Homeಸಿನಿಮಾಕ್ರೀಡೆಒಲಿಂಪಿಕ್ಸ್ ಇತಿಹಾಸದಲ್ಲಿ ಭಾರತಕ್ಕೆ ಸಿಗದ ನಿರೀಕ್ಷಿತ ಯಶಸ್ಸು; 120 ವರ್ಷಗಳಲ್ಲಿ ಸಿಕ್ಕಿದ್ದು 28 ಮೆಡಲ್

ಒಲಿಂಪಿಕ್ಸ್ ಇತಿಹಾಸದಲ್ಲಿ ಭಾರತಕ್ಕೆ ಸಿಗದ ನಿರೀಕ್ಷಿತ ಯಶಸ್ಸು; 120 ವರ್ಷಗಳಲ್ಲಿ ಸಿಕ್ಕಿದ್ದು 28 ಮೆಡಲ್

- Advertisement -
- Advertisement -

ಹೀಗೊಂದು ತಮಾಷೆಯ ಲೆಕ್ಕಾಚಾರ ಎಂದಿಟ್ಟುಕೊಳ್ಳಿ: 120 ಕೋಟಿ ಜನಸಂಖ್ಯೆ. ಒಂದು ಕೋಟಿಗೆ ಒಂದು ಮೆಡಲ್ ಅಂತ ಲೆಕ್ಕ ಹಾಕಿದರೂ ಒಲಿಂಪಿಕ್ಸ್ ಇತಿಹಾಸದಲ್ಲಿ ಭಾರತ ಇಲ್ಲಿತನಕ ಕನಿಷ್ಟ 120 ಪದಕಗಳನ್ನಾದರೂ ಪಡೆಯಬಹುದಿತ್ತು. ಆದರೆ ಅದ್ಯಾಕೋ ಒಲಿಂಪಿಕ್ಸ್ ಅಂದ್ರೆ ಭಾರತದ ಪಾಲಿಗೆ ನತದೃಷ್ಟ ಕ್ರೀಡಾಕೂಟವಾಗಿದೆ. ಇವರು ಪದಕ ಗೆದ್ದೇ ಗೆಲ್ತಾರೆ ಎನ್ನುವ ನಿರೀಕ್ಷೆಯೊಂದಿಗೆ ಒಲಿಂಪಿಕ್ಸ್‌ಗೆ ಕಾಲಿಟ್ಟವರಲ್ಲಿ ಬಹುತೇಕ ಮಂದಿ ಬರಿಗೈಯಲ್ಲಿ ಮರಳಿದ್ದೇ ಹೆಚ್ಚು. ಹೀಗಾಗಿ ಭಾರತ ಒಲಿಂಪಿಕ್ಸ್ ಇತಿಹಾಸದಲ್ಲಿ ಪಡೆದುಕೊಂಡಿರುವ ಒಟ್ಟು ಪದಕಗಳ ಸಂಖ್ಯೆಯೇ ಜಸ್ಟ್ 28.

