Homeಮುಖಪುಟಮಿಜೋರಾಂ ಸಿಎಂ ಪಟ್ಟಕ್ಕೇರಲು ಅಣಿಯಾದ ಇಂದಿರಾ ಗಾಂಧಿಯ ಮಾಜಿ ಭದ್ರತಾಧಿಕಾರಿ

ಮಿಜೋರಾಂ ಸಿಎಂ ಪಟ್ಟಕ್ಕೇರಲು ಅಣಿಯಾದ ಇಂದಿರಾ ಗಾಂಧಿಯ ಮಾಜಿ ಭದ್ರತಾಧಿಕಾರಿ

- Advertisement -
- Advertisement -

ಮಿಜೋರಾಂ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಜೋರಾಮ್ ಪೀಪಲ್ಸ್ ಮೂವ್‌ಮೆಂಟ್ (ಝೆಡ್‌ಪಿಎಂ) ಪಕ್ಷ 27 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸುವ ಮೂಲಕ ಸ್ಪಷ್ಟ ಬಹುಮತ ಪಡೆದಿದೆ. ಆಡಳಿತರೂಢ ಮಿಜೋ ನ್ಯಾಷನಲ್ ಫ್ರಂಟ್ (ಎಂಎನ್‌ಎಫ್) ಪಕ್ಷ ಭಾರೀ ಹಿನ್ನಡೆ ಅನುಭವಿಸಿದೆ.

2019ರಲ್ಲಿ ಚುನಾವಣಾ ಆಯೋಗದಲ್ಲಿ ನೋಂದಾವಣೆಗೊಂಡ ಹೊಸ ಪಕ್ಷ ಝೆಡ್‌ಪಿಎಂ, ಕೆಲವೇ ವರ್ಷಗಳಲ್ಲಿ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿಯುವಷ್ಟು ಸ್ಥಾನಗಳನ್ನು ಪಡೆಯುವ ಮೂಲಕ ಗಮನ ಸೆಳೆದಿದೆ. ಈ ಪಕ್ಷದ ಸ್ಥಾಪಕ 73 ವರ್ಷದ ಲಾಲ್ದುಹೋಮಾ ಮಿಜೋರಾಂನ ಮುಂದಿನ ಮುಖ್ಯಮಂತ್ರಿಯಾಗುವುದು ಬಹುತೇಖ ಖಚಿತವಾಗಿದೆ. ಲಾಲ್ದುಹೋಮಾ ಅವರು ಪ್ರತಿಸ್ಪರ್ಧಿ ಎಂಎನ್‌ಎಫ್ ಪಕ್ಷದ ಅಭ್ಯರ್ಥಿ ವಿರುದ್ಧ 2,982 ಮತಗಳ ಅಂತರದಿಂದ ಜಯ ಗಳಿಸಿದ್ದಾರೆ.

ಯಾರಿವರು ಲಾಲ್ದುಹೋಮಾ? ಹೊಸ ಪಕ್ಷ ಕಟ್ಟಿ ಕಡಿಮೆ ಅವಧಿಯಲ್ಲಿ ರಾಜ್ಯದ ಸಿಎಂ ಆಗಲು ಸಿದ್ದರಾಗಿರುವ ಲಾಲ್ದುಹೋಮಾ 1984ರಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಿಜೋರಾಂ ವಿಧಾನಸಭೆಗೆ ಸ್ಪರ್ಧಿಸಿದ್ದರು. ಆದರೆ, ಪೀಪಲ್ಸ್ ಕಾನ್ಪರೆನ್ಸ್ ಪಕ್ಷದ ಅಭ್ಯರ್ಥಿ ಮುಂದೆ 846 ಮತಗಳ ಅಂತರದಿಂದ ಸೋಲನುಭವಿಸಿದ್ದರು. ಅದೇ ವರ್ಷ ಲೋಕಸಭೆಗೆ ಸ್ಪರ್ಧಿಸಿದ ಅವರು ಅವಿರೋಧವಾಗಿ ಆಯ್ಕೆಯಾಗಿದ್ದರು.

ಕಾಂಗ್ರೆಸ್‌ ಪಕ್ಷದ ಸಂಸದರಾಗಿದ್ದ ಲಾಲ್ದುಹೋಮಾ ಅವರನ್ನು ಪಕ್ಷದ ವಿಪ್ ಉಲ್ಲಂಘಿಸಿದ ಆರೋಪದಡಿ ಉಚ್ಚಾಟನೆ ಮಾಡಲಾಗಿತ್ತು. ಲಾಲ್ದುಹೋಮಾ 1988ರ ಪಕ್ಷಾಂತರ ವಿರೋಧ ಕಾಯ್ದೆಯಡಿ ಲೋಕಸಭೆಯಿಂದ ಉಚ್ಚಾಟನೆಗೊಂಡ ಮೊದಲ ಸಂಸದರಾಗಿದ್ದಾರೆ.

