Homeಸಿನಿಮಾಕ್ರೀಡೆಒಲಿಂಪಿಕ್ಸ್ ಇತಿಹಾಸದಲ್ಲಿ ಭಾರತಕ್ಕೆ ಸಿಗದ ನಿರೀಕ್ಷಿತ ಯಶಸ್ಸು; 120 ವರ್ಷಗಳಲ್ಲಿ ಸಿಕ್ಕಿದ್ದು 28 ಮೆಡಲ್

ಒಲಿಂಪಿಕ್ಸ್ ಇತಿಹಾಸದಲ್ಲಿ ಭಾರತಕ್ಕೆ ಸಿಗದ ನಿರೀಕ್ಷಿತ ಯಶಸ್ಸು; 120 ವರ್ಷಗಳಲ್ಲಿ ಸಿಕ್ಕಿದ್ದು 28 ಮೆಡಲ್

- Advertisement -
- Advertisement -

ಹೀಗೊಂದು ತಮಾಷೆಯ ಲೆಕ್ಕಾಚಾರ ಎಂದಿಟ್ಟುಕೊಳ್ಳಿ: 120 ಕೋಟಿ ಜನಸಂಖ್ಯೆ. ಒಂದು ಕೋಟಿಗೆ ಒಂದು ಮೆಡಲ್ ಅಂತ ಲೆಕ್ಕ ಹಾಕಿದರೂ ಒಲಿಂಪಿಕ್ಸ್ ಇತಿಹಾಸದಲ್ಲಿ ಭಾರತ ಇಲ್ಲಿತನಕ ಕನಿಷ್ಟ 120 ಪದಕಗಳನ್ನಾದರೂ ಪಡೆಯಬಹುದಿತ್ತು. ಆದರೆ ಅದ್ಯಾಕೋ ಒಲಿಂಪಿಕ್ಸ್ ಅಂದ್ರೆ ಭಾರತದ ಪಾಲಿಗೆ ನತದೃಷ್ಟ ಕ್ರೀಡಾಕೂಟವಾಗಿದೆ. ಇವರು ಪದಕ ಗೆದ್ದೇ ಗೆಲ್ತಾರೆ ಎನ್ನುವ ನಿರೀಕ್ಷೆಯೊಂದಿಗೆ ಒಲಿಂಪಿಕ್ಸ್‌ಗೆ ಕಾಲಿಟ್ಟವರಲ್ಲಿ ಬಹುತೇಕ ಮಂದಿ ಬರಿಗೈಯಲ್ಲಿ ಮರಳಿದ್ದೇ ಹೆಚ್ಚು. ಹೀಗಾಗಿ ಭಾರತ ಒಲಿಂಪಿಕ್ಸ್ ಇತಿಹಾಸದಲ್ಲಿ ಪಡೆದುಕೊಂಡಿರುವ ಒಟ್ಟು ಪದಕಗಳ ಸಂಖ್ಯೆಯೇ ಜಸ್ಟ್ 28.

