Homeಮುಖಪುಟಇಂಡಿಗೋ ಬಿಕ್ಕಟ್ಟು: ನಾಲ್ವರು ವಿಮಾನ ಕಾರ್ಯಾಚರಣೆಯ ಇನ್ ಸ್ಪೆಕ್ಟರ್ ಗಳ ಅಮಾನತು 

ಇಂಡಿಗೋ ಬಿಕ್ಕಟ್ಟು: ನಾಲ್ವರು ವಿಮಾನ ಕಾರ್ಯಾಚರಣೆಯ ಇನ್ ಸ್ಪೆಕ್ಟರ್ ಗಳ ಅಮಾನತು 

- Advertisement -
- Advertisement -

ನವದೆಹಲಿ: ಇಂಡಿಗೋ ವಿಮಾನದ ಕಾರ್ಯಾಚರಣೆಯಲ್ಲಿ ಉಂಟಾದ ಪ್ರಮುಖ ಅಡಚಣೆಗಳಿಂದಾಗಿ ಸಾವಿರಾರು ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿ ಸಾವಿರಾರು ವಿಮಾನಗಳ ಹಾರಾಟ ರದ್ದತಿಗೆ ಕಾರಣವಾದ ಹಿನ್ನೆಲೆಯಲ್ಲಿ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ ನಾಲ್ವರು ವಿಮಾನ ಕಾರ್ಯಾಚರಣೆಯ ಇನ್ ಸ್ಪೆಕ್ಟರ್ ಗಳನ್ನು (ಎಫ್ಒಐ) ಅಮಾನತುಗೊಳಿಸಿದೆ. 

ವಿಮಾನ ಕಾರ್ಯಾಚರಣೆಯ ಇನ್ ಸ್ಪೆಕ್ಟರ್ಗಳು ನಾಗರಿಕ ವಿಮಾನಯಾನ ನಿರ್ದೇಶನಾಲಯದೊಳಗಿನ ಹಿರಿಯ ಅಧಿಕಾರಿಗಳಾಗಿದ್ದು, ನಿಯಂತ್ರಕ ಮತ್ತು ಸುರಕ್ಷತಾ ಮೇಲ್ವಿಚಾರಣೆಗೆ ಜವಾಬ್ದಾರರಾಗಿರುತ್ತಾರೆ. ವಿಮಾನಯಾನ ಕಾರ್ಯಾಚರಣೆಗಳನ್ನು ಮೇಲ್ವಿಚಾರಣೆ ಮಾಡಲು ಮತ್ತು ವಾಯುಯಾನ ಮಾನದಂಡಗಳ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ಅವರನ್ನು ನಿಯೋಜಿಸಲಾಗಿರುತ್ತದೆ.

ಪೈಲಟ್‌ಗಳು ಮತ್ತು ಕ್ಯಾಬಿನ್ ಸಿಬ್ಬಂದಿ ಸೇರಿದಂತೆ ವಿಮಾನಯಾನ ಸಂಸ್ಥೆಗಳು ಮತ್ತು ವಾಯುಯಾನ ಸಿಬ್ಬಂದಿಗೆ ತಪಾಸಣೆ, ಲೆಕ್ಕಪರಿಶೋಧನೆ ಮತ್ತು ಪ್ರಮಾಣೀಕರಣ ಪ್ರಕ್ರಿಯೆಗಳನ್ನು ನಡೆಸುವ ಮೂಲಕ ವಾಯುಯಾನ ಸುರಕ್ಷತೆಯನ್ನು ಕಾಪಾಡುವಲ್ಲಿ  ವಿಮಾನ ಕಾರ್ಯಾಚರಣೆಯ ಇನ್ ಸ್ಪೆಕ್ಟರ್ಗಳು ನಿರ್ಣಾಯಕ ಪಾತ್ರ ವಹಿಸುತ್ತಾರೆ. ನಿಯಂತ್ರಕ ಅನುಸರಣೆಯನ್ನು ಪರಿಶೀಲಿಸುವುದು, ತರಬೇತಿ ಮತ್ತು ಹಾರಾಟದ ಮಾನದಂಡಗಳನ್ನು ಮೇಲ್ವಿಚಾರಣೆ ಮಾಡುವುದು ಮತ್ತು ಭಾರತದಾದ್ಯಂತ ಅಪಘಾತ ತಡೆಗಟ್ಟುವ ಪ್ರಯತ್ನಗಳಿಗೆ ಕೊಡುಗೆ ನೀಡುವುದು ಅವರ ಕರ್ತವ್ಯಗಳಲ್ಲಿ ಸೇರಿವೆ.

