Homeಕರ್ನಾಟಕಇಂದಿರಾ ಕ್ಯಾಂಟೀನ್‌: ಜನಪರ ಯೋಜನೆಗಳನ್ನು ಜಾರಿ ಮಾಡುವುದು ಮುಖ್ಯವೇ, ಹೆಸರು ಬದಲಾವಣೆ ಮುಖ್ಯವೇ?

ಇಂದಿರಾ ಕ್ಯಾಂಟೀನ್‌: ಜನಪರ ಯೋಜನೆಗಳನ್ನು ಜಾರಿ ಮಾಡುವುದು ಮುಖ್ಯವೇ, ಹೆಸರು ಬದಲಾವಣೆ ಮುಖ್ಯವೇ?

ಇಂದಿರಾ ಕ್ಯಾಂಟೀನ್ ಅವಲಂಬಿಸಿರುವ ಜನರ ಅಭಿಪ್ರಾಯಗಳು ಇಲ್ಲಿವೆ..

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದಿನ ಸರ್ಕಾರ ಜಾರಿ ಮಾಡಿದ್ದ ಯೋಜನೆಗಳು, ನಿರ್ಮಿಸಿದ ಮೈದಾನಗಳು, ಪ್ರಶಸ್ತಿಗಳು, ಸೇತುವೆಗಳು, ನಗರಗಳ ಹೆಸರು ಮರು ನಾಮಕರಣ ಮಾಡುವುದು ನಡೆಯುತ್ತಲೇ ಇದೆ.

ವಿಪಕ್ಷಗಳು, ದೇಶದ ನಾಗರಿಕರು ಈ ಬಗ್ಗೆ ಆಕ್ಷೇಪವೆತ್ತಿದರೂ ಕೂಡ, ಹೆಸರುಗಳ ಮರುನಾಮಕರಣವನ್ನು ಬಿಜೆಪಿ ಸರ್ಕಾರಗಳು ನಿಲ್ಲಿಸುತ್ತಿಲ್ಲ. ಇತ್ತಿಚೆಗಷ್ಟೇ ಮೋಟೆರಾ ಸ್ಟೇಡಿಯಂ ಹೆಸರನ್ನು ನರೇಂದ್ರ ಮೋದಿ ಸ್ಟೇಡಿಯಂ ಎಂದು,  ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯ ಹೆಸರನ್ನು ಮೇಜರ್‌ ಧ್ಯಾನ್ ಚಂದ್ ಖೇಲ್ ರತ್ನ ಎಂದು ಬದಲಾಯಿಸಲಾಗಿದೆ.

ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತಂದ ಯೋಜನೆಗಳಲ್ಲಿ ಇಂದಿರಾ ಕ್ಯಾಂಟೀನ್‌ ಕೂಡ ಒಂದು. 5, 10 ರೂಪಾಯಿಗೆ ಊಟ ದೊರೆಯುವ ಸ್ಥಳವಾಗಿ ಇಂದಿಗೂ ಜನಪ್ರಿಯ ಯೋಜನೆಯಾಗಿ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿದೆ. ಆದರೆ, ಬಿಜೆಪಿ ಆಡಳಿತದ ಸರ್ಕಾರ ಆಡಳಿತದ ಚುಕ್ಕಾಣಿ ಹಿಡಿದಾಗಿನಿಂದ ಇಂದಿರಾ ಕ್ಯಾಂಟೀನ್ ವಿವಾದದ ಹೆಸರಾಗಿದೆ.

