Homeಮುಖಪುಟಭಾರತದ ‘ಅತ್ಯಂತ ಎತ್ತರದ ವ್ಯಕ್ತಿ’ ಸಮಾಜವಾದಿ ಪಾರ್ಟಿಗೆ ಸೇರ್ಪಡೆ

ಭಾರತದ ‘ಅತ್ಯಂತ ಎತ್ತರದ ವ್ಯಕ್ತಿ’ ಸಮಾಜವಾದಿ ಪಾರ್ಟಿಗೆ ಸೇರ್ಪಡೆ

- Advertisement -
- Advertisement -

ನವ ದೆಹಲಿ: ಭಾರತದ ಅತ್ಯಂತ ಎತ್ತರದ ವ್ಯಕ್ತಿ ಎಂದೇ ಗುರುತಿಸಲಾಗುತ್ತಿರುವ ಧರ್ಮೇಂದ್ರ ಪ್ರತಾಪ್ ಸಿಂಗ್ ಅವರು ಶನಿವಾರ ಸಮಾಜವಾದಿ ಪಕ್ಷಕ್ಕೆ ಸೇರಿದ್ದಾರೆ. ಉತ್ತರ ಪ್ರದೇಶದ ಪ್ರತಾಪಗಢದವರಾದ ಸಿಂಗ್ ಅವರು 2.4 ಮೀ (8 ಅಡಿ 1 ಇಂಚು) ಎತ್ತರವಿದ್ದಾರೆ. ವಿಶ್ವ ದಾಖಲೆಗೆ ಕೇವಲ 11 ಸೆಂ. ಕಡಿಮೆ ಇದ್ದಾರೆ ಎನ್ನಲಾಗಿದೆ.

ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷ ನರೇಶ್ ಉತ್ತಮ್ ಪಟೇಲ್ ಅವರು ಸಿಂಗ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು. ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಪಕ್ಷವನ್ನು ಈ ಬೆಳವಣಿಗೆ ಬಲಪಡಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

“ಸಮಾಜವಾದಿ ಪಕ್ಷದ ನೀತಿಗಳು ಮತ್ತು ಅಖಿಲೇಶ್ ಯಾದವ್ ಅವರ ನಾಯಕತ್ವದಲ್ಲಿ ನಂಬಿಕೆಯನ್ನು ವ್ಯಕ್ತಪಡಿಸಿ ಪ್ರತಾಪ್‌ಗಢದ ಧರ್ಮೇಂದ್ರ ಪ್ರತಾಪ್ ಸಿಂಗ್ ಸಮಾಜವಾದಿ ಪಕ್ಷಕ್ಕೆ ಸೇರಿದ್ದಾರೆ. ರಾಜ್ಯಾಧ್ಯಕ್ಷ ನರೇಶ್ ಉತ್ತಮ್ ಅವರು ಪಟೇಲ್ ಧರ್ಮೇಂದ್ರ ಪ್ರತಾಪ್ ಸಿಂಗ್ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವಾಗ ಸಮಾಜವಾದಿ ಪಕ್ಷವನ್ನು ಬಲಪಡಿಸುವ ಭರವಸೆ ವ್ಯಕ್ತಪಡಿಸಿದರು. ಧರ್ಮೇಂದ್ರ ಅವರ ಸೇರ್ಪಡೆಯಿಂದ ಪಕ್ಷ ಬಲವಾಗುತ್ತದೆ ಎಂದು ಹೇಳಿದರು” ಎಂದು ಎಸ್‌ಪಿ ವಕ್ತಾರ ರಾಜೇಂದ್ರ ಚೌಧರಿ ಶನಿವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸಿಂಗ್ ಅವರು ತಮ್ಮ ಎತ್ತರದ ಕಾರಣದಿಂದ ಬಹಳಷ್ಟು ತೊಂದರೆಗಳನ್ನು ಎದುರಿಸಿದರು. ಅವರು ಹೆಜ್ಜೆ ಹಾಕಿದಾಗ ಅವರು ಹೆಚ್ಚಿನ ಗಮನವನ್ನು ಸೆಳೆಯುತ್ತಾರೆ. ಸಿಂಗ್ ಅವರೇ ಒಂದು ಸಂದರ್ಶನದಲ್ಲಿ ಹೇಳಿದಂತೆ, “ಜನರು ಫೋಟೋವನ್ನು ತೆಗೆದುಕೊಳ್ಳಲು ಬಯಸಿದಾಗ, ಸಿಂಗ್‌ ಅವರನ್ನು ಸೆಲೆಬ್ರಿಟಿಯಂತೆ ಜನ ಭಾವಿಸುತ್ತಾರೆ”.

“ನಾನು ಅಗಾಧವಾಗಿ ಜನಪ್ರಿಯನಾಗಿದ್ದೇನೆ. ನನ್ನ ಎತ್ತರದಿಂದಾಗಿ ಇದೆಲ್ಲ ಸಾಧ್ಯವಾಗಿದೆ” ಎಂದು ಅವರು ದಿ ಟೆಲಿಗ್ರಾಫ್‌ಗೆ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಫೆಬ್ರವರಿ 10 ರಿಂದ ಮಾರ್ಚ್ 7 ರ ನಡುವೆ ಏಳು ಹಂತಗಳಲ್ಲಿ ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.

ರಾಜ್ಯವು ಹಲವಾರು ಕೌತುಕಗಳಿಗೆ ಸಾಕ್ಷಿಯಾಗುವ ನಿರೀಕ್ಷೆಯಿದೆ. ಅಖಿಲೇಶ್ ಯಾದವ್ ಅವರು ತಮ್ಮ ಕುಟುಂಬದ ತವರು ನೆಲದಲ್ಲಿರುವ ಮೈನ್‌ಪುರಿ ಜಿಲ್ಲೆಯ ಕರ್ಹಾಲ್ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಶನಿವಾರ ಘೋಷಿಸಿದ್ದಾರೆ.

ಗೋರಖ್‌ಪುರದಿಂದ ಐದು ಬಾರಿ ಲೋಕಸಭಾ ಸಂಸದರಾಗಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕ್ಷೇತ್ರದ ಒಂದು ಸ್ಥಾನದಿಂದ ಸ್ಪರ್ಧಿಸಲಿದ್ದಾರೆ. ಗೋರಖ್‌ಪುರದಿಂದ ಭೀಮ್‌ ಆರ್ಮಿಯ ನಾಯಕ ಚಂದ್ರಶೇಖರ್‌ ಆಜಾದ್ ರಾವಣ್ ಅವರೂ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.


ಇದನ್ನೂ ಓದಿರಿ: ಕಾಶ್ಮೀರದಲ್ಲಿ ಯುದ್ಧಾಪರಾಧ ಆರೋಪ: ಅಮಿತ್ ಶಾ, ಸೇನಾ ಮುಖ್ಯಸ್ಥರ ಬಂಧನಕ್ಕೆ ಯುಕೆ ಮೂಲದ ಸಂಸ್ಥೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...