Homeಸಿನಿಮಾಕ್ರೀಡೆಒಲಿಂಪಿಕ್ಸ್ ಇತಿಹಾಸದಲ್ಲಿ ಭಾರತಕ್ಕೆ ಸಿಗದ ನಿರೀಕ್ಷಿತ ಯಶಸ್ಸು; 120 ವರ್ಷಗಳಲ್ಲಿ ಸಿಕ್ಕಿದ್ದು 28 ಮೆಡಲ್

ಒಲಿಂಪಿಕ್ಸ್ ಇತಿಹಾಸದಲ್ಲಿ ಭಾರತಕ್ಕೆ ಸಿಗದ ನಿರೀಕ್ಷಿತ ಯಶಸ್ಸು; 120 ವರ್ಷಗಳಲ್ಲಿ ಸಿಕ್ಕಿದ್ದು 28 ಮೆಡಲ್

- Advertisement -
- Advertisement -

ಹೀಗೊಂದು ತಮಾಷೆಯ ಲೆಕ್ಕಾಚಾರ ಎಂದಿಟ್ಟುಕೊಳ್ಳಿ: 120 ಕೋಟಿ ಜನಸಂಖ್ಯೆ. ಒಂದು ಕೋಟಿಗೆ ಒಂದು ಮೆಡಲ್ ಅಂತ ಲೆಕ್ಕ ಹಾಕಿದರೂ ಒಲಿಂಪಿಕ್ಸ್ ಇತಿಹಾಸದಲ್ಲಿ ಭಾರತ ಇಲ್ಲಿತನಕ ಕನಿಷ್ಟ 120 ಪದಕಗಳನ್ನಾದರೂ ಪಡೆಯಬಹುದಿತ್ತು. ಆದರೆ ಅದ್ಯಾಕೋ ಒಲಿಂಪಿಕ್ಸ್ ಅಂದ್ರೆ ಭಾರತದ ಪಾಲಿಗೆ ನತದೃಷ್ಟ ಕ್ರೀಡಾಕೂಟವಾಗಿದೆ. ಇವರು ಪದಕ ಗೆದ್ದೇ ಗೆಲ್ತಾರೆ ಎನ್ನುವ ನಿರೀಕ್ಷೆಯೊಂದಿಗೆ ಒಲಿಂಪಿಕ್ಸ್‌ಗೆ ಕಾಲಿಟ್ಟವರಲ್ಲಿ ಬಹುತೇಕ ಮಂದಿ ಬರಿಗೈಯಲ್ಲಿ ಮರಳಿದ್ದೇ ಹೆಚ್ಚು. ಹೀಗಾಗಿ ಭಾರತ ಒಲಿಂಪಿಕ್ಸ್ ಇತಿಹಾಸದಲ್ಲಿ ಪಡೆದುಕೊಂಡಿರುವ ಒಟ್ಟು ಪದಕಗಳ ಸಂಖ್ಯೆಯೇ ಜಸ್ಟ್ 28.

