Homeಮುಖಪುಟಮಿಜೋರಾಂ ಸಿಎಂ ಪಟ್ಟಕ್ಕೇರಲು ಅಣಿಯಾದ ಇಂದಿರಾ ಗಾಂಧಿಯ ಮಾಜಿ ಭದ್ರತಾಧಿಕಾರಿ

ಮಿಜೋರಾಂ ಸಿಎಂ ಪಟ್ಟಕ್ಕೇರಲು ಅಣಿಯಾದ ಇಂದಿರಾ ಗಾಂಧಿಯ ಮಾಜಿ ಭದ್ರತಾಧಿಕಾರಿ

- Advertisement -
- Advertisement -

ಮಿಜೋರಾಂ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಜೋರಾಮ್ ಪೀಪಲ್ಸ್ ಮೂವ್‌ಮೆಂಟ್ (ಝೆಡ್‌ಪಿಎಂ) ಪಕ್ಷ 27 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸುವ ಮೂಲಕ ಸ್ಪಷ್ಟ ಬಹುಮತ ಪಡೆದಿದೆ. ಆಡಳಿತರೂಢ ಮಿಜೋ ನ್ಯಾಷನಲ್ ಫ್ರಂಟ್ (ಎಂಎನ್‌ಎಫ್) ಪಕ್ಷ ಭಾರೀ ಹಿನ್ನಡೆ ಅನುಭವಿಸಿದೆ.

2019ರಲ್ಲಿ ಚುನಾವಣಾ ಆಯೋಗದಲ್ಲಿ ನೋಂದಾವಣೆಗೊಂಡ ಹೊಸ ಪಕ್ಷ ಝೆಡ್‌ಪಿಎಂ, ಕೆಲವೇ ವರ್ಷಗಳಲ್ಲಿ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿಯುವಷ್ಟು ಸ್ಥಾನಗಳನ್ನು ಪಡೆಯುವ ಮೂಲಕ ಗಮನ ಸೆಳೆದಿದೆ. ಈ ಪಕ್ಷದ ಸ್ಥಾಪಕ 73 ವರ್ಷದ ಲಾಲ್ದುಹೋಮಾ ಮಿಜೋರಾಂನ ಮುಂದಿನ ಮುಖ್ಯಮಂತ್ರಿಯಾಗುವುದು ಬಹುತೇಖ ಖಚಿತವಾಗಿದೆ. ಲಾಲ್ದುಹೋಮಾ ಅವರು ಪ್ರತಿಸ್ಪರ್ಧಿ ಎಂಎನ್‌ಎಫ್ ಪಕ್ಷದ ಅಭ್ಯರ್ಥಿ ವಿರುದ್ಧ 2,982 ಮತಗಳ ಅಂತರದಿಂದ ಜಯ ಗಳಿಸಿದ್ದಾರೆ.

ಯಾರಿವರು ಲಾಲ್ದುಹೋಮಾ? ಹೊಸ ಪಕ್ಷ ಕಟ್ಟಿ ಕಡಿಮೆ ಅವಧಿಯಲ್ಲಿ ರಾಜ್ಯದ ಸಿಎಂ ಆಗಲು ಸಿದ್ದರಾಗಿರುವ ಲಾಲ್ದುಹೋಮಾ 1984ರಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಿಜೋರಾಂ ವಿಧಾನಸಭೆಗೆ ಸ್ಪರ್ಧಿಸಿದ್ದರು. ಆದರೆ, ಪೀಪಲ್ಸ್ ಕಾನ್ಪರೆನ್ಸ್ ಪಕ್ಷದ ಅಭ್ಯರ್ಥಿ ಮುಂದೆ 846 ಮತಗಳ ಅಂತರದಿಂದ ಸೋಲನುಭವಿಸಿದ್ದರು. ಅದೇ ವರ್ಷ ಲೋಕಸಭೆಗೆ ಸ್ಪರ್ಧಿಸಿದ ಅವರು ಅವಿರೋಧವಾಗಿ ಆಯ್ಕೆಯಾಗಿದ್ದರು.

ಕಾಂಗ್ರೆಸ್‌ ಪಕ್ಷದ ಸಂಸದರಾಗಿದ್ದ ಲಾಲ್ದುಹೋಮಾ ಅವರನ್ನು ಪಕ್ಷದ ವಿಪ್ ಉಲ್ಲಂಘಿಸಿದ ಆರೋಪದಡಿ ಉಚ್ಚಾಟನೆ ಮಾಡಲಾಗಿತ್ತು. ಲಾಲ್ದುಹೋಮಾ 1988ರ ಪಕ್ಷಾಂತರ ವಿರೋಧ ಕಾಯ್ದೆಯಡಿ ಲೋಕಸಭೆಯಿಂದ ಉಚ್ಚಾಟನೆಗೊಂಡ ಮೊದಲ ಸಂಸದರಾಗಿದ್ದಾರೆ.

