Homeಸಿನಿಮಾಕ್ರೀಡೆಒಲಿಂಪಿಕ್ಸ್ ಇತಿಹಾಸದಲ್ಲಿ ಭಾರತಕ್ಕೆ ಸಿಗದ ನಿರೀಕ್ಷಿತ ಯಶಸ್ಸು; 120 ವರ್ಷಗಳಲ್ಲಿ ಸಿಕ್ಕಿದ್ದು 28 ಮೆಡಲ್

ಒಲಿಂಪಿಕ್ಸ್ ಇತಿಹಾಸದಲ್ಲಿ ಭಾರತಕ್ಕೆ ಸಿಗದ ನಿರೀಕ್ಷಿತ ಯಶಸ್ಸು; 120 ವರ್ಷಗಳಲ್ಲಿ ಸಿಕ್ಕಿದ್ದು 28 ಮೆಡಲ್

- Advertisement -
- Advertisement -

ಹೀಗೊಂದು ತಮಾಷೆಯ ಲೆಕ್ಕಾಚಾರ ಎಂದಿಟ್ಟುಕೊಳ್ಳಿ: 120 ಕೋಟಿ ಜನಸಂಖ್ಯೆ. ಒಂದು ಕೋಟಿಗೆ ಒಂದು ಮೆಡಲ್ ಅಂತ ಲೆಕ್ಕ ಹಾಕಿದರೂ ಒಲಿಂಪಿಕ್ಸ್ ಇತಿಹಾಸದಲ್ಲಿ ಭಾರತ ಇಲ್ಲಿತನಕ ಕನಿಷ್ಟ 120 ಪದಕಗಳನ್ನಾದರೂ ಪಡೆಯಬಹುದಿತ್ತು. ಆದರೆ ಅದ್ಯಾಕೋ ಒಲಿಂಪಿಕ್ಸ್ ಅಂದ್ರೆ ಭಾರತದ ಪಾಲಿಗೆ ನತದೃಷ್ಟ ಕ್ರೀಡಾಕೂಟವಾಗಿದೆ. ಇವರು ಪದಕ ಗೆದ್ದೇ ಗೆಲ್ತಾರೆ ಎನ್ನುವ ನಿರೀಕ್ಷೆಯೊಂದಿಗೆ ಒಲಿಂಪಿಕ್ಸ್‌ಗೆ ಕಾಲಿಟ್ಟವರಲ್ಲಿ ಬಹುತೇಕ ಮಂದಿ ಬರಿಗೈಯಲ್ಲಿ ಮರಳಿದ್ದೇ ಹೆಚ್ಚು. ಹೀಗಾಗಿ ಭಾರತ ಒಲಿಂಪಿಕ್ಸ್ ಇತಿಹಾಸದಲ್ಲಿ ಪಡೆದುಕೊಂಡಿರುವ ಒಟ್ಟು ಪದಕಗಳ ಸಂಖ್ಯೆಯೇ ಜಸ್ಟ್ 28.