ಅಮೆರಿಕ, ಚೀನಾ, ಇಂಗ್ಲೆಂಡ್‌ನಂತಹ ದೇಶಗಳು ಒಲಿಂಪಿಕ್ ಮೆಡೆಲ್ ಲಿಸ್ಟ್‌ನಲ್ಲಿ ಚಿನ್ನ ಎಷ್ಟು ಗೆದ್ದಿದೆ ಅಂತ ಲೆಕ್ಕ ಹಾಕುವಂತಿದ್ದರೆ, ಭಾರತ ತಾನು ಗೆದ್ದಿರುವ ಅಷ್ಟೂ ಪದಕಗಳನ್ನು ಲೆಕ್ಕಹಾಕುವ ಸ್ಥಿತಿಯಲ್ಲಿದೆ. ಭಾರತದಲ್ಲಿ ಕ್ರಿಕೆಟ್ ಬಿಟ್ಟು ಉಳಿದ ಕ್ರೀಡೆಗಳಿಗೆ ಪ್ರೋತ್ಸಾಹ ಇಲ್ಲದೇ ಇರುವುದು ಒಲಿಂಪಿಕ್ಸ್‌ನಲ್ಲಿ ಭಾರತದ ಹೀನಾಯ ಸ್ಥಿತಿಗೆ ಕಾರಣವಾಗಿದೆ. ಅಂದಹಾಗೆ ಭಾರತ ತನ್ನ ಒಲಿಂಪಿಕ್ ಇತಿಹಾಸದಲ್ಲಿ ಗೆದ್ದಿರುವ ಒಟ್ಟು ಚಿನ್ನದ ಪದಗಳ ಸಂಖ್ಯೆ ಕೇವಲ 9. ಅದರಲ್ಲಿ 8 ಟೀಮ್‌ಗೇಮ್‌ನಲ್ಲಿ ಬಂದಿದ್ದರೆ, ವೈಯಕ್ತಿಕವಾಗಿ ಬಂದಿರುವುದು ಕೇವಲ ಒಂದು. 7 ಬೆಳ್ಳಿಯ ಪದಕಗಳಿವೆ. 12 ಕಂಚಿನ ಪದಕದ ಸಾಧನೆಯನ್ನು ಭಾರತ ಒಲಿಂಪಿಕ್ಸ್ ಇತಿಹಾಸದಲ್ಲಿ ಮಾಡಿದೆ. ಕುಸ್ತಿ, ಶೂಟಿಂಗ್, ಟೆನಿಸ್, ಬ್ಯಾಡ್ಮಿಂಟನ್, ಬಾಕ್ಸಿಂಗ್‌ನಲ್ಲಿ ಭಾರತ ಪದಕ ಗೆದ್ದಿದ್ದು ಬಿಟ್ರೆ ಉಳಿದ ಕ್ರೀಡೆಗಳಲ್ಲಿ ಶೂನ್ಯ ಸಾಧನೆ.

ಒಲಿಂಪಿಕ್ಸ್‌ನಲ್ಲಿ ಭಾರತದ ಹೆಸರು ಕಾಣಸಿಕ್ಕಿದ್ದು 1900ರಲ್ಲಿ. ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ನಾರ್ಮನ್ ಪ್ರಿಚರ್ಡ್ 200 ಮೀಟರ್ ಹರ್ಡಲ್ಸ್ ಮತ್ತು 200 ಮೀಟರ್ ಓಟದಲ್ಲಿ ಬೆಳ್ಳಿ ಪದಕ ಗೆದ್ದಿದ್ದರು. ಆದರೆ ಅದು ಬ್ರಿಟಿಷ್ ಇಂಡಿಯಾ ಆಗಿತ್ತು. ಭಾರತದ ಹಾಕಿ ತಂಡ 1928, 1932, 1936, 1948, 1952, 1956, 1964, 1980 ಹೀಗೆ 8 ಬಾರಿ ಚಿನ್ನದ ಪದಕ ಗಳಿಸಿತ್ತು. 1984ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ನಿಂದ 1996ರ ಬಾರ್ಸಿಲೋನ ಒಲಿಂಪಿಕ್ಸ್ ನಡುವೆ ಭಾರತ ಒಂದೂ ಪದಕ ಗೆದ್ದಿರಲಿಲ್ಲ.

