Homeಮುಖಪುಟಫೆಬ್ರವರಿಯಲ್ಲಿ ಭಾರತದ ಸಗಟು ಬೆಲೆ ಹಣದುಬ್ಬರ ಶೇ.2.38 ಕ್ಕೆ ಏರಿಕೆ

ಫೆಬ್ರವರಿಯಲ್ಲಿ ಭಾರತದ ಸಗಟು ಬೆಲೆ ಹಣದುಬ್ಬರ ಶೇ.2.38 ಕ್ಕೆ ಏರಿಕೆ

- Advertisement -
- Advertisement -

ತರಕಾರಿ ಎಣ್ಣೆ ಮತ್ತು ಪಾನೀಯಗಳಂತಹ ದುಬಾರಿ ತಯಾರಿಕಾ ಆಹಾರ ಪದಾರ್ಥಗಳಿಂದಾಗಿ ಭಾರತದಲ್ಲಿ ಸಗಟು ಬೆಲೆ ಹಣದುಬ್ಬರವು ಫೆಬ್ರವರಿಯಲ್ಲಿ ಶೇ. 2.38 ಕ್ಕೆ ಸ್ವಲ್ಪ ಏರಿಕೆಯಾಗಿದೆ ಎಂದು ಸೋಮವಾರ ಬಿಡುಗಡೆಯಾದ ಸರ್ಕಾರಿ ದತ್ತಾಂಶಗಳು ತೋರಿಸಿವೆ. ಸಗಟು ಬೆಲೆ ಸೂಚ್ಯಂಕ (ಡಬ್ಲ್ಯೂಪಿಐ) ಆಧಾರಿತ ಹಣದುಬ್ಬರವು ಜನವರಿಯಲ್ಲಿ ಶೇ. 2.31 ರಷ್ಟಿತ್ತು.

ಫೆಬ್ರವರಿ 2024 ರಲ್ಲಿ ಇದು ಶೇ. 0.2 ರಷ್ಟಿತ್ತು. ಫೆಬ್ರವರಿ ತಿಂಗಳಿನ ಡಬ್ಲ್ಯೂಪಿಐನಲ್ಲಿ ತಿಂಗಳಿನಿಂದ ತಿಂಗಳಿಗೆ ಬದಲಾವಣೆಯು ಜನವರಿ 2025 ಕ್ಕೆ ಹೋಲಿಸಿದರೆ ಶೇ. 0.06 ರಷ್ಟಿತ್ತು.

ಫೆಬ್ರವರಿ 2025 ರಲ್ಲಿ ಹಣದುಬ್ಬರದ ಸಕಾರಾತ್ಮಕ ದರವು, ಮುಖ್ಯವಾಗಿ ಆಹಾರ ಉತ್ಪನ್ನಗಳು, ಆಹಾರ ವಸ್ತುಗಳು, ಇತರ ಉತ್ಪಾದನೆ, ಆಹಾರೇತರ ವಸ್ತುಗಳು ಮತ್ತು ಜವಳಿ ತಯಾರಿಕೆ ಇತ್ಯಾದಿಗಳ ಬೆಲೆಗಳಲ್ಲಿನ ಹೆಚ್ಚಳದಿಂದಾಗಿ ಈ ಬೆಳವಣಿಗೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

ದತ್ತಾಂಶದ ಪ್ರಕಾರ, ಈ ತಿಂಗಳಲ್ಲಿ ಉತ್ಪಾದಿತ ಆಹಾರ ಉತ್ಪನ್ನಗಳ ಹಣದುಬ್ಬರವು ಶೇ.11.06 ಕ್ಕೆ ಏರಿತು. ಸಸ್ಯಜನ್ಯ ಎಣ್ಣೆ ಶೇ.33.59 ರಷ್ಟು ಏರಿಕೆಯಾಗಿದೆ. ಆದರೆ, ಪಾನೀಯಗಳು ಶೇ.1.66 ಕ್ಕೆ ಅಲ್ಪ ಪ್ರಮಾಣದಲ್ಲಿ ಏರಿಕೆಯಾಗಿವೆ.

ಆದರೂ, ಆಲೂಗಡ್ಡೆ ಬೆಲೆ ಶೇ.74.28 ರಿಂದ ಶೇ.27.54 ಕ್ಕೆ ಇಳಿದಿದ್ದರಿಂದ ತರಕಾರಿಗಳ ಬೆಲೆಯಲ್ಲಿ ಇಳಿಕೆಯಾಗಿದೆ. ಇಂಧನ ಮತ್ತು ವಿದ್ಯುತ್ ವಿಭಾಗವು ಫೆಬ್ರವರಿಯಲ್ಲಿ ಶೇ.0.71 ರಷ್ಟು ಹಣದುಬ್ಬರವಿಳಿತವನ್ನು ಕಂಡಿದೆ, ಹಿಂದಿನ ತಿಂಗಳಲ್ಲಿ ಶೇ.2.78 ರಷ್ಟು ಹಣದುಬ್ಬರವಿಳಿತವಾಗಿತ್ತು.

ಈ ಮಧ್ಯೆ, ಗ್ರಾಹಕ ಬೆಲೆ ಸೂಚ್ಯಂಕವನ್ನು ಆಧರಿಸಿದ ಭಾರತದ ಚಿಲ್ಲರೆ ಹಣದುಬ್ಬರವು ಫೆಬ್ರವರಿ 2025 ರಲ್ಲಿ ಏಳು ತಿಂಗಳ ಕನಿಷ್ಠ ಮಟ್ಟವಾದ ಶೇ.3.61 ರಷ್ಟು ಕಡಿಮೆಯಾಗಿದೆ. ಮುಖ್ಯವಾಗಿ ಕಳೆದ ವಾರ ಬಿಡುಗಡೆಯಾದ ಅಧಿಕೃತ ಅಂಕಿಅಂಶಗಳ ಪ್ರಕಾರ, ತರಕಾರಿಗಳು ಮತ್ತು ಪ್ರೋಟೀನ್-ಭರಿತ ವಸ್ತುಗಳ ಬೆಲೆ ಏರಿಕೆಯ ಕಡಿಮೆ ದರದಿಂದಾಗಿ ಹಣದುಬ್ಬರದಲ್ಲಿ ಏರುಪೇರಾಗಿದೆ.

ಮತದಾರರ ಗುರುತಿನ ಚೀಟಿ ವಿಚಾರದ ಬಗ್ಗೆ ಚರ್ಚೆಗೆ ಮೋದಿ ಸರ್ಕಾರ ಸಿದ್ದವೆ?: ಟಿಎಂಸಿ ಸಂಸದ ಡೆರೆಕ್ ಒ’ಬ್ರೇನ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...