Homeಮುಖಪುಟವಿಕಲಾಂಗ ಮಗುವಿನ ಪ್ರಯಾಣಕ್ಕೆ ಇಂಡಿಗೊ ಏರ್‌ಲೈನ್ಸ್‌ ಸಿಬ್ಬಂದಿ ತಡೆ: ವಿಡಿಯೊ ವೈರಲ್‌‌

ವಿಕಲಾಂಗ ಮಗುವಿನ ಪ್ರಯಾಣಕ್ಕೆ ಇಂಡಿಗೊ ಏರ್‌ಲೈನ್ಸ್‌ ಸಿಬ್ಬಂದಿ ತಡೆ: ವಿಡಿಯೊ ವೈರಲ್‌‌

- Advertisement -
- Advertisement -

ಇಂಡಿಗೋ ಏರ್‌ಲೈನ್ಸ್‌ನ ಸಿಬ್ಬಂದಿ ವಿಶೇಷ ಚೇತನ ಮಗು ಮತ್ತು ಆ ಮಗುವಿನ ಪೋಷಕರನ್ನು ರಾಂಚಿ ವಿಮಾನ ನಿಲ್ದಾಣದಲ್ಲಿ ಶನಿವಾರ ತಡೆದಿದ್ದು ಚರ್ಚೆಗೆ ಗ್ರಾಸವಾಗಿದೆ.

ಈ ಕುರಿತ ಫೇಸ್‌ಬುಕ್ ಪೋಸ್ಟ್ ವೈರಲ್‌ ಆಗಿದೆ. ಇಂಡಿಗೋ ಏರ್‌ಲೈನ್ಸ್‌ ಸಿಬ್ಬಂದಿ ಹೀಗೇಕೆ ವರ್ತಿಸಿದರೆಂದು ಸ್ಪಷ್ಟಪಡಿಸಬೇಕೆಂದು ಏರ್‌ಲೈನ್‌ಗೆ ಒತ್ತಾಯಿಸಲಾಗಿದೆ. ಈ ಘಟನೆಯನ್ನು ಕಣ್ಣಾರೆ ಕಂಡ ಮನೀಶಾ ಗುಪ್ತಾ ಅವರು ಹಲವು ಸಂಗತಿಗಳನ್ನು ಶೇರ್‌ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಇಂಡಿಗೋ ಸಿಬ್ಬಂದಿ ವಿಕಲಾಂಗ ಮಗು ವಿಮಾನ ಹತ್ತಲು ಅನುಮತಿ ನೀಡಲಿಲ್ಲ. ಈ ಮಗು ಇತರ ಪ್ರಯಾಣಿಕರಿಗೆ ತೊಂದರೆ ಉಂಟು ಮಾಡಲಿದೆ. ಪ್ರಯಾಣ ಮಾಡಬೇಕಾದರೆ ಮಗು ಸಾಮಾನ್ಯ ಸ್ಥಿತಿಗೆ ಮರಳಬೇಕು” ಎಂದು ಸಿಬ್ಬಂದಿ ಹೇಳಿದ್ದಾಗಿ ಆರೋಪಿಸಲಾಗಿದೆ.

“ಈ ಸ್ಥಿತಿಯಲ್ಲಿರುವ ಮಕ್ಕಳು ಹಾಗೂ ಕುಡುಕರು ಪ್ರಯಾಣಿಸಲು ಸಾಧ್ಯವಿಲ್ಲ” ಎಂದು ಇಂಡಿಗೋ ಸಿಬ್ಬಂದಿ ಹೇಳಿದ್ದಾಗಿ ದೂರಲಾಗಿದೆ.