ಅಮೆರಿಕ, ಚೀನಾ, ಇಂಗ್ಲೆಂಡ್‌ನಂತಹ ದೇಶಗಳು ಒಲಿಂಪಿಕ್ ಮೆಡೆಲ್ ಲಿಸ್ಟ್‌ನಲ್ಲಿ ಚಿನ್ನ ಎಷ್ಟು ಗೆದ್ದಿದೆ ಅಂತ ಲೆಕ್ಕ ಹಾಕುವಂತಿದ್ದರೆ, ಭಾರತ ತಾನು ಗೆದ್ದಿರುವ ಅಷ್ಟೂ ಪದಕಗಳನ್ನು ಲೆಕ್ಕಹಾಕುವ ಸ್ಥಿತಿಯಲ್ಲಿದೆ. ಭಾರತದಲ್ಲಿ ಕ್ರಿಕೆಟ್ ಬಿಟ್ಟು ಉಳಿದ ಕ್ರೀಡೆಗಳಿಗೆ ಪ್ರೋತ್ಸಾಹ ಇಲ್ಲದೇ ಇರುವುದು ಒಲಿಂಪಿಕ್ಸ್‌ನಲ್ಲಿ ಭಾರತದ ಹೀನಾಯ ಸ್ಥಿತಿಗೆ ಕಾರಣವಾಗಿದೆ. ಅಂದಹಾಗೆ ಭಾರತ ತನ್ನ ಒಲಿಂಪಿಕ್ ಇತಿಹಾಸದಲ್ಲಿ ಗೆದ್ದಿರುವ ಒಟ್ಟು ಚಿನ್ನದ ಪದಗಳ ಸಂಖ್ಯೆ ಕೇವಲ 9. ಅದರಲ್ಲಿ 8 ಟೀಮ್‌ಗೇಮ್‌ನಲ್ಲಿ ಬಂದಿದ್ದರೆ, ವೈಯಕ್ತಿಕವಾಗಿ ಬಂದಿರುವುದು ಕೇವಲ ಒಂದು. 7 ಬೆಳ್ಳಿಯ ಪದಕಗಳಿವೆ. 12 ಕಂಚಿನ ಪದಕದ ಸಾಧನೆಯನ್ನು ಭಾರತ ಒಲಿಂಪಿಕ್ಸ್ ಇತಿಹಾಸದಲ್ಲಿ ಮಾಡಿದೆ. ಕುಸ್ತಿ, ಶೂಟಿಂಗ್, ಟೆನಿಸ್, ಬ್ಯಾಡ್ಮಿಂಟನ್, ಬಾಕ್ಸಿಂಗ್‌ನಲ್ಲಿ ಭಾರತ ಪದಕ ಗೆದ್ದಿದ್ದು ಬಿಟ್ರೆ ಉಳಿದ ಕ್ರೀಡೆಗಳಲ್ಲಿ ಶೂನ್ಯ ಸಾಧನೆ.

ಒಲಿಂಪಿಕ್ಸ್‌ನಲ್ಲಿ ಭಾರತದ ಹೆಸರು ಕಾಣಸಿಕ್ಕಿದ್ದು 1900ರಲ್ಲಿ. ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ನಾರ್ಮನ್ ಪ್ರಿಚರ್ಡ್ 200 ಮೀಟರ್ ಹರ್ಡಲ್ಸ್ ಮತ್ತು 200 ಮೀಟರ್ ಓಟದಲ್ಲಿ ಬೆಳ್ಳಿ ಪದಕ ಗೆದ್ದಿದ್ದರು. ಆದರೆ ಅದು ಬ್ರಿಟಿಷ್ ಇಂಡಿಯಾ ಆಗಿತ್ತು. ಭಾರತದ ಹಾಕಿ ತಂಡ 1928, 1932, 1936, 1948, 1952, 1956, 1964, 1980 ಹೀಗೆ 8 ಬಾರಿ ಚಿನ್ನದ ಪದಕ ಗಳಿಸಿತ್ತು. 1984ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ನಿಂದ 1996ರ ಬಾರ್ಸಿಲೋನ ಒಲಿಂಪಿಕ್ಸ್ ನಡುವೆ ಭಾರತ ಒಂದೂ ಪದಕ ಗೆದ್ದಿರಲಿಲ್ಲ.