ಅಮೆರಿಕ, ಚೀನಾ, ಇಂಗ್ಲೆಂಡ್‌ನಂತಹ ದೇಶಗಳು ಒಲಿಂಪಿಕ್ ಮೆಡೆಲ್ ಲಿಸ್ಟ್‌ನಲ್ಲಿ ಚಿನ್ನ ಎಷ್ಟು ಗೆದ್ದಿದೆ ಅಂತ ಲೆಕ್ಕ ಹಾಕುವಂತಿದ್ದರೆ, ಭಾರತ ತಾನು ಗೆದ್ದಿರುವ ಅಷ್ಟೂ ಪದಕಗಳನ್ನು ಲೆಕ್ಕಹಾಕುವ ಸ್ಥಿತಿಯಲ್ಲಿದೆ. ಭಾರತದಲ್ಲಿ ಕ್ರಿಕೆಟ್ ಬಿಟ್ಟು ಉಳಿದ ಕ್ರೀಡೆಗಳಿಗೆ ಪ್ರೋತ್ಸಾಹ ಇಲ್ಲದೇ ಇರುವುದು ಒಲಿಂಪಿಕ್ಸ್‌ನಲ್ಲಿ ಭಾರತದ ಹೀನಾಯ ಸ್ಥಿತಿಗೆ ಕಾರಣವಾಗಿದೆ. ಅಂದಹಾಗೆ ಭಾರತ ತನ್ನ ಒಲಿಂಪಿಕ್ ಇತಿಹಾಸದಲ್ಲಿ ಗೆದ್ದಿರುವ ಒಟ್ಟು ಚಿನ್ನದ ಪದಗಳ ಸಂಖ್ಯೆ ಕೇವಲ 9. ಅದರಲ್ಲಿ 8 ಟೀಮ್‌ಗೇಮ್‌ನಲ್ಲಿ ಬಂದಿದ್ದರೆ, ವೈಯಕ್ತಿಕವಾಗಿ ಬಂದಿರುವುದು ಕೇವಲ ಒಂದು. 7 ಬೆಳ್ಳಿಯ ಪದಕಗಳಿವೆ. 12 ಕಂಚಿನ ಪದಕದ ಸಾಧನೆಯನ್ನು ಭಾರತ ಒಲಿಂಪಿಕ್ಸ್ ಇತಿಹಾಸದಲ್ಲಿ ಮಾಡಿದೆ. ಕುಸ್ತಿ, ಶೂಟಿಂಗ್, ಟೆನಿಸ್, ಬ್ಯಾಡ್ಮಿಂಟನ್, ಬಾಕ್ಸಿಂಗ್‌ನಲ್ಲಿ ಭಾರತ ಪದಕ ಗೆದ್ದಿದ್ದು ಬಿಟ್ರೆ ಉಳಿದ ಕ್ರೀಡೆಗಳಲ್ಲಿ ಶೂನ್ಯ ಸಾಧನೆ.

ಒಲಿಂಪಿಕ್ಸ್‌ನಲ್ಲಿ ಭಾರತದ ಹೆಸರು ಕಾಣಸಿಕ್ಕಿದ್ದು 1900ರಲ್ಲಿ. ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ನಾರ್ಮನ್ ಪ್ರಿಚರ್ಡ್ 200 ಮೀಟರ್ ಹರ್ಡಲ್ಸ್ ಮತ್ತು 200 ಮೀಟರ್ ಓಟದಲ್ಲಿ ಬೆಳ್ಳಿ ಪದಕ ಗೆದ್ದಿದ್ದರು. ಆದರೆ ಅದು ಬ್ರಿಟಿಷ್ ಇಂಡಿಯಾ ಆಗಿತ್ತು. ಭಾರತದ ಹಾಕಿ ತಂಡ 1928, 1932, 1936, 1948, 1952, 1956, 1964, 1980 ಹೀಗೆ 8 ಬಾರಿ ಚಿನ್ನದ ಪದಕ ಗಳಿಸಿತ್ತು. 1984ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ನಿಂದ 1996ರ ಬಾರ್ಸಿಲೋನ ಒಲಿಂಪಿಕ್ಸ್ ನಡುವೆ ಭಾರತ ಒಂದೂ ಪದಕ ಗೆದ್ದಿರಲಿಲ್ಲ.