“ಮಗು ಮತ್ತು ಪೋಷಕರ ಪ್ರಯಾಣದಿಂದ ನಮಗೆ ಯಾವುದೇ ಸಮಸ್ಯೆ ಇಲ್ಲ ಎಂದು ಇತರ ಪ್ರಯಾಣಿಕರು ಹೇಳಿದರು. ಪ್ರಯಾಣಿಕರಲ್ಲಿ ವೈದ್ಯರೂ ಕೂಡ ಇದ್ದರು. ಅವರು ಸಿಬ್ಬಂದಿಯನ್ನು ಪ್ರಶ್ನಿಸಿದರು” ಎಂದು ಪೋಸ್ಟ್‌ನಲ್ಲಿ ತಿಳಿಸಲಾಗಿದೆ. ಪ್ರಯಾಣಿಕರ ಗುಂಪಿನಿಂದ ಹೊರಬಂದ ಸರ್ಕಾರಿ ಅಧಿಕಾರಿಯೊಬ್ಬರು ಮಗುವಿಗೆ ಪ್ರಯಾಣಿಸುವ ಹಕ್ಕಿದೆ ಎಂದು ತಿಳಿಸಿದರು. ಕೊನೆಗೂ ಮೂವರಿಗೆ ಪ್ರಯಾಣಿಸಲು ಅವಕಾಶ ನೀಡಲಾಗಲಿಲ್ಲ. ಸ್ವಲ್ಪ ಸಮಯದವರೆಗೆ ಗೊಂದಲ ಮುಂದುವರೆಯಿತು ಎಂದು ವರದಿಯಾಗಿದೆ.

ಏರ್‌ಲೈನ್ಸ್ ತನ್ನ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, “ಮಗು ಭಯದಲ್ಲಿತ್ತು. ಮಗು ಸಾಮಾನ್ಯ ಸ್ಥಿತಿಗೆ ಮರಳಿ ಶಾಂತವಾಗಬಹುದೆಂದು ಸಿಬ್ಬಂದಿ ಬಯಸಿದರು. ಆದರೆ ಕೊನೆಯ ಕ್ಷಣದವರೆಗೂ ಭಯದಿಂದ ಹೊರಬರಲಿಲ್ಲ. ಇಂಡಿಗೊ ಏರ್‌‌ಲೈನ್ಸ್‌ ಸಂಸ್ಥೆಯು ಈ ಕುಟುಂಬಕ್ಕೆ ಹೋಟೆಲ್ ವಾಸ್ತವ್ಯವನ್ನು ಒದಗಿಸುವ ಮೂಲಕ ಸ್ಥಿತಿಯನ್ನು ಸುಧಾರಿಸಿತು. ಕುಟುಂಬವು ಮರುದಿನ ಬೆಳಿಗ್ಗೆ ತಮ್ಮ ಪ್ರಯಾಣವನ್ನು ಬೆಳೆಸಿದೆ. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ನಾವು ವಿಷಾದಿಸುತ್ತೇವೆ” ಎಂದು ತಿಳಿಸಲಾಗಿದೆ.

ನಾಗರಿಕ ವಿಮಾನಯಾನ ನಿರ್ದೇಶನಾಲಯವು ಘಟನೆಯ ಕುರಿತು ತನಿಖೆಗೆ ಆದೇಶಿಸಿದೆ ಮತ್ತು ವರದಿಯನ್ನು ಸಲ್ಲಿಸಲು ವಿಮಾನಯಾನ ಸಂಸ್ಥೆಗೆ ತಿಳಿಸಿದೆ ಎಂದು ಅಧಿಕಾರಿಗಳು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಇದನ್ನೂ ಓದಿರಿ: ವೈರಲ್‌ ವಿಡಿಯೊ: ಯುಕೆ ಕಾರ್ಯದರ್ಶಿ ಪ್ರೀತಿ ಪಟೇಲ್ ಜನಾಂಗೀಯ ನೀತಿ ಖಂಡಿಸಿ ಪ್ರಜೆಗಳು ಪ್ರತಿಭಟಿಸಿದ್ದು ಹೀಗೆ

ವಿಷಯ ಉಲ್ಬಣಗೊಳ್ಳುತ್ತಿದ್ದಂತೆ, ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಸೋಮವಾರ ಪ್ರತಿಕ್ರಿಯೆ ನೀಡಿದ್ದು, “ಇಂತಹ ನಡವಳಿಕೆಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದರು. “ಯಾವುದೇ ಮನುಷ್ಯ ಈ ರೀತಿ ನಡೆದುಕೊಳ್ಳಬಾರದು” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....