PC : Times of India

ಅಂದಹಾಗೆ ನಾರ್ಮನ್ ಪ್ರಿಚರ್ಡ್ ನಂತರ ಭಾರತದ ಪರ ವೈಯಕ್ತಿಕ ವಿಭಾಗದಲ್ಲಿ ಚಿನ್ನ ಗೆದ್ದವರು ಕಶಬಾ ಜಾಧವ್. 1952ರ ಹಲ್ಸೆಂಕಿ ಒಲಿಂಪಿಕ್ಸ್‌ನಲ್ಲಿ ಜಾಧವ್ ಕುಸ್ತಿಯಲ್ಲಿ ಕಂಚು ಗೆದ್ದಿದ್ದು ಸ್ವತಂತ್ರ ಭಾರತ ಮೊದಲ ವೈಯಕ್ತಿಕ ಪದಕ. ಇದನ್ನು ಬಿಟ್ಟರೆ ವೈಯಕ್ತಿಕ ವಿಭಾಗದಲ್ಲಿ ಮತ್ತೊಂದು ಪದಕವನ್ನು ಭಾರತ ಗೆಲ್ಲಬೇಕಾದರೆ 1996ರ ತನಕ ಕಾಯಬೇಕಾಗಿತ್ತು. 1996ರ ಬಾರ್ಸಿಲೋನಾ ಒಲಿಂಪಿಕ್ಸ್‌ನಲ್ಲಿ ಲಿಯಾಂಡರ್ ಪೇಸ್ ಕಂಚಿನ ಪದಕ ಗೆದ್ದಿದ್ದು ಹೊಸ ಇತಿಹಾಸ ಸೃಷ್ಟಿಸಿತ್ತು. ಇಲ್ಲಿಂದ ನಂತರ ಭಾರತ ಪ್ರತಿಯೊಂದು ಒಲಿಂಪಿಕ್ಸ್‌ನಲ್ಲೂ ಕನಿಷ್ಟ ಒಂದಾದರೂ ಪದಕವನ್ನು ಪಡೆದುಕೊಂಡಿದೆ.

2000ದಲ್ಲಿ ಸಿಡ್ನಿಯಲ್ಲಿ ಕರ್ಣಂ ಮಲ್ಲೇಶ್ವರಿ ಭಾರತದ ಭಾರ ಎತ್ತಿ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದರು. 2004ರ ಅಥೆನ್ಸ್ ಒಲಿಂಪಿಕ್ಸ್‌ನಲ್ಲಿ ರಾಜ್ಯವರ್ಧನ್ ಸಿಂಗ್ ರಾಥೋಡ್ ಶೂಟಿಂಗ್ ವಿಭಾಗದ ಡಬಲ್ ಟ್ರಾಪ್‌ನಲ್ಲಿ ರಜತ ಗೆದ್ದಿದ್ದರು. ಭಾರತದ ಪಾಲಿಗೆ ವೈಯಕ್ತಿಕ ಮಟ್ಟದಲ್ಲಿ ಇದು ಹೊಸ ಸಾಧನೆ ಆಗಿತ್ತು.

ಭಾರತ ಒಲಿಂಪಿಕ್ಸ್‌ನ ಮೊದಲ ವೈಯಕ್ತಿಕ ಚಿನ್ನ ಗೆದ್ದಿದ್ದು 2008ರಲ್ಲಿ. ಕೊನೆಗೂ ಒಲಿಂಪಿಕ್ ಸ್ವರ್ಣವನ್ನು ನನಸು ಮಾಡಿದ್ದು ಅಭಿನವ್ ಭಿಂದ್ರಾ. ಭಿಂದ್ರಾ ಅಂದು 10 ಮೀ ರೈಫಲ್ ವಿಭಾಗದಲ್ಲಿ ಚಿನ್ನಕ್ಕೆ ಗುರಿ ಇಟ್ಟಿದ್ದರು. ಇದು ಸ್ವರ್ಣದ ಓಪನಿಂಗ್ ಆಗಿದ್ದರೂ, ಅಲ್ಲಿಂದ ಇಲ್ಲಿ ತನಕ ಮತ್ತೊಂದು ಚಿನ್ನ ಭಾರತಕ್ಕೆ ದಕ್ಕಿಲ್ಲ ಅನ್ನುವುದು ಕೂಡ ನಿರಾಶಾದಾಯಕ ಸತ್ಯ.

ಬೀಜಿಂಗ್‌ನಲ್ಲಿ ಬಾಕ್ಸಿಂಗ್‌ನಲ್ಲಿ ವಿಜೇಂದರ್ ಸಿಂಗ್ ಮತ್ತು ಕುಸ್ತಿಯಲ್ಲಿ ಸುಶೀಲ್ ಕುಮಾರ್ ಕಂಚಿನ ಪದಕಕ್ಕೆ ಕೊರಳೊಡ್ಡಿ ಇತಿಹಾಸ ಬರೆದಿದ್ದರು.

