Homeಮುಖಪುಟ'ಇಂಡಿಯಾ'ದ ಜವಾಬ್ದಾರಿ ವಹಿಸಿಕೊಳ್ಳಲು ಸಿದ್ಧ - ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

‘ಇಂಡಿಯಾ’ದ ಜವಾಬ್ದಾರಿ ವಹಿಸಿಕೊಳ್ಳಲು ಸಿದ್ಧ – ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

- Advertisement -
- Advertisement -

ವಿರೋಧ ಪಕ್ಷ ಒಕ್ಕೂಟ ಇಂಡಿಯಾದ ಕಾರ್ಯಚಟುವಟಿಕೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತೃಪ್ತಿ ವ್ಯಕ್ತಪಡಿಸಿದ್ದು, ಅವಕಾಶ ಸಿಕ್ಕರೆ ಮೈತ್ರಿಕೂಟದ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಇಂಗಿತವನ್ನು ಸೂಚಿಸಿದ್ದಾರೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ತಮ್ಮ ಪಾತ್ರವನ್ನು ನಿರ್ವಹಿಸುತ್ತಿರುವಾಗಲೆ ಇಂಡಿಯಾ ಒಕ್ಕೂಟವನ್ನು ಮುನ್ನಡೆಸುವ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ ಎಂದು ಅವರು ಹೇಳಿದ್ದಾರೆ. ‘ಇಂಡಿಯಾ’ದ ಜವಾಬ್ದಾರಿ

“ನಾನು ಇಂಡಿಯಾ ಒಕ್ಕೂಟವನ್ನು ರಚಿಸಿದ್ದೇನೆ, ಈಗ ಅದನ್ನು ನಿರ್ವಹಿಸುವುದು ಮುನ್ನಡೆಸುವವರಿಗೆ ಬಿಟ್ಟದ್ದು. ಅವರು ಉತ್ತಮ ಪ್ರದರ್ಶನವನ್ನು ನೀಡಲು ಸಾಧ್ಯವಾಗದಿದ್ದರೆ, ನಾನು ಏನು ಮಾಡಲು ಸಾಧ್ಯ?ಎಲ್ಲರೂ ಜೊತೆಯಲ್ಲಿ ಮುನ್ನಡೆಸಬೇಕು ಎಂದು ನಾನು ಹೇಳುತ್ತೇನೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಿಜೆಪಿಯ ಪ್ರಭಲ ವಿರೋಧಿ ಶಕ್ತಿಯಾಗಿದ್ದರೂ ಅವರು ಯಾಕೆ ಮೈತ್ರಿಕೂಟವನ್ನು ಮುನ್ನಡೆಸುತ್ತಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಅವಕಾಶ ನೀಡಿದರೆ ನಾನು ಅದರ ಸುಗಮ ಕಾರ್ಯನಿರ್ವಹಣೆಯನ್ನು ಖಚಿತಪಡಿಸಿಕೊಳ್ಳುತ್ತೇನೆ. ನಾನು ಪಶ್ಚಿಮ ಬಂಗಾಳದಿಂದ ಹೊರಗೆ ಹೋಗಲು ಬಯಸುವುದಿಲ್ಲ, ಆದರೆ ಇಲ್ಲಿಂದಲೆ ಅದನ್ನು ಮುನ್ನಡೆಸಲು ನನಗೆ ಸಾಧ್ಯ” ಎಂದು ಅವರು ಹೇಳಿದ್ದಾರೆ. ‘ಇಂಡಿಯಾ’ದ ಜವಾಬ್ದಾರಿ

ಬಿಜೆಪಿಯನ್ನು ಎದುರಿಸಲು ರಚಿಸಲಾದ ಇಂಡಿಯಾ ಮೈತ್ರಿಕೂಟದಲ್ಲಿ ಎರಡು ಡಜನ್‌ಗಿಂತಲೂ ಹೆಚ್ಚು ವಿರೋಧ ಪಕ್ಷಗಳನ್ನು ಒಳಗೊಂಡಿದೆ. ಆದಾಗ್ಯೂ, ಮೈತ್ರಿಯಲ್ಲಿನ ಆಂತರಿಕ ಭಿನ್ನಾಭಿಪ್ರಾಯಗಳು ಮತ್ತು ಸಮನ್ವಯದ ಕೊರತೆಯ ಕಾರಣಕ್ಕೆ ವಿವಿಧ ವಲಯಗಳಿಂದ ಟೀಕೆಗೆ ಗುರಿಯಾಗಿದೆ.

ತಮ್ಮ ಅಹಂಗಳನ್ನು ಬದಿಗಿಟ್ಟು ಮಮತಾ ಬ್ಯಾನರ್ಜಿ ಅವರನ್ನು ವಿರೋಧ ಪಕ್ಷದ ನಾಯಕಿಯಾಗಿ ಗುರುತಿಸುವಂತೆ ಕಾಂಗ್ರೆಸ್ ಮತ್ತು ಇತರ ಇಂಡಿಯಾ ಒಕ್ಕೂಟದ ಮಿತ್ರಪಕ್ಷಗಳಿಗೆ ಅವರ ಪಕ್ಷದ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಕರೆ ನೀಡಿದ ಕೆಲವೆ ದಿನಗಳ ನಂತರ ಮಮತಾ ಅವರು ಈ ಹೇಳಿಕೆಗಳನ್ನು ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ ಬಿಜೆಪಿ ಅದ್ಭುತ ಪ್ರದರ್ಶನವನ್ನು ನೀಡಿದ್ದು, ಪಕ್ಷದ ನೇತೃತ್ವದ ಆಡಳಿತರೂಢ ಮಹಾಯುತಿ ಮೈತ್ರಿಕೂಟವನ್ನು ಪ್ರಚಂಡ ವಿಜಯದತ್ತ ಮುನ್ನಡೆಸಿ ದಾಖಲೆ ಸಂಖ್ಯೆಯ ಸ್ಥಾನಗಳನ್ನು ಪಡೆದುಕೊಂಡಿದೆ. ಈ ನಡುವೆ ಜಾರ್ಖಂಡ್ ಚುನಾವಣೆಯಲ್ಲಿ ಜೆಎಂಎಂ ಕೂಡಾ ಅದ್ಭುತ ಪ್ರದರ್ಶನ ನೀಡಿದ್ದು ಇಂಡಿಯಾ ಮೈತ್ರಿಕೂಟ ಜಾರ್ಖಂಡ್‌ನಲ್ಲಿ ಮತ್ತೆ ಅಧಿಕಾರ ವಹಿಸಿಕೊಂಡಿದೆ.

