Homeಕರ್ನಾಟಕಇಂದಿರಾ ಕ್ಯಾಂಟೀನ್‌: ಜನಪರ ಯೋಜನೆಗಳನ್ನು ಜಾರಿ ಮಾಡುವುದು ಮುಖ್ಯವೇ, ಹೆಸರು ಬದಲಾವಣೆ ಮುಖ್ಯವೇ?

ಇಂದಿರಾ ಕ್ಯಾಂಟೀನ್‌: ಜನಪರ ಯೋಜನೆಗಳನ್ನು ಜಾರಿ ಮಾಡುವುದು ಮುಖ್ಯವೇ, ಹೆಸರು ಬದಲಾವಣೆ ಮುಖ್ಯವೇ?

ಇಂದಿರಾ ಕ್ಯಾಂಟೀನ್ ಅವಲಂಬಿಸಿರುವ ಜನರ ಅಭಿಪ್ರಾಯಗಳು ಇಲ್ಲಿವೆ..

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದಿನ ಸರ್ಕಾರ ಜಾರಿ ಮಾಡಿದ್ದ ಯೋಜನೆಗಳು, ನಿರ್ಮಿಸಿದ ಮೈದಾನಗಳು, ಪ್ರಶಸ್ತಿಗಳು, ಸೇತುವೆಗಳು, ನಗರಗಳ ಹೆಸರು ಮರು ನಾಮಕರಣ ಮಾಡುವುದು ನಡೆಯುತ್ತಲೇ ಇದೆ.

ವಿಪಕ್ಷಗಳು, ದೇಶದ ನಾಗರಿಕರು ಈ ಬಗ್ಗೆ ಆಕ್ಷೇಪವೆತ್ತಿದರೂ ಕೂಡ, ಹೆಸರುಗಳ ಮರುನಾಮಕರಣವನ್ನು ಬಿಜೆಪಿ ಸರ್ಕಾರಗಳು ನಿಲ್ಲಿಸುತ್ತಿಲ್ಲ. ಇತ್ತಿಚೆಗಷ್ಟೇ ಮೋಟೆರಾ ಸ್ಟೇಡಿಯಂ ಹೆಸರನ್ನು ನರೇಂದ್ರ ಮೋದಿ ಸ್ಟೇಡಿಯಂ ಎಂದು,  ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯ ಹೆಸರನ್ನು ಮೇಜರ್‌ ಧ್ಯಾನ್ ಚಂದ್ ಖೇಲ್ ರತ್ನ ಎಂದು ಬದಲಾಯಿಸಲಾಗಿದೆ.

ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತಂದ ಯೋಜನೆಗಳಲ್ಲಿ ಇಂದಿರಾ ಕ್ಯಾಂಟೀನ್‌ ಕೂಡ ಒಂದು. 5, 10 ರೂಪಾಯಿಗೆ ಊಟ ದೊರೆಯುವ ಸ್ಥಳವಾಗಿ ಇಂದಿಗೂ ಜನಪ್ರಿಯ ಯೋಜನೆಯಾಗಿ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿದೆ. ಆದರೆ, ಬಿಜೆಪಿ ಆಡಳಿತದ ಸರ್ಕಾರ ಆಡಳಿತದ ಚುಕ್ಕಾಣಿ ಹಿಡಿದಾಗಿನಿಂದ ಇಂದಿರಾ ಕ್ಯಾಂಟೀನ್ ವಿವಾದದ ಹೆಸರಾಗಿದೆ.

ಇದನ್ನೂ ಓದಿ: ‘ಬಾರ್‌‌’ ಸಿಟಿ ರವಿಯ ಸಂಸ್ಕೃತಿ: ಸಿದ್ದರಾಮಯ್ಯ

ಈ ಹಿಂದೆ ಕ್ಯಾಂಟೀನ್ ಮುಚ್ಚುವ ನಿರ್ಧಾರಕ್ಕೆ ಬಂದಿದ್ದ ಬಿಜೆಪಿ ಸರ್ಕಾರ, ವಿಪಕ್ಷಗಳು ಮತ್ತು ಜನರ ವಿರೋಧಕ್ಕೆ ತಲೆಬಾಗಬೇಕಾಯಿತು. ಈಗ ಇದನ್ನೆ ಮುಂದುವರೆಸಿರುವ ಬಿಜೆಪಿ ಸರ್ಕಾರ ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮಾಡುವ ಸೂಚನೆ ನೀಡಿದ್ದು, ರಾಜಕೀಯ ಪಕ್ಷಗಳ ಕೆಸರೆರಚಾಟಕ್ಕೆ ಕಾರಣವಾಗಿದೆ.

ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ಇಂದಿರಾ ಕ್ಯಾಂಟೀನ್ ಹೆಸರನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಬದಲಿಸಿ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಮನವಿ ಮಾಡಿದ್ದರು.

“ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರೆ, ಕರ್ನಾಟಕದಾದ್ಯಂತ ಇಂದಿರಾ ಕ್ಯಾಂಟೀನ್‌ಗಳನ್ನು ಆದಷ್ಟು ಬೇಗ “ಅನ್ನಪೂರ್ಣೇಶ್ವರಿ ಕ್ಯಾಂಟೀನ್” ಎಂದು ಮರುನಾಮಕರಣ ಮಾಡಿ. ಕನ್ನಡಿಗರು ಆಹಾರ ಸೇವಿಸುತ್ತಿರುವಾಗ ತುರ್ತು ಪರಿಸ್ಥಿತಿಯ ಕರಾಳ ದಿನಗಳನ್ನು ನೆನಪಿಸಿಕೊಳ್ಳುವುದು ಯಾಕೆ?” ಎಂದು ಪ್ರಶ್ನಿಸಿದ್ದರು.

ಇದಕ್ಕೆ ಕಾಂಗ್ರೆಸ್ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಹೆಸರು ಮರುನಾಮಕರಣ ವಿಚಾರಕ್ಕೆ ಸಂಬಂಧಿಸಿದಂತೆ ನಾನುಗೌರಿ.ಕಾಂಗೆ ಪ್ರತಿಕ್ರಿಯೆ ನೀಡಿರುವ ಜನರ ಅಭಿಪ್ರಾಯಗಳಿ ಇಂತಿವೆ.

ಇದನ್ನೂ ಓದಿ: ಹೆಸರು ಬದಲಾವಣೆ ಮುಂದುವರೆಸಿದ ಬಿಜೆಪಿ: ಉತ್ತರ ಪ್ರದೇಶದ ಅಲಿಗಢ ಮರುನಾಮಕರಣಕ್ಕೆ ಪ್ರಸ್ತಾಪ

“ಬಡವರ ಹೊಟ್ಟೆ ತುಂಬಿಸುತ್ತಿರುವ ಇಂದಿರಾ ಕ್ಯಾಂಟೀನ್ ಹೆಸರು ಬದಲಿಸುವ ಅವಶ್ಯಕತೆ ಏನಿದೆ. ಮಾಡುವುದಾದರೇ ಅವರು ಬದಲಾಯಿಸಬೇಕು ಎನ್ನುವ ಹೆಸರಿನಲ್ಲಿ ಮತ್ತೆ 100 ಕ್ಯಾಂಟೀನ್ ಆರಂಭಿಸಲಿ. ಇದರಿಂದ ಜನರಿಗೆ ಉಪಕಾರ ಆಗುತ್ತದೆ. ಅದು ಬಿಟ್ಟು ಹೆಸರುಗಳನ್ನು ಬದಲಿಸೋದು ಯಾವ ಕಾರಣಕ್ಕೆ..? ಎಂದು ಪ್ರಶ್ನಿಸುತ್ತಾರೆ ಆಟೋ ಚಾಲಕ ಆನಂದ್.

ರಾಜಸ್ಥಾನದಿಂದ ಬಂದು ಬೆಂಗಳೂರಿನಲ್ಲಿ ಕಳೆದ  15 ವರ್ಷಗಳಿಂದ ವಾಸವಿರುವ ಬದ್ರಿಲಾಲ್ ಮೆಹ್ರಾ, “ಕಳೆದ ಮೂರು ವರ್ಷಗಳಿಂದ ಇಂದಿರಾ ಕ್ಯಾಂಟೀನ್‌ ಊಟ ಮಾಡುತ್ತಿದ್ದೇನೆ. ಈಗ ಹೆಸರು ಬದಲಾವಣೆ ವಿಚಾರ ಯಾಕೆ ಬಂದಿತೋ ಗೊತ್ತಿಲ್ಲ. ಒಳ್ಳೆ ಕೆಲಸ ಮಾಡಿದವರ ಹೆಸರು ಇಟ್ಟಿದ್ದಾರೆ. ಅದೇ ಇದ್ದರೇ ಒಳ್ಳೆಯದು. ಹೆಸರು ಬದಲಾವಣೆ ಮಾಡುವಂತಹದ್ದು ಏನಿದೆ. ಇದರಲ್ಲಿ ತೊಂದರೆ ಏನಿದೆ ನಮಗೂ ಇಂದಿರಾ ಕ್ಯಾಂಟೀನ್ ಎಂದೇ ಪರಿಚಿತ. ಹೆಸರು ಬದಲಾವಣೆ ಅವಶ್ಯತೆ ಇಲ್ಲ” ಎಂದು ಹೇಳಿದ್ದಾರೆ.

