Homeಮುಖಪುಟಇಂಡಿಗೋ ವಿಮಾನ ಸೇವೆಯಲ್ಲಿ ವ್ಯತ್ಯಯ : ಪೈಲಟ್‌ಗಳಿಗೆ ವಾರದ ವಿಶ್ರಾಂತಿ ನಿಯಮ ಹಿಂಪಡೆದ ಡಿಜಿಸಿಎ

ಇಂಡಿಗೋ ವಿಮಾನ ಸೇವೆಯಲ್ಲಿ ವ್ಯತ್ಯಯ : ಪೈಲಟ್‌ಗಳಿಗೆ ವಾರದ ವಿಶ್ರಾಂತಿ ನಿಯಮ ಹಿಂಪಡೆದ ಡಿಜಿಸಿಎ

ಇಂಡಿಗೋ ಏಕಸ್ವಾಮ್ಯದ ಮುಂದೆ ತಲೆ ಬಾಗಿದ ಸರ್ಕಾರ?

- Advertisement -
- Advertisement -

ಡಿಸೆಂಬರ್ 4 ಗುರುವಾರ ದೇಶದಾದ್ಯಂತ 1,000ಕ್ಕೂ ಹೆಚ್ಚು ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದ್ದು ಮತ್ತು ದೆಹಲಿಯಿಂದ ಎಲ್ಲಾ 235 ದೇಶೀಯ ನಿರ್ಗಮನಗಳು 24 ಗಂಟೆಗಳ ಕಾಲ ಸ್ಥಗಿತಗೊಂಡಿತ್ತು. ಪರಿಣಾಮ ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರು ತೀವ್ರ ಪರದಾಡಿದ್ದರು.

ಈ ಬೆನ್ನಲ್ಲೇ, ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಶುಕ್ರವಾರ (ಡಿಸೆಂಬರ್ 5) ವಿಮಾನಯಾನ ನಿಯಂತ್ರಕ ಡಿಜಿಸಿಎಯ ಪರಿಷ್ಕೃತ ವಿಮಾನ ಕರ್ತವ್ಯ ಸಮಯ ಮಿತಿಗಳು (ಎಫ್‌ಡಿಟಿಎಲ್) ಮಾನದಂಡಗಳನ್ನು ತಕ್ಷಣ ಸ್ಥಗಿತಗೊಳಿಸುವುದಾಗಿ ಘೋಷಿಸಿದ್ದಾರೆ.

ಇಂಡಿಗೋ ಸೇವೆಗಳನ್ನು ಮೂರು ದಿನಗಳಲ್ಲಿ ಸಂಪೂರ್ಣವಾಗಿ ಪುನಃಸ್ಥಾಪಿಸಲಾಗುವುದು ಮತ್ತು ಶನಿವಾರದ ವೇಳೆಗೆ ವೇಳಾಪಟ್ಟಿ ಸ್ಥಿರವಾಗಲಿದೆ ಎಂದು ನಾಯ್ಡು ಭರವಸೆ ನೀಡಿದ್ದಾರೆ.

ಆದಾಗ್ಯೂ, ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್ ಅವರು ಎಲ್ಲಾ ವಿಮಾನ ಸೇವೆಗಳು ಸಾಮಾನ್ಯ ಸ್ಥಿತಿಗೆ ಮರಳಲು ಡಿಸೆಂಬರ್ 10-15ರವರೆಗೆ ಸಮಯ ಬೇಕು ಎಂದು ವಿಡಿಯೋ ಸಂದೇಶದಲ್ಲಿ ಹೇಳುವ ಮೂಲಕ ಸಮಯಸೂಚಿಯನ್ನು ವಿರೋಧಿಸಿದ್ದಾರೆ. ಹಾರಾಟದ ವೇಳಾಪಟ್ಟಿಗಳು ಸಂಪೂರ್ಣ ಚೇತರಿಕೆ ಕಾಣಲು ಫೆಬ್ರವರಿ 1, 2026ರವರೆಗೆ ಸಮಯ ಬೇಕಾಗಬಹುದು ಎಂದು ಈ ಹಿಂದೆ ಡಿಜಿಸಿಎಗೆ ತಿಳಿಸಿತ್ತು.

