Homeಮುಖಪುಟಭಾರತದ ‘ಅತ್ಯಂತ ಎತ್ತರದ ವ್ಯಕ್ತಿ’ ಸಮಾಜವಾದಿ ಪಾರ್ಟಿಗೆ ಸೇರ್ಪಡೆ

ಭಾರತದ ‘ಅತ್ಯಂತ ಎತ್ತರದ ವ್ಯಕ್ತಿ’ ಸಮಾಜವಾದಿ ಪಾರ್ಟಿಗೆ ಸೇರ್ಪಡೆ

- Advertisement -
- Advertisement -

ನವ ದೆಹಲಿ: ಭಾರತದ ಅತ್ಯಂತ ಎತ್ತರದ ವ್ಯಕ್ತಿ ಎಂದೇ ಗುರುತಿಸಲಾಗುತ್ತಿರುವ ಧರ್ಮೇಂದ್ರ ಪ್ರತಾಪ್ ಸಿಂಗ್ ಅವರು ಶನಿವಾರ ಸಮಾಜವಾದಿ ಪಕ್ಷಕ್ಕೆ ಸೇರಿದ್ದಾರೆ. ಉತ್ತರ ಪ್ರದೇಶದ ಪ್ರತಾಪಗಢದವರಾದ ಸಿಂಗ್ ಅವರು 2.4 ಮೀ (8 ಅಡಿ 1 ಇಂಚು) ಎತ್ತರವಿದ್ದಾರೆ. ವಿಶ್ವ ದಾಖಲೆಗೆ ಕೇವಲ 11 ಸೆಂ. ಕಡಿಮೆ ಇದ್ದಾರೆ ಎನ್ನಲಾಗಿದೆ.

ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷ ನರೇಶ್ ಉತ್ತಮ್ ಪಟೇಲ್ ಅವರು ಸಿಂಗ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು. ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಪಕ್ಷವನ್ನು ಈ ಬೆಳವಣಿಗೆ ಬಲಪಡಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

“ಸಮಾಜವಾದಿ ಪಕ್ಷದ ನೀತಿಗಳು ಮತ್ತು ಅಖಿಲೇಶ್ ಯಾದವ್ ಅವರ ನಾಯಕತ್ವದಲ್ಲಿ ನಂಬಿಕೆಯನ್ನು ವ್ಯಕ್ತಪಡಿಸಿ ಪ್ರತಾಪ್‌ಗಢದ ಧರ್ಮೇಂದ್ರ ಪ್ರತಾಪ್ ಸಿಂಗ್ ಸಮಾಜವಾದಿ ಪಕ್ಷಕ್ಕೆ ಸೇರಿದ್ದಾರೆ. ರಾಜ್ಯಾಧ್ಯಕ್ಷ ನರೇಶ್ ಉತ್ತಮ್ ಅವರು ಪಟೇಲ್ ಧರ್ಮೇಂದ್ರ ಪ್ರತಾಪ್ ಸಿಂಗ್ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವಾಗ ಸಮಾಜವಾದಿ ಪಕ್ಷವನ್ನು ಬಲಪಡಿಸುವ ಭರವಸೆ ವ್ಯಕ್ತಪಡಿಸಿದರು. ಧರ್ಮೇಂದ್ರ ಅವರ ಸೇರ್ಪಡೆಯಿಂದ ಪಕ್ಷ ಬಲವಾಗುತ್ತದೆ ಎಂದು ಹೇಳಿದರು” ಎಂದು ಎಸ್‌ಪಿ ವಕ್ತಾರ ರಾಜೇಂದ್ರ ಚೌಧರಿ ಶನಿವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸಿಂಗ್ ಅವರು ತಮ್ಮ ಎತ್ತರದ ಕಾರಣದಿಂದ ಬಹಳಷ್ಟು ತೊಂದರೆಗಳನ್ನು ಎದುರಿಸಿದರು. ಅವರು ಹೆಜ್ಜೆ ಹಾಕಿದಾಗ ಅವರು ಹೆಚ್ಚಿನ ಗಮನವನ್ನು ಸೆಳೆಯುತ್ತಾರೆ. ಸಿಂಗ್ ಅವರೇ ಒಂದು ಸಂದರ್ಶನದಲ್ಲಿ ಹೇಳಿದಂತೆ, “ಜನರು ಫೋಟೋವನ್ನು ತೆಗೆದುಕೊಳ್ಳಲು ಬಯಸಿದಾಗ, ಸಿಂಗ್‌ ಅವರನ್ನು ಸೆಲೆಬ್ರಿಟಿಯಂತೆ ಜನ ಭಾವಿಸುತ್ತಾರೆ”.

“ನಾನು ಅಗಾಧವಾಗಿ ಜನಪ್ರಿಯನಾಗಿದ್ದೇನೆ. ನನ್ನ ಎತ್ತರದಿಂದಾಗಿ ಇದೆಲ್ಲ ಸಾಧ್ಯವಾಗಿದೆ” ಎಂದು ಅವರು ದಿ ಟೆಲಿಗ್ರಾಫ್‌ಗೆ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಫೆಬ್ರವರಿ 10 ರಿಂದ ಮಾರ್ಚ್ 7 ರ ನಡುವೆ ಏಳು ಹಂತಗಳಲ್ಲಿ ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.

ರಾಜ್ಯವು ಹಲವಾರು ಕೌತುಕಗಳಿಗೆ ಸಾಕ್ಷಿಯಾಗುವ ನಿರೀಕ್ಷೆಯಿದೆ. ಅಖಿಲೇಶ್ ಯಾದವ್ ಅವರು ತಮ್ಮ ಕುಟುಂಬದ ತವರು ನೆಲದಲ್ಲಿರುವ ಮೈನ್‌ಪುರಿ ಜಿಲ್ಲೆಯ ಕರ್ಹಾಲ್ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಶನಿವಾರ ಘೋಷಿಸಿದ್ದಾರೆ.

ಗೋರಖ್‌ಪುರದಿಂದ ಐದು ಬಾರಿ ಲೋಕಸಭಾ ಸಂಸದರಾಗಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕ್ಷೇತ್ರದ ಒಂದು ಸ್ಥಾನದಿಂದ ಸ್ಪರ್ಧಿಸಲಿದ್ದಾರೆ. ಗೋರಖ್‌ಪುರದಿಂದ ಭೀಮ್‌ ಆರ್ಮಿಯ ನಾಯಕ ಚಂದ್ರಶೇಖರ್‌ ಆಜಾದ್ ರಾವಣ್ ಅವರೂ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.


ಇದನ್ನೂ ಓದಿರಿ: ಕಾಶ್ಮೀರದಲ್ಲಿ ಯುದ್ಧಾಪರಾಧ ಆರೋಪ: ಅಮಿತ್ ಶಾ, ಸೇನಾ ಮುಖ್ಯಸ್ಥರ ಬಂಧನಕ್ಕೆ ಯುಕೆ ಮೂಲದ ಸಂಸ್ಥೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...