PC : Times of India

ಅಂದಹಾಗೆ ನಾರ್ಮನ್ ಪ್ರಿಚರ್ಡ್ ನಂತರ ಭಾರತದ ಪರ ವೈಯಕ್ತಿಕ ವಿಭಾಗದಲ್ಲಿ ಚಿನ್ನ ಗೆದ್ದವರು ಕಶಬಾ ಜಾಧವ್. 1952ರ ಹಲ್ಸೆಂಕಿ ಒಲಿಂಪಿಕ್ಸ್‌ನಲ್ಲಿ ಜಾಧವ್ ಕುಸ್ತಿಯಲ್ಲಿ ಕಂಚು ಗೆದ್ದಿದ್ದು ಸ್ವತಂತ್ರ ಭಾರತ ಮೊದಲ ವೈಯಕ್ತಿಕ ಪದಕ. ಇದನ್ನು ಬಿಟ್ಟರೆ ವೈಯಕ್ತಿಕ ವಿಭಾಗದಲ್ಲಿ ಮತ್ತೊಂದು ಪದಕವನ್ನು ಭಾರತ ಗೆಲ್ಲಬೇಕಾದರೆ 1996ರ ತನಕ ಕಾಯಬೇಕಾಗಿತ್ತು. 1996ರ ಬಾರ್ಸಿಲೋನಾ ಒಲಿಂಪಿಕ್ಸ್‌ನಲ್ಲಿ ಲಿಯಾಂಡರ್ ಪೇಸ್ ಕಂಚಿನ ಪದಕ ಗೆದ್ದಿದ್ದು ಹೊಸ ಇತಿಹಾಸ ಸೃಷ್ಟಿಸಿತ್ತು. ಇಲ್ಲಿಂದ ನಂತರ ಭಾರತ ಪ್ರತಿಯೊಂದು ಒಲಿಂಪಿಕ್ಸ್‌ನಲ್ಲೂ ಕನಿಷ್ಟ ಒಂದಾದರೂ ಪದಕವನ್ನು ಪಡೆದುಕೊಂಡಿದೆ.

2000ದಲ್ಲಿ ಸಿಡ್ನಿಯಲ್ಲಿ ಕರ್ಣಂ ಮಲ್ಲೇಶ್ವರಿ ಭಾರತದ ಭಾರ ಎತ್ತಿ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದರು. 2004ರ ಅಥೆನ್ಸ್ ಒಲಿಂಪಿಕ್ಸ್‌ನಲ್ಲಿ ರಾಜ್ಯವರ್ಧನ್ ಸಿಂಗ್ ರಾಥೋಡ್ ಶೂಟಿಂಗ್ ವಿಭಾಗದ ಡಬಲ್ ಟ್ರಾಪ್‌ನಲ್ಲಿ ರಜತ ಗೆದ್ದಿದ್ದರು. ಭಾರತದ ಪಾಲಿಗೆ ವೈಯಕ್ತಿಕ ಮಟ್ಟದಲ್ಲಿ ಇದು ಹೊಸ ಸಾಧನೆ ಆಗಿತ್ತು.

ಭಾರತ ಒಲಿಂಪಿಕ್ಸ್‌ನ ಮೊದಲ ವೈಯಕ್ತಿಕ ಚಿನ್ನ ಗೆದ್ದಿದ್ದು 2008ರಲ್ಲಿ. ಕೊನೆಗೂ ಒಲಿಂಪಿಕ್ ಸ್ವರ್ಣವನ್ನು ನನಸು ಮಾಡಿದ್ದು ಅಭಿನವ್ ಭಿಂದ್ರಾ. ಭಿಂದ್ರಾ ಅಂದು 10 ಮೀ ರೈಫಲ್ ವಿಭಾಗದಲ್ಲಿ ಚಿನ್ನಕ್ಕೆ ಗುರಿ ಇಟ್ಟಿದ್ದರು. ಇದು ಸ್ವರ್ಣದ ಓಪನಿಂಗ್ ಆಗಿದ್ದರೂ, ಅಲ್ಲಿಂದ ಇಲ್ಲಿ ತನಕ ಮತ್ತೊಂದು ಚಿನ್ನ ಭಾರತಕ್ಕೆ ದಕ್ಕಿಲ್ಲ ಅನ್ನುವುದು ಕೂಡ ನಿರಾಶಾದಾಯಕ ಸತ್ಯ.

ಬೀಜಿಂಗ್‌ನಲ್ಲಿ ಬಾಕ್ಸಿಂಗ್‌ನಲ್ಲಿ ವಿಜೇಂದರ್ ಸಿಂಗ್ ಮತ್ತು ಕುಸ್ತಿಯಲ್ಲಿ ಸುಶೀಲ್ ಕುಮಾರ್ ಕಂಚಿನ ಪದಕಕ್ಕೆ ಕೊರಳೊಡ್ಡಿ ಇತಿಹಾಸ ಬರೆದಿದ್ದರು.