ಇನ್ನು 2012ರ ಲಂಡನ್ ಒಲಿಂಪಿಕ್ಸ್ ಭಾರತಕ್ಕೆ ಸರ್ವಶ್ರೇಷ್ಠ ಒಲಿಂಪಿಕ್ಸ್. ಲಂಡನ್‌ನಲ್ಲಿ ಭಾರತ 2 ಬೆಳ್ಳಿ ಮತ್ತು 4 ಕಂಚಿನ ಪದಕ ಗೆದ್ದುಕೊಂಡಿತ್ತು. ಶೂಟಿಂಗ್‌ನಲ್ಲಿ ವಿಜಯ ಕುಮಾರ್ ಮತ್ತು ಕುಸ್ತಿಯಲ್ಲಿ ಸುಶೀಲ್ ಕುಮಾರ್ ಬೆಳ್ಳಿ ಗೆದ್ದರೆ, ಬ್ಯಾಡ್ಮಿಂಟನ್‌ನಲ್ಲಿ ಸೈನಾ ನೆಹ್ವಾಲ್, ಬಾಕ್ಸಿಂಗ್‌ನಲ್ಲಿ ಮೇರಿಕೋಮ್, ಶೂಟಿಂಗ್‌ನಲ್ಲಿ ಗಗನ್ ನಾರಂಗ್ ಮತ್ತು ಕುಸ್ತಿಯಲ್ಲಿ ಯೋಗೇಶ್ವರ್ ದತ್ ಕಂಚಿನ ಪದಕ ಗೆದ್ದಿದ್ದರು. ಲಂಡನ್ ಒಲಿಂಪಿಕ್ಸ್‌ನಲ್ಲಿ ಭಾರತ ಗೆದ್ದ ಒಟ್ಟು ಪದಕಗಳು ಸಂಚಲನ ಸೃಷ್ಟಿಸಿತ್ತು ಅನ್ನುವುದು ಸುಳ್ಳಲ್ಲ.

2016ರ ರಿಯೋ ಒಲಿಂಪಿಕ್ಸ್ ಮೇಲೆ ಭಾರತಕ್ಕೆ ದೊಡ್ಡ ಆಸೆಯಿತ್ತು. ಆದರೆ ಅಲ್ಲೂ ಹೆಚ್ಚಿನ ಯಶಸ್ಸು ಕಾಣಲಿಲ್ಲ. ಬ್ಯಾಡ್ಮಿಂಟನ್‌ನಲ್ಲಿ ಸಿಂಧೂ ಬೆಳ್ಳಿಗೆ ಮುತ್ತಿಟ್ಟರೆ, ಕುಸ್ತಿಯಲ್ಲಿ ಸಾಕ್ಷಿ ಮಲಿಕ್ ಕಂಚಿಗೆ ತೃಪ್ತಿ ಪಟ್ಟಿದ್ದರು. ಈಗ ಟೋಕಿಯೋ ಕಡೆ ಭಾರತ ಗಮನ ಇಟ್ಟಿದೆ. ಪದಕದ ನಿರೀಕ್ಷೆ ಇಟ್ಟುಕೊಂಡವರು ಈ ಬಾರಿಯಾದರೂ ಯಶಸ್ಸು ಕಾಣಲಿ ಅನ್ನುವುದು ಶತಕೋಟಿ ಭಾರತೀಯರ ಹಾರೈಕೆ.

ಜೀವನ್ ಅರಂತೊಡ್

ಜೀವನ್ ಅರಂತೊಡ್
ಟಿವಿ9ನಿಂದ ಪ್ರಾರಂಭಿಸಿ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡ ಜೀವನ್ ಅವರು ಈಗ ಸ್ವತಂತ್ರವಾಗಿ ಪತ್ರಿಕೋದ್ಯಮ ಕೆಲಸವನ್ನು ನಿರ್ವಹಿಸುತ್ತಿದ್ದಾರೆ.


ಇದನ್ನೂ ಓದಿ: ನಮ್ಮ ವರದಿಗೆ ಸರ್ಕಾರ ಹೆದರಿದೆ, ಆದರೆ ಐಟಿ ದಾಳಿಗೆ ನಾವು ಬಗ್ಗುವುದಿಲ್ಲ: ದೈನಿಕ್ ಭಾಸ್ಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...