ಇದನ್ನೂ ಓದಿ: ‘ಬಾರ್‌‌’ ಸಿಟಿ ರವಿಯ ಸಂಸ್ಕೃತಿ: ಸಿದ್ದರಾಮಯ್ಯ

ಈ ಹಿಂದೆ ಕ್ಯಾಂಟೀನ್ ಮುಚ್ಚುವ ನಿರ್ಧಾರಕ್ಕೆ ಬಂದಿದ್ದ ಬಿಜೆಪಿ ಸರ್ಕಾರ, ವಿಪಕ್ಷಗಳು ಮತ್ತು ಜನರ ವಿರೋಧಕ್ಕೆ ತಲೆಬಾಗಬೇಕಾಯಿತು. ಈಗ ಇದನ್ನೆ ಮುಂದುವರೆಸಿರುವ ಬಿಜೆಪಿ ಸರ್ಕಾರ ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮಾಡುವ ಸೂಚನೆ ನೀಡಿದ್ದು, ರಾಜಕೀಯ ಪಕ್ಷಗಳ ಕೆಸರೆರಚಾಟಕ್ಕೆ ಕಾರಣವಾಗಿದೆ.

ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ಇಂದಿರಾ ಕ್ಯಾಂಟೀನ್ ಹೆಸರನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಬದಲಿಸಿ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಮನವಿ ಮಾಡಿದ್ದರು.

“ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರೆ, ಕರ್ನಾಟಕದಾದ್ಯಂತ ಇಂದಿರಾ ಕ್ಯಾಂಟೀನ್‌ಗಳನ್ನು ಆದಷ್ಟು ಬೇಗ “ಅನ್ನಪೂರ್ಣೇಶ್ವರಿ ಕ್ಯಾಂಟೀನ್” ಎಂದು ಮರುನಾಮಕರಣ ಮಾಡಿ. ಕನ್ನಡಿಗರು ಆಹಾರ ಸೇವಿಸುತ್ತಿರುವಾಗ ತುರ್ತು ಪರಿಸ್ಥಿತಿಯ ಕರಾಳ ದಿನಗಳನ್ನು ನೆನಪಿಸಿಕೊಳ್ಳುವುದು ಯಾಕೆ?” ಎಂದು ಪ್ರಶ್ನಿಸಿದ್ದರು.

ಇದಕ್ಕೆ ಕಾಂಗ್ರೆಸ್ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಹೆಸರು ಮರುನಾಮಕರಣ ವಿಚಾರಕ್ಕೆ ಸಂಬಂಧಿಸಿದಂತೆ ನಾನುಗೌರಿ.ಕಾಂಗೆ ಪ್ರತಿಕ್ರಿಯೆ ನೀಡಿರುವ ಜನರ ಅಭಿಪ್ರಾಯಗಳಿ ಇಂತಿವೆ.

ಇದನ್ನೂ ಓದಿ: ಹೆಸರು ಬದಲಾವಣೆ ಮುಂದುವರೆಸಿದ ಬಿಜೆಪಿ: ಉತ್ತರ ಪ್ರದೇಶದ ಅಲಿಗಢ ಮರುನಾಮಕರಣಕ್ಕೆ ಪ್ರಸ್ತಾಪ

“ಬಡವರ ಹೊಟ್ಟೆ ತುಂಬಿಸುತ್ತಿರುವ ಇಂದಿರಾ ಕ್ಯಾಂಟೀನ್ ಹೆಸರು ಬದಲಿಸುವ ಅವಶ್ಯಕತೆ ಏನಿದೆ. ಮಾಡುವುದಾದರೇ ಅವರು ಬದಲಾಯಿಸಬೇಕು ಎನ್ನುವ ಹೆಸರಿನಲ್ಲಿ ಮತ್ತೆ 100 ಕ್ಯಾಂಟೀನ್ ಆರಂಭಿಸಲಿ. ಇದರಿಂದ ಜನರಿಗೆ ಉಪಕಾರ ಆಗುತ್ತದೆ. ಅದು ಬಿಟ್ಟು ಹೆಸರುಗಳನ್ನು ಬದಲಿಸೋದು ಯಾವ ಕಾರಣಕ್ಕೆ..? ಎಂದು ಪ್ರಶ್ನಿಸುತ್ತಾರೆ ಆಟೋ ಚಾಲಕ ಆನಂದ್.

