Homeಮುಖಪುಟಫೆಬ್ರವರಿಯಲ್ಲಿ ಭಾರತದ ಸಗಟು ಬೆಲೆ ಹಣದುಬ್ಬರ ಶೇ.2.38 ಕ್ಕೆ ಏರಿಕೆ

ಫೆಬ್ರವರಿಯಲ್ಲಿ ಭಾರತದ ಸಗಟು ಬೆಲೆ ಹಣದುಬ್ಬರ ಶೇ.2.38 ಕ್ಕೆ ಏರಿಕೆ

- Advertisement -
- Advertisement -

ತರಕಾರಿ ಎಣ್ಣೆ ಮತ್ತು ಪಾನೀಯಗಳಂತಹ ದುಬಾರಿ ತಯಾರಿಕಾ ಆಹಾರ ಪದಾರ್ಥಗಳಿಂದಾಗಿ ಭಾರತದಲ್ಲಿ ಸಗಟು ಬೆಲೆ ಹಣದುಬ್ಬರವು ಫೆಬ್ರವರಿಯಲ್ಲಿ ಶೇ. 2.38 ಕ್ಕೆ ಸ್ವಲ್ಪ ಏರಿಕೆಯಾಗಿದೆ ಎಂದು ಸೋಮವಾರ ಬಿಡುಗಡೆಯಾದ ಸರ್ಕಾರಿ ದತ್ತಾಂಶಗಳು ತೋರಿಸಿವೆ. ಸಗಟು ಬೆಲೆ ಸೂಚ್ಯಂಕ (ಡಬ್ಲ್ಯೂಪಿಐ) ಆಧಾರಿತ ಹಣದುಬ್ಬರವು ಜನವರಿಯಲ್ಲಿ ಶೇ. 2.31 ರಷ್ಟಿತ್ತು.

ಫೆಬ್ರವರಿ 2024 ರಲ್ಲಿ ಇದು ಶೇ. 0.2 ರಷ್ಟಿತ್ತು. ಫೆಬ್ರವರಿ ತಿಂಗಳಿನ ಡಬ್ಲ್ಯೂಪಿಐನಲ್ಲಿ ತಿಂಗಳಿನಿಂದ ತಿಂಗಳಿಗೆ ಬದಲಾವಣೆಯು ಜನವರಿ 2025 ಕ್ಕೆ ಹೋಲಿಸಿದರೆ ಶೇ. 0.06 ರಷ್ಟಿತ್ತು.

ಫೆಬ್ರವರಿ 2025 ರಲ್ಲಿ ಹಣದುಬ್ಬರದ ಸಕಾರಾತ್ಮಕ ದರವು, ಮುಖ್ಯವಾಗಿ ಆಹಾರ ಉತ್ಪನ್ನಗಳು, ಆಹಾರ ವಸ್ತುಗಳು, ಇತರ ಉತ್ಪಾದನೆ, ಆಹಾರೇತರ ವಸ್ತುಗಳು ಮತ್ತು ಜವಳಿ ತಯಾರಿಕೆ ಇತ್ಯಾದಿಗಳ ಬೆಲೆಗಳಲ್ಲಿನ ಹೆಚ್ಚಳದಿಂದಾಗಿ ಈ ಬೆಳವಣಿಗೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

ದತ್ತಾಂಶದ ಪ್ರಕಾರ, ಈ ತಿಂಗಳಲ್ಲಿ ಉತ್ಪಾದಿತ ಆಹಾರ ಉತ್ಪನ್ನಗಳ ಹಣದುಬ್ಬರವು ಶೇ.11.06 ಕ್ಕೆ ಏರಿತು. ಸಸ್ಯಜನ್ಯ ಎಣ್ಣೆ ಶೇ.33.59 ರಷ್ಟು ಏರಿಕೆಯಾಗಿದೆ. ಆದರೆ, ಪಾನೀಯಗಳು ಶೇ.1.66 ಕ್ಕೆ ಅಲ್ಪ ಪ್ರಮಾಣದಲ್ಲಿ ಏರಿಕೆಯಾಗಿವೆ.

ಆದರೂ, ಆಲೂಗಡ್ಡೆ ಬೆಲೆ ಶೇ.74.28 ರಿಂದ ಶೇ.27.54 ಕ್ಕೆ ಇಳಿದಿದ್ದರಿಂದ ತರಕಾರಿಗಳ ಬೆಲೆಯಲ್ಲಿ ಇಳಿಕೆಯಾಗಿದೆ. ಇಂಧನ ಮತ್ತು ವಿದ್ಯುತ್ ವಿಭಾಗವು ಫೆಬ್ರವರಿಯಲ್ಲಿ ಶೇ.0.71 ರಷ್ಟು ಹಣದುಬ್ಬರವಿಳಿತವನ್ನು ಕಂಡಿದೆ, ಹಿಂದಿನ ತಿಂಗಳಲ್ಲಿ ಶೇ.2.78 ರಷ್ಟು ಹಣದುಬ್ಬರವಿಳಿತವಾಗಿತ್ತು.

ಈ ಮಧ್ಯೆ, ಗ್ರಾಹಕ ಬೆಲೆ ಸೂಚ್ಯಂಕವನ್ನು ಆಧರಿಸಿದ ಭಾರತದ ಚಿಲ್ಲರೆ ಹಣದುಬ್ಬರವು ಫೆಬ್ರವರಿ 2025 ರಲ್ಲಿ ಏಳು ತಿಂಗಳ ಕನಿಷ್ಠ ಮಟ್ಟವಾದ ಶೇ.3.61 ರಷ್ಟು ಕಡಿಮೆಯಾಗಿದೆ. ಮುಖ್ಯವಾಗಿ ಕಳೆದ ವಾರ ಬಿಡುಗಡೆಯಾದ ಅಧಿಕೃತ ಅಂಕಿಅಂಶಗಳ ಪ್ರಕಾರ, ತರಕಾರಿಗಳು ಮತ್ತು ಪ್ರೋಟೀನ್-ಭರಿತ ವಸ್ತುಗಳ ಬೆಲೆ ಏರಿಕೆಯ ಕಡಿಮೆ ದರದಿಂದಾಗಿ ಹಣದುಬ್ಬರದಲ್ಲಿ ಏರುಪೇರಾಗಿದೆ.

ಮತದಾರರ ಗುರುತಿನ ಚೀಟಿ ವಿಚಾರದ ಬಗ್ಗೆ ಚರ್ಚೆಗೆ ಮೋದಿ ಸರ್ಕಾರ ಸಿದ್ದವೆ?: ಟಿಎಂಸಿ ಸಂಸದ ಡೆರೆಕ್ ಒ’ಬ್ರೇನ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...