ಸಚಿವಾಲಯ, ಡಿಜಿಸಿಎ, ಎಎಐ ಮತ್ತು ಇಂಡಿಗೋ ಅಧಿಕಾರಿಗಳೊಂದಿಗೆ ತುರ್ತು ಪರಿಶೀಲನಾ ಸಭೆಯ ನಂತರ, ನಾಯ್ಡು ಅವರು ವಿಮಾನ ವ್ಯತ್ಯಯದ ಬಗ್ಗೆ ಉನ್ನತ ಮಟ್ಟದ ತನಿಖೆಯನ್ನು ಘೋಷಿಸಿದ್ದಾರೆ. ಡಿಜಿಸಿಎ ಜಂಟಿ ಮಹಾನಿರ್ದೇಶಕ ಸಂಜಯ್ ಕೆ ಬ್ರಹ್ಮಣೆ, ಉಪ ಮಹಾನಿರ್ದೇಶಕ ಅಮಿತ್ ಗುಪ್ತಾ, ಹಿರಿಯ ವಿಮಾನ ಕಾರ್ಯಾಚರಣಾ ನಿರೀಕ್ಷಕ (ಎಸ್‌ಎಫ್‌ಒಐ) ಕಪಿಲ್ ಮಾಂಗ್ಲಿಕ್ ಮತ್ತು ಎಫ್‌ಒಐ ಲೋಕೇಶ್ ರಾಂಪಾಲ್ ಅವರನ್ನು ಒಳಗೊಂಡ ನಾಲ್ವರು ಸದಸ್ಯರ ಡಿಜಿಸಿಎ ಸಮಿತಿಯು ಎರಡು ವಾರಗಳಲ್ಲಿ ತನ್ನ ವರದಿಯನ್ನು ಸಲ್ಲಿಸುವಂತೆ ಕೇಳಲಾಗಿದೆ.

ಹೊಸ ರೋಸ್ಟರಿಂಗ್ (ಸಿಬ್ಬಂದಿ ಕರ್ತವ್ಯ ಸಮಯ ನಿಯಮಗಳು) ನಿಯಮಗಳಿಗೆ ಸಿದ್ಧವಾಗಿರುವಂತೆ ಸಾಕಷ್ಟು ಬಾರಿ ಎಚ್ಚರಿಕೆ ನೀಡಿದರೂ ಸಹ, ಇಂಡಿಗೋ ಆ ಎಚ್ಚರಿಕೆಗಳನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ತೋರಿದೆ ಎಂದು ನಿಯಂತ್ರಕರು ಆರೋಪ ಮಾಡಿದ್ದಾರೆ.

ಶುಕ್ರವಾರವೂ ವಿಮಾನ ಸೇವೆಗಳಲ್ಲಿ ವ್ಯತ್ಯಯ ಮುಂದುವರೆದಿತ್ತು. ದೆಹಲಿಯ ಐಜಿಐಎ ಟರ್ಮಿನಲ್‌ಗಳಲ್ಲಿ ಆಕ್ರೋಶಗೊಂಡ ಪ್ರಯಾಣಿಕರು ಇಂಡಿಗೋ ವಿರುದ್ದ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನಲ್ಲಿ 100ಕ್ಕೂ ಹೆಚ್ಚು, ಹೈದರಾಬಾದ್‌ನಲ್ಲಿ 90ಕ್ಕೂ ವಿಮಾನಗಳ ಹಾರಾಟ ರದ್ದಾಗಿತ್ತು. ಚೆನ್ನೈನಲ್ಲಿ ಇಂಡಿಗೋದ ದೇಶೀಯ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಲಾಗಿತ್ತು.

ಖಾಸಗಿ ಸಂಸ್ಥೆ ಇಂಡಿಗೋ ಕಡೆಯಿಂದ ಉಂಟಾದ ಸಮಸ್ಯೆಗೆ ಸಂಸ್ಥೆಯ ವಿರುದ್ದ ಕ್ರಮ ಕೈಗೊಳ್ಳುವ ಬದಲು, ಕೇಂದ್ರ ಸರ್ಕಾರ ಜನರ ಸುರಕ್ಷತಾ ನಿಯಮಗಳಲ್ಲಿ ರಾಜಿ ಮಾಡಿಕೊಂಡಿದೆ ಎಂದು ಜನರು ಸಾಮಾಜಿಕ ಜಾಲತಾಣಗಳಲ್ಲಿ ಆರೋಪಿಸಿದ್ದಾರೆ. ಇಂಡಿಗೋದ ಏಕಸ್ವಾಮ್ಯಕ್ಕೆ ಸರ್ಕಾರ ತಲೆಬಾಗಿದೆ ಎಂದಿದ್ದಾರೆ.

ಈ ಆರೋಪಕ್ಕೆ, ಹೊಸ ರೋಸ್ಟರಿಂಗ್ (ಸಿಬ್ಬಂದಿ ಕರ್ತವ್ಯ ಸಮಯ ನಿಯಮಗಳು) ನಿಯಮಗಳಿಗೆ ಸಿದ್ಧವಾಗಿರುವಂತೆ ಸಾಕಷ್ಟು ಬಾರಿ ಎಚ್ಚರಿಕೆ ನೀಡಿದರೂ ಸಹ, ಇಂಡಿಗೋ ಆ ಎಚ್ಚರಿಕೆಗಳನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ತೋರಿದೆ ಎಂದು ವಿಮಾನಯಾನ ನಿಯಂತ್ರಕರು ಹೇಳಿರುವುದು ಪುಷ್ಠಿ ನೀಡುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...