Homeಮುಖಪುಟಇಂಡಿಗೋ ಬಿಕ್ಕಟ್ಟು: ನಾಲ್ವರು ವಿಮಾನ ಕಾರ್ಯಾಚರಣೆಯ ಇನ್ ಸ್ಪೆಕ್ಟರ್ ಗಳ ಅಮಾನತು 

ಇಂಡಿಗೋ ಬಿಕ್ಕಟ್ಟು: ನಾಲ್ವರು ವಿಮಾನ ಕಾರ್ಯಾಚರಣೆಯ ಇನ್ ಸ್ಪೆಕ್ಟರ್ ಗಳ ಅಮಾನತು 

- Advertisement -
- Advertisement -

ನವದೆಹಲಿ: ಇಂಡಿಗೋ ವಿಮಾನದ ಕಾರ್ಯಾಚರಣೆಯಲ್ಲಿ ಉಂಟಾದ ಪ್ರಮುಖ ಅಡಚಣೆಗಳಿಂದಾಗಿ ಸಾವಿರಾರು ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿ ಸಾವಿರಾರು ವಿಮಾನಗಳ ಹಾರಾಟ ರದ್ದತಿಗೆ ಕಾರಣವಾದ ಹಿನ್ನೆಲೆಯಲ್ಲಿ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ ನಾಲ್ವರು ವಿಮಾನ ಕಾರ್ಯಾಚರಣೆಯ ಇನ್ ಸ್ಪೆಕ್ಟರ್ ಗಳನ್ನು (ಎಫ್ಒಐ) ಅಮಾನತುಗೊಳಿಸಿದೆ. 

ವಿಮಾನ ಕಾರ್ಯಾಚರಣೆಯ ಇನ್ ಸ್ಪೆಕ್ಟರ್ಗಳು ನಾಗರಿಕ ವಿಮಾನಯಾನ ನಿರ್ದೇಶನಾಲಯದೊಳಗಿನ ಹಿರಿಯ ಅಧಿಕಾರಿಗಳಾಗಿದ್ದು, ನಿಯಂತ್ರಕ ಮತ್ತು ಸುರಕ್ಷತಾ ಮೇಲ್ವಿಚಾರಣೆಗೆ ಜವಾಬ್ದಾರರಾಗಿರುತ್ತಾರೆ. ವಿಮಾನಯಾನ ಕಾರ್ಯಾಚರಣೆಗಳನ್ನು ಮೇಲ್ವಿಚಾರಣೆ ಮಾಡಲು ಮತ್ತು ವಾಯುಯಾನ ಮಾನದಂಡಗಳ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ಅವರನ್ನು ನಿಯೋಜಿಸಲಾಗಿರುತ್ತದೆ.

ಪೈಲಟ್‌ಗಳು ಮತ್ತು ಕ್ಯಾಬಿನ್ ಸಿಬ್ಬಂದಿ ಸೇರಿದಂತೆ ವಿಮಾನಯಾನ ಸಂಸ್ಥೆಗಳು ಮತ್ತು ವಾಯುಯಾನ ಸಿಬ್ಬಂದಿಗೆ ತಪಾಸಣೆ, ಲೆಕ್ಕಪರಿಶೋಧನೆ ಮತ್ತು ಪ್ರಮಾಣೀಕರಣ ಪ್ರಕ್ರಿಯೆಗಳನ್ನು ನಡೆಸುವ ಮೂಲಕ ವಾಯುಯಾನ ಸುರಕ್ಷತೆಯನ್ನು ಕಾಪಾಡುವಲ್ಲಿ  ವಿಮಾನ ಕಾರ್ಯಾಚರಣೆಯ ಇನ್ ಸ್ಪೆಕ್ಟರ್ಗಳು ನಿರ್ಣಾಯಕ ಪಾತ್ರ ವಹಿಸುತ್ತಾರೆ. ನಿಯಂತ್ರಕ ಅನುಸರಣೆಯನ್ನು ಪರಿಶೀಲಿಸುವುದು, ತರಬೇತಿ ಮತ್ತು ಹಾರಾಟದ ಮಾನದಂಡಗಳನ್ನು ಮೇಲ್ವಿಚಾರಣೆ ಮಾಡುವುದು ಮತ್ತು ಭಾರತದಾದ್ಯಂತ ಅಪಘಾತ ತಡೆಗಟ್ಟುವ ಪ್ರಯತ್ನಗಳಿಗೆ ಕೊಡುಗೆ ನೀಡುವುದು ಅವರ ಕರ್ತವ್ಯಗಳಲ್ಲಿ ಸೇರಿವೆ.