ರಾಜಸ್ಥಾನದಿಂದ ಬಂದು ಬೆಂಗಳೂರಿನಲ್ಲಿ ಕಳೆದ  15 ವರ್ಷಗಳಿಂದ ವಾಸವಿರುವ ಬದ್ರಿಲಾಲ್ ಮೆಹ್ರಾ, “ಕಳೆದ ಮೂರು ವರ್ಷಗಳಿಂದ ಇಂದಿರಾ ಕ್ಯಾಂಟೀನ್‌ ಊಟ ಮಾಡುತ್ತಿದ್ದೇನೆ. ಈಗ ಹೆಸರು ಬದಲಾವಣೆ ವಿಚಾರ ಯಾಕೆ ಬಂದಿತೋ ಗೊತ್ತಿಲ್ಲ. ಒಳ್ಳೆ ಕೆಲಸ ಮಾಡಿದವರ ಹೆಸರು ಇಟ್ಟಿದ್ದಾರೆ. ಅದೇ ಇದ್ದರೇ ಒಳ್ಳೆಯದು. ಹೆಸರು ಬದಲಾವಣೆ ಮಾಡುವಂತಹದ್ದು ಏನಿದೆ. ಇದರಲ್ಲಿ ತೊಂದರೆ ಏನಿದೆ ನಮಗೂ ಇಂದಿರಾ ಕ್ಯಾಂಟೀನ್ ಎಂದೇ ಪರಿಚಿತ. ಹೆಸರು ಬದಲಾವಣೆ ಅವಶ್ಯತೆ ಇಲ್ಲ” ಎಂದು ಹೇಳಿದ್ದಾರೆ.

“ಇಂದಿರಾ ಕ್ಯಾಂಟೀನ್‌ಗಳಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗೆ ಮೂರು ತಿಂಗಳಿನಿಂದ ಸರಿಯಾಗಿ ವೇತನ ನೀಡಿಲ್ಲ. ಕೊರೊನಾ ಸಮಯದಲ್ಲಿ ಉಚಿತ ಆಹಾರ ವಿತರಣೆ ಮಾಡಿದ್ದೇವೆ. ಸರ್ಕಾರ ಅದರ ಹಣವನ್ನು ಇನ್ನು ನೀಡಿಲ್ಲ. ಕೆಲವೊಂದು ಕ್ಯಾಂಟೀನ್‌ಗಳ ಶೌಚಾಲಯಗಳು ಕಾರ್ಯನಿರ್ವಹಿಸುತ್ತಿಲ್ಲ. ಸ್ಮಾರ್ಟ್ ಸಿಟಿ ಎಂದು ಹೇಳಿ ಚೆನ್ನಾಗಿರುವ ಕ್ಯಾಂಟೀನ್‌ಗಳ ಬಳಿ ಗುಂಡಿಗಳನ್ನು ತೋಡಿ ಅವ್ಯವಸ್ಥೆ ಮಾಡಲಾಗಿದೆ. ಇಷ್ಟೆಲ್ಲಾ ಸಮಸ್ಯೆ ಇರುವಾಗ ಈ ಸರ್ಕಾರ ಹೆಸರು ಬದಲಾವಣೆ ಅನ್ನೋದನ್ನು ಮುಂದೆ ಮಾಡುತ್ತಿದೆ. ಮೊದಲು ಇರುವ ಸಮಸ್ಯೆ ಸರಿಪಡಿಸಲಿ. ಆಮೇಲೆ ಏನಾದರೂ ಮಾಡಿಕೊಳ್ಳಲಿ. ಕಳೆದ ಎರಡು ವರ್ಷಗಳಿಂದ ಕ್ಯಾಂಟೀನ್ ನಡೆಸುವುದು ತುಂಬಾ ಕಷ್ಟವಾಗಿದೆ. ಕ್ಯಾಂಟೀನ್ ಅನುದಾನವೆಲ್ಲ ಮಠಗಳಿಗೆ ಹೋಗುತ್ತಿದೆ. ಜನರಿಗೆ ಉಪಯೋಗವಿರುವ ಇಂತಹ ಯೋಜನೆ ಹಳ್ಳ ಹಿಡಿಯುವಂತಿದೆ ” ಎಂದು  ಹೆಸರೆಳಲು ಇಚ್ಚಿಸದ ಇಂದಿರಾ ಕ್ಯಾಂಟೀನ್ ವ್ಯವಸ್ಥಾಪಕರೊಬ್ಬರು ನಾನುಗೌರಿ.ಕಾಂ ಬಳಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಒಟ್ಟಾರೆ, ಇಂದಿರಾ ಕ್ಯಾಂಟೀನ್ ಹೆಸರಲ್ಲಿ ರಾಜಕೀಯ ಮಾಡುವುದನ್ನು ಪಕ್ಷಗಳು ಬಿಟ್ಟು ಜನಪರ ಯೋಜನೆಗಳನ್ನು ಉಳಿಸಿಕೊಳ್ಳಲಿ. ಇನ್ನು ಹೆಸರು ಮರುನಾಮಕರಣ ಮಾಡುವುದಕ್ಕೆ ನೀಡುವ ಪ್ರಾಶಸ್ತ್ಯವನ್ನು ಮತ್ತಷ್ಟು ಜನಪರ ಯೋಜನೆಗಳು ಮತ್ತು ಕ್ಯಾಂಟೀನ್‌ಗಳ ನಿರ್ಮಾಣಕ್ಕೂ ಕೊಡಲಿ ಎಂಬುದೇ ನಮ್ಮ ಆಶಯ.


