Homeಮುಖಪುಟಮಿಜೋರಾಂ ಸಿಎಂ ಪಟ್ಟಕ್ಕೇರಲು ಅಣಿಯಾದ ಇಂದಿರಾ ಗಾಂಧಿಯ ಮಾಜಿ ಭದ್ರತಾಧಿಕಾರಿ

ಮಿಜೋರಾಂ ಸಿಎಂ ಪಟ್ಟಕ್ಕೇರಲು ಅಣಿಯಾದ ಇಂದಿರಾ ಗಾಂಧಿಯ ಮಾಜಿ ಭದ್ರತಾಧಿಕಾರಿ

- Advertisement -
- Advertisement -

ಮಿಜೋರಾಂ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಜೋರಾಮ್ ಪೀಪಲ್ಸ್ ಮೂವ್‌ಮೆಂಟ್ (ಝೆಡ್‌ಪಿಎಂ) ಪಕ್ಷ 27 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸುವ ಮೂಲಕ ಸ್ಪಷ್ಟ ಬಹುಮತ ಪಡೆದಿದೆ. ಆಡಳಿತರೂಢ ಮಿಜೋ ನ್ಯಾಷನಲ್ ಫ್ರಂಟ್ (ಎಂಎನ್‌ಎಫ್) ಪಕ್ಷ ಭಾರೀ ಹಿನ್ನಡೆ ಅನುಭವಿಸಿದೆ.

2019ರಲ್ಲಿ ಚುನಾವಣಾ ಆಯೋಗದಲ್ಲಿ ನೋಂದಾವಣೆಗೊಂಡ ಹೊಸ ಪಕ್ಷ ಝೆಡ್‌ಪಿಎಂ, ಕೆಲವೇ ವರ್ಷಗಳಲ್ಲಿ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿಯುವಷ್ಟು ಸ್ಥಾನಗಳನ್ನು ಪಡೆಯುವ ಮೂಲಕ ಗಮನ ಸೆಳೆದಿದೆ. ಈ ಪಕ್ಷದ ಸ್ಥಾಪಕ 73 ವರ್ಷದ ಲಾಲ್ದುಹೋಮಾ ಮಿಜೋರಾಂನ ಮುಂದಿನ ಮುಖ್ಯಮಂತ್ರಿಯಾಗುವುದು ಬಹುತೇಖ ಖಚಿತವಾಗಿದೆ. ಲಾಲ್ದುಹೋಮಾ ಅವರು ಪ್ರತಿಸ್ಪರ್ಧಿ ಎಂಎನ್‌ಎಫ್ ಪಕ್ಷದ ಅಭ್ಯರ್ಥಿ ವಿರುದ್ಧ 2,982 ಮತಗಳ ಅಂತರದಿಂದ ಜಯ ಗಳಿಸಿದ್ದಾರೆ.

ಯಾರಿವರು ಲಾಲ್ದುಹೋಮಾ? ಹೊಸ ಪಕ್ಷ ಕಟ್ಟಿ ಕಡಿಮೆ ಅವಧಿಯಲ್ಲಿ ರಾಜ್ಯದ ಸಿಎಂ ಆಗಲು ಸಿದ್ದರಾಗಿರುವ ಲಾಲ್ದುಹೋಮಾ 1984ರಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಿಜೋರಾಂ ವಿಧಾನಸಭೆಗೆ ಸ್ಪರ್ಧಿಸಿದ್ದರು. ಆದರೆ, ಪೀಪಲ್ಸ್ ಕಾನ್ಪರೆನ್ಸ್ ಪಕ್ಷದ ಅಭ್ಯರ್ಥಿ ಮುಂದೆ 846 ಮತಗಳ ಅಂತರದಿಂದ ಸೋಲನುಭವಿಸಿದ್ದರು. ಅದೇ ವರ್ಷ ಲೋಕಸಭೆಗೆ ಸ್ಪರ್ಧಿಸಿದ ಅವರು ಅವಿರೋಧವಾಗಿ ಆಯ್ಕೆಯಾಗಿದ್ದರು.

ಕಾಂಗ್ರೆಸ್‌ ಪಕ್ಷದ ಸಂಸದರಾಗಿದ್ದ ಲಾಲ್ದುಹೋಮಾ ಅವರನ್ನು ಪಕ್ಷದ ವಿಪ್ ಉಲ್ಲಂಘಿಸಿದ ಆರೋಪದಡಿ ಉಚ್ಚಾಟನೆ ಮಾಡಲಾಗಿತ್ತು. ಲಾಲ್ದುಹೋಮಾ 1988ರ ಪಕ್ಷಾಂತರ ವಿರೋಧ ಕಾಯ್ದೆಯಡಿ ಲೋಕಸಭೆಯಿಂದ ಉಚ್ಚಾಟನೆಗೊಂಡ ಮೊದಲ ಸಂಸದರಾಗಿದ್ದಾರೆ.

