಗೆ ಸಣ್ಣ ಮಿತ್ರ ಪಕ್ಷವಾಗಿ ಕಾಂಗ್ರೆಸ್ ಜೊತೆಗೂಡಿದೆ. ಇತರ ಮಿತ್ರಪಕ್ಷಗಳು ಕಾಂಗ್ರೆಸ್ ಅನ್ನು ಮೀರಿಸಿದ್ದು ವಿರೋಧ ಪಕ್ಷದ ಒಕ್ಕೂಟದಲ್ಲಿ ಅದರ ಪಾತ್ರವು ಮತ್ತಷ್ಟು ಕ್ಷೀಣಿಸಿದೆ.

ಮತ್ತೊಂದೆಡೆ, ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಪ್ರತಿಭಟನೆಯಂತಹ ವಿವಾದಗಳ ನಡುವೆಯು ಬಿಜೆಪಿಯನ್ನು ಸೋಲಿಸುವ ಮೂಲಕ ಟಿಎಂಸಿಯು ರಾಜ್ಯದಲ್ಲಿ ಇತ್ತೀಚೆಗೆ ನಡೆದ ಉಪಚುನಾವಣೆ ಪ್ರಾಬಲ್ಯ ಮೆರೆದಿದೆ. ಸಿಪಿಐ(ಎಂ) ನೇತೃತ್ವದ ಲೆಫ್ಟ್ ಫ್ರಂಟ್, ಅದರ ಮಿತ್ರಪಕ್ಷವಾದ ಸಿಪಿಐ(ಎಂಎಲ್) ಲಿಬರೇಶನ್ ಮತ್ತು ಕಾಂಗ್ರೆಸ್, ಇಂಡಿಯಾ ಮೈತ್ರಿಯ ರಾಷ್ಟ್ರೀಯ ಮಟ್ಟದ ಮಿತ್ರ ಪಕ್ಷವಾದ ಟಿಎಂಸಿಯ ಮುಂದೆ ಹಿನ್ನಡೆ ಅನುಭವಿಸಿವೆ. ಅವರ ಅಭ್ಯರ್ಥಿಗಳು ಠೇವಣಿ ಕೂಡಾ ಕಳೆದುಕೊಂಡಿದ್ದಾರೆ.

ಇದನ್ನೂ ಓದಿ: ಜಗನ್ ನಡೆಸಿದ್ದ ಸೋಲಾರ್ ಒಪ್ಪಂದದಲ್ಲಿ ನಾಯ್ಡು ಸರ್ಕಾರ ಅದಾನಿಯನ್ನು ರಕ್ಷಿಸುತ್ತಿದೆ – ಆಂಧ್ರ ಕಾಂಗ್ರೆಸ್ ಅಧ್ಯಕ್ಷೆ ಶರ್ಮಿಳಾ ಆರೋಪ

ಜಗನ್ ನಡೆಸಿದ್ದ ಸೋಲಾರ್ ಒಪ್ಪಂದದಲ್ಲಿ ನಾಯ್ಡು ಸರ್ಕಾರ ಅದಾನಿಯನ್ನು ರಕ್ಷಿಸುತ್ತಿದೆ – ಆಂಧ್ರ ಕಾಂಗ್ರೆಸ್ ಅಧ್ಯಕ್ಷೆ ಶರ್ಮಿಳಾ ಆರೋಪ

ಇದನ್ನೂ ಓದಿ: ಜಗನ್ ನಡೆಸಿದ್ದ ಸೋಲಾರ್ ಒಪ್ಪಂದದಲ್ಲಿ ನಾಯ್ಡು ಸರ್ಕಾರ ಅದಾನಿಯನ್ನು ರಕ್ಷಿಸುತ್ತಿದೆ – ಆಂಧ್ರ ಕಾಂಗ್ರೆಸ್ ಅಧ್ಯಕ್ಷೆ ಶರ್ಮಿಳಾ ಆರೋಪ ಸ್ಸವ fಗವಸಾವ್ದಅವ ಅfವವದಸವಸಸವದ ಅfವಾವಾದವ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...