PC : Times of India

ಅಂದಹಾಗೆ ನಾರ್ಮನ್ ಪ್ರಿಚರ್ಡ್ ನಂತರ ಭಾರತದ ಪರ ವೈಯಕ್ತಿಕ ವಿಭಾಗದಲ್ಲಿ ಚಿನ್ನ ಗೆದ್ದವರು ಕಶಬಾ ಜಾಧವ್. 1952ರ ಹಲ್ಸೆಂಕಿ ಒಲಿಂಪಿಕ್ಸ್‌ನಲ್ಲಿ ಜಾಧವ್ ಕುಸ್ತಿಯಲ್ಲಿ ಕಂಚು ಗೆದ್ದಿದ್ದು ಸ್ವತಂತ್ರ ಭಾರತ ಮೊದಲ ವೈಯಕ್ತಿಕ ಪದಕ. ಇದನ್ನು ಬಿಟ್ಟರೆ ವೈಯಕ್ತಿಕ ವಿಭಾಗದಲ್ಲಿ ಮತ್ತೊಂದು ಪದಕವನ್ನು ಭಾರತ ಗೆಲ್ಲಬೇಕಾದರೆ 1996ರ ತನಕ ಕಾಯಬೇಕಾಗಿತ್ತು. 1996ರ ಬಾರ್ಸಿಲೋನಾ ಒಲಿಂಪಿಕ್ಸ್‌ನಲ್ಲಿ ಲಿಯಾಂಡರ್ ಪೇಸ್ ಕಂಚಿನ ಪದಕ ಗೆದ್ದಿದ್ದು ಹೊಸ ಇತಿಹಾಸ ಸೃಷ್ಟಿಸಿತ್ತು. ಇಲ್ಲಿಂದ ನಂತರ ಭಾರತ ಪ್ರತಿಯೊಂದು ಒಲಿಂಪಿಕ್ಸ್‌ನಲ್ಲೂ ಕನಿಷ್ಟ ಒಂದಾದರೂ ಪದಕವನ್ನು ಪಡೆದುಕೊಂಡಿದೆ.

2000ದಲ್ಲಿ ಸಿಡ್ನಿಯಲ್ಲಿ ಕರ್ಣಂ ಮಲ್ಲೇಶ್ವರಿ ಭಾರತದ ಭಾರ ಎತ್ತಿ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದರು. 2004ರ ಅಥೆನ್ಸ್ ಒಲಿಂಪಿಕ್ಸ್‌ನಲ್ಲಿ ರಾಜ್ಯವರ್ಧನ್ ಸಿಂಗ್ ರಾಥೋಡ್ ಶೂಟಿಂಗ್ ವಿಭಾಗದ ಡಬಲ್ ಟ್ರಾಪ್‌ನಲ್ಲಿ ರಜತ ಗೆದ್ದಿದ್ದರು. ಭಾರತದ ಪಾಲಿಗೆ ವೈಯಕ್ತಿಕ ಮಟ್ಟದಲ್ಲಿ ಇದು ಹೊಸ ಸಾಧನೆ ಆಗಿತ್ತು.

ಭಾರತ ಒಲಿಂಪಿಕ್ಸ್‌ನ ಮೊದಲ ವೈಯಕ್ತಿಕ ಚಿನ್ನ ಗೆದ್ದಿದ್ದು 2008ರಲ್ಲಿ. ಕೊನೆಗೂ ಒಲಿಂಪಿಕ್ ಸ್ವರ್ಣವನ್ನು ನನಸು ಮಾಡಿದ್ದು ಅಭಿನವ್ ಭಿಂದ್ರಾ. ಭಿಂದ್ರಾ ಅಂದು 10 ಮೀ ರೈಫಲ್ ವಿಭಾಗದಲ್ಲಿ ಚಿನ್ನಕ್ಕೆ ಗುರಿ ಇಟ್ಟಿದ್ದರು. ಇದು ಸ್ವರ್ಣದ ಓಪನಿಂಗ್ ಆಗಿದ್ದರೂ, ಅಲ್ಲಿಂದ ಇಲ್ಲಿ ತನಕ ಮತ್ತೊಂದು ಚಿನ್ನ ಭಾರತಕ್ಕೆ ದಕ್ಕಿಲ್ಲ ಅನ್ನುವುದು ಕೂಡ ನಿರಾಶಾದಾಯಕ ಸತ್ಯ.

ಬೀಜಿಂಗ್‌ನಲ್ಲಿ ಬಾಕ್ಸಿಂಗ್‌ನಲ್ಲಿ ವಿಜೇಂದರ್ ಸಿಂಗ್ ಮತ್ತು ಕುಸ್ತಿಯಲ್ಲಿ ಸುಶೀಲ್ ಕುಮಾರ್ ಕಂಚಿನ ಪದಕಕ್ಕೆ ಕೊರಳೊಡ್ಡಿ ಇತಿಹಾಸ ಬರೆದಿದ್ದರು.