ಇದನ್ನೂ ಓದಿ: ರಾಜೀವ್ ಗಾಂಧಿ ಖೇಲ್ ರತ್ನ ಇನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ: ಪ್ರಧಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಂದಿರ ಕ್ಯಾಟಿನ್ ಅನೋ ಹೆಸರು ಬೇಡ ಅನ್ನ ಪೂರ್ಣಿಶ್ವರಿ ಇವರಿಗೆ ಅನ್ನದ ಬೆಲೆ ಏನೂ ಅಂತ ಗೊತ್ತಿಲ್ಲ
    ಡಾ. ಭೀಮರಾವ್ ಅಂಬೇಡ್ಕರ್ ರವರಿಗೆ ಅನ್ನದ ಬೆಲೆ ಏನು ಅಂತ ಗೊತ್ತಿದ್ದವರ ಹೆಸರು ಇಡುವುದು ಉತ್ತಮ ಹೆಸರು ಇಡುವುದಾದರೆ ಜೈ ಭೀಮ್ ಕ್ಯಾಂಟೀನ್ ಅಂತ ಹೆಸರು ಇಡುವುದು ಉತ್ತಮವಾಗಿರುತ್ತದೆ ……..ಜೈ ಭೀಮ್

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು ಯಾವುದೇ...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...

ಶಬರಿಮಲೆ ತುಪ್ಪ ಮಾರಾಟ ಹಗರಣ: ತನಿಖೆ ಪೂರ್ಣಗೊಳಿಸಲು ವಿಎಸಿಬಿಗೆ 30 ದಿನ ಕಾಲಾವಕಾಶ ನೀಡಿದ ಕೇರಳ ಹೈಕೋರ್ಟ್ 

ಕೊಚ್ಚಿ: ಶಬರಿಮಲೆಯ ಅಯ್ಯಪ್ಪ ದೇಗುಲದಲ್ಲಿ ಭಕ್ತರಿಗೆ ಮಾರಾಟವಾಗುವ ಪವಿತ್ರ ನೈವೇದ್ಯ 'ಆದಿಯ ಸಿಷ್ಟಂ ತುಪ್ಪ' ಮಾರಾಟಕ್ಕೆ ಸಂಬಂಧಿಸಿದಂತೆ ಟಿಡಿಬಿ ನೌಕರರು ಹಣ ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪದ ತನಿಖೆಯನ್ನು ಪೂರ್ಣಗೊಳಿಸಲು ಕೇರಳ ಹೈಕೋರ್ಟ್ ಜಾಗೃತ...