“ಇಂಡಿಗೋ ಡಿಸೆಂಬರ್ 12, ಶುಕ್ರವಾರ ಬೆಂಗಳೂರು ವಿಮಾನ ನಿಲ್ದಾಣದಿಂದ 54 ವಿಮಾನಗಳನ್ನು ರದ್ದುಗೊಳಿಸಿದೆ -ಇವುಗಳಲ್ಲಿ 31 ಆಗಮನ ಮತ್ತು 23 ನಿರ್ಗಮನಗಳು” ಎಂದು ಮೂಲಗಳು ತಿಳಿಸಿವೆ.

ಈ ಮಧ್ಯೆ, ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್ ಮತ್ತು ಸಿಒಒ ಇಸಿಡ್ರೆ ಪೋರ್ಕ್ವೆರಾಸ್ ಅವರು ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಡಿಜಿಸಿಎಯ ತನಿಖಾ ಸಮಿತಿಯ ಮುಂದೆ ಮತ್ತೆ ಹಾಜರಾಗಲಿದ್ದಾರೆ.

ಗುರುವಾರ, ಡಿಜಿಸಿಎ, ಬಿಕ್ಕಟ್ಟಿನಿಂದ ಬಳಲುತ್ತಿರುವ ಇಂಡಿಗೊ ವಿಮಾನಯಾನ ಸಂಸ್ಥೆಯ ಪರಿಶೀಲನೆಯನ್ನು ಚುರುಕುಗೊಳಿಸಿದ್ದು, ಕಾರ್ಯಾಚರಣೆಗಳನ್ನು ಮೇಲ್ವಿಚಾರಣೆ ಮಾಡಲು ಅಧಿಕಾರಿಗಳು ವಿಮಾನಯಾನ ಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಬೀಡುಬಿಟ್ಟಿದ್ದಾರೆ ಮತ್ತು ತನಿಖಾ ಸಮಿತಿಯು ಸಿಇಒ ಪೀಟರ್ ಎಲ್ಬರ್ಸ್ ಅವರನ್ನು ವಿಚಾರಣೆಗೆ ಒಳಪಡಿಸಿದೆ.

ಗುರುವಾರ ಡಿಜಿಸಿಎ ರಚಿಸಿದ್ದ ವಿಚಾರಣಾ ಸಮಿತಿಯ ಮುಂದೆ ಹಾಜರಾದ ಎಲ್ಬರ್ಸ್ ಅವರನ್ನು ಶುಕ್ರವಾರ ಮತ್ತೆ ಹಾಜರಾಗುವಂತೆ ಕೇಳಲಾಗಿದೆ.

ನಾಲ್ವರು ಸದಸ್ಯರ ಸಮಿತಿಯು ಜಂಟಿ ಮಹಾನಿರ್ದೇಶಕ ಸಂಜಯ್ ಬ್ರಹ್ಮಣೆ, ಉಪ ಮಹಾನಿರ್ದೇಶಕ ಅಮಿತ್ ಗುಪ್ತಾ, ಹಿರಿಯ ವಿಮಾನ ಕಾರ್ಯಾಚರಣೆ ಇನ್ಸ್‌ಪೆಕ್ಟರ್ ಕಪಿಲ್ ಮಾಂಗ್ಲಿಕ್ ಮತ್ತು ಎಫ್‌ಒಐ ಲೋಕೇಶ್ ರಾಂಪಾಲ್ ಅವರನ್ನು ಒಳಗೊಂಡಿದ್ದು, ಪ್ರಮುಖ ದೇಶೀಯ ವಾಹಕದಲ್ಲಿ ವ್ಯಾಪಕ ಕಾರ್ಯಾಚರಣೆಯ ಅಡಚಣೆಗಳ ಮೂಲ ಕಾರಣಗಳನ್ನು ಗುರುತಿಸುವ ಆದೇಶವನ್ನು ಹೊಂದಿದೆ.

ಈ ವರ್ಷದ ನವೆಂಬರ್ 1 ರಿಂದ ಜಾರಿಗೆ ಬಂದ ಪೈಲಟ್‌ಗಳಿಗೆ ಇತ್ತೀಚಿನ ಕರ್ತವ್ಯ ಅವಧಿ ಮತ್ತು ವಿಶ್ರಾಂತಿ ಮಾನದಂಡಗಳನ್ನು ಜಾರಿಗೆ ತರಲು ಮಾನವಶಕ್ತಿ ಯೋಜನೆ, ಏರಿಳಿತದ ರೋಸ್ಟರಿಂಗ್ ವ್ಯವಸ್ಥೆಗಳು ಮತ್ತು ವಿಮಾನಯಾನ ಸಂಸ್ಥೆಯ ಸಿದ್ಧತೆಯನ್ನು ನಿರ್ಣಯಿಸುವುದು ಸಮಿತಿಯ ಆದೇಶದಲ್ಲಿ ಸೇರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪುಸ್ತಕ ಮನೆʼಯ ಅಂಕೇಗೌಡ ಸೇರಿ ರಾಜ್ಯದ ಮೂವರಿಗೆ ಪದ್ಮಶ್ರೀ ಪ್ರಶಸ್ತಿ