ಇನ್ನು 2012ರ ಲಂಡನ್ ಒಲಿಂಪಿಕ್ಸ್ ಭಾರತಕ್ಕೆ ಸರ್ವಶ್ರೇಷ್ಠ ಒಲಿಂಪಿಕ್ಸ್. ಲಂಡನ್‌ನಲ್ಲಿ ಭಾರತ 2 ಬೆಳ್ಳಿ ಮತ್ತು 4 ಕಂಚಿನ ಪದಕ ಗೆದ್ದುಕೊಂಡಿತ್ತು. ಶೂಟಿಂಗ್‌ನಲ್ಲಿ ವಿಜಯ ಕುಮಾರ್ ಮತ್ತು ಕುಸ್ತಿಯಲ್ಲಿ ಸುಶೀಲ್ ಕುಮಾರ್ ಬೆಳ್ಳಿ ಗೆದ್ದರೆ, ಬ್ಯಾಡ್ಮಿಂಟನ್‌ನಲ್ಲಿ ಸೈನಾ ನೆಹ್ವಾಲ್, ಬಾಕ್ಸಿಂಗ್‌ನಲ್ಲಿ ಮೇರಿಕೋಮ್, ಶೂಟಿಂಗ್‌ನಲ್ಲಿ ಗಗನ್ ನಾರಂಗ್ ಮತ್ತು ಕುಸ್ತಿಯಲ್ಲಿ ಯೋಗೇಶ್ವರ್ ದತ್ ಕಂಚಿನ ಪದಕ ಗೆದ್ದಿದ್ದರು. ಲಂಡನ್ ಒಲಿಂಪಿಕ್ಸ್‌ನಲ್ಲಿ ಭಾರತ ಗೆದ್ದ ಒಟ್ಟು ಪದಕಗಳು ಸಂಚಲನ ಸೃಷ್ಟಿಸಿತ್ತು ಅನ್ನುವುದು ಸುಳ್ಳಲ್ಲ.

2016ರ ರಿಯೋ ಒಲಿಂಪಿಕ್ಸ್ ಮೇಲೆ ಭಾರತಕ್ಕೆ ದೊಡ್ಡ ಆಸೆಯಿತ್ತು. ಆದರೆ ಅಲ್ಲೂ ಹೆಚ್ಚಿನ ಯಶಸ್ಸು ಕಾಣಲಿಲ್ಲ. ಬ್ಯಾಡ್ಮಿಂಟನ್‌ನಲ್ಲಿ ಸಿಂಧೂ ಬೆಳ್ಳಿಗೆ ಮುತ್ತಿಟ್ಟರೆ, ಕುಸ್ತಿಯಲ್ಲಿ ಸಾಕ್ಷಿ ಮಲಿಕ್ ಕಂಚಿಗೆ ತೃಪ್ತಿ ಪಟ್ಟಿದ್ದರು. ಈಗ ಟೋಕಿಯೋ ಕಡೆ ಭಾರತ ಗಮನ ಇಟ್ಟಿದೆ. ಪದಕದ ನಿರೀಕ್ಷೆ ಇಟ್ಟುಕೊಂಡವರು ಈ ಬಾರಿಯಾದರೂ ಯಶಸ್ಸು ಕಾಣಲಿ ಅನ್ನುವುದು ಶತಕೋಟಿ ಭಾರತೀಯರ ಹಾರೈಕೆ.

ಜೀವನ್ ಅರಂತೊಡ್

ಜೀವನ್ ಅರಂತೊಡ್
ಟಿವಿ9ನಿಂದ ಪ್ರಾರಂಭಿಸಿ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡ ಜೀವನ್ ಅವರು ಈಗ ಸ್ವತಂತ್ರವಾಗಿ ಪತ್ರಿಕೋದ್ಯಮ ಕೆಲಸವನ್ನು ನಿರ್ವಹಿಸುತ್ತಿದ್ದಾರೆ.


ಇದನ್ನೂ ಓದಿ: ನಮ್ಮ ವರದಿಗೆ ಸರ್ಕಾರ ಹೆದರಿದೆ, ಆದರೆ ಐಟಿ ದಾಳಿಗೆ ನಾವು ಬಗ್ಗುವುದಿಲ್ಲ: ದೈನಿಕ್ ಭಾಸ್ಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...