ಅದಾಗ್ಯೂ, ಕಾಂಗ್ರೆಸ್ ತನ್ನ ಸೋಲಿನ ಸರಣಿಯನ್ನು ಮುಂದುವರೆಸಿದೆ. ಮಹಾರಾಷ್ಟ್ರದಲ್ಲಿ ಪಕ್ಷವು ತನ್ನ ಅತ್ಯಂತ ಕಳಪೆ ಪ್ರದರ್ಶನ ತೋರಿದೆ. ಜಾರ್ಖಂಡ್‌ನಲ್ಲಿ ಆಡಳಿತಾರೂಢ JMM ಜೊತೆಗೆ ಸಣ್ಣ ಮಿತ್ರ ಪಕ್ಷವಾಗಿ ಕಾಂಗ್ರೆಸ್ ಜೊತೆಗೂಡಿದೆ. ಇತರ ಮಿತ್ರಪಕ್ಷಗಳು ಕಾಂಗ್ರೆಸ್ ಅನ್ನು ಮೀರಿಸಿದ್ದು ವಿರೋಧ ಪಕ್ಷದ ಒಕ್ಕೂಟದಲ್ಲಿ ಅದರ ಪಾತ್ರವು ಮತ್ತಷ್ಟು ಕ್ಷೀಣಿಸಿದೆ.

ಮತ್ತೊಂದೆಡೆ, ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಪ್ರತಿಭಟನೆಯಂತಹ ವಿವಾದಗಳ ನಡುವೆಯು ಬಿಜೆಪಿಯನ್ನು ಸೋಲಿಸುವ ಮೂಲಕ ಟಿಎಂಸಿಯು ರಾಜ್ಯದಲ್ಲಿ ಇತ್ತೀಚೆಗೆ ನಡೆದ ಉಪಚುನಾವಣೆ ಪ್ರಾಬಲ್ಯ ಮೆರೆದಿದೆ. ಸಿಪಿಐ(ಎಂ) ನೇತೃತ್ವದ ಲೆಫ್ಟ್ ಫ್ರಂಟ್, ಅದರ ಮಿತ್ರಪಕ್ಷವಾದ ಸಿಪಿಐ(ಎಂಎಲ್) ಲಿಬರೇಶನ್ ಮತ್ತು ಕಾಂಗ್ರೆಸ್, ಇಂಡಿಯಾ ಮೈತ್ರಿಯ ರಾಷ್ಟ್ರೀಯ ಮಟ್ಟದ ಮಿತ್ರ ಪಕ್ಷವಾದ ಟಿಎಂಸಿಯ ಮುಂದೆ ಹಿನ್ನಡೆ ಅನುಭವಿಸಿವೆ. ಅವರ ಅಭ್ಯರ್ಥಿಗಳು ಠೇವಣಿ ಕೂಡಾ ಕಳೆದುಕೊಂಡಿದ್ದಾರೆ.

ಇದನ್ನೂ ಓದಿ: ಜಗನ್ ನಡೆಸಿದ್ದ ಸೋಲಾರ್ ಒಪ್ಪಂದದಲ್ಲಿ ನಾಯ್ಡು ಸರ್ಕಾರ ಅದಾನಿಯನ್ನು ರಕ್ಷಿಸುತ್ತಿದೆ – ಆಂಧ್ರ ಕಾಂಗ್ರೆಸ್ ಅಧ್ಯಕ್ಷೆ ಶರ್ಮಿಳಾ ಆರೋಪ

ಜಗನ್ ನಡೆಸಿದ್ದ ಸೋಲಾರ್ ಒಪ್ಪಂದದಲ್ಲಿ ನಾಯ್ಡು ಸರ್ಕಾರ ಅದಾನಿಯನ್ನು ರಕ್ಷಿಸುತ್ತಿದೆ – ಆಂಧ್ರ ಕಾಂಗ್ರೆಸ್ ಅಧ್ಯಕ್ಷೆ ಶರ್ಮಿಳಾ ಆರೋಪ

ಇದನ್ನೂ ಓದಿ: ಜಗನ್ ನಡೆಸಿದ್ದ ಸೋಲಾರ್ ಒಪ್ಪಂದದಲ್ಲಿ ನಾಯ್ಡು ಸರ್ಕಾರ ಅದಾನಿಯನ್ನು ರಕ್ಷಿಸುತ್ತಿದೆ – ಆಂಧ್ರ ಕಾಂಗ್ರೆಸ್ ಅಧ್ಯಕ್ಷೆ ಶರ್ಮಿಳಾ ಆರೋಪ ಸ್ಸವ fಗವಸಾವ್ದಅವ ಅfವವದಸವಸಸವದ ಅfವಾವಾದವ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...