ಕರ್ನಾಟಕದ ಮೂವರು ಸೇರಿದಂತೆ ದೇಶದ ಒಟ್ಟು 45 ಸಾಧಕರನ್ನು 2026ನೇ ಸಾಲಿನ ಪ್ರತಿಷ್ಠಿತ ಪದ್ಮ ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ ಎಂದು ವರದಿಯಾಗಿದೆ. ಮಂಡ್ಯ ಮೂಲದ ಪುಸ್ತಕ ಪ್ರೇಮಿ ಅಂಕೇಗೌಡ, ದಾವಣಗೆರೆಯ ಹಿಮೋಫಿಲಿಯಾ ಸೊಸೈಟಿಯ ವೈದ್ಯ...

ದೆಹಲಿ ಲೆಫ್ಟಿನೆಂಟ್ ಗವರ್ನರ್ ಮಾನನಷ್ಟ ಪ್ರಕರಣ : ಹೋರಾಟಗಾರ್ತಿ ಮೇಧಾ ಪಾಟ್ಕರ್ ಖುಲಾಸೆ

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು 20 ವರ್ಷಗಳ ಹಿಂದಿನ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಪರಿಸರ ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರನ್ನು ದೆಹಲಿ ನ್ಯಾಯಾಲಯ ಶನಿವಾರ (ಜ.24) ಖುಲಾಸೆಗೊಳಿಸಿದೆ ಎಂದು ಬಾರ್...

ಆರ್‌ಜೆಡಿ ರಾಷ್ಟ್ರೀಯ ಕಾರ್ಯಕಾರಿ ಸಭೆ; ಕಾರ್ಯಕಾರಿ ಅಧ್ಯಕ್ಷರಾಗಿ ತೇಜಸ್ವಿ ನೇಮಕ

ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಅವರ ಕಿರಿಯ ಪುತ್ರ ತೇಜಸ್ವಿ ಯಾದವ್ ಅವರನ್ನು, ಇಂದು (ಜ.25) ನಡೆದ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ಪಕ್ಷದ ಕಾರ್ಯಕಾರಿ ಅಧ್ಯಕ್ಷರನ್ನಾಗಿ ನೇಮಿಸಲಾಯಿತು. 'ಮಹಾಘಟಬಂಧನ್' 36...

ಹಿಂದುತ್ವ ಗುಂಪಿನಿಂದ ಕಿರುಕುಳ : ಪಿಜ್ಜಾ ಔಟ್‌ಲೆಟ್‌ನ ಎರಡನೇ ಮಹಡಿಯಿಂದ ಜಿಗಿದ ಜೋಡಿ

ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಹಿಂದುತ್ವ ಗುಂಪು ಕಿರುಕುಳ ನೀಡಿದ್ದರಿಂದ ಜೋಡಿಯೊಂದು ಪಿಜ್ಜಾ ಔಟ್‌ಲೆಟ್‌ನ ಎರಡನೇ ಮಹಡಿಯಿಂದ ಜಿಗಿದಿದ್ದು, ಈ ಸಂಬಂಧ ಎಂಟು ಮಂದಿಯ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ದಿ ನ್ಯೂ...

ಹಿಂದಿ ಚಿತ್ರಗಳು ತಮ್ಮ ಬೇರುಗಳನ್ನು ಕಳೆದುಕೊಂಡಿವೆ, ಹಣ ಆಧಾರಿತವಾಗಿವೆ: ಪ್ರಕಾಶ್ ರಾಜ್

ದೃಢ, ವಿಷಯಾಧಾರಿತ ಕಥೆ ನಿರೂಪಣೆಯಿಂದ ಪ್ರಶಂಸಿಸಲಾದ ಮಲಯಾಳಂ ಮತ್ತು ತಮಿಳು ಸಿನಿಮಾಗಳಿಗಿಂತ ಭಿನ್ನವಾಗಿ, ಹಿಂದಿ ಸಿನಿಮಾ ತನ್ನ ಬೇರುಗಳನ್ನು ಕಳೆದುಕೊಂಡಿದೆ. ಹೆಚ್ಚು ಹೆಚ್ಚು ನಕಲಿ ಮತ್ತು ಹಣ-ಆಧಾರಿತವಾಗುತ್ತಿದೆ ಎಂದು ನಟ ಪ್ರಕಾಶ್ ರಾಜ್...