ಧಾರ್ಮಿಕ ಆಚರಣೆ ಹೆಸರಿನಲ್ಲಿ ನರ್ಮದಾ ನದಿಗೆ 11,000 ಲೀಟರ್ ಹಾಲು ಸುರಿದ ಭಕ್ತರು

ಮಧ್ಯಪ್ರದೇಶದ ಅನುಪ್ಪುರ್ ಜಿಲ್ಲೆಯ ನರ್ಮದಾ ನದಿ ದಂಡೆಯಲ್ಲಿ ಬುಧವಾರ ನಡೆದ ಧಾರ್ಮಿಕ ಆಚರಣೆಯ ಸಂದರ್ಭದಲ್ಲಿ 11,000 ಲೀಟರ್ ಹಾಲು ನರ್ಮದಾ ನದಿಗೆ ಸುರಿಯಲಾಗಿದ್ದು, ಇದು ನಂಬಿಕೆ ಮತ್ತು ಪರಿಸರ ಹಾನಿಯ ಕುರಿತು ಚರ್ಚೆಗೆ...

ಪಶ್ಚಿಮ ಬಂಗಾಳ: ಹುಮಾಯೂನ್ ಕಬೀರ್ ಪಕ್ಷದೊಂದಿಗಿನ ಮೈತ್ರಿ ಹಿಂತೆಗೆದುಕೊಂಡ ಎಐಎಂಐಎಂ; ಸ್ವತಂತ್ರ ಸ್ಪರ್ಧೆ ಘೋಷಣೆ

ಮುಂಬರುವ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಹುಮಾಯೂನ್ ಕಬೀರ್ ನೇತೃತ್ವದ ಪಕ್ಷದೊಂದಿಗಿನ ಮೈತ್ರಿಯಿಂದ ಹಿಂದೆ ಸರಿಯುತ್ತಿರುವುದಾಗಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಘೋಷಿಸಿದೆ. ಕಬೀರ್ ಅವರ ಹೇಳಿಕೆಗಳು ಮತ್ತು ಬಹಿರಂಗಪಡಿಸುವಿಕೆಗಳು "ಮುಸ್ಲಿಮರ ಸಮಗ್ರತೆ"ಯ ಬಗ್ಗೆ...

ಏಕನಾಥ್ ಶಿಂಧೆ ಕುರಿತ ಹೇಳಿಕೆ ವಿವಾದ; ‘ಕ್ಷಮೆಯಾಚಿಸುವುದಿಲ್ಲ’ ಎಂದ ಕುನಾಲ್ ಕಮ್ರಾ

ಕೋಮುವಾದಿ ರಾಜಕಾರಣವನ್ನು ವಿರೋಧಿಸುತ್ತಾ ಬಲಪಂಥೀಯ ರಾಜಕೀಯವನ್ನು ವಿಡಂಬನೆ ಮಾಡುವ ಭಾರತದ ಖ್ಯಾತ 'ಸ್ಟಾಂಡಪ್‌ ಕಾಮಿಡಿಯನ್' ಕುನಾಲ್ ಕಮ್ರಾ ಗುರುವಾರ ಮಹಾರಾಷ್ಟ್ರ ಶಾಸಕಾಂಗ ಸಮಿತಿಯ ಮುಂದೆ ಹಾಜರಾದರು. "ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆಯನ್ನು ಗುರಿಯಾಗಿಸಿಕೊಂಡು...