2018 ರಲ್ಲಿ, ಲಾಲ್ದುಹೋಮಾ ಸ್ವತಂತ್ರ ಅಭ್ಯರ್ಥಿಯಾಗಿ ಐಜ್ವಾಲ್ ವೆಸ್ಟ್-I ಮತ್ತು ಸೆರ್ಚಿಪ್ ಎರಡು ಕ್ಷೇತ್ರಗಳಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ ಜಯಗಳಿಸಿದ್ದರು. ನಂತರ, ಅವರು ಸೆರ್ಚಿಪ್ ಕ್ಷೇತ್ರ ಉಳಿಸಿಕೊಳ್ಳಲು ಐಜ್ವಾಲ್ ವೆಸ್ಟ್-I ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಬಾರಿಯ ಚುನಾವಣೆಯಲ್ಲೂ ಲಾಲ್ದುಹೋಮಾ ಸೆರ್ಚಿಪ್‌ನಿಂದ ಸ್ಪರ್ಧಿಸಿ ಜಯಗಳಿಸಿದ್ದಾರೆ.

2018 ರ ಚುನಾವಣೆಯಲ್ಲಿ ಲಾಲ್ದುಹೋಮಾ ಸ್ಪರ್ಧಿಸಿದ್ದಾಗ ಅವರು ಝೆಡ್‌ಪಿಎಂ ಪಕ್ಷದ ಮುಖ್ಯಸ್ಥರಾಗಿದ್ದರು. ಆದರೆ ಆ ಪಕ್ಷ ನೋಂದಣಿಯಾಗಿರದ ಕಾರಣ ಸ್ವತಂತ್ರವಾಗಿ ಚುನಾವಣೆ ಎದುರಿಸಿದ್ದರು. 2020 ರಲ್ಲಿ ಝೆಡ್‌ಪಿಎಂಗೆ ಪಕ್ಷಾಂತರ ಮಾಡಿದ್ದಕ್ಕಾಗಿ ಲಾಲ್ದುಹೋಮಾ ಅವರನ್ನು ತಾಂತ್ರಿಕ ಕಾರಣಕ್ಕಾಗಿ ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು.

ಇಂದಿರಾ ಗಾಂಧಿಗೆ ಭದ್ರತಾಧಿಕಾರಿಯಾಗಿದ್ದರು ಲಾಲ್ದುಹೋಮಾ:

ಮಾಜಿ ಐಪಿಎಸ್ ಅಧಿಕಾರಿಯಾಗಿರುವ ಲಾಲ್ದುಹೋಮಾ ಅವರ ಹಿನ್ನೆಲೆ ರೋಚಕವಾಗಿದೆ. ಇಂದಿರಾಗಾಂಧಿ ಪ್ರಧಾನಿಯಾಗಿದ್ದಾಗ ಅವರ ಭದ್ರತಾ ವಿಭಾಗದ ಮುಖ್ಯಸ್ಥರಾಗಿದ್ದ ಲಾಲ್ದುಹೋಮಾ, ಬಳಿಕ ಕಾಂಗ್ರೆಸ್ ಸೇರುವ ಸಲುವಾಗಿ ತಮ್ಮ ಉನ್ನತ ಹುದ್ದೆ ತೊರೆದಿದ್ದರು. ಅಧಿಕಾರಿಯಾಗಿದ್ದಾಗ ಲಾಲ್ದುಹೋಮಾ ಅವರನ್ನು ಮಿಜೋ ಉಗ್ರಗಾಮಿ ಸಂಘಟನೆಯ ಮುಖ್ಯಸ್ಥ ಲಾಲ್ಡೆಂಗಾ ಅವರೊಂದಿಗೆ ಶಾಂತಿ ಮಾತುಕತೆ ನಡೆಸಲು ಪ್ರಧಾನಿ ಇಂದಿರಾ ಗಾಂಧಿ ಲಂಡನ್‌ಗೆ ಕಳುಹಿಸಿದ್ದರು. ಈ ಮಾತುಕತೆಯ ಫಲವಾಗಿ 1987ರಲ್ಲಿ ರಾಜೀವ್ ಗಾಂಧಿ ಪ್ರಧಾನಿಯಾಗಿದ್ದಾಗ ಲಾಲ್ಡೆಂಗಾ ಸರ್ಕಾರದೊಂದಿಗೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ್ದರು.

ಇದನ್ನೂ ಓದಿ : ತೆಲಂಗಾಣದ ಸಂಭಾವ್ಯ ಸಿಎಂ ರೇವಂತ್ ರೆಡ್ಡಿ ಯಾರು..ಇವರ ಹಿನ್ನೆಲೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...