2018 ರಲ್ಲಿ, ಲಾಲ್ದುಹೋಮಾ ಸ್ವತಂತ್ರ ಅಭ್ಯರ್ಥಿಯಾಗಿ ಐಜ್ವಾಲ್ ವೆಸ್ಟ್-I ಮತ್ತು ಸೆರ್ಚಿಪ್ ಎರಡು ಕ್ಷೇತ್ರಗಳಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ ಜಯಗಳಿಸಿದ್ದರು. ನಂತರ, ಅವರು ಸೆರ್ಚಿಪ್ ಕ್ಷೇತ್ರ ಉಳಿಸಿಕೊಳ್ಳಲು ಐಜ್ವಾಲ್ ವೆಸ್ಟ್-I ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಬಾರಿಯ ಚುನಾವಣೆಯಲ್ಲೂ ಲಾಲ್ದುಹೋಮಾ ಸೆರ್ಚಿಪ್‌ನಿಂದ ಸ್ಪರ್ಧಿಸಿ ಜಯಗಳಿಸಿದ್ದಾರೆ.

2018 ರ ಚುನಾವಣೆಯಲ್ಲಿ ಲಾಲ್ದುಹೋಮಾ ಸ್ಪರ್ಧಿಸಿದ್ದಾಗ ಅವರು ಝೆಡ್‌ಪಿಎಂ ಪಕ್ಷದ ಮುಖ್ಯಸ್ಥರಾಗಿದ್ದರು. ಆದರೆ ಆ ಪಕ್ಷ ನೋಂದಣಿಯಾಗಿರದ ಕಾರಣ ಸ್ವತಂತ್ರವಾಗಿ ಚುನಾವಣೆ ಎದುರಿಸಿದ್ದರು. 2020 ರಲ್ಲಿ ಝೆಡ್‌ಪಿಎಂಗೆ ಪಕ್ಷಾಂತರ ಮಾಡಿದ್ದಕ್ಕಾಗಿ ಲಾಲ್ದುಹೋಮಾ ಅವರನ್ನು ತಾಂತ್ರಿಕ ಕಾರಣಕ್ಕಾಗಿ ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು.

ಇಂದಿರಾ ಗಾಂಧಿಗೆ ಭದ್ರತಾಧಿಕಾರಿಯಾಗಿದ್ದರು ಲಾಲ್ದುಹೋಮಾ:

ಮಾಜಿ ಐಪಿಎಸ್ ಅಧಿಕಾರಿಯಾಗಿರುವ ಲಾಲ್ದುಹೋಮಾ ಅವರ ಹಿನ್ನೆಲೆ ರೋಚಕವಾಗಿದೆ. ಇಂದಿರಾಗಾಂಧಿ ಪ್ರಧಾನಿಯಾಗಿದ್ದಾಗ ಅವರ ಭದ್ರತಾ ವಿಭಾಗದ ಮುಖ್ಯಸ್ಥರಾಗಿದ್ದ ಲಾಲ್ದುಹೋಮಾ, ಬಳಿಕ ಕಾಂಗ್ರೆಸ್ ಸೇರುವ ಸಲುವಾಗಿ ತಮ್ಮ ಉನ್ನತ ಹುದ್ದೆ ತೊರೆದಿದ್ದರು. ಅಧಿಕಾರಿಯಾಗಿದ್ದಾಗ ಲಾಲ್ದುಹೋಮಾ ಅವರನ್ನು ಮಿಜೋ ಉಗ್ರಗಾಮಿ ಸಂಘಟನೆಯ ಮುಖ್ಯಸ್ಥ ಲಾಲ್ಡೆಂಗಾ ಅವರೊಂದಿಗೆ ಶಾಂತಿ ಮಾತುಕತೆ ನಡೆಸಲು ಪ್ರಧಾನಿ ಇಂದಿರಾ ಗಾಂಧಿ ಲಂಡನ್‌ಗೆ ಕಳುಹಿಸಿದ್ದರು. ಈ ಮಾತುಕತೆಯ ಫಲವಾಗಿ 1987ರಲ್ಲಿ ರಾಜೀವ್ ಗಾಂಧಿ ಪ್ರಧಾನಿಯಾಗಿದ್ದಾಗ ಲಾಲ್ಡೆಂಗಾ ಸರ್ಕಾರದೊಂದಿಗೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ್ದರು.

ಇದನ್ನೂ ಓದಿ : ತೆಲಂಗಾಣದ ಸಂಭಾವ್ಯ ಸಿಎಂ ರೇವಂತ್ ರೆಡ್ಡಿ ಯಾರು..ಇವರ ಹಿನ್ನೆಲೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...