2018 ರಲ್ಲಿ, ಲಾಲ್ದುಹೋಮಾ ಸ್ವತಂತ್ರ ಅಭ್ಯರ್ಥಿಯಾಗಿ ಐಜ್ವಾಲ್ ವೆಸ್ಟ್-I ಮತ್ತು ಸೆರ್ಚಿಪ್ ಎರಡು ಕ್ಷೇತ್ರಗಳಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ ಜಯಗಳಿಸಿದ್ದರು. ನಂತರ, ಅವರು ಸೆರ್ಚಿಪ್ ಕ್ಷೇತ್ರ ಉಳಿಸಿಕೊಳ್ಳಲು ಐಜ್ವಾಲ್ ವೆಸ್ಟ್-I ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಬಾರಿಯ ಚುನಾವಣೆಯಲ್ಲೂ ಲಾಲ್ದುಹೋಮಾ ಸೆರ್ಚಿಪ್‌ನಿಂದ ಸ್ಪರ್ಧಿಸಿ ಜಯಗಳಿಸಿದ್ದಾರೆ.

2018 ರ ಚುನಾವಣೆಯಲ್ಲಿ ಲಾಲ್ದುಹೋಮಾ ಸ್ಪರ್ಧಿಸಿದ್ದಾಗ ಅವರು ಝೆಡ್‌ಪಿಎಂ ಪಕ್ಷದ ಮುಖ್ಯಸ್ಥರಾಗಿದ್ದರು. ಆದರೆ ಆ ಪಕ್ಷ ನೋಂದಣಿಯಾಗಿರದ ಕಾರಣ ಸ್ವತಂತ್ರವಾಗಿ ಚುನಾವಣೆ ಎದುರಿಸಿದ್ದರು. 2020 ರಲ್ಲಿ ಝೆಡ್‌ಪಿಎಂಗೆ ಪಕ್ಷಾಂತರ ಮಾಡಿದ್ದಕ್ಕಾಗಿ ಲಾಲ್ದುಹೋಮಾ ಅವರನ್ನು ತಾಂತ್ರಿಕ ಕಾರಣಕ್ಕಾಗಿ ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು.

ಇಂದಿರಾ ಗಾಂಧಿಗೆ ಭದ್ರತಾಧಿಕಾರಿಯಾಗಿದ್ದರು ಲಾಲ್ದುಹೋಮಾ:

ಮಾಜಿ ಐಪಿಎಸ್ ಅಧಿಕಾರಿಯಾಗಿರುವ ಲಾಲ್ದುಹೋಮಾ ಅವರ ಹಿನ್ನೆಲೆ ರೋಚಕವಾಗಿದೆ. ಇಂದಿರಾಗಾಂಧಿ ಪ್ರಧಾನಿಯಾಗಿದ್ದಾಗ ಅವರ ಭದ್ರತಾ ವಿಭಾಗದ ಮುಖ್ಯಸ್ಥರಾಗಿದ್ದ ಲಾಲ್ದುಹೋಮಾ, ಬಳಿಕ ಕಾಂಗ್ರೆಸ್ ಸೇರುವ ಸಲುವಾಗಿ ತಮ್ಮ ಉನ್ನತ ಹುದ್ದೆ ತೊರೆದಿದ್ದರು. ಅಧಿಕಾರಿಯಾಗಿದ್ದಾಗ ಲಾಲ್ದುಹೋಮಾ ಅವರನ್ನು ಮಿಜೋ ಉಗ್ರಗಾಮಿ ಸಂಘಟನೆಯ ಮುಖ್ಯಸ್ಥ ಲಾಲ್ಡೆಂಗಾ ಅವರೊಂದಿಗೆ ಶಾಂತಿ ಮಾತುಕತೆ ನಡೆಸಲು ಪ್ರಧಾನಿ ಇಂದಿರಾ ಗಾಂಧಿ ಲಂಡನ್‌ಗೆ ಕಳುಹಿಸಿದ್ದರು. ಈ ಮಾತುಕತೆಯ ಫಲವಾಗಿ 1987ರಲ್ಲಿ ರಾಜೀವ್ ಗಾಂಧಿ ಪ್ರಧಾನಿಯಾಗಿದ್ದಾಗ ಲಾಲ್ಡೆಂಗಾ ಸರ್ಕಾರದೊಂದಿಗೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ್ದರು.

ಇದನ್ನೂ ಓದಿ : ತೆಲಂಗಾಣದ ಸಂಭಾವ್ಯ ಸಿಎಂ ರೇವಂತ್ ರೆಡ್ಡಿ ಯಾರು..ಇವರ ಹಿನ್ನೆಲೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...