ಇನ್ನು 2012ರ ಲಂಡನ್ ಒಲಿಂಪಿಕ್ಸ್ ಭಾರತಕ್ಕೆ ಸರ್ವಶ್ರೇಷ್ಠ ಒಲಿಂಪಿಕ್ಸ್. ಲಂಡನ್‌ನಲ್ಲಿ ಭಾರತ 2 ಬೆಳ್ಳಿ ಮತ್ತು 4 ಕಂಚಿನ ಪದಕ ಗೆದ್ದುಕೊಂಡಿತ್ತು. ಶೂಟಿಂಗ್‌ನಲ್ಲಿ ವಿಜಯ ಕುಮಾರ್ ಮತ್ತು ಕುಸ್ತಿಯಲ್ಲಿ ಸುಶೀಲ್ ಕುಮಾರ್ ಬೆಳ್ಳಿ ಗೆದ್ದರೆ, ಬ್ಯಾಡ್ಮಿಂಟನ್‌ನಲ್ಲಿ ಸೈನಾ ನೆಹ್ವಾಲ್, ಬಾಕ್ಸಿಂಗ್‌ನಲ್ಲಿ ಮೇರಿಕೋಮ್, ಶೂಟಿಂಗ್‌ನಲ್ಲಿ ಗಗನ್ ನಾರಂಗ್ ಮತ್ತು ಕುಸ್ತಿಯಲ್ಲಿ ಯೋಗೇಶ್ವರ್ ದತ್ ಕಂಚಿನ ಪದಕ ಗೆದ್ದಿದ್ದರು. ಲಂಡನ್ ಒಲಿಂಪಿಕ್ಸ್‌ನಲ್ಲಿ ಭಾರತ ಗೆದ್ದ ಒಟ್ಟು ಪದಕಗಳು ಸಂಚಲನ ಸೃಷ್ಟಿಸಿತ್ತು ಅನ್ನುವುದು ಸುಳ್ಳಲ್ಲ.

2016ರ ರಿಯೋ ಒಲಿಂಪಿಕ್ಸ್ ಮೇಲೆ ಭಾರತಕ್ಕೆ ದೊಡ್ಡ ಆಸೆಯಿತ್ತು. ಆದರೆ ಅಲ್ಲೂ ಹೆಚ್ಚಿನ ಯಶಸ್ಸು ಕಾಣಲಿಲ್ಲ. ಬ್ಯಾಡ್ಮಿಂಟನ್‌ನಲ್ಲಿ ಸಿಂಧೂ ಬೆಳ್ಳಿಗೆ ಮುತ್ತಿಟ್ಟರೆ, ಕುಸ್ತಿಯಲ್ಲಿ ಸಾಕ್ಷಿ ಮಲಿಕ್ ಕಂಚಿಗೆ ತೃಪ್ತಿ ಪಟ್ಟಿದ್ದರು. ಈಗ ಟೋಕಿಯೋ ಕಡೆ ಭಾರತ ಗಮನ ಇಟ್ಟಿದೆ. ಪದಕದ ನಿರೀಕ್ಷೆ ಇಟ್ಟುಕೊಂಡವರು ಈ ಬಾರಿಯಾದರೂ ಯಶಸ್ಸು ಕಾಣಲಿ ಅನ್ನುವುದು ಶತಕೋಟಿ ಭಾರತೀಯರ ಹಾರೈಕೆ.

ಜೀವನ್ ಅರಂತೊಡ್

ಜೀವನ್ ಅರಂತೊಡ್
ಟಿವಿ9ನಿಂದ ಪ್ರಾರಂಭಿಸಿ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡ ಜೀವನ್ ಅವರು ಈಗ ಸ್ವತಂತ್ರವಾಗಿ ಪತ್ರಿಕೋದ್ಯಮ ಕೆಲಸವನ್ನು ನಿರ್ವಹಿಸುತ್ತಿದ್ದಾರೆ.


ಇದನ್ನೂ ಓದಿ: ನಮ್ಮ ವರದಿಗೆ ಸರ್ಕಾರ ಹೆದರಿದೆ, ಆದರೆ ಐಟಿ ದಾಳಿಗೆ ನಾವು ಬಗ್ಗುವುದಿಲ್ಲ: ದೈನಿಕ್ ಭಾಸ್ಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...