“ಇಂದಿರಾ ಕ್ಯಾಂಟೀನ್‌ಗಳಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗೆ ಮೂರು ತಿಂಗಳಿನಿಂದ ಸರಿಯಾಗಿ ವೇತನ ನೀಡಿಲ್ಲ. ಕೊರೊನಾ ಸಮಯದಲ್ಲಿ ಉಚಿತ ಆಹಾರ ವಿತರಣೆ ಮಾಡಿದ್ದೇವೆ. ಸರ್ಕಾರ ಅದರ ಹಣವನ್ನು ಇನ್ನು ನೀಡಿಲ್ಲ. ಕೆಲವೊಂದು ಕ್ಯಾಂಟೀನ್‌ಗಳ ಶೌಚಾಲಯಗಳು ಕಾರ್ಯನಿರ್ವಹಿಸುತ್ತಿಲ್ಲ. ಸ್ಮಾರ್ಟ್ ಸಿಟಿ ಎಂದು ಹೇಳಿ ಚೆನ್ನಾಗಿರುವ ಕ್ಯಾಂಟೀನ್‌ಗಳ ಬಳಿ ಗುಂಡಿಗಳನ್ನು ತೋಡಿ ಅವ್ಯವಸ್ಥೆ ಮಾಡಲಾಗಿದೆ. ಇಷ್ಟೆಲ್ಲಾ ಸಮಸ್ಯೆ ಇರುವಾಗ ಈ ಸರ್ಕಾರ ಹೆಸರು ಬದಲಾವಣೆ ಅನ್ನೋದನ್ನು ಮುಂದೆ ಮಾಡುತ್ತಿದೆ. ಮೊದಲು ಇರುವ ಸಮಸ್ಯೆ ಸರಿಪಡಿಸಲಿ. ಆಮೇಲೆ ಏನಾದರೂ ಮಾಡಿಕೊಳ್ಳಲಿ. ಕಳೆದ ಎರಡು ವರ್ಷಗಳಿಂದ ಕ್ಯಾಂಟೀನ್ ನಡೆಸುವುದು ತುಂಬಾ ಕಷ್ಟವಾಗಿದೆ. ಕ್ಯಾಂಟೀನ್ ಅನುದಾನವೆಲ್ಲ ಮಠಗಳಿಗೆ ಹೋಗುತ್ತಿದೆ. ಜನರಿಗೆ ಉಪಯೋಗವಿರುವ ಇಂತಹ ಯೋಜನೆ ಹಳ್ಳ ಹಿಡಿಯುವಂತಿದೆ ” ಎಂದು  ಹೆಸರೆಳಲು ಇಚ್ಚಿಸದ ಇಂದಿರಾ ಕ್ಯಾಂಟೀನ್ ವ್ಯವಸ್ಥಾಪಕರೊಬ್ಬರು ನಾನುಗೌರಿ.ಕಾಂ ಬಳಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಒಟ್ಟಾರೆ, ಇಂದಿರಾ ಕ್ಯಾಂಟೀನ್ ಹೆಸರಲ್ಲಿ ರಾಜಕೀಯ ಮಾಡುವುದನ್ನು ಪಕ್ಷಗಳು ಬಿಟ್ಟು ಜನಪರ ಯೋಜನೆಗಳನ್ನು ಉಳಿಸಿಕೊಳ್ಳಲಿ. ಇನ್ನು ಹೆಸರು ಮರುನಾಮಕರಣ ಮಾಡುವುದಕ್ಕೆ ನೀಡುವ ಪ್ರಾಶಸ್ತ್ಯವನ್ನು ಮತ್ತಷ್ಟು ಜನಪರ ಯೋಜನೆಗಳು ಮತ್ತು ಕ್ಯಾಂಟೀನ್‌ಗಳ ನಿರ್ಮಾಣಕ್ಕೂ ಕೊಡಲಿ ಎಂಬುದೇ ನಮ್ಮ ಆಶಯ.


ಇದನ್ನೂ ಓದಿ: ರಾಜೀವ್ ಗಾಂಧಿ ಖೇಲ್ ರತ್ನ ಇನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ: ಪ್ರಧಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಂದಿರ ಕ್ಯಾಟಿನ್ ಅನೋ ಹೆಸರು ಬೇಡ ಅನ್ನ ಪೂರ್ಣಿಶ್ವರಿ ಇವರಿಗೆ ಅನ್ನದ ಬೆಲೆ ಏನೂ ಅಂತ ಗೊತ್ತಿಲ್ಲ
    ಡಾ. ಭೀಮರಾವ್ ಅಂಬೇಡ್ಕರ್ ರವರಿಗೆ ಅನ್ನದ ಬೆಲೆ ಏನು ಅಂತ ಗೊತ್ತಿದ್ದವರ ಹೆಸರು ಇಡುವುದು ಉತ್ತಮ ಹೆಸರು ಇಡುವುದಾದರೆ ಜೈ ಭೀಮ್ ಕ್ಯಾಂಟೀನ್ ಅಂತ ಹೆಸರು ಇಡುವುದು ಉತ್ತಮವಾಗಿರುತ್ತದೆ ……..ಜೈ ಭೀಮ್

LEAVE A REPLY

Please enter your comment!
Please enter your name here

- Advertisment -

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...