“ಇಂಡಿಗೋ ಡಿಸೆಂಬರ್ 12, ಶುಕ್ರವಾರ ಬೆಂಗಳೂರು ವಿಮಾನ ನಿಲ್ದಾಣದಿಂದ 54 ವಿಮಾನಗಳನ್ನು ರದ್ದುಗೊಳಿಸಿದೆ -ಇವುಗಳಲ್ಲಿ 31 ಆಗಮನ ಮತ್ತು 23 ನಿರ್ಗಮನಗಳು” ಎಂದು ಮೂಲಗಳು ತಿಳಿಸಿವೆ.

ಈ ಮಧ್ಯೆ, ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್ ಮತ್ತು ಸಿಒಒ ಇಸಿಡ್ರೆ ಪೋರ್ಕ್ವೆರಾಸ್ ಅವರು ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಡಿಜಿಸಿಎಯ ತನಿಖಾ ಸಮಿತಿಯ ಮುಂದೆ ಮತ್ತೆ ಹಾಜರಾಗಲಿದ್ದಾರೆ.

ಗುರುವಾರ, ಡಿಜಿಸಿಎ, ಬಿಕ್ಕಟ್ಟಿನಿಂದ ಬಳಲುತ್ತಿರುವ ಇಂಡಿಗೊ ವಿಮಾನಯಾನ ಸಂಸ್ಥೆಯ ಪರಿಶೀಲನೆಯನ್ನು ಚುರುಕುಗೊಳಿಸಿದ್ದು, ಕಾರ್ಯಾಚರಣೆಗಳನ್ನು ಮೇಲ್ವಿಚಾರಣೆ ಮಾಡಲು ಅಧಿಕಾರಿಗಳು ವಿಮಾನಯಾನ ಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಬೀಡುಬಿಟ್ಟಿದ್ದಾರೆ ಮತ್ತು ತನಿಖಾ ಸಮಿತಿಯು ಸಿಇಒ ಪೀಟರ್ ಎಲ್ಬರ್ಸ್ ಅವರನ್ನು ವಿಚಾರಣೆಗೆ ಒಳಪಡಿಸಿದೆ.

ಗುರುವಾರ ಡಿಜಿಸಿಎ ರಚಿಸಿದ್ದ ವಿಚಾರಣಾ ಸಮಿತಿಯ ಮುಂದೆ ಹಾಜರಾದ ಎಲ್ಬರ್ಸ್ ಅವರನ್ನು ಶುಕ್ರವಾರ ಮತ್ತೆ ಹಾಜರಾಗುವಂತೆ ಕೇಳಲಾಗಿದೆ.

ನಾಲ್ವರು ಸದಸ್ಯರ ಸಮಿತಿಯು ಜಂಟಿ ಮಹಾನಿರ್ದೇಶಕ ಸಂಜಯ್ ಬ್ರಹ್ಮಣೆ, ಉಪ ಮಹಾನಿರ್ದೇಶಕ ಅಮಿತ್ ಗುಪ್ತಾ, ಹಿರಿಯ ವಿಮಾನ ಕಾರ್ಯಾಚರಣೆ ಇನ್ಸ್‌ಪೆಕ್ಟರ್ ಕಪಿಲ್ ಮಾಂಗ್ಲಿಕ್ ಮತ್ತು ಎಫ್‌ಒಐ ಲೋಕೇಶ್ ರಾಂಪಾಲ್ ಅವರನ್ನು ಒಳಗೊಂಡಿದ್ದು, ಪ್ರಮುಖ ದೇಶೀಯ ವಾಹಕದಲ್ಲಿ ವ್ಯಾಪಕ ಕಾರ್ಯಾಚರಣೆಯ ಅಡಚಣೆಗಳ ಮೂಲ ಕಾರಣಗಳನ್ನು ಗುರುತಿಸುವ ಆದೇಶವನ್ನು ಹೊಂದಿದೆ.

ಈ ವರ್ಷದ ನವೆಂಬರ್ 1 ರಿಂದ ಜಾರಿಗೆ ಬಂದ ಪೈಲಟ್‌ಗಳಿಗೆ ಇತ್ತೀಚಿನ ಕರ್ತವ್ಯ ಅವಧಿ ಮತ್ತು ವಿಶ್ರಾಂತಿ ಮಾನದಂಡಗಳನ್ನು ಜಾರಿಗೆ ತರಲು ಮಾನವಶಕ್ತಿ ಯೋಜನೆ, ಏರಿಳಿತದ ರೋಸ್ಟರಿಂಗ್ ವ್ಯವಸ್ಥೆಗಳು ಮತ್ತು ವಿಮಾನಯಾನ ಸಂಸ್ಥೆಯ ಸಿದ್ಧತೆಯನ್ನು ನಿರ್ಣಯಿಸುವುದು ಸಮಿತಿಯ ಆದೇಶದಲ್ಲಿ ಸೇರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...