ಅಮೆರಿಕ, ಚೀನಾ, ಇಂಗ್ಲೆಂಡ್‌ನಂತಹ ದೇಶಗಳು ಒಲಿಂಪಿಕ್ ಮೆಡೆಲ್ ಲಿಸ್ಟ್‌ನಲ್ಲಿ ಚಿನ್ನ ಎಷ್ಟು ಗೆದ್ದಿದೆ ಅಂತ ಲೆಕ್ಕ ಹಾಕುವಂತಿದ್ದರೆ, ಭಾರತ ತಾನು ಗೆದ್ದಿರುವ ಅಷ್ಟೂ ಪದಕಗಳನ್ನು ಲೆಕ್ಕಹಾಕುವ ಸ್ಥಿತಿಯಲ್ಲಿದೆ. ಭಾರತದಲ್ಲಿ ಕ್ರಿಕೆಟ್ ಬಿಟ್ಟು ಉಳಿದ ಕ್ರೀಡೆಗಳಿಗೆ ಪ್ರೋತ್ಸಾಹ ಇಲ್ಲದೇ ಇರುವುದು ಒಲಿಂಪಿಕ್ಸ್‌ನಲ್ಲಿ ಭಾರತದ ಹೀನಾಯ ಸ್ಥಿತಿಗೆ ಕಾರಣವಾಗಿದೆ. ಅಂದಹಾಗೆ ಭಾರತ ತನ್ನ ಒಲಿಂಪಿಕ್ ಇತಿಹಾಸದಲ್ಲಿ ಗೆದ್ದಿರುವ ಒಟ್ಟು ಚಿನ್ನದ ಪದಗಳ ಸಂಖ್ಯೆ ಕೇವಲ 9. ಅದರಲ್ಲಿ 8 ಟೀಮ್‌ಗೇಮ್‌ನಲ್ಲಿ ಬಂದಿದ್ದರೆ, ವೈಯಕ್ತಿಕವಾಗಿ ಬಂದಿರುವುದು ಕೇವಲ ಒಂದು. 7 ಬೆಳ್ಳಿಯ ಪದಕಗಳಿವೆ. 12 ಕಂಚಿನ ಪದಕದ ಸಾಧನೆಯನ್ನು ಭಾರತ ಒಲಿಂಪಿಕ್ಸ್ ಇತಿಹಾಸದಲ್ಲಿ ಮಾಡಿದೆ. ಕುಸ್ತಿ, ಶೂಟಿಂಗ್, ಟೆನಿಸ್, ಬ್ಯಾಡ್ಮಿಂಟನ್, ಬಾಕ್ಸಿಂಗ್‌ನಲ್ಲಿ ಭಾರತ ಪದಕ ಗೆದ್ದಿದ್ದು ಬಿಟ್ರೆ ಉಳಿದ ಕ್ರೀಡೆಗಳಲ್ಲಿ ಶೂನ್ಯ ಸಾಧನೆ.

ಒಲಿಂಪಿಕ್ಸ್‌ನಲ್ಲಿ ಭಾರತದ ಹೆಸರು ಕಾಣಸಿಕ್ಕಿದ್ದು 1900ರಲ್ಲಿ. ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ನಾರ್ಮನ್ ಪ್ರಿಚರ್ಡ್ 200 ಮೀಟರ್ ಹರ್ಡಲ್ಸ್ ಮತ್ತು 200 ಮೀಟರ್ ಓಟದಲ್ಲಿ ಬೆಳ್ಳಿ ಪದಕ ಗೆದ್ದಿದ್ದರು. ಆದರೆ ಅದು ಬ್ರಿಟಿಷ್ ಇಂಡಿಯಾ ಆಗಿತ್ತು. ಭಾರತದ ಹಾಕಿ ತಂಡ 1928, 1932, 1936, 1948, 1952, 1956, 1964, 1980 ಹೀಗೆ 8 ಬಾರಿ ಚಿನ್ನದ ಪದಕ ಗಳಿಸಿತ್ತು. 1984ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ನಿಂದ 1996ರ ಬಾರ್ಸಿಲೋನ ಒಲಿಂಪಿಕ್ಸ್ ನಡುವೆ ಭಾರತ ಒಂದೂ ಪದಕ ಗೆದ್ದಿರಲಿಲ್ಲ.