ಚೋರ್ಲಾ ಘಾಟ್‌ನಲ್ಲಿ 400 ಕೋಟಿ ರೂ. ದರೋಡೆ: ಏನಿದು ಪ್ರಕರಣ..ಬೆಳಗಾವಿ ಎಸ್ಪಿ ಹೇಳಿದ್ದೇನು?

ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಗಡಿಯಲ್ಲಿರುವ ಪಶ್ಚಿಮ ಘಟ್ಟಗಳ ವ್ಯಾಪ್ತಿಯ ಚೋರ್ಲಾ ಘಾಟ್‌ನಲ್ಲಿ ಬರೋಬ್ಬರಿ 400 ಕೋಟಿ ರೂಪಾಯಿ ಹಣ ಸಾಗಿಸುತ್ತಿದ್ದ ಕಂಟೇನರ್‌ಗಳನ್ನು ದರೋಡೆ ಮಾಡಲಾಗಿದೆ ಎಂಬ ವಿಚಾರ ದೊಡ್ಡ ಮಟ್ಟದಲ್ಲಿ...

‘ಅಲೈಡ್ ಹೆಲ್ತ್ ಕೋರ್ಸ್‌ಗಳ ನೀಟ್ ಪರೀಕ್ಷೆಯಿಂದ ಬಡ ವಿದ್ಯಾರ್ಥಿಗಳಿಗೆ ಅನ್ಯಾಯ..’; ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ಅಲೈಡ್ ಹೆಲ್ತ್ ಕೋರ್ಸ್‌ಗಳ ಪ್ರವೇಶದಿಂದ ಹೊರಗಿಡಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು...

ಬಾಂಗ್ಲಾದೇಶ| ಗ್ಯಾರೇಜ್ ಒಳಗೆ ಮಲಗಿದ್ದ ಹಿಂದೂ ಯುವಕ ಜೀವಂತ ದಹನ

ಬಾಂಗ್ಲಾದೇಶದ ರಾಜಧಾನಿ ಢಾಕಾದಿಂದ ಸುಮಾರು 50 ಕಿ.ಮೀ ದೂರದಲ್ಲಿರುವ ನರಸಿಂಗ್ಡಿಯಲ್ಲಿ ಗ್ಯಾರೇಜ್ ಒಳಗೆ ಮಲಗಿದ್ದ 23 ವರ್ಷದ ಹಿಂದೂ ವ್ಯಕ್ತಿ ಜೀವಂತವಾಗಿ ದಹನಗೊಂಡ ಘಟನೆ ನಡೆದಿದ್ದು, ಈ ಘಟನೆಯು ರಾಷ್ಟ್ರೀಯ ಚುನಾವಣೆಗೂ ಮುನ್ನ...

ಚುನಾವಣಾ ಆಯೋಗ ನಿರಂತರ ಒತ್ತಡ ಎದುರಿಸುತ್ತಿದೆ, ಅದರ ಸ್ವಾತಂತ್ರ್ಯ ರಕ್ಷಿಸಬೇಕಿದೆ : ಮಲ್ಲಿಕಾರ್ಜುನ ಖರ್ಗೆ

ಇತ್ತೀಚಿನ ದಿನಗಳಲ್ಲಿ, ಚುನಾವಣಾ ಆಯೋಗದಂತಹ ಸಂಸ್ಥೆಗಳು ನಿರಂತರ ಒತ್ತಡವನ್ನು ಎದುರಿಸುತ್ತಿವೆ. ಆದ್ದರಿಂದ ಪ್ರಜಾಪ್ರಭುತ್ವವು ಕೇವಲ ಉಳಿಯುವುದಲ್ಲದೆ, ನಿಜವಾಗಿಯೂ ಅಭಿವೃದ್ಧಿ ಹೊಂದುವಂತೆ ಅವುಗಳ ಸ್ವಾತಂತ್ರ್ಯವನ್ನು ರಕ್ಷಿಸುವುದು 'ನಮ್ಮ ಜವಾಬ್ದಾರಿ' ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...

ಗುಜರಾತ್ ಸೇರಿದಂತೆ ಇತರ ರಾಜ್ಯಗಳಲ್ಲಿ ‘ಮತ ಕಳ್ಳತನ’ಕ್ಕೆ ಎಸ್‌ಐಆರ್‌ ಬಳಕೆ: ರಾಹುಲ್ ಗಾಂಧಿ

ದೇಶದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ ಕುರಿತ ತಮ್ಮ ವಾಗ್ದಾಳಿಯನ್ನು ಲೋಕಸಭೆ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ತೀವ್ರಗೊಳಿಸಿದ್ದಾರೆ. ಗುಜರಾತ್ ಸೇರಿದಂತೆ ಇತರ ರಾಜ್ಯಗಳಲ್ಲಿ...