PC : Times of India

ಅಂದಹಾಗೆ ನಾರ್ಮನ್ ಪ್ರಿಚರ್ಡ್ ನಂತರ ಭಾರತದ ಪರ ವೈಯಕ್ತಿಕ ವಿಭಾಗದಲ್ಲಿ ಚಿನ್ನ ಗೆದ್ದವರು ಕಶಬಾ ಜಾಧವ್. 1952ರ ಹಲ್ಸೆಂಕಿ ಒಲಿಂಪಿಕ್ಸ್‌ನಲ್ಲಿ ಜಾಧವ್ ಕುಸ್ತಿಯಲ್ಲಿ ಕಂಚು ಗೆದ್ದಿದ್ದು ಸ್ವತಂತ್ರ ಭಾರತ ಮೊದಲ ವೈಯಕ್ತಿಕ ಪದಕ. ಇದನ್ನು ಬಿಟ್ಟರೆ ವೈಯಕ್ತಿಕ ವಿಭಾಗದಲ್ಲಿ ಮತ್ತೊಂದು ಪದಕವನ್ನು ಭಾರತ ಗೆಲ್ಲಬೇಕಾದರೆ 1996ರ ತನಕ ಕಾಯಬೇಕಾಗಿತ್ತು. 1996ರ ಬಾರ್ಸಿಲೋನಾ ಒಲಿಂಪಿಕ್ಸ್‌ನಲ್ಲಿ ಲಿಯಾಂಡರ್ ಪೇಸ್ ಕಂಚಿನ ಪದಕ ಗೆದ್ದಿದ್ದು ಹೊಸ ಇತಿಹಾಸ ಸೃಷ್ಟಿಸಿತ್ತು. ಇಲ್ಲಿಂದ ನಂತರ ಭಾರತ ಪ್ರತಿಯೊಂದು ಒಲಿಂಪಿಕ್ಸ್‌ನಲ್ಲೂ ಕನಿಷ್ಟ ಒಂದಾದರೂ ಪದಕವನ್ನು ಪಡೆದುಕೊಂಡಿದೆ.

2000ದಲ್ಲಿ ಸಿಡ್ನಿಯಲ್ಲಿ ಕರ್ಣಂ ಮಲ್ಲೇಶ್ವರಿ ಭಾರತದ ಭಾರ ಎತ್ತಿ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದರು. 2004ರ ಅಥೆನ್ಸ್ ಒಲಿಂಪಿಕ್ಸ್‌ನಲ್ಲಿ ರಾಜ್ಯವರ್ಧನ್ ಸಿಂಗ್ ರಾಥೋಡ್ ಶೂಟಿಂಗ್ ವಿಭಾಗದ ಡಬಲ್ ಟ್ರಾಪ್‌ನಲ್ಲಿ ರಜತ ಗೆದ್ದಿದ್ದರು. ಭಾರತದ ಪಾಲಿಗೆ ವೈಯಕ್ತಿಕ ಮಟ್ಟದಲ್ಲಿ ಇದು ಹೊಸ ಸಾಧನೆ ಆಗಿತ್ತು.

ಭಾರತ ಒಲಿಂಪಿಕ್ಸ್‌ನ ಮೊದಲ ವೈಯಕ್ತಿಕ ಚಿನ್ನ ಗೆದ್ದಿದ್ದು 2008ರಲ್ಲಿ. ಕೊನೆಗೂ ಒಲಿಂಪಿಕ್ ಸ್ವರ್ಣವನ್ನು ನನಸು ಮಾಡಿದ್ದು ಅಭಿನವ್ ಭಿಂದ್ರಾ. ಭಿಂದ್ರಾ ಅಂದು 10 ಮೀ ರೈಫಲ್ ವಿಭಾಗದಲ್ಲಿ ಚಿನ್ನಕ್ಕೆ ಗುರಿ ಇಟ್ಟಿದ್ದರು. ಇದು ಸ್ವರ್ಣದ ಓಪನಿಂಗ್ ಆಗಿದ್ದರೂ, ಅಲ್ಲಿಂದ ಇಲ್ಲಿ ತನಕ ಮತ್ತೊಂದು ಚಿನ್ನ ಭಾರತಕ್ಕೆ ದಕ್ಕಿಲ್ಲ ಅನ್ನುವುದು ಕೂಡ ನಿರಾಶಾದಾಯಕ ಸತ್ಯ.

ಬೀಜಿಂಗ್‌ನಲ್ಲಿ ಬಾಕ್ಸಿಂಗ್‌ನಲ್ಲಿ ವಿಜೇಂದರ್ ಸಿಂಗ್ ಮತ್ತು ಕುಸ್ತಿಯಲ್ಲಿ ಸುಶೀಲ್ ಕುಮಾರ್ ಕಂಚಿನ ಪದಕಕ್ಕೆ ಕೊರಳೊಡ್ಡಿ ಇತಿಹಾಸ ಬರೆದಿದ್ದರು.

ಇನ್ನು 2012ರ ಲಂಡನ್ ಒಲಿಂಪಿಕ್ಸ್ ಭಾರತಕ್ಕೆ ಸರ್ವಶ್ರೇಷ್ಠ ಒಲಿಂಪಿಕ್ಸ್. ಲಂಡನ್‌ನಲ್ಲಿ ಭಾರತ 2 ಬೆಳ್ಳಿ ಮತ್ತು 4 ಕಂಚಿನ ಪದಕ ಗೆದ್ದುಕೊಂಡಿತ್ತು. ಶೂಟಿಂಗ್‌ನಲ್ಲಿ ವಿಜಯ ಕುಮಾರ್ ಮತ್ತು ಕುಸ್ತಿಯಲ್ಲಿ ಸುಶೀಲ್ ಕುಮಾರ್ ಬೆಳ್ಳಿ ಗೆದ್ದರೆ, ಬ್ಯಾಡ್ಮಿಂಟನ್‌ನಲ್ಲಿ ಸೈನಾ ನೆಹ್ವಾಲ್, ಬಾಕ್ಸಿಂಗ್‌ನಲ್ಲಿ ಮೇರಿಕೋಮ್, ಶೂಟಿಂಗ್‌ನಲ್ಲಿ ಗಗನ್ ನಾರಂಗ್ ಮತ್ತು ಕುಸ್ತಿಯಲ್ಲಿ ಯೋಗೇಶ್ವರ್ ದತ್ ಕಂಚಿನ ಪದಕ ಗೆದ್ದಿದ್ದರು. ಲಂಡನ್ ಒಲಿಂಪಿಕ್ಸ್‌ನಲ್ಲಿ ಭಾರತ ಗೆದ್ದ ಒಟ್ಟು ಪದಕಗಳು ಸಂಚಲನ ಸೃಷ್ಟಿಸಿತ್ತು ಅನ್ನುವುದು ಸುಳ್ಳಲ್ಲ.

2016ರ ರಿಯೋ ಒಲಿಂಪಿಕ್ಸ್ ಮೇಲೆ ಭಾರತಕ್ಕೆ ದೊಡ್ಡ ಆಸೆಯಿತ್ತು. ಆದರೆ ಅಲ್ಲೂ ಹೆಚ್ಚಿನ ಯಶಸ್ಸು ಕಾಣಲಿಲ್ಲ. ಬ್ಯಾಡ್ಮಿಂಟನ್‌ನಲ್ಲಿ ಸಿಂಧೂ ಬೆಳ್ಳಿಗೆ ಮುತ್ತಿಟ್ಟರೆ, ಕುಸ್ತಿಯಲ್ಲಿ ಸಾಕ್ಷಿ ಮಲಿಕ್ ಕಂಚಿಗೆ ತೃಪ್ತಿ ಪಟ್ಟಿದ್ದರು. ಈಗ ಟೋಕಿಯೋ ಕಡೆ ಭಾರತ ಗಮನ ಇಟ್ಟಿದೆ. ಪದಕದ ನಿರೀಕ್ಷೆ ಇಟ್ಟುಕೊಂಡವರು ಈ ಬಾರಿಯಾದರೂ ಯಶಸ್ಸು ಕಾಣಲಿ ಅನ್ನುವುದು ಶತಕೋಟಿ ಭಾರತೀಯರ ಹಾರೈಕೆ.

ಜೀವನ್ ಅರಂತೊಡ್

ಜೀವನ್ ಅರಂತೊಡ್
ಟಿವಿ9ನಿಂದ ಪ್ರಾರಂಭಿಸಿ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡ ಜೀವನ್ ಅವರು ಈಗ ಸ್ವತಂತ್ರವಾಗಿ ಪತ್ರಿಕೋದ್ಯಮ ಕೆಲಸವನ್ನು ನಿರ್ವಹಿಸುತ್ತಿದ್ದಾರೆ.


ಇದನ್ನೂ ಓದಿ: ನಮ್ಮ ವರದಿಗೆ ಸರ್ಕಾರ ಹೆದರಿದೆ, ಆದರೆ ಐಟಿ ದಾಳಿಗೆ ನಾವು ಬಗ್ಗುವುದಿಲ್ಲ: ದೈನಿಕ